Connect with us

ದಿನದ ಸುದ್ದಿ

ಪ್ರಾಣಿಗಳ ಮೇಲೆ ನಡೆಯುವ ಅಮಾನವೀಯ ಕೃತ್ಯಗಳನ್ನು ತಡೆಯಲು ತಿಳಿದುಕೊಳ್ಳಲೇ ಬೇಕಾದ ಪ್ರಾಣಿ ಕಲ್ಯಾಣ ಕಾನೂನುಗಳಿವು : ಮಿಸ್ ಮಾಡ್ದೆ ಓದಿ

Published

on

  • ಡಾ.ಕಮಲೇಶ್ ಕುಮಾರ್ ಕೆ ಎಸ್, ಪಶುವೈದ್ಯಾಧಿಕಾರಿಗಳು, ಶಿವಮೊಗ್ಗ

ಹಿಂದಿನಿಂದಲೂ ತಮ್ಮ ಪಾಡಿಗೆ ತಾವು ಜೀವಿಸುತ್ತಿದ್ದ ವನ್ಯ ಪ್ರಾಣಿಗಳನ್ನು ನಾವು ನಮ್ಮ ಅನುಕೂಲಕ್ಕೆ ತಕ್ಕಂತೆ ಎಷ್ಟೋ ಪ್ರಾಣಿಗಳನ್ನು ಪಳಗಿಸಿ ನಾಡು ಪ್ರಾಣಿಗಳನ್ನಾಗಿ ಪರಿವರ್ತಿಸಿದ್ದೇವೆ. ಮಾತು ಬಾರದ ಮೂಕ ಜೀವಿಗಳನ್ನು ಮನುಷ್ಯರಾದ ನಾವು ನಮ್ಮ ಅನುಕೂಲಕ್ಕೆ ತಕ್ಕಂತೆ ನಮ್ಮ ಸ್ವಾರ್ಥಕ್ಕಾಗಿ ಜೀವನ ನಡೆಸಲು, ಆರ್ಥಿಕವಾಗಿ ಸದೃಢವಾಗಲು, ಆಟವಾಡಲು, ನಮ್ಮ ಜೀವನದ ಒಡನಾಡಿಗಳಾಗಿ, ಮನರಂಜನೆ ಪಡೆಯಲು ಹಾಗು ಸಾಂಪ್ರದಾಯಿಕವಾಗಿ ಬಂದಿರುವ ಕಾರ್ಯಗಳನ್ನು ಮಾಡಲು ಬಳಸಿಕೊಳ್ಳುತ್ತಿದ್ದೇವೆ. ಇಷ್ಟೆಲ್ಲಾ ಆದರೂ ಅವುಗಳನ್ನು ಸರಿಯಾಗಿ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲೆಯೇ ಇದೆ ಅಲ್ಲವೇ, ಎಲ್ಲವೂ ತಿಳಿದಿದ್ದರು ಸ್ವಾರ್ಥಿಗಳಾದ ಕೆಲವರು ಮಾಡುತ್ತಿರುವುದಾದರು ಏನು?

ಅದುವೆ ಹಿಂಸೆ..!

ಇತ್ತೀಚೆಗಷ್ಟೇ ಕೇರಳ, ಹಿಮಾಚಲ್ ಪ್ರದೇಶ ಹಾಗೂ ಛತ್ತೀಸ್ ಗಡದಲ್ಲಿ ನಡೆದ ಅಮಾನವೀಯ ಕೃತ್ಯಗಳು ಮಾನವೀಯತೆಯನ್ನು ಮೀರಿವೆ. ಛತ್ತೀಸ್ಗಡ ರಾಜ್ಯದ ರಾಯಪುರದ ಲೀಲಾಂಬ ಹಳ್ಳಿಯಲ್ಲಿ ಒಂದು ಹಸುವಿನ ಬಾಯಿಯಲ್ಲಿ, ಹಿಮಾಚಲ್ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ದಹಾದ್ ಗ್ರಾಮದಲ್ಲಿ ಕೂಡ ಒಂದು ಗರ್ಭಿಣಿ ಹಸುವಿನ ಬಾಯಿಯಲ್ಲಿ ಸ್ಪೋಟಕವನ್ನಿಟ್ಟು ಘಾಸಿಗೊಳಿಸಿದ್ದಾರೆ.

ಹಾಗೂ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆಹಾರ ಅರಸಿ ಬಂದ ಗರ್ಭಿಣಿ ಆನೆಯ ಬಾಯಿಗೆ ತಿನ್ನಲು ಸ್ಪೋಟಕ ತುಂಬಿದ ತೆಂಗಿನಕಾಯಿಯನ್ನಿಟ್ಟು ಹತ್ಯೆಗೈದಿರುವುದು ವಿಶ್ವವ್ಯಾಪಿ ಖಂಡನೆಗೆ ಗುರಿಯಾಗಿದೆ. ಅಷ್ಟೇ ಏಕೆ ನಮ್ಮ ಕಣ್ಣೆದುರಲ್ಲೇ ಎಷ್ಟೋ ಹಿಂಸೆಗಳು ಕಣ್ಮರೆಯಾಗಿ ಹೋಗುತ್ತಿವೆ. ಹೀಗೆಯೇ ಆಗುತ್ತಿದ್ದರೆ ನಮ್ಮ ದೇಶದ ಹೆಸರು ಹಾಗು ಪ್ರಾಣಿ ಸಂಕುಲ ಸಂಪೂರ್ಣವಾಗಿ ನಾಶವಾಗುವುದು ಖಚಿತ.

ಪ್ರಾಣಿಗಳು ಕೇವಲ ಆಟವಾಡುವ ವಸ್ತುವಲ್ಲ ಅವುಗಳಿಗೂ ನಮ್ಮಷ್ಟೇ ಜೀವಿಸುವ ಹಕ್ಕಿರುವುದು, ಜೀವಿಗಳಲ್ಲೆ ಹೆಚ್ಚು ಸ್ವಾರ್ಥಿಯಾಗಿರುವ ಹಾಗೂ ಪ್ರಾಣಿ ಸಂಕುಲದ ಸ್ಥಳವನ್ನು ಅಕ್ರಮಿಸುತ್ತಿರುವ ನಾವುಗಳು ಪ್ರಾಣಿಗಳ ಜೀವ ರಕ್ಷಣೆ ಮಾಡಬೇಕೆ ಹೊರತು ಅವುಗಳ ಜೀವಕ್ಕೆ ಕುತ್ತು ತರಬಾರದು. ಇಷ್ಟೆಲ್ಲಾ ಆದಮೇಲಾದರು ನಾವುಗಳು ಪ್ರಾಣಿಗಳ ರಕ್ಷಣೆಗೆ ಸಜ್ಜಾಗಬೇಕು, ಪ್ರಾಣಿ ಕಲ್ಯಾಣ ಮಂಡಳಿ ಹಾಗೂ ಅದರ ವಿವಿಧ ಕಾನೂನಿನ ಬಗ್ಗೆ ಅರಿವು ಮುಡಿಸಿಕೊಳ್ಳಲೇಬೇಕು.

ಮುಖ್ಯವಾಗಿರುವ ಪ್ರಾಣಿ ಕಲ್ಯಾಣ ಕಾನೂನುಗಳು ಹೀಗಿವೆ

  • Prevention of Cruelty to Animals Act – 1960,
  • Wild Life Protection Act – 1972,
  • Transport of Animal Rules – 1975, -Performing Animals Registration (Amendment) Rules 2001

ಈ ಕಾನೂನುಗಳ ಪ್ರಕಾರ ಈ ಕೆಳಕಂಡ ಅಮಾನವೀಯ ಕೃತ್ಯಗಳ ಮೇಲೆ ಕ್ರಮ ಜರುಗಿಸಬಹುದು..

ಪ್ರಾಣಿಗಳನ್ನು ಹೊಡಿಯೋದು, ಒದಿಯೋದು, ಧೀರ್ಘಕಾಲ ಸವಾರಿ ಮಾಡೋದು, ಹೆಚ್ಚುಭಾರ ಹೆರೋದು ಹಾಗು ಚಿತ್ರಹಿಂಸೆ ನೀಡೋದು ಮಾಡಿದರೆ PCA – 1960, ಸೆಕ್ಷನ್ 11 (1) (a) ಪ್ರಕಾರ ಕಾನೂನು ಕ್ರಮ ಜರುಗಿಸಬಹುದಾಗಿದೆ.

  • ವಯಸ್ಸಾಗಿರುವ, ಗಾಯವಾಗಿರುವ ಹಾಗೂ ಅನರ್ಹ ಪ್ರಾಣಿಯನ್ನು ಕೆಲಸಕ್ಕೆ ಬಳಸುವ ಹಾಗಿಲ್ಲ.
  • ಹಾನಿಕಾರಕ ಔಷಧವನ್ನು ಪ್ರಾಣಿಗಳ ಮೇಲೆ ಬಳಸುವ ಹಾಗಿಲ್ಲ.
  • ಅಸ್ವಸ್ಥತೆ ಹಾಗೂ ನೋವು ಮೂಡಿಸುವಹಾಗೆ ಪ್ರಾಣಿಯನ್ನು ವಾಹನದಲ್ಲಿ ಸಾಗಣೆ ಮಾಡುವ ಹಾಗಿಲ್ಲ.
  • ಕಾನೂನಿನ ಪ್ರಕಾರ ಶಿಫಾರಸ್ಸು ಮಾಡಿರುವ ಪಂಜರಕ್ಕಿಂತ ಸಣ್ಣ ಪಂಜರಗಳಲ್ಲಿ ಪ್ರಾಣಿಗಳನ್ನು ಇಡುವ ಹಾಗಿಲ್ಲ.
  • ಪ್ರಾಣಿಗಳನ್ನು ದೊಡ್ಡ ಸರಪಣಿ ಹಾಗು ಅಸಮಂಜಸ ಸಮಯದವರೆಗೆ ಕಟ್ಟಿ ಹಾಕುವ ಹಾಗಿಲ್ಲ.
  • ಶ್ವಾನವನ್ನು ದೀರ್ಘಕಾಲ ದೇಹಕ್ಕೆ ವ್ಯಾಯಾಮವಿಲ್ಲದೆ ಒಂದೇ ಸ್ಥಳದಲ್ಲಿ ಕಟ್ಟಿ ಹಾಕಿ ಬಂದಿಸುವ ಹಾಗಿಲ್ಲ.
  • ಪ್ರಾಣಿಗಳನ್ನು ಸಾಕುವವರು ಅವುಗಳಿಗೆ ಊಟ, ನೀರು ಹಾಗೂ ಆಶ್ರಯ ಕಡ್ಡಾಯವಾಗಿ ನೀಡಲೇಬೇಕಿದೆ
  • ಸಾಕುಪ್ರಾಣಿಗಳನ್ನು ಅವುಗಳ ವಯಸ್ಸಾದಮೇಲೆ ಅಥವಾ ಖಾಯಿಲೆಬಿದ್ದರೆ ಹಾಗೆಯೇ ತ್ಯಜಿಸುವ ಹಾಗಿಲ್ಲ.
  • ಪ್ರಾಣಿಗಳನ್ನು ಅಮಾನವೀಯವಾಗಿ ವಿರೂಪಗೊಳಿಸುವ ಅಥವಾ ಸಾಯಿಸುವಹಾಗಿಲ್ಲ.
  • ಒಂದು ಪ್ರಾಣಿಯನ್ನು ಇನ್ನೊಂದು ಪ್ರಾಣಿಯ ಜೊತೆಗೆ ಜಗಳವಾಡಲು ಪ್ರೇರೇಪಿಸುವಹಾಗಿಲ್ಲ.
  • ಒಂದು ಪ್ರಾಣಿಗೆ ಇನ್ನೊಂದು ಜೀವಂತ ಪ್ರಾಣಿಯನ್ನು ತಿನ್ನಲು ಕೊಡುವುದು ಅಥವಾ ತಿನ್ನಲು ಪ್ರೇರೇಪಿಸುವ ಹಾಗಿಲ್ಲ.
  • ಹೆಣ್ಣು ಪ್ರಾಣಿಗಳು ಹಾಲು ಜಾಸ್ತಿ ನೀಡುವ ಹಾಗೆ ಹಾನಿಕಾರಕ ಔಷಧ (Oxytocin) ನೀಡುವ ಹಾಗಿಲ್ಲ.
  • ಪ್ರಾಣಿಗಳಿಗೆ ತರಬೇತಿ ಹಾಗು ಪ್ರದರ್ಶನ ನೀಡಲು Animal Welfare Board of India ಮಂಡಳಿಯಿಂದ ನೋಂದಣಿ ಕಡ್ಡಾಯವಾಗಿ ಮಾಡಿಸಬೇಕು.
  • ಹುಲಿ, ಸಿಂಹ, ಕೋತಿ, ಚಿರತೆ, ಕರಡಿ, ಎತ್ತು ಹಾಗೂ ಇನ್ನಿತರ ಪ್ರಾಣಿಗಳನ್ನು ಬೀದಿಗಳಲ್ಲಿ ಪ್ರದರ್ಶಿಸಲು ಬಳಸುವ ಹಾಗಿಲ್ಲ.
  • ಪ್ರಾಣಿಗಳ ಜೊತೆಗೆ ದೈಹಿಕ ಸಂಪರ್ಕ ಅಥವಾ ಅನೈತಿಕ ಸಂಬಂಧ ಹೊಂದುವ ಹಾಗಿಲ್ಲ.

ಈ ರೀತಿ ಯಾವುದಾದರು ಆಪತ್ತಿನಲ್ಲಿರುವ ಪ್ರಾಣಿಗಳು ಕಂಡುಬಂದಲ್ಲಿ ಪುರಾವೆಯ (ಫೋಟೋ / ವಿಡಿಯೋ) ಸಮೇತ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದು.

(ಡಾ.ಕಮಲೇಶ್ ಕುಮಾರ್ ಕೆ ಎಸ್
ಪಶುವೈದ್ಯಾಧಿಕಾರಿಗಳು
ಪಶುಚಿಕಿತ್ಸಾಲಯ, ಮತ್ತೂರು,
ಶಿವಮೊಗ್ಗ.
ಈ ಮೇಲ್ : kskamalesh93@gmail.com
ಫೋನ್ : 9164282969)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending