ದಿನದ ಸುದ್ದಿ
ನಿತ್ಯ ಭವಿಷ್ಯ- ಶನಿವಾರ | ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ : ಕರೆಮಾಡಿ
ಶ್ರೀ ದುರ್ಗಾ ಆಂಜನೇಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ಕಚೇರಿ ವ್ಯಾಜ್ಯಗಳಲ್ಲಿ ನಿಮ್ಮ ಹಿತ ನೆರವೇರುವ ಸಾಧ್ಯತೆ ಇದೆ. ಕಾರ್ಯಗಳು ಮಾಡುವ ಮುನ್ನ ಕೆಲಸದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ. ಸಂಗಾತಿಯೊಡನೆ ಮನೋರಂಜನಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೊಸ ಒಪ್ಪಂದಗಳನ್ನು ಈ ದಿನ ಮಾಡಲು ಬಯಸುವಿರಿ, ಎಚ್ಚರ ಇರಬೇಕಾದ ಸಮಯವಿದು ಯೋಜನೆಯ ಲಾಭಾಂಶವಾಗಿ ಕಂಡರೂ ಸಹ ಅದು ಒಳಭಾಗದಲ್ಲಿ ನಕಾರಾತ್ಮಕ ಫಲಿತಾಂಶದಿಂದ ಕೂಡಿರಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ಈದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ. ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ. ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಮಯವಿದು. ಇನ್ನೊಬ್ಬರನ್ನು ನಂಬಿ ಜೀವನ ನಡೆಸುವುದನ್ನು ತ್ಯಜಿಸತಕ್ಕದ್ದು. ಕೆಲಸದಲ್ಲಿ ಆದಷ್ಟು ಪಾಲ್ಗೊಳ್ಳಿ. ಸೋಮಾರಿತನ ಅಥವಾ ಅಂಜಿಕೆಯ ಸ್ವಭಾವನ್ನು ತೆಗೆದಿಟ್ಟು ಮುನ್ನಡೆಯಿರಿ. ದೈವ ಕೃಪಾಕಟಾಕ್ಷಕ್ಕೆ ಮೊರೆಹೋಗುವ ಸಾಧ್ಯತೆ ಕಾಣಬಹುದು. ಯಶಸ್ವಿದಾಯಕ ನಿರ್ಣಯಗಳು ನಿಮ್ಮಿಂದ ಈ ದಿನ ಬರಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಹಣಕಾಸಿನ ವ್ಯವಹಾರ ನಿಮ್ಮ ವಿಚಾರದಂತೆ ನಡೆಯಲಿದೆ. ವ್ಯವಹಾರದಲ್ಲಿ ಆದಷ್ಟು ಇನ್ನೊಬ್ಬರ ಹಸ್ತಕ್ಷೇಪವನ್ನು ತಡೆಗಟ್ಟಿ. ನೀವು ಮಾಡುವ ಕಾರ್ಯಗಳು ಪ್ರಶಂಸೆ ಪಡೆಯಲಿದೆ. ನಿಮ್ಮ ವಿಚಾರಗಳಂತೆ ಯೋಚಿಸುವ ಗೆಳೆಯರು ಸಿಗಬಹುದು. ಅಸಾಧ್ಯವಾದ ಕಾರ್ಯಗಳನ್ನು ಸಲೀಸಾಗಿ ಮಾಡಿಮುಗಿಸುವ ವಿಚಾರಶಕ್ತಿ ನಿಮ್ಮಲ್ಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ಹಣಕಾಸಿನ ವಿಚಾರಗಳಲ್ಲಿ ಇಂದು ಬಹುತೇಕ ಹಿನ್ನಡೆ ಕಾಣಬಹುದು. ಕುಂಟುತ್ತಿರುವ ನಿಮ್ಮ ಅರ್ಥವ್ಯವಸ್ಥೆಯನ್ನು ಸರಿದಾರಿಗೆ ತೆಗೆದುಕೊಂಡು ಬರಬೇಕಾಗಿದೆ. ಹಿತವಚನಗಳನ್ನು ಸಮಾಧಾನಚಿತ್ತದಿಂದ ಕೇಳುವುದು ಒಳಿತು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಹಿರಿಯರ ಬಗ್ಗೆ ಗೌರವವನ್ನು ರೂಡಿಸಿಕೊಳ್ಳಿ. ಮಾತಿನಲ್ಲಿ ವಿನಯತೆ ಇದ್ದರೆ ನಿಮ್ಮ ಕಾರ್ಯಗಳು ಸುಲಭವಾಗುತ್ತದೆ. ಬಂಧು ವರ್ಗದಿಂದ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಜಮೀನು ಮಾರಾಟ ಮಾಡುವ ಯೋಚನೆ ನೆನೆಗುದಿಗೆ ಬೀಳಬಹುದಾದ ಸಾಧ್ಯತೆ ಕಾಣುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಬಲಿಷ್ಠ ವ್ಯಕ್ತಿತ್ವದವರಾದ ನೀವು ಕೆಲವು ಮಾನಸಿಕ ಚಿಂತೆಗಳಿಂದ ಕುಗ್ಗ ಬಹುದಾದ ಸಾಧ್ಯತೆ ಇದೆ. ಕುಟುಂಬದಲ್ಲಿ ವಾದ-ವಿವಾದಗಳು ಹೆಚ್ಚಾಗುವ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕವಾದ ವಿಷಯಗಳು ಚರ್ಚಾಸ್ಪದವಾಗಿ ಕಾಣಿಸಬಹುದಾದ ಸಾಧ್ಯತೆ ಇದೆ. ಬಹುನಿರೀಕ್ಷಿತ ಯೋಜನೆಯು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸದೃಢರನ್ನಾಗಿ ಮಾಡಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಹಣಕಾಸಿನಲ್ಲಿ ಉತ್ತಮ ಆದಾಯ ಇಂದು ನಿರೀಕ್ಷಿಸಬಹುದು. ಮಿತ್ರ ವರ್ಗದಲ್ಲಿ ಅಸೂಯೆ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ನಿಮ್ಮಲ್ಲಿನ ಪ್ರತಿಭೆಗೆ ಹೇರಳವಾದ ಅವಕಾಶಗಳು ದೊರೆಯಲಿದೆ. ದಂಪತಿಗಳಲ್ಲಿ ಮನಸ್ತಾಪಗಳನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಕಾರ್ಯ ಆರಂಭಿಸಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಅಧ್ಯಯನಶೀಲತೆ ಎಂಬುದು ನಿರಂತರವಾಗಿರಲಿ, ಮನಸ್ಸು ಚಂಚಲ ಮಾಡಿಕೊಂಡು ಶಿಕ್ಷಣದ ಬಗ್ಗೆ ಅಲಕ್ಷ ಮಾಡಬೇಡಿ. ನೌಕರಿಯ ವಿಷಯದಲ್ಲಿ ಉತ್ತಮ ಪ್ರತಿಫಲ ನಿಮಗೆ ದೊರೆಯಲಿದೆ ಆದರೆ ಪ್ರಯತ್ನ ಮುಂದುವರೆಯುವುದು ಒಳ್ಳೆಯದು. ಮಕ್ಕಳಿಗಾಗಿ ಇಂದು ಅಧಿಕ ಹಣಕಾಸು ಖರ್ಚು ಮಾಡುವ ಸಾಧ್ಯತೆ ಇದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಹೊಸ ವಸ್ತುಗಳ ಖರೀದಿಗೆ ಇಂದು ಅವಕಾಶ ದೊರೆಯಲಿದೆ. ಗಳಿಸಿರುವ ಸ್ನೇಹವನ್ನು ಉಳಿಸಿಕೊಂಡು ಹೋಗುವುದು ನಿಮ್ಮ ವ್ಯಕ್ತಿತ್ವ ಪ್ರಕಾಶಮಾನವಾಗಿಸುತ್ತದೆ. ಕುಟುಂಬಕ್ಕಾಗಿ ಒಂದು ಉತ್ತಮ ಕೆಲಸ ಮಾಡುವ ಅವಕಾಶ ಲಭಿಸಲಿದೆ. ಸಂಗಾತಿಯ ಕೆಲವು ಪ್ರಶ್ನೆಗಳು ನಿಮಗೆ ಮನಸ್ಸಿನಲ್ಲಿ ಬಹು ಕಾಡಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ: 9945410150

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ4 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ3 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

