ಲೈಫ್ ಸ್ಟೈಲ್
ಗುರುವಾರದ ಭವಿಷ್ಯ | ಕರೆಮಾಡಿ ಸಮಸ್ಯೆ ಪರಿಹರಿಸಿಕೊಳ್ಳಿ
![](https://suddidina.com/wp-content/uploads/2020/05/horoscope_daily_Suddidina-65.jpg)
ಶ್ರೀರಾಘವೇಂದ್ರ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಲಕ್ಷ್ಯವಿರಲಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಕುಟುಂಬಸ್ಥರ ಬೆಂಬಲದಿಂದ ಕೆಲಸಗಳು ಯಶಸ್ವಿಯಾಗಲಿದೆ. ನೀವು ಅಂದುಕೊಂಡಿರುವ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ನಿಮ್ಮಲ್ಲಿ ಧೈರ್ಯ ಕಡಿಮೆಯಾಗಬಹುದು ಆದಷ್ಟು ಮಾನಸಿಕವಾಗಿ ಸಿದ್ಧತೆ ನಡೆಸಿ. ಹಾಸ್ಯ ಸ್ವಭಾವದಿಂದ ಎಲ್ಲರನ್ನೂ ರಂಜಿಸುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಅಪಪ್ರಚಾರ ನಿಂದನೆಗಳಿಂದ ಮಾನಸಿಕವಾಗಿ ಕುಗ್ಗಬಹುದು ಆದಷ್ಟು ಸದೃಢರಾಗಿ. ನಿಮ್ಮ ಕಾರ್ಯಗಳಲ್ಲಿ ತಪ್ಪಿರಬಹುದು ಇನ್ನೊಮ್ಮೆ ಪರಿಶೀಲಿಸುವುದು ಮುಖ್ಯ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರ್ತನೆ ಇರಲಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಕೆಲಸದಲ್ಲಿ ಮಾರ್ಪಡಿಸುವ ಚಿಂತನೆ ಮಾಡಬೇಡಿ. ನವೀನ ಹೂಡಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಸದ್ಯಕ್ಕೆ ಬೇಡ. ಆರ್ಥಿಕ ವ್ಯವಹಾರಗಳು ವ್ಯತಿರಿಕ್ತವಾಗಿ ನಡೆಯಬಹುದು. ಕುಟುಂಬದೊಂದಿಗೆ ವೈಮನಸ್ಸು ಸೃಷ್ಟಿಯಾಗಲಿದೆ. ಬರುವ ಹಣಕಾಸು ನಿಲ್ಲದೆ ಕೈಜಾರಿ ಹೋಗಬಹುದಾಗಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಈ ದಿನದ ಕಾರ್ಯಕಲಾಪಗಳು ಕೊನೆಯ ಹಂತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮನೆಯನ್ನು ಬದಲಾಯಿಸುವ ಚಿಂತನೆ ನಡೆಯಲಿದೆ. ವೃತ್ತಿಯಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕೆಲವು ವಿಷಯಗಳು ನಿಮ್ಮಲ್ಲಿ ಅನಗತ್ಯವಾಗಿ ಕೋಪ ಸೃಷ್ಟಿಸಬಹುದು. ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರೈಸಲು ಮುಂದಾಗಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ಕೆಲಸಕ್ಕಾಗಿ ಸಾಕಷ್ಟು ತಿರುಗಾಟ ಸಾಧ್ಯತೆ. ಹಣಕಾಸಿನ ಸ್ಥಿತಿ ಉತ್ತಮವಾಗಿದ್ದರೂ ಸುಖಾಸುಮ್ಮನೆ ಖರ್ಚು ಗಳಿಂದ ಸಮಸ್ಯೆ. ವೃತ್ತಿರಂಗದಲ್ಲಿ ನೀವೇ ಕೇಂದ್ರಬಿಂದು ಆಗಿರುವಿರಿ. ಪ್ರೇಮಿಗಳಿಗೆ ಶುಭ ಫಲ. ನಿಮ್ಮ ಕೆಲವು ಕೆಲಸಗಳ ಬಗ್ಗೆ ಯಾರೊಂದಿಗೂ ಹಂಚಿಕೊಳ್ಳಬೇಡಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಕ್ಷಣಿಕ ಆನಂದ ತರುವ ಕಾರ್ಯದಲ್ಲಿ ಮಗ್ನರಾಗುವುದು ಬಿಟ್ಟು ನಿಮ್ಮ ಶ್ರಮದಿಂದ ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಸಿದ್ಧರಾಗಿ ಕೌಟುಂಬಿಕ ಕಲಹಗಳು ನಿಮ್ಮನ್ನು ಬಾದೆ ಪಡಿಸುತ್ತದೆ ನಿಮ್ಮ ಕೆಲವು ಅನಿಯಂತ್ರಿತ ಆಸೆಗಳನ್ನು ಹದ್ದು ಬಸ್ತಿನಲ್ಲಿಡುವ ಸೂಕ್ತ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಒಳ್ಳೆಯ ಫಲಿತಾಂಶ ಕಾಣಬಹುದಾಗಿದೆ. ಉದ್ಯೋಗ ನಿಮಿತ್ತ ಪ್ರವಾಸ ಮಾಡಲಿದ್ದೀರಿ. ಇಂದು ನಿಮ್ಮಲ್ಲಿ ಸಾಲ ಕೇಳಲು ಬಂದ ಜನರನ್ನು ನಗುನಗುತಾ ಕಳಿಸಿಕೊಡಿ, ಸಾಲ ಮಾತ್ರ ನೀಡದಿರಿ. ಧಾರ್ಮಿಕ ಕಾರ್ಯ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಪ್ರಯತ್ನಪಡಿ. ದುಡುಕಿನ ನಿರ್ಧಾರ ಗಳಿಂದ ಕಷ್ಟಕ್ಕೆ ಸಿಲುಕಬಹುದು. ಮನೆ ಕಟ್ಟುವ ಯೋಜನೆ ಮುಂದಕ್ಕೆ ಹೋಗಬಹುದು. ಆರ್ಥಿಕ ಹೊಡೆತದಿಂದ ಸಾಲ ಬಾದೆ. ಉದ್ಯಮಿಗಳಿಗೆ ನಿರೀಕ್ಷಿತ ಲಾಭವಿಲ್ಲ. ಕುಟುಂಬದಲ್ಲಿ ಹೊಸ ಸದಸ್ಯರ ಆಗಮನ ಸಂತೋಷ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಮಕ್ಕಳ ಶಿಕ್ಷಣಕ್ಕಾಗಿ ಹಣಕಾಸಿನಲ್ಲಿ ವೆಚ್ಚ. ಒತ್ತಡದಿಂದ ಆಯಾಸ. ಹೊಸ ವಸ್ತುಗಳ ಖರೀದಿಯ ಭರಾಟೆ. ಮನೆಗಾಗಿ ವಿಶೇಷ ಕಾಣಿಕೆ ಕಂಡುಕೊಳ್ಳುವಿರಿ. ಸಂಗಾತಿಯಿಂದ ಪ್ರೇಮ ನಿರೀಕ್ಷೆ. ಇಂದು ನೀವು ಆರಾಮವಾಗಿರುವ ಭಾವನೆ ಹೊಂದಿರುತ್ತೀರಿ ಮತ್ತು ಆನಂದಿಸಲು ಸೂಕ್ತ ಮನೋಭಾವದಲ್ಲಿರುತ್ತೀರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ವಿದೇಶದಲ್ಲಿ ವ್ಯಾಪಾರ ಮಾಡುವ ಈ ರಾಶಿಚಕ್ರದ ಜನರಿಗೆ ಇಂದು ಸಾಕಷ್ಟು ಹಣದ ಲಾಭವನ್ನು ಪಡೆಯಬಹುದು. ಕುಟುಂಬದ ಸದಸ್ಯರೊಂದಿಗೆ ಕೆಲವು ವಿಶ್ರಾಂತಿಯ ಕ್ಷಣಗಳನ್ನು ಕಳೆಯಿರಿ. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸರ್ವಾಧಿಕಾರಿ ಧೋರಣೆ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುತ್ತದೆ. ಇಂದು ನೀವು ಉಚಿತ ಕ್ಷಣಗಳಲ್ಲಿ ಯಾವುದೇ ಹೊಸ ಕೆಲಸವನ್ನು ಮಾಡಲು ಯೋಚಿಸುವಿರಿ ಆದರೆ ನಿಮ್ಮ ಅಗತ್ಯವಾದ ಕೆಲಸಗಳು ಸಹ ತಪ್ಪುವಷ್ಟು ನೀವು ಈ ಕೆಲಸದಲ್ಲಿ ಸಿಲುಕಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ.
9945410150
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ
![](https://suddidina.com/wp-content/uploads/2024/06/Tobacco_suddidina.jpg)
- ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ
ಜಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.
ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.
ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.
ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.
ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.
ದುಶ್ಚಟಗಳ ಆರಂಭಕ್ಕೆ ಕಾರಣಗಳು
• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.
ದುಶ್ಚಟಗಳಿಂದಾಗುವ ಪರಿಣಾಮಗಳು
• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.
ಪರಿಹಾರ ಕ್ರಮಗಳು
• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.
ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.
ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.
ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.
ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಹಿರಿಯ ನಾಗರಿಕರಿಗಿರುವ ಸರ್ಕಾರಿ ಸೌಲಭ್ಯಗಳೇನು..? ; ಮಾಹಿತಿಗೆ ಸಂಪರ್ಕಿಸಿ
![](https://suddidina.com/wp-content/uploads/2024/06/senior_citizens_suddidina.jpg)
ಸುದ್ದಿದಿನ,ದಾವಣಗೆರೆ:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಹಾಗೂ ಇತರೆ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುವ ಉದ್ದೇಶದಿಂದ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಹಿರಿಯ ನಾಗರಿಕರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಬಹುದು.
ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ವಿವರ:ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶೈಲಜಾ ಕೆ.ಎಂ. ಮೊ.ಸಂ: 9482158005, ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಕೆ ಸುಬ್ರಮಣ್ಯಂ ಮೊ.ಸಂ: 9945738141, ಜಗಳೂರು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಎಂ ಕೆ ಶಿವನಗೌಡ ಮೊ.ಸಂ: 9902105734 ಹರಿಹರ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶಶಿಕಲಾ ಟಿ. ಮೊ.ಸಂ: 9945458058, ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಪ್ಪ. ಬಿ ಮೊ.ಸಂ: 9590829024 ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಇವರೇ ನೋಡಿ ಟ್ವೀಟ್ಟರ್, ಪೇಸ್ಬುಕ್ ಮೀಮ್ಸ್ ಸ್ಟಾರ್ ಕ್ಸೇವಿಯರ್ ಉರ್ಫ್ ಓಂಪ್ರಕಾಶ್
![](https://suddidina.com/wp-content/uploads/2024/06/xavier_memes_suddidina.jpg)
- ~ ಸಿದ್ದು ಸತ್ಯಣ್ಣನವರ್
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದವರಿಗೆ ನೋಡಿದ ಕೂಡಲೇ ನಗು ಉಕ್ಕಿಸಿ, ಉಲ್ಲಸಿತಗೊಳಿಸುವ ಕ್ಸೇವಿಯರ್ ಮೀಮ್ಸ್ ಗಳ ಪರಿಚಯ ಇದ್ದೇ ಇರುತ್ತದೆ. ಕ್ಸೇವಿಯರ್ ಎಂದರೆ ಯಾರು? ಎಂದು ಹೆಸರೇಳಿದರೆ ಗೊತ್ತಾಗದಿರುವವರು ಅವರ ಫೋಟೊ ನೋಡಿದರೆ ಕೂಡಲೇ ಮುಖದ ಮೇಲೆ ನಗು ಮೂಡಿರುತ್ತದೆ.
ತುಂಟ ಕಾಮೆಂಟ್ ಹಾಗೂ ಹಾಸ್ಯದ ತಿರುಳುಗಳ ಪೋಸ್ಟ್ ಮೂಲಕ ಗಮನ ಸೆಳೆಯುವ ಕ್ಸೇವಿಯರ್ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಸ್ಯಪ್ರಜ್ಞೆಯಿಂದ ಸಾಕಷ್ಟು ಪ್ರಸಿದ್ಧ. ಕ್ಸೇವಿಯರ್ ಹೆಸರಿನಿಂದ ಜನಪ್ರಿಯರಾದ ಇವರ ನಿಜವಾದ ಹೆಸರು ಓಂಪ್ರಕಾಶ್. ಅಸಂಖ್ಯ ಟ್ವೀಟರ್, ಫೇಸ್ಬುಕ್ ಪ್ರೋಫೈಲ್ ಗಳಲ್ಲಿ ಓಂಪ್ರಕಾಶ್ ಅವರ ಫೋಟೊ ಕ್ಸೇವಿಯರ್ ಎಂದೇ ಹಂಚಲ್ಪಟ್ಟಿದೆ.
ಮೀಮ್ಸ್ ಸ್ಟಾರ್ ಎಂದೇ ಪ್ರಖ್ಯಾತರಾಗಿರುವ ಇವರು ಮಧ್ಯವಯಸ್ಕ ಭಾರತೀಯರು ಹೆಚ್ಚಾಗಿ ಇಷ್ಟಪಡುವ ದಪ್ಪಮೀಸೆಯ ಫೋಟೊ ಹೊಂದಿರುವ ಪ್ರೋಫೈಲ್ ಮೂಲಕ ಟ್ವೀಟ್ಟರ್ ಮತ್ತು ಫೇಸ್ಬುಕ್ಕಿನ ಸಾಕಷ್ಟು ಟ್ರೋಲ್, ಮೀಮ್ ಪೇಜುಗಳಲ್ಲಿ ಕಾಣಸಿಗುತ್ತಾರೆ. ಕ್ಸೇವಿಯರ್ ಅಂಕಲ್, ಕ್ಸೇವಿಯರ್ ಮೀಮ್ಸ್, ಕ್ಸೇವಿಯರ್ ಪಾಂಡಾ, ಕ್ಸೇವಿಯರ್ ಮಿಮ್ ಬಾಯ್ ಹೀಗೆ ಇವರ ಹೆಸರಿನ ಮೂಲಕ ಸಾವಿರಾರು ಮೀಮ್ಸ್ ಮೇಕಿಂಗ್ ಪ್ರೋಫೈಲ್ ಗಳು ಲಕ್ಷಾಂತರ ಹಿಂಬಾಲಕರನ್ನು ಹೊಂದಿವೆ. ಮೀಮ್ಸ್ ಗಾಗಿಯೇ ವಿನ್ಯಾಸಗೊಳಿಸಲಾಗಿರುವ, ವಿದೇಶಗಳಲ್ಲೂ ಕೋಟ್ಯಂತರ ಜನರು ಹಿಂಬಾಲಿಸುವ 9gag ಎಂಬ ವೆಬ್ಸೈಟಿನಲ್ಲಿ ಇವರ ಸಾಕಷ್ಟು ಮೀಮ್ಸ್ ಗಳು ಜನಪ್ರಿಯವಾಗಿವೆ. ಫೇಸ್ಬುಕ್, ಟ್ವಿಟ್ಟರ್ ಬಳಸುವವರಿಗೆ ಕ್ಸೇವಿಯರ್ ಹಾಸ್ಯಪ್ರಜ್ಞೆ ಎಂಥದ್ದು ಎಂಬುದನ್ನ ಕೇಳಿದರೆ ನಗುವೇ ಅವರ ಉತ್ತರವಾಗಿರುತ್ತದೆ ಎಂಬುದಕ್ಕೆ ಸಹ ಚೆಂದದ ಮೀಮ್ ಒಂದಿದೆ.
ಕಾನ್ಪುರ ಐಐಟಿ ಸಿಬ್ಬಂದಿಯಾದ ಓಂಪ್ರಕಾಶ್ ಅವರು ಅಲ್ಲಿನ ಭೌತಶಾಸ್ತ್ರ ವಿಭಾಗದ ತಾಂತ್ರಿಕ ಮೇಲ್ವಿಚಾರಕ ಹುದ್ದೆಯಲ್ಲಿದ್ದಾರೆ. ಕ್ಸೇವಿಯರ್ ಎಂದು ಅವರು ಪ್ರಸಿದ್ಧರಾಗಲು ಕಾರಣ ಅವರ ಅಪರಿಮಿತ ಹಾಸ್ಯಪ್ರಜ್ಞೆಯ ‘ಪಕಾಲು ಪಾಪಿಟೋ’ ಎಂಬ ಕಾಲ್ಪನಿಕ ಗುಮಾಸ್ತನ ಪಾತ್ರವನ್ನು ಸೃಷ್ಟಿಸಿದ್ದಕ್ಕಾಗಿ. ಆ ಗುಮಾಸ್ತನ ಮೊದಲ ಟ್ವೀಟ್ ಟ್ವೀಟ್ಟರಿನಲ್ಲಿ ಹೆಚ್ಚುಕಡಿಮೆ 18 ಸಾವಿರ ರೀಟ್ವೀಟ್ ಆಗಿತ್ತು.
ಟ್ವೀಟ್ಟರ್ ನಿಯಮಗಳ ತಾಂತ್ರಿಕ ಕಾರಣಗಳಿಂದ ಸುಮಾರು ಲಕ್ಷ ಹಿಂಬಾಲಕರಿದ್ದ ಈ ಅಕೌಂಟ್ ಸ್ಥಗಿತಗೊಂಡಿತು. ನಂತರ ಕಾಮಿಕ್ ಮೀಮ್ ಗಳಿಂದ ಆರಂಭದಲ್ಲಿ ಪ್ರಸಿದ್ಧರಾಗಿದ್ದ ಓಂಪ್ರಕಾಶ್ ಅವರು ಕೊನೆಗೆ ಕ್ಸೇವಿಯರ್ ಹೆಸರಿನ ಮೂಲಕ ಮೀಮ್ ಪ್ರಿಯರಿಗೆ ಮನೆಮಾತಾದರು. ಓಂಪ್ರಕಾಶ್ ಅವರು ಫೇಸ್ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಕ್ರಮವಾಗಿ 1.4 ಮಿಲಿಯನ್ ಹಾಗೂ 3 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ‘ಪಕಾಲು ಪಾಪಿಟೋ’ ಅಕೌಂಟ್ ತಾಂತ್ರಿಕವಾಗಿ ಸ್ಥಗಿತಗೊಂಡ ಕಾರಣ ಕ್ಸೇವಿಯರ್ ಎಂಬ ಹೆಸರಿನ ತಮಾಷೆಯ ಮೀಮ್ಸ್ ಮೂಲಕ ಇನ್ಸ್ಟಾಗ್ರಾಂ, ಫೇಸ್ಬುಕ್, ಟ್ವಿಟ್ಟರ್ ಎಲ್ಲ ಕಡೆಗಳಲ್ಲಿ ಕಾಣಿಸುತ್ತಾರೆ. ( ಸಿದ್ದು ಸತ್ಯಣ್ಣನವರ್ ಅವರ ಫೇಸ್ ಬುಕ್ ಪೇಜ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ಕ್ರೀಡೆ6 days ago
ಈ ಕ್ಷಣದ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ7 days ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
-
ದಿನದ ಸುದ್ದಿ6 days ago
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸಿಎಂಗೆ ಅಧಿಕಾರ
-
ದಿನದ ಸುದ್ದಿ7 days ago
ನಿನ್ನೆ ನಡೆದ NET ಪರೀಕ್ಷೆ ರದ್ದು..!
-
ದಿನದ ಸುದ್ದಿ5 days ago
JOB NEWS | ಜಲ ಜೀವನ್ ಮಿಷನ್ ; ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆಯಲ್ಲಿ ಹೊಸ ಕೆರೆಗಳ ನಿರ್ಮಾಣ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ
-
ದಿನದ ಸುದ್ದಿ5 days ago
ವಿದ್ಯುತ್ ಮೋಟಾರ್ ರಿವೈಂಡಿಂಗ್ ತರಬೇತಿ ; ಸಂಪರ್ಕಿಸಿ