Connect with us

ದಿನದ ಸುದ್ದಿ

ಕರ್ನಾಟಕದ ‘ಬೆಳ್ಳಿ’ ಮಿಂಚು ರಾಜೀವ್ ಗಾಂಧೀ ಆರೋಗ್ಯ ವಿವಿ..!

Published

on

  • ಡಾ.ಕೆ.ಸುಧಾಕರ್,ವೈದ್ಯಕೀಯ ಶಿಕ್ಷಣ ಸಚಿವರು,ಕರ್ನಾಟಕ ಸರ್ಕಾರ

ರ್ನಾಟಕದ ಹೆಮ್ಮೆಯ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಶಿಕ್ಷಣ ಕೇಂದ್ರ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಇಂದು 25 ವರ್ಷ ತುಂಬುತ್ತಿದೆ. ಇಡೀ ವಿಶ್ವದ ವೈದ್ಯಕೀಯ ಕ್ಷೇತ್ರಕ್ಕೆ ಕೊರೊನಾ ಸವಾಲಾಗಿರುವ ಸಂದರ್ಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಒಂದು ವಿಶಿಷ್ಟ ಸಂದರ್ಭ.

ಕಾರಣ ಕೊರೊನಾ ವಿರುದ್ಧ ಕರ್ನಾಟಕ ರಾಜ್ಯ ಸಮರ ಸಾರಿ ಯಶಸ್ಸಿನ ಫಲ ಕಾಣಲು ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ ಪ್ರಮುಖ ಪಾತ್ರವಹಿಸಿದೆ. ಇಡೀ ರಾಷ್ಟ್ರಮಟ್ಟದಲ್ಲಿ ರಾಜೀವ್‍ಗಾಂಧೀ ಆರೋಗ್ಯ ವಿವಿಯ ಕೊರೊನಾ ಸಾಂಕ್ರಾಮಿಕ ರೋಗದ ಚಿಕಿತ್ಸೆ ಮತ್ತು ನಿಯಂತ್ರಣದ ಕಾರ್ಯವಿಧಾನಗಳು ಮೆಚ್ಚುಗೆಗೆ ಪಾತ್ರವಾಗಿವೆ.

ಇಂತಹ ಸವಾಲಿನ ಸಂದರ್ಭದಲ್ಲಿ ಪ್ರತಿಷ್ಠಿತ ಆರೋಗ್ಯ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರಗಳಿಗೆ ಸಾಟಿಯಿಲ್ಲದಂತೆ ಕಾರ್ಯನಿರ್ವಹಿಸುತ್ತಿರುವ ನಮ್ಮ ರಾಜೀವ್ ಗಾಂಧೀ ಆರೋಗ್ಯ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವಕ್ಕೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರೇ ಸಾಕ್ಷಿಯಾಗುತ್ತಿರುವುದು ಅವಿಸ್ಮರಣೀಯವೇ ಸರಿ.

1994ರ ಜೂನ್-1 ರಂದು ಕರ್ನಾಟಕ ವಿಜ್ಞಾನ ಕಾಯ್ದೆ ಅಡಿಯಲ್ಲಿ ಸ್ಥಾಪನೆಗೊಂಡ ಈ ವಿಶ್ವವಿದ್ಯಾಲಯದ 25 ವಸಂತಗಳ ಹೆಜ್ಜೆ ಗುರುತು ಅದ್ವಿತೀಯ. ಅಂದು ಬೆಂಗಳೂರಿನಲ್ಲಿ ಆರಂಭಗೊಂಡ ಈ ವಿಶ್ವ ವಿದ್ಯಾಲಯ ಬೆಂಗಳೂರು ಹೊರವಲಯದ ಭೀಮನಕುಪ್ಪೆಯಲ್ಲಿ ಮತ್ತಷ್ಟು ವಿಸ್ತರಣೆಗೊಳ್ಳುತ್ತಿದೆ. 50 ಎಕರೆಗೂ ಮೀರಿದ ಭೂ ಪ್ರದೇಶದಲ್ಲಿ ವಿಶಾಲ ಕ್ಯಾಂಪಸ್ ನಿರ್ಮಾಣಕ್ಕೆ ಜೂನ್-1 ರಂದು ಹಸಿರು ನಿಶಾನೆ ನೀಡಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯಪಾಲ ವಜುಭಾಯಿವಾಲಾ ಅವರು, ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭಕ್ಕೆ ಸಾಕ್ಷಿಯಾಗಲಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವರಾಗಿ ನನ್ನ ಅವಧಿಯಲ್ಲಿ ಬೆಳ್ಳಿ ಮಹೋತ್ಸವ ನಡೆಯುತ್ತಿರುವುದು ಮತ್ತು ಹೊಸ ಕ್ಯಾಂಪಸ್ ನಿರ್ಮಾಣಕ್ಕೆ ಚಾಲನೆ ಸಿಗುತ್ತಿರುವುದು ನನ್ನ ಭಾಗ್ಯವೇ ಸರಿ.

ಪ್ರತಿವರ್ಷ 65 ಸಾವಿರ ವಿದ್ಯಾರ್ಥಿಗಳನ್ನು ರಾಜೀವ್‍ಗಾಂಧೀ ವಿವಿ ದಾಖಲಿಸಿಕೊಳ್ಳುತ್ತಿದೆ.ವಿವಿಯ ಅಡಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳು ಸೇರಿದಂತೆ 2.50,000 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 52 ಮೆಡಿಕಲ್ ಕಾಲೇಜುಗಳಲ್ಲಿ 6200 ಪದವಿ, 43 ಕಾಲೇಜುಗಳ 2506 ಸ್ನಾತಕೋತ್ತರ ವಿದ್ಯಾರ್ಥಿಗಳು, ದಂತ ವೈದ್ಯಕೀಯದಲ್ಲಿ 2780ಪದವಿ, 913 ಪಿಜಿ, ಆಯುರ್ವೇದಲ್ಲಿ 4405 ಪದವಿ, 985 ಸ್ನಾತಕ್ಕೋತ್ತರ ವಿದ್ಯಾರ್ಥಿಗಳು, ಹೋಮಿಯೋಪತಿಯಲ್ಲಿ 850 ಪದವಿ, 121 ಸ್ನಾತಕೋತ್ತರ, ಯುನಾನಿಯಲ್ಲಿ 290ಪದವಿ, 54 ಸ್ನಾತಕೋತ್ತರ, ನ್ಯಾಚುರೋಪತಿ ಮತ್ತು ಯೋಗದಲ್ಲಿ 340 ಪದವಿ, 35 ಸ್ನಾತಕೋತ್ತರ, ನರ್ಸಿಂಗ್‍ನಲ್ಲಿ 19355 ಪದವಿ, 3983ಸ್ನಾತಕೋತ್ತರ, ಬಿಎಸ್ಸಿ ನರ್ಸಿಂಗ್‍ನಲ್ಲಿ 9040 ಪದವಿ ವಿದ್ಯಾರ್ಥಿಗಳು, ಫಿಜಿಯೋಥೆರಫಿಯಲ್ಲಿ 2150 ಪದವಿ, 468 ಸ್ನಾತಕೋತ್ತರ, ಪ್ಯಾರಾಮೆಡಿಕಲ್‍ನಲ್ಲಿ 2920 ಪದವಿ, 468 ಸ್ನಾತಕೋತ್ತರ, ಫಾರ್ಮಸಿಯಲ್ಲಿ 3930ಪದವಿ ಮತ್ತು 1724 ಸ್ನಾತಕೋತ್ತರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಉತಾಹ್ ವಿವಿಯೊಂದಿಗೆ ರಾಜೀವ್ ಗಾಂಧಿ ವಿವಿ ಆರಂಭಿಸಿದ ಜೀವರಕ್ಷ ಕಾರ್ಯಕ್ರಮವು ಜೀವ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸಲು ವಿದ್ಯಾರ್ಥಿಗಳಿಗೆ ಅನುಕೂಲಕರ ಕಾರ್ಯವಾಗಿದೆ. 2015ರಲ್ಲಿ ವಿವಿ ಆರಂಭಿಸಿದ ಸಂಶೋಧನೆ ವಿಭಾಗ ಇಂದು ವೈದ್ಯಕೀಯ ಸಂಶೋಧನಾ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದೆ. ಐಐಎಸ್‍ಸಿ, ಎನ್‍ಸಿಬಿಎಸ್, ಸಿಹೆಚ್‍ಜಿ ಮತ್ತು ಜೆಎನ್‍ಸಿಎಎಸ್ ಆರ್ ಜೊತೆ ಮಾಡಿಕೊಂಡ ಒಪ್ಪಂದಗಳಿಂದಾಗಿ ಸಂಶೋಧನೆಯಲ್ಲಿ ಮಹತ್ತರ ಸಾಧನೆಗೆ ಕಾರಣವಾಗಿದೆ.

ನ್ಯಾನೋ ಟೆಕ್ನಾಲಜಿ ಮತ್ತು ಮಾಲೇಕ್ಯೂಲರ್ ಬಯಾಲಜಿ ಕ್ಷೇತ್ರದಲ್ಲಿ ವಿವಿಯ ಸಂಶೋಧನಾ ವಿಭಾಗ ವಿನೂತನ ಹೆಜ್ಜೆಯನ್ನೇ ಇಟ್ಟಿದೆ. ವಿವಿಯ 3000ಕ್ಕೂ ಹೆಚ್ಚು ಬೋಧಕರಿಗೆ ಸಂಶೋಧನಾ ವಿಧಾನದ ತರಬೇತಿ ಶಿಬಿರಗಳನ್ನು ನಡೆಸಲಾಗಿದೆ. ಬಡವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನದ ಮೂಲಕ ವಿವಿ ಪ್ರೋತ್ಸಾಹಿಸುತ್ತಿದೆ.

ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ತಂತ್ರಜ್ಞಾನಗಳ ಬಗ್ಗೆ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ಅಧ್ಯಾಪಕರಿಗೆ ವಾರ್ಷಿಕ ತರಬೇತಿಗಳನ್ನು ನೀಡಲಾಗಿದೆ. ಇಂತಹ ಅನೇಕಲ ಸುಧಾನರಣೆಗಳಿಂದಾಗಿಯೇ ರಾಜೀವ್ ಗಾಂಧೀ ಆರೋಗ್ಯ ವಿವಿ ಸರಿ ಸುಮಾರು 143 ಸಂಶೋಧನೆ ಅನುದಾನಗಳಿಗೆ 5.99 ಕೋಟಿ ರೂಗಳನ್ನು ವೆಚ್ಚ ಮಾಡಿದೆ.

ಪಾರದರ್ಶಕ ಆನ್‍ಲೈನ್ ಪರೀಕ್ಷೆ

ರಾಜೀವ್ ಗಾಂಧೀ ವಿಶ್ವವಿದ್ಯಾಲಯವು ತನ್ನ ಪರೀಕ್ಷ ಉಪ ಕ್ರಮಗಳಿಂದಲೇ ಇಡೀ ದೇಶಕ್ಕೆ ಮಾದರಿ ಎನ್ನಿಸಿದೆ. ಆನ್‍ಲೈನ್ ಪ್ರಶ್ನೆ ಪತ್ರಿಕೆ ನೀಡುವ ಮೂಲಕ ಪರೀಕ್ಷೆ ನಡೆಸಿ ಅಕ್ರಮಗಳಿಗೆ ಕಡಿವಾಣ ಹಾಕಿದೆ. ಪರೀಕ್ಷೆ ಆರಂಭವಾಗುವ 30 ನಿಮಿಷಗಳ ಮುನ್ನ ಆನ್‍ಲೈನ್ ಮೂಲಕ ನಿರ್ಧಿಷ್ಟ ಪಾಸ್‍ವರ್ಡ್ ಮೂಲಕ ಓಪನ್ ಆಗುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗೆ ಕಳುಹಿಸಲಾಗುತ್ತದೆ. ಆನ್‍ಲೈನ್ ಪ್ರಶ್ನೆ ಪತ್ರಿಕೆಯನ್ನು ಪರಿಚಯಿಸಿದ ಮೊದಲ ಆರೋಗ್ಯ ವಿವಿ ಎನ್ನಿಸಿಕೊಂಡಿದೆ ರಾಜೀವ್ ಗಾಂಧೀ ಆರೋಗ್ಯ ವಿವಿ.

ಉತ್ತರ ಪತ್ರಿಕೆಗಳನ್ನು ಡಿಜಿಟಲ್ ವ್ಯವಸ್ಥೆ ಮೂಲಕ ಮೌಲ್ಯಮಾಪನ ಮಾಡಲಾಗುತ್ತಿದೆ. ಇದು ಮೌಲ್ಯಮಾಪನ ಪ್ರಕ್ರಿಯೆಯ ಅವಧಿಯನ್ನು ಕಡಿಮೆ ಮಾಡಿದೆ. ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಶೋಧನಾ ಪ್ರಬಂಧಗಳನ್ನು ಆನ್‍ಲೈನ್ ಮೂಲಕ ಮೌಲ್ಯಮಾಪನ ಮಾಡುವ ಪದ್ಧತಿ, ದಾಖಲೆಗಳ ಪರಿಶೀಲನೆ ಮತ್ತು ನೀಡುವ ವಿಧಾನ ಡಿಜಿಟಲೀಕರಣ ಪರೀಕ್ಷೆಗಳನ್ನು ವೆಬ್‍ಸ್ಟ್ರೀಮಿಂಗ್ ಮಾಡುವುದು, ಪಾರದರ್ಶಕತೆಗಾಗಿ ಮಾಹಿತಿ ತಂತ್ರಜ್ಞಾನ ಬಳಸಿ ಡಿಜಿಟಲ್ ವ್ಯವಸ್ಥೆಗೆ ತಂದಿರುವುದು ಮತ್ತೊಂದು ಸುಧಾರಣೆ. ಹೀಗೆ ಹಲವು ಶೈಕ್ಷಣೀಕ ಸುಧಾರಣೆಗಳ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿರುವ ರಾಜೀವ್ ಗಾಂಧೀ ಆರೋಗ್ಯ ವಿವಿಯು ಇದೀಗ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಪರಿಣಾಮಕಾರಿಯಾದ ಪಾತ್ರವನ್ನು ವಹಿಸುತ್

ದೇಶಕ್ಕೆ ದೇಶವೇ ಕೊರೊನಾ ಆತಂಕಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕರ್ನಾಟಕದ ಪಾಲಿಗೆ ಭರವಸೆ ಮೂಡಿಸಿದ್ದು ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ. ಕೊರೊನಾ ಚಿಕಿತ್ಸೆಗಾಗಿ ಮೊದಲು ವಿಭಾಗ ಆರಂಭಗೊಂಡಿದ್ದೇ ರಾಜೀವ್‍ಗಾಂಧೀ ವಿವಿಯಲ್ಲಿ. ದಾಖಲಾದ ಸೋಂಕಿತರನ್ನು ಬಹುಬೇಗ ಗುಣಮುಖರನ್ನಾಗಿಸುವಲ್ಲಿ ದೇಶದ ಇತರೆ ಆಸ್ಪತ್ರೆಗಳಿಗೆ ವೈದ್ಯಕೀಯ ಸಂಸ್ಥೆಗಳಿಗೆ ಹೋಲಿಸಿದರೆ ರಾಜೀವ್ ಗಾಂಧೀ ವಿವಿಯ ಸಾಧನೆ ಮೆಚ್ಚುವಂತಹದ್ದು.

ಇದಿಷ್ಟೇ ಅಲ್ಲದೇ ಕೊರೊನಾ ನಿಯಂತ್ರಣದಲ್ಲಿ ಭಾಗಿಯಾದ 60,607 ವೈದ್ಯರು, 40,478 ನರ್ಸ್‍ಗಳು, 38,149 ಅನುದಾನಿತ ಆರೋಗ್ಯ ತಜ್ಞರು, 31,127 ಎನ್‍ಎಸ್‍ಎಸ್, ಪೊಲೀಸ್ ಮತ್ತು ಇತರೆ ಸಿಬ್ಬಂದಿಗೆ ಮೇ 30ರ ವರೆಗೆ ರಾಜೀವ್ ಗಾಂಧೀ ವಿವಿಯ ಮೂಲಕ ತರಬೇತಿ ನೀಡಲಾಗಿದೆ. ಒಟ್ಟಾರೆ 1,73,361 ಮಂದಿಗೆ ಕೊರೊನಾ ಚಿಕಿತ್ಸೆ ನಿಯಂತ್ರಣ ಸೋಂಕು ತಡೆ, ಸೋಂಕಿನಿಂದ ಪಾರಾಗುವುದು ಹೀಗೆ ನಾನಾ ರೀತಿಯ ತರಬೇತಿಗಳನ್ನ ವಿಶ್ವವಿದ್ಯಾನಿಲಯದ ತಜ್ಞರು ನೀಡಿದ್ದಾರೆ.

ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನನಗಳ ವಿಶ್ವವಿದ್ಯಾಲಯವು ನೀಡಿರುವ ಕೊಡುಗೆ ಅಪಾರ. ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ಸಚ್ಚಿದಾನಂದ ಅವರ ನೇತೃತ್ವದಲ್ಲಿ ಇಡೀ ವಿವಿಯ ಬೋಧಕ ಮತ್ತು ಬೋಧಕೇತರ ಸಮುದಾಯ ವಿವಿಯನ್ನು ಉತ್ತುಂಗಕ್ಕೆ ತರುವಲ್ಲಿ ಅವಿರತ ಪ್ರಯತ್ನ ಮಾಡುತ್ತಿದೆ.

ಡಾ.ಎಸ್.ಕಾಂತ ಅವರ ಮುಂದಾಳತ್ವದಲ್ಲಿ 1994ರಲ್ಲಿ ಆರಂಭಗೊಂಡ ಈ ವಿವಿಯ ಅಡಿಯಲ್ಲಿ ಈಗ 700ಕ್ಕು ಹೆಚ್ಚು ವೈದ್ಯಕಯ ಶಿಕ್ಷಣ ಸಂಸ್ಥೆಗಳಿವೆ. 2018ರಲ್ಲಿ ಡೆಂಘಿ ರೋಗದ ನಿಯಂತ್ರಣಕ್ಕೆ ವಿವಿ ವತಿಯಿಂದ ಸಂಶೋಧನೆಯನ್ನು ನಡೆಸಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ವಿವಿಯು ಪ್ರಮುಖ ಪಾತ್ರ ವಹಿಸಿತ್ತು. ದೇಶದಲ್ಲೇ ಮೊದಲ ಡೇಂಘಿ ಕ್ಲೀನಿಕಲ್ ಸ್ಯಾಂಪಲ್ ಬ್ಯಾಂಕ್ ಸ್ಥಾಪಿಸಿದ ಕೀರ್ತಿ ರಾಜೀವ್ ಗಾಂಧೀ ವಿವಿಗೆ ಸಲ್ಲುತ್ತದೆ.

ಒಟ್ಟಾರೆ 217 ಕ್ಲೀನಿಕಲ್ ಟೀಚಿಂಗ್ ಸಾಮಥ್ರ್ಯ ಹೊಂದಿರುವ ವಿಶ್ವವಿದ್ಯಾನಿಲಯ ಸಾಕಷ್ಟು ಗುರಿ ಹೊಂದಿದೆ. ಭೀಮನಕುಪ್ಪೆಯಲ್ಲಿ ಸಂಶೋಧನಾ ವಿಭಾಗ ತೆರೆಯುವುದು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಬಳಗ ಹೆಚ್ಚು ವಿಜ್ಞಾನ ಸಂಶೋಧನಾ ಲೇಖನಗಳನ್ನು ಪ್ರಕಟಿಸಲು ಉತ್ತೇಜಿಸುವುದು ಮತ್ತು ಸಂಶೋಧನೆ ನಡೆಸುವ ಪ್ರಕ್ರಿಯೆಗೆ ಪ್ರೋತ್ಸಾಹ ನೀಡುವ ಗುರಿಯನ್ನು ಹಾಕಿಕೊಂಡಿದೆ. ಈ ಬೆಳ್ಳಿ ಸಂಭ್ರಮದ ಸಂದರ್ಭದಲ್ಲಿ ರಾಜೀವ್ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಜಗತ್ತಿನ ಭೂಪಟದಲ್ಲಿ ಮಹತ್ತರ ಸ್ಥಾನಕ್ಕೆ ಕೊಂಡೊಯ್ಯುವ ಕಾರ್ಯದಲ್ಲಿ ನನ್ನದೂ ಕೂಡಾ ಚಿಕ್ಕ ಪಾತ್ರವಿದೆ ಎಂದು ಹೇಳಿಕೊಳ್ಳಲು ಹೆಮ್ಮೆ ಎನ್ನಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending