ಲೈಫ್ ಸ್ಟೈಲ್
ಶನಿವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ
ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:9945410150
ಮೇಷ ರಾಶಿ
ನಿಮ್ಮ ಪ್ರಚಾರದ ಮನಸ್ಥಿತಿಯನ್ನು ಆದಷ್ಟು ತೆಗೆದುಹಾಕಿ. ಮಕ್ಕಳ ಬೆಳವಣಿಗೆಗೆ ಪೂರಕ ವ್ಯವಸ್ಥೆ ನಿಮ್ಮಿಂದ ಸಾಧ್ಯವಾಗಲಿದೆ. ವ್ಯವಹಾರಗಳಲ್ಲಿ ಆದಷ್ಟು ಉತ್ತಮ ನಿರ್ವಹಣೆ ತೋರಿಸಿ. ಹಿರಿಯರ ವಿಚಾರಗಳನ್ನು ಪಾಲಿಸುವುದು ಕ್ಷೇಮ. ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ನಿಮ್ಮ ವೇಳಾಪಟ್ಟಿಯು ಬದಲಾಗುವ ಸಾಧ್ಯತೆಗಳಿವೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಹೆಚ್ಚಿನ ಓಡಾಟದಿಂದ ಆರೋಗ್ಯದಲ್ಲಿ ಏರುಪೇರು ಕಂಡು ಬರಬಹುದು. ಪ್ರೇಮಿಗಳಿಗೆ ಉತ್ತಮ ದಿನವಿದು. ಸಂಬಂಧಿಕರೊಡನೆ ಉತ್ತಮ ಭಾಂದವ್ಯ ಕಂಡುಬರುತ್ತದೆ. ಕೆಲಸದಲ್ಲಿ ಪ್ರಶಂಸೆ ಹಾಗೂ ಮನ್ನಣೆ ಗಳಿಸುತ್ತೀರಿ. ಆರ್ಥಿಕ ವ್ಯವಹಾರಗಳು ವಿಳಂಬವಾಗುವ ಸಾಧ್ಯತೆ ಇದೆ. ಸಾಲದ ಸಂಕೋಲೆಯಿಂದ ಹೊರ ಬರುವ ಪ್ರಯತ್ನ ಮಾಡಿ. ಬಂಧುಗಳೊಂದಿಗೆ ಹರ್ಷದ ವಾತಾವರಣ ಇರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಅವಕಾಶಗಳು ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಉತ್ತಮ ಕೆಲಸ ಸಿಗುವ ಸಾಧ್ಯತೆ ಕಾಣಬಹುದು. ಹಣಕಾಸುಗಳನ್ನು ವ್ಯವಸ್ಥಿತವಾಗಿ ಮರುಪಾವತಿ ಮಾಡಿಕೊಳ್ಳುವಿರಿ. ಮಕ್ಕಳೊಂದಿಗೆ ಜ್ಞಾನ ವಿಚಾರಧಾರೆ ಕಾರ್ಯಗಳನ್ನು ಮಾಡಲಿದ್ದೀರಿ. ಈ ದಿನ ನಿಮ್ಮ ನಡೆಯು ಉತ್ತಮವಾಗಿ ರೂಪಗೊಳ್ಳುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಚೈತನ್ಯ ಮತ್ತು ಆರೋಗ್ಯವಂತರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ದಾಂಪತ್ಯದಲ್ಲಿನ ಬಿರುಕು ಅಥವಾ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಸಾಧ್ಯತೆಗಳು ಕಾಣಬಹುದು. ನಿಮ್ಮ ವ್ಯಕ್ತಿತ್ವವನ್ನು ಹಲವರು ಪ್ರಶಂಸಿಲಿದ್ದಾರೆ. ಕೆಲಸವು ಹೆಚ್ಚಾಗಿ ಒತ್ತಡ ತರಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಕೆಲಸವು ಈ ದಿನ ಅನಾಯಾಸವಾಗಿ ನಡೆಯಬಹುದು. ವಾಹನ ಖರೀದಿಯ ಬಯಕೆಗೆ ಮೂರ್ತಸ್ವರೂಪ ದೊರೆಯಲಿದೆ. ಮಾಡುವ ಕೆಲಸದಲ್ಲಿ ವಿಶ್ವಾಸ ಬೆಳೆಸಿಕೊಳ್ಳಿ. ಸುತ್ತಲಿರುವ ಪರಿಸರದ ಬಗ್ಗೆ ತಿಳಿದುಕೊಳ್ಳುವ ತವಕ ನಿಮ್ಮಲ್ಲಿ ಕಾಣಲಿದೆ. ನಿಮ್ಮಲ್ಲಿ ಮೂಡುವ ಜಡತ್ವದ ಭಾವನೆಯನ್ನು ಆದಷ್ಟು ತೆಗೆದುಹಾಕುವುದು ಉತ್ತಮ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಈ ದಿನ ದೈವ ದೇಗುಲಗಳ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಮಾನಸಿಕ ಗೊಂದಲಗಳು ಹಿರಿಯರಿಂದ ಸೂಕ್ತ ಪರಿಹಾರ ದೊರಕುವುದು ನಿಶ್ಚಿತ. ಕುಟುಂಬದ ಕೆಲವು ಜವಾಬ್ದಾರಿಗಳು ಹಾಗೂ ಕಾರ್ಯಕ್ರಮಗಳ ನಡೆಸುವ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆಯಿದೆ. ಉಳಿದಿರುವ ಕೆಲಸವನ್ನು ಪೂರ್ಣಪ್ರಮಾಣದಲ್ಲಿ ಮಾಡಿ ಮುಗಿಸುತ್ತೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ. ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕಷ್ಟಕರವಾದ ಕೆಲಸಗಳು ಈ ದಿನ ನಿಮಗೆ ಪ್ರಾಪ್ತಿಯಾಗಲಿದೆ. ಉದ್ಯೋಗದಲ್ಲಿ ನಿಮ್ಮ ಹಿರಿಯ ಅಧಿಕಾರಿಗಳಿಂದ ಸಮಸ್ಯೆಗಳು ಎದುರಾಗಬಹುದು. ಸುಖಾಸುಮ್ಮನೆ ಕಾದಾಡುವ ಪರಿಸ್ಥಿತಿ ಬರಬಹುದು ಆದಷ್ಟು ತಾಳ್ಮೆ ಮತ್ತು ಎಚ್ಚರಿಕೆ ಇರಲಿ. ಭೂಮಿ ಮಾರಾಟ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸಗಳು ಆಗಬಹುದು ಎಚ್ಚರಿಕೆಯಿರಲಿ. ಮನರಂಜನೆಗಾಗಿ ಈ ದಿನ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ. ನಿಮ್ಮಲ್ಲಿ ಗುಪ್ತವಾಗಿರುವ ಕಲಾಸಕ್ತಿಗಳು ಪ್ರಚಲಿತವಾಗುರವ ಸಂಭವ ಕಾಣಬಹುದಾಗಿದೆ. ಹೊಸತನವನ್ನು ವೃದ್ಧಿಸಿಕೊಂಡು ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಈ ದಿನ ಶಕ್ತಿ ದೈವದ ಮೊರೆ ಹೋಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕ ವ್ಯವಹಾರಗಳು ನಿಮ್ಮ ಚಾಣಕ್ಷತನದಿಂದ ಸುಧಾರಣೆಗಳಾಗಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲು ಬಯಸುವಿರಿ. ಆಕಸ್ಮಿಕವಾಗಿ ಬಾಲ್ಯದ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ಸಂಜೆಯ ವಾತಾವರಣ ಮೋಜು-ಮಸ್ತಿ ಗಳಿಂದ ಕೂಡಿರಬಹುದು. ತಡರಾತ್ರಿ ಮನೆಗೆ ಹೋಗುವುದು ಸರಿಯಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಂಗಾತಿಯ ಮನಸ್ಥಿತಿ ಸರಿ ಇಲ್ಲದಿರುವುದು ಕಂಡುಬರುತ್ತದೆ, ಆದಷ್ಟು ಸಮಾಧಾನಪಡಿಸಲು ಮುಂದಾಗಿ. ನಿಮ್ಮ ಆಂತರಿಕ ಮನಸ್ಸಿನ ದುಃಖಗಳನ್ನು ಆತ್ಮೀಯರ ಬಳಿ ಹಂಚಿಕೊಂಡು ಪರಿಹಾರ ಪಡೆದುಕೊಳ್ಳುವುದು ಒಳ್ಳೆಯದು. ಈ ದಿನ ನಿಮ್ಮ ಯೋಜನೆಗೆ ಸಂಬಂಧಪಟ್ಟ ಹಾಗೆ ಬೆಂಬಲ ಪಡೆಯಲು ಹಲವು ವ್ಯಕ್ತಿಗಳೊಡನೆ ಮಾತುಕತೆ ನಡೆಸುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ:
9945410150

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ



