ಲೈಫ್ ಸ್ಟೈಲ್
ಭಾನುವಾರದ ಭವಿಷ್ಯ | ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹದಂತ ಕಠಿಣ ಸಮಸ್ಯೆಗಳಿಗೆ ಪರಿಹಾರ ಶತಸಿದ್ಧ : ಇಂದೇ ಕರೆಮಾಡಿ
ಶ್ರೀ ನರಸಿಂಹ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ನಿಮ್ಮ ಲಕ್ಷಣವು ತುಂಬಾ ಆಕರ್ಷಿತವಾಗಿ ಇಂದು ಕಾಣಬಹುದು. ಪ್ರವಾಸ ಮನರಂಜನೆಗೆ ಹೆಚ್ಚಿನ ಒಲವು ವ್ಯಕ್ತಪಡಿಸುತ್ತೀರಿ ಹಾಗೂ ನಿಮ್ಮ ದೊಡ್ಡಸ್ಥಿಕೆಯಿಂದ ದುಂದುವೆಚ್ಚ ಮಾಡಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಜೊತೆ ಹಾಗೂ ಕೆಲವು ವ್ಯಕ್ತಿಗಳ ಜೊತೆಗೂ ಸಹ ಒರಟುತನದ ವರ್ತನೆ ನಿಮಗೆ ಒಳ್ಳೆಯದಲ್ಲ. ನಿಮ್ಮ ಮನಸ್ಸಿನಲ್ಲಿ ತುಂಬಾ ಸುಂದರವಾದ ಕಲ್ಪನೆಗಳಿವೆ ಅವುಗಳನ್ನು ಜಾರಿಗೆ ತರಲು ಪ್ರಯತ್ನಿಸಿ.
ವೃಷಭ ರಾಶಿ
ಸ್ನೇಹಿತ ವರ್ಗದಲ್ಲಿ ಕೆಲವರು ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುತ್ತಿರಬಹುದು ಆದಕಾರಣ ನೀವು ಜಾಗೃತೆ ವಹಿಸುವುದು ಸೂಕ್ತ. ನಿರೀಕ್ಷಿತ ಕೆಲಸಗಳು ಮುಂದೂಡಲ್ಪಡುವ ಸಾಧ್ಯತೆ ಇದೆ. ಪತ್ನಿಯ ಪ್ರೇಮ ಅಲಕ್ಷಿಸುವುದು ಉತ್ತಮವಲ್ಲ.
ಮಿಥುನ ರಾಶಿ
ನಿಮ್ಮ ಕೆಲಸಗಳಿಂದ ಉತ್ತಮ ಅಭಿಪ್ರಾಯವನ್ನು ಪಡೆಯುವ ಸಾಧ್ಯತೆ. ಹೊಸ ಹಣಕಾಸಿನ ಒಪ್ಪಂದ ಅದ್ಭುತವಾಗಿ ಅಡೆತಡೆಯಿಲ್ಲದೆ ನೆರವೇರುವುದು. ಕೆಲವು ಮೂಲಗಳಿಂದ ಹಣಕಾಸಿನ ಸ್ಥಿತಿ ಉತ್ತಮಗೊಳ್ಳುತ್ತ ಸಾಗುತ್ತದೆ. ನಿಮ್ಮ ಉದ್ಯೋಗ ಅಥವಾ ಮನೆಯ ಸ್ಥಳ ಬದಲಾವಣೆ ಚಿಂತನೆ ಸಾಕಾರಗೊಳ್ಳುವ ಹಂತದಲ್ಲಿರುತ್ತದೆ. ನಿಮ್ಮ ಮಾತು ನೇರವಾಗಿ ಹಾಗೂ ನೈಜತೆಯಿಂದ ಇರಲಿ ಏಕೆಂದರೆ ವ್ಯವಹಾರದಲ್ಲಿ ಇವನ್ನೆಲ್ಲಾ ಇಂದು ಗಮನಿಸುತ್ತಿರುತ್ತಾರೆ.
ಕರ್ಕಾಟಕ ರಾಶಿ
ಕುಟುಂಬದಲ್ಲಿ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ. ಪತ್ನಿಯ ಬಾಳಿನ ಆಶಾಕಿರಣ ನೀವೇ, ಇಂದು ಅವರ ಸಾಂಗತ್ಯದಲ್ಲಿ ಸಂತೋಷದ ಪರಾಕಾಷ್ಠೆಯಲ್ಲಿ ಕಳೆದುಹೋಗುವಿರಿ. ಮನಸ್ಸು ಮರ್ಕಟ ಇದ್ದಂತೆ, ಹೆಚ್ಚು ವಿಚಾರಗಳಿಗೆ ಚಿಂತನೆ ಮಾಡುತ್ತಾ ಅಥವಾ ಬೇರೆಯವರ ವಿಷಯಗಳಲ್ಲಿ ಯೋಚಿಸುವುದು ಅಷ್ಟೊಂದು ಸರಿ ಕಾಣುವುದಿಲ್ಲ. ಆರೋಗ್ಯದಲ್ಲಿ ಗಮನವಹಿಸುವುದು ಒಳ್ಳೆಯದು.
ಸಿಂಹ ರಾಶಿ
ಅನಿರೀಕ್ಷಿತವಾಗಿ ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಕಾಣಬಹುದು ಅದನ್ನು ಪರಿಹರಿಸಲು ನಿಮ್ಮ ವಿವೇಚನೆಯನ್ನು ಉಪಯೋಗಿಸಿ. ಜಮೀನು ಅಥವಾ ಗೃಹ ಖರೀದಿಗೆ ಉತ್ತಮವಾದ ದಿನವಿದು. ಕುಟುಂಬದ ಸಣ್ಣ ಸಮಸ್ಯೆಗಳನ್ನು ದೊಡ್ಡದಾಗಿ ಬಿಂಬಿಸಿ ಆಡಿಕೊಳ್ಳುವ ಹಾಗೆ ಮಾಡಬೇಡಿ. ಕೆಲಸದ ನಿರ್ಧಾರಗಳು ಉತ್ತಮ ಲಾಭಾಂಶ ತಂದುಕೊಡುತ್ತದೆ. ಇಂದು ನೀವು ವ್ಯವಹಾರದ ಕೆಲವು ಸೂಕ್ಷ್ಮ ವಿಚಾರಗಳನ್ನು ಕಲಿಯುತ್ತೀರಿ.
ಕನ್ಯಾ ರಾಶಿ
ನಿಮ್ಮಲ್ಲಿ ಮೂಡುವ ಸಾತ್ವಿಕ ಯೋಚನೆಗಳು ನಿಮ್ಮ ಗುರಿ ನೆರವೇರಲು ಸಹಕಾರ ನೀಡುತ್ತದೆ. ಇಂದು ಮನೆ ದೇವರ ಆಶೀರ್ವಾದ ಪಡೆಯಲು ಬಯಸುತ್ತೀರಿ. ಕುಟುಂಬದಲ್ಲಿ ನಿಮ್ಮ ಬಗ್ಗೆ ಕೆಲವು ಊಹಾಪೋಹ ಮಾತುಗಳು ಬರುವ ಸಾಧ್ಯತೆ ಇದೆ. ನಿಮ್ಮ ಕೆಲವು ನಿರೀಕ್ಷಿತ ಕೆಲಸಗಳು ವಿಳಂಬ ಆಗಲಿದೆ. ಮನೆಯಲ್ಲಿ ಆರೋಗ್ಯದ ಸಮಸ್ಯೆ ನಿಮ್ಮನ್ನು ಹೆಚ್ಚು ಕಾಡಬಹುದು. ನಿಮ್ಮ ಕೆಲಸದಲ್ಲಿ ಸ್ಥಳ ಬದಲಾವಣೆಯಾಗುವ ನಿರೀಕ್ಷೆ ಇದೆ.
ತುಲಾ ರಾಶಿ
ಮಾತುಗಳು ಮತ್ತು ವ್ಯವಹಾರದ ಶೈಲಿಯು ನೇರವಾಗಿರಲಿ. ನಿಮ್ಮಲ್ಲಿ ಮೂಡಿರುವ ಸೋಮಾರಿತನವನ್ನು ಆದಷ್ಟು ತ್ಯಜಿಸುವುದು ಸೂಕ್ತ. ಸಂಗಾತಿ ಮತ್ತು ಕುಟುಂಬದವರು ನಿಮಗೆ ಉತ್ಸಾಹ ತರಲಿದ್ದಾರೆ. ನಿರ್ದಿಷ್ಟ ಗುರಿಯನ್ನು ತಲುಪಲು ನಿಮ್ಮ ಪರಿಶ್ರಮ ಇನ್ನಷ್ಟು ಬೇಕಾಗಿದೆ. ದೈವ ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡು ಬರಲಿದೆ.
ವೃಶ್ಚಿಕ ರಾಶಿ
ಇಂದು ಸಮಾರಂಭಗಳಿಗೆ ಅಥವಾ ಗೋಷ್ಠಿಗಳಿಗೆ ನೀವು ಪಾಲ್ಗೊಳ್ಳಲು ಸಿದ್ದರಾಗುವಿರಿ. ಮಧ್ಯಮ ಗತಿಯ ಆರ್ಥಿಕ ವ್ಯವಹಾರ ನಡೆಯಲಿದೆ. ನೆನೆಗುದಿಗೆ ಬಿದ್ದಿರುವ ಕಾರ್ಯಗಳು ಈ ದಿನ ಒಂದು ಹಂತದಲ್ಲಿ ಪುನರಾರಂಭ ಮಾಡುವ ಸಾಧ್ಯತೆಗಳು ದಟ್ಟವಾಗಿದೆ.
ಧನಸ್ಸು ರಾಶಿ
ಇಬ್ಬರ ಜಗಳದಲ್ಲಿ ನೀವು ಮೂರನೇ ವ್ಯಕ್ತಿಯಾಗಿ ಪ್ರವೇಶಿಸ ಬೇಡಿ ತಟಸ್ಥವಾಗಿರುವುದು ಕ್ಷೇಮ. ಸ್ವಂತ ಉದ್ಯೋಗದ ಯೋಜನೆ ಸಕಾರಾತ್ಮಕ ಗೊಳ್ಳುವ ಸುಸಂದರ್ಭ ಒದಗಿಬಂದಿದೆ. ಮಕ್ಕಳೊಡನೆ ಚುಟುಕು ಪ್ರವಾಸ ಅಥವಾ ಪ್ರದರ್ಶನ ಕಲೆಗಳಿಗೆ ಭೇಟಿ ನೀಡುವ ಸಾಧ್ಯತೆ ಈ ದಿನ ಕಂಡುಬರುತ್ತದೆ.
ಮಕರ ರಾಶಿ
ಮನೆಗೆ ನೆಂಟರಿಷ್ಟರ ಆಗಮನದಿಂದ ಸಂತಸ ಹೆಚ್ಚಾಗಲಿದೆ. ಈ ದಿನ ನಿಮ್ಮ ಶ್ರಮ ತುಂಬಾ ಹೆಚ್ಚಾಗಿ ಕಾಣಬಹುದು. ಹೆಚ್ಚಿನ ಓಡಾಟ ಅಲೆದಾಟದಿಂದ ದೈಹಿಕ ಆಯಾಸ ದಂತಹ ಸಮಸ್ಯೆಯಲ್ಲಿ ಸಿಲುಕುವಿರಿ. ಕೆಲವು ಯಶಸ್ಸುಗಳು ಇನ್ನೇನು ಹತ್ತಿರದಲ್ಲಿದ್ದ ಹಾಗೆ ಅವುಗಳು ಕಣ್ಮರೆಯಾಗುವ ಸಾಧ್ಯತೆಗಳು ಕಂಡು ಬರುತ್ತದೆ.
ಕುಂಭ ರಾಶಿ
ತೀವ್ರತರನಾದ ನಿರಾಶಾ ಭಾವನೆ ಕಾಡಬಹುದು ನೀವು ಆದಷ್ಟು ಸಕಾರಾತ್ಮಕವಾಗಿ ಚಿಂತಿಸಿ ನಿಮ್ಮ ಪರಿಶ್ರಮಕ್ಕೆ ಖಂಡಿತ ಬೆಲೆ ಸಿಗಲಿದೆ. ಕುಲ ದೇವತಾರಾಧನೆ ಮಾಡುವುದು ಒಳಿತು. ಹೊಸತನದತ್ತ ನಿಮ್ಮ ಪ್ರಯಾಣ ಸಾಗಲಿದೆ.
ಮೀನ ರಾಶಿ
ಹೊಸ ವ್ಯಕ್ತಿಗಳ ಪರಿಚಯ ಹಾಗೂ ಮಿತ್ರರು ನಿಮ್ಮ ಜೀವನದಲ್ಲಿ ಸೇರ್ಪಡೆಯಾಗಲಿದ್ದಾರೆ. ಉದ್ಯಮದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಆಧುನಿಕತೆ ಮತ್ತು ತಂತ್ರಜ್ಞಾನವನ್ನು ನೀವು ಪ್ರಸ್ತುತಪಡಿಸಲು ಬಯಸುವಿರಿ. ನಿಮ್ಮ ಕೆಲವು ನಿಲುವುಗಳನ್ನು ಮೇಲಾಧಿಕಾರಿಗಳು ಯಾವುದೇ ಬೆಲೆ ನೀಡದೆ ತಳ್ಳಿಹಾಕಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

