ದಿನದ ಸುದ್ದಿ
ಹುಟ್ಟು ಹಬ್ಬ | “ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ಸಿಡಿದೆದ್ದರೆ ನೀನು ನನ್ನ ಸಂಗಾತಿ”..! : ಚೆ ಗುವೆರಾ
- ಶಿವಸ್ವಾಮಿ, ಯುವಚಿಂತಕರು
“ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ, ಸೋಲಿಗಿಂತ ಸಾವನ್ನೆ ಹೆಚ್ಚು ಇಷ್ಟಪಡುತ್ತೇನೆ”. ಎಂದು ನಿರಂತರವಾಗಿ ಹೋರಾಡುತ್ತಲೇ ತನ್ನ ವಿರೋಧಿಗಳಿಗೆ ಸಿಂಹಸ್ವಪ್ನವಾಗಿ ಎಂದಿಗೂ ಸೋಲನ್ನು ಒಪ್ಪಿಕೊಳ್ಳದೆ ತನ್ನನ್ನು ತಾನೇ ಸಾವಿಗೆ ಅರ್ಪಿಸಿಕೊಂಡ ಮಹಾನ್ ಕ್ರಾಂತಿಕಾರಿ, ಮಾನವತಾವಾದಿ, ಗೆರಿಲ್ಲಾ ಯುದ್ಧ ತಂತ್ರದ ನಿಪುಣ, ವೈದ್ಯ, ಬರಹಗಾರ, ಬುದ್ಧಿಜೀವಿ ಹಾಗೂ ಕ್ಯೂಬಾ ಕ್ರಾಂತಿಯ ಪ್ರಮುಖ ನೇತಾರ ಅರ್ನೆಸ್ಟೋ ಚೆಗುವಾರ.
ಚೆಗುವಾರ ಹುಟ್ಟಿದ್ದು ಜೂನ್ 14, 1928ರಂದು ಲಿಂಚ್ ಮತ್ತು ಸೀಲಿಯಾ ಡ ಲಾ ಸೆರ್ನ್ ಎಂಬ ಸ್ಪ್ಯಾನಿಷ್ ಮತ್ತು ಐರಿಷ್ ದಂಪತಿಗಳ ಮಗನಾಗಿ ಅರ್ಜೆಂಟೀನಾದ ರೊಸಾರಿಯೋ ಪಟ್ಟಣದಲ್ಲಿ ಜನಿಸಿದನು.ಚೆಗುವರ ಚಿಕ್ಕಂದಿನಿಂದಲೇ ಶೋಷಿತ ಬಡವರ, ಶ್ರಮಿಕರ ಬಗ್ಗೆ ಅಪಾರವಾದ ಕಾಳಜಿ ಮತ್ತು ಪ್ರೀತಿಯನ್ನು ಬೆಳೆಸಿಕೊಂಡು ಎಡಪಂಥೀಯವಾದದ ಬಗ್ಗೆ ಒಲವು ಹೊಂದಿದ್ದ ಕುಟುಂಬದಲ್ಲಿ ಹುಟ್ಟಿಬೆಳೆದ ಅವನಿಗೆ ಚಿಕ್ಕಂದಿನಿಂದಲೇ ರಾಜಕೀಯ ದೃಷ್ಟಿಕೋನಗಳ ಬಗೆಗೆ ಪರಿಚಯವಾಗಿ ಗಣತಂತ್ರವಾದಿಗಳ ಪ್ರಬಲ ಸಮರ್ಥಕರಾಗಿದ್ದ ತಂದೆಯ ಪ್ರಭಾವ ಚೆಗುವಾರನ ಮೇಲೆ ಸಹಜವಾಗಿಯೇ ಬೀರಿತು.
19 ನೇಯ ವಯಸ್ಸಿನಲ್ಲಿಯೇ ವೈದ್ಯಕೀಯ ವೃತ್ತಿ ಕಲಿಕೆಗಾಗಿ ವಿಶ್ವವಿದ್ಯಾನಿಲಯಕ್ಕೆ ಪ್ರವೇಶಾತಿ ಪಡೆದು ಮತ್ತೆ ಒಂದು ವರ್ಷ ರಜೆ ಪಡೆದು ತನ್ನ ಮಿತ್ರ ಅಲ್ಬಟ್ರೋ ಗ್ರೆನಾಡೇ ಜೊತೆ ಸೇರಿ ಮೋಟಾರ್ ಸೈಕಲ್ ಮೂಲಕ ದಕ್ಷಿಣ ಅಮೇರಿಕಾ ಪ್ರವಾಸ ಮಾಡುತ್ತಾನೆ ತಾನೊಬ್ಬ ಕ್ರಾಂತಿಕಾರಿಯಾಗಲು ಈ ಪ್ರವಾಸದ ಅನುಭವಗಳೇ ಕಾರಣವೆಂದು ಅವನೇ ಬರೆದುಕೊಂಡಿದ್ದಾನೆ.
ದಕ್ಷಿಣ ಅಮೆರಿಕಾದ ಆಂಡೀಸ್ ಪರ್ವತದ ಮಾಚು ಪಿಚುವಿಗೆ ಹೋಗುವ ದಾರಿಯಲ್ಲಿ ಶ್ರೀಮಂತ ಭೂ ಮಾಲೀಕರಿಂದ ತುಂಡು ತುಂಡು ಭೂಮಿಗಳನ್ನು ಪಡೆದು ಕೃಷಿ ಮಾಡುತಿದ್ದ ರೈತಾಪಿ ಜನರ ಕಡುಬಡತನದ ಹೀನಾಯ ಬದುಕಿನ ಸ್ಥಿತಿಯನ್ನು ಹತ್ತಿರದಿಂದ ಕಂಡು ನಾನು ಈ ಜನರಿಗೆ ಏನಾದರೂ ಸಹಾಯ ಮಾಡಬೇಕೆಂದರೆ ನನ್ನ ವೈದ್ಯಕೀಯ ಅಭ್ಯಾಸವನ್ನು ಬಿಟ್ಟು ಸಶಸ್ತ್ರ ಹೋರಾಟದ ಮೂಲಕ ರಾಜಕೀಯ ರಂಗವನ್ನು ಪ್ರವೇಶಿಸಬೇಕೆಂದು ಮನವರಿಕೆಯಾಯಿತು ಎಂದು ತನ್ನ ಮೋಟಾರ್ ಸೈಕಲ್ ಡೈರಿಯಲ್ಲಿ ಬರೆದುಕೊಳ್ಳುತ್ತಾನೆ.
ಮೋಟಾರ್ ಸೈಕಲ್ ಪ್ರವಾಸ ಚೆಗುವಾರನ ಕ್ರಾಂತಿಕಾರಿ ಬದುಕಿನ ಒಂದು ದೊಡ್ಡ ತಿರುವು ಪ್ರವಾಸದ ಜೊತೆಗಾರ ಅಲ್ಬಟ್ರೋ ಗ್ರಾನಡಾಸ್ ಚೆಗುವಾರನ ಕುರಿತು ಹೇಳುತ್ತಾ…ಟೆಟೆ (ಚೇ ನನ್ನನ್ನು ಪ್ರೀತಿಯಿಂದ ಕರೆಯುತಿದ್ದ ಹೆಸರು )ನನ್ನು ನಾನು ಮೊದಲು ಭೇಟಿಯಾಗಿದ್ದು 1941 ರಲ್ಲಿ ನನ್ನ ಸಹೋದರ ಥಾಮಸ್ ಮೂಲಕ ನನಗಾಗ 13 ವರ್ಷ ನಮ್ಮಿಬ್ಬರನ್ನು ಒಟ್ಟಿಗೆ ಕೂಡಿಸಿದ ವಿಷಯವೆಂದರೆ ‘ಓದುವ ಅಭಿರುಚಿ ಮತ್ತು ನಿಸರ್ಗ ಪ್ರೇಮ’ ಚೇ…ಮನೆಗೆ ಪ್ರತಿದಿನ ಭೇಟಿ ನೀಡಿದಾಗಲೂ ನನ್ನನ್ನು ಆಕರ್ಷಿಸಿದ್ದ ಅಲ್ಲಿನ ಅಪಾರವಾದ ಗ್ರಂಥಭಂಡಾರವನ್ನು ನನ್ನದೆಂಬಂತೆ ಬಳಸುಕೊಳ್ಳುತಿದ್ದೆ.
ನಾವು ಎಷ್ಟೋ ರಾತ್ರಿಗಳನ್ನ ಚೆರ್ಚೆಗಳಲ್ಲಿ ಕಳೆದಿದ್ದೇವೆ, ಒಮ್ಮೆ ವಿದ್ಯಾರ್ಥಿ ಚಳುವಳಿಯಲ್ಲಿ ನನ್ನ ಬಂಧನವಾಯಿತು ಆಗ ನನ್ನ ಸಹೋದರ ಥಾಮಸ್ ಜೊತೆ ಚೆಗುವಾರ ನನ್ನ ನೋಡಲು ಪೊಲೀಸ್ ಠಾಣೆಗೆ ಬಂದಿದ್ದ ನಾನು ಅವನ ಜೊತೆ ಮಾತನಾಡುತ್ತಾ ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಕರೆತರುವಂತೆ ನಾನು ಅವನಿಗೆ ಹೇಳಿದೆ, ಅದಕ್ಕೆ ಅವನು ಹೇಳಿದ ಮಾತು ಬೀದಿಗಿಳಿಯಿರಿ ಎಂದು ಹೇಳುತಿದ್ದೀರಲ್ಲ!ಪೊಲೀಸರೆಲ್ಲ ನಮ್ಮ ಮೇಲೆ ದೊಣ್ಣೆಗಳಿಂದ ಸರಿಯಾಗಿ ಬಾರಿಸಲಿ ಅಂತಲೋ! ಅದೆಲ್ಲ ಆಗುವುದಿಲ್ಲ,ನನಗೆ ಪಿಸ್ತೂಲು ಕೊಟ್ಟರೆ ಮಾತ್ರ ನಾನು ಬೀದಿಗಿಳಿಯುತ್ತೇನೆ ಎಂದಿದ್ದ ಅದೆಷ್ಟೋ ! ನೆನಪುಗಳು ನನ್ನೊಂದಿಗಿವೆ.
ಚೆಗುವಾರ 1953 ರಲ್ಲಿ ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಮತ್ತೆ ಪ್ರವಾಸ ಹೊರಟು ಗ್ವಾಟಮಾಲಕ್ಕೆ ಬರುತ್ತಾನೆ ಅಲ್ಲಿ ಯುದ್ಧದಲ್ಲಿ ಮುಳುಗಿದ ದೇಶವೊಂದರ ಅನುಭವ ದೊರೆಯುತ್ತದೆ, ನಂತರ 1954 ರಲ್ಲಿ ಅರ್ಬೆನ್ಜ್ ರ ಸಮಾಜವಾದಿ ಸರ್ಕಾರದ ವಿರುದ್ಧ CIA ಪ್ರೇರಿತ ಕ್ಷಿಪ್ರ ಕ್ರಾಂತಿಯನ್ನು ಕಣ್ಣಾರೆ ಕಂಡು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಳನ್ನು ರೂಪಿಸಲು ಲ್ಯಾಟಿನ್ ಅಮೆರಿಕಾದಂತಹ ಯಾವುದೇ ಸರ್ಕಾರವನ್ನು ಅಮೆರಿಕಾದಂತ ಸಾಮ್ರಾಜ್ಯ ಷಾಹಿ ದೇಶ ವಿರೋಧಿಸುತ್ತದೆ ಮತ್ತು ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಯಥಾಸ್ಥಿಯಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಚೆಗುವಾರ ಸೂಕ್ಷ್ಮವಾಗಿ ಗ್ರಹಿಸಿದರು.
ಇಂತಹ ಸ್ಥಿತಿಯನ್ನು ಸರಿಪಡಿಸಲು ‘ಸಶಸ್ತ್ರ ಹೋರಾಟದ ಬುಲೆಟ್ ಕ್ರಾಂತಿಯೊಂದೇ ಮದ್ದು‘ಚೆಗುವಾರ ಯೋಚಿಸುತ್ತಾನೆ ನಂತರ ಗ್ವಾಟೆಮಾಲಾದಿಂದ ಹೊರಬಂದು ಚೆಗುವಾರ ಫಿಡೆಲ್ ಕ್ಯಾಸ್ಟ್ರೋರೊಂದಿಗೆ ಜೊತೆಯಾಗಿ ಕ್ಯೂಬಾದ ಸರ್ವಾಧಿಕಾರಿ ಜನರಲ್ ಪುಲ್ಗೆನ್ಸಿಯೋ ಬಟಿಸ್ಟಾ ರ ವಿರುದ್ಧ ಸೇನಾ ದಂಡಾಯಾತ್ರೆ ಕೈಗೊಳ್ಳುವ ಯೋಜನೆ ರೂಪಿಸಿ, 1956 ರಲ್ಲಿ ಚೆಗುವಾರ ಮತ್ತು ಕ್ಯಾಸ್ಟ್ರೊ ಒಂದಾಗಿ ಹಲವು ಹೋರಾಟಗಾರರೊಂದಿಗೆ ಜನರಲ್ ಬಟಿಸ್ಟಾ ನ ಸರ್ಕಾರವನ್ನು ಕಿತ್ತೊಗೆಯಲು ಕ್ಯೂಬಾಕ್ಕೆ ಬಂದು ಸಿಯೆರಾ ಮತ್ತು ಮೈ ಸ್ಟ್ರಾ ಪರ್ವತಗಳಲ್ಲಿ ಅಡಗಿಕೊಳ್ಳುತ್ತಾರೆ.
ಇದರ ಅರಿವಾಗಿ ಎಚ್ಚೆತ್ತ ಬಟಿಸ್ಟಾ ಸರ್ಕಾರ ಹೆಚೆಚ್ಚು ಸೈನಿಕ ಪಡೆಗಳನ್ನು ಸಜ್ಜುಗೊಳಿಸಿ ಚೆಗುವಾರ ಮತ್ತು ಕ್ಯಾಸ್ಟ್ರೋ ನೇತೃತ್ವದ ಕ್ರಾಂತಿಕಾರಿಗಳನ್ನು ಸದೆಬಡಿಯಲು 10 ಸಾವಿರ ಸೈನಿಕ ಪಡೆಗಳನ್ನು ನಿಯೋಜಿಸುತ್ತಾನೆ ಕ್ರಾಂತಿಕಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲೇಂದೆ ಸರ್ಕಾರಿ ಸೈನಿಕರು ಸಾಮಾನ್ಯ ಜನರನ್ನು ವಿಚಾರಣೆಗೆಂದೇ ಎಳೆದೊಯ್ಯುತ್ತಿದ್ದರು. ಜೊತೆಗೆ ಅಮಾಯಕರಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಮಕ್ಕಳನ್ನೂ ಒಳಗೊಂಡಂತೆ ಶಂಕಿತರನ್ನು ಸಾರ್ವಜನಿಕವಾಗಿ ಕೊಲೆಗೈದು ಅವರ ಶವಗಳನ್ನು ಬೀದಿಗಳಲ್ಲಿ ಸಾರ್ವಜನಿಕವಾಗಿ ನೇತು ಹಾಕುತ್ತಿದ್ದರು.
ಅಂದರೆ ಸಾಮಾನ್ಯ ಜನರು ಕ್ರಾಂತಿಕಾರಿಗಳ ಜೊತೆ ಸೇರದಂತೆ ಎಚ್ಚರಿಕೆ ನೀಡುವುದು ಮತ್ತು ಭಯ ಹುಟ್ಟಿಸುವುದು ಇದರ ಉದ್ದೇಶವಾಗಿತ್ತು. ಸರ್ವಾಧಿಕಾರಿ ಬಟಿಸ್ಟಾನ ಈ ವರ್ತನೆಗಳಿಂದ ಗೆರಿಲ್ಲಾ ಹೋರಾಟಗಾರರಿಗೆ ಬೆಂಬಲ ಇನ್ನಷ್ಟು ಹೆಚ್ಚಾಗುತ್ತಲೇ ಹೋಯಿತು. ಉದಾಹರಣೆ ವಕೀಲರು, ವಾಸ್ತುಶಿಲ್ಪಿಗಳು, ವೈದ್ಯರು, ಆಕೌಟೆಂಟ್ಗಳು ಸಾಮಾಜಿಕಕರ್ತರು ಮುಂತಾದ ಸುಮಾರು 45 ಸಂಘಟನೆಗಳು ಜುಲೈ 26ರ ಚಳುವಳಿಗೆ ಬೆಂಬಲ ಘೋಷಿಸಿದವು. ಅಮೇರಿಕಾ ಸರ್ವಾಧಿಕಾರಿ ಬಟಿಸ್ಟಾಗೆ, ವಿಮಾನ, ಹಡಗು, ಟ್ಯಾಂಕ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ಒದಗಿಸಿತು.
‘ನಾಪಾಂಬಾಂಬಿ’ನಂತಹ ವಿನಾಶಕಾರಿ ಅಸ್ತ್ರಗಳು ಇದ್ದಾಗಲೂ ಬಟಿಸ್ಟಾನಿಂದ ಗೆರಿಲ್ಲಾ ಹೋರಾಟಗಾರರನ್ನು ಸೋಲಿಸಲು ಸಾಧ್ಯವಾಗಲಿಲ್ಲ. 1958 ಮಾರ್ಚ್ ಚುನಾವಣೆಗಳನ್ನು ಸರ್ವಾಧಿಕಾರಿ ಬಟಿಸ್ಟಾ ವಿರುದ್ಧ ಕ್ಯೂಬಾ ಜನತೆ ಬಹಿಷ್ಕರಿಸಿತು. ರಾಜಧಾನಿ ಹವಾನದಲ್ಲಿ 75% ಚುನಾವಣಾ ಬಹಿಷ್ಕಾರ ಇದ್ದರೆ ಸ್ಯಾಂಟಿಯಾಗೋ ನಗರದಲ್ಲಿ ಶೇ 98% ರಷ್ಟು ಬಹಿಷ್ಕಾರಗಳು ನಡೆದವು. ಇದೇ ಸಂದರ್ಭದಲ್ಲಿ ಕ್ರಾಂತಿಕಾರಿಗಳು ಬಟಿಷ್ಟಾನನನ್ನು ನೇರವಾಗಿ ಸೋಲಿಸಲು ಮುಖ್ಯ ನಗರಗಳಿಗೆ ಬಂದರು.
ಆದರೆ ಸರ್ವಾಧಿಕಾರಿ ಬಟಿಷ್ಟಾ ಅಮೆರಿಕಾದೊಂದಿಗೆ ಸಮಾಲೋಚಿಸಿ ದೇಶಬಿಟ್ಟು ಪಲಾಯನ ಮಾಡಿದ. 1958 ಡಿಸೆಂಬರ್ 31ರಂದು ಬಟಿಸ್ಟಾ ದುರಾಡಳಿತವನ್ನು ಪತನ ಮಾಡಲಾಯಿತು. 1959ರ ಜನವರಿಯಲ್ಲಿ ರಾಜಧಾನಿ ಹವಾನ ನಗರವನ್ನು ಪ್ರವೇಶಿಸಿ ಅಧಿಕಾರವನ್ನು ವಶಕ್ಕೆ ತೆಗೆದುಕೊಂಡ ಮೊಟ್ಟ ಮೊದಲ ಬಂಡಾಯಗಾರ ಪಿಡಲ್ ಕ್ಯಾಸ್ಟ್ರೋ ಜೊತೆ ಚೆಗುವಾರ ಕೂಡ ಇದ್ದರು. ಚೆಗುವಾರ ಮತ್ತು ಕ್ಯಾಸ್ಟ್ರೋ ಕ್ಯೂಬಾದ ಹೊಸ ನಾಯಕರಾದರು.
ಸರ್ಕಾರದ ನೇತೃತ್ವವನ್ನು ಕ್ಯಾಸ್ಟ್ರೋ ವಹಿಸಿಕೊಂಡರು. ಮುಂದೆ ಪಿಡಲ್ ಕ್ಯಾಸ್ಟ್ರೊ ಸರ್ಕಾರದಲ್ಲಿ ಚೆಗುವಾರ ಕೃಷಿ ಮಂತ್ರಿಯಾಗಿ ಕ್ರಾಂತಿಕಾರಿ ಸುಧಾರಣೆಗಳನ್ನು ತಂದರು. ಭೂಸುಧಾರಣೆಯೊಂದಿಗೆ ಚೆಗುವಾರ ಕೇಂದ್ರೀಕರಿಸಿದ ಮತ್ತೊಂದು ಪ್ರಧಾನ ಕ್ಷೇತ್ರವೆಂದರೆ ‘ಶಿಕ್ಷಣಕ್ಷೇತ್ರ’ ಅವರು ರಾಷ್ಟ್ರೀಯ ಸಾಕ್ಷರತೆಗಾಗಿ ಹೆಚ್ಚು ಹೊತ್ತುಕೊಟ್ಟರು. ಅವರ ಒತ್ತಾಸೆಯಂತೆ ಕ್ಯೂಬಾ ಸಕಾರವೂ 1961ನೇ ವರ್ಷವನ್ನು ಶಿಕ್ಷಣ ವರ್ಷವೆಂದು ಘೋಷಿಸಿತು.
ಇದರ ಸಲುವಾಗಿ ಹಳ್ಳಿಗಾಡುಗಳಲ್ಲಿ ಬಹುತೇಕ ಅಕ್ಷರಸ್ಥರಿಗೆ ಓದುಬರಹ ಕಲಿಸಲು ಸಾಕ್ಷರತ ಆಂದೋಲವನ್ನು ಕೈಗೊಳ್ಳಲಾಯಿತು. ಈ ಆಂದೋಲನ ಮುಗಿಯುವ ವೇಳೆಗೆ 7 ಲಕ್ಷಕ್ಕೂ ಹೆಚ್ಚು ಮಂದಿಗೆ ಓದು ಬರಹ ಕಲಿಸಲಾಯಿತು. ಇಂತಹ ಕ್ರಾಂತಿಕಾರ ಕೆಲಸದಿಂದ ದೇಶದ ಸಾಕ್ಷರತೆ ಶೇ 96 ಕ್ಕೆ ಏರಿಕೆಯಾಯಿತು. ಆನಂತರ ಅವರು 1965ರಲ್ಲಿ ಕ್ಯೂಬಾವನ್ನು ಬಿಟ್ಟು ಹೊರಟು ತೃತೀಯ ಜಗತ್ತಿನ ಕ್ರಾಂತಿಗಳಿಗೆ ಬೆಂಬಲವಾಗಿ ಅವರು ತನ್ನ ಸುತ್ತಾಟವನ್ನು ಮುಂದುವರಿಸಿದರು. ಅದರ ಭಾಗವಾಗಿಯೇ ಅವರು ಬೊಲಿವಿಯದಲ್ಲಿ ಗೆರಿಲ್ಲಾ ಯೋಧರನ್ನು ಸಂಘಟಿಸಲು ಯತ್ನಿಸಿದರು.
ಆದರೆ ಬೊವಿಲಿಯಾದಲ್ಲಿ ಚೆಗುವಾರಗೆ ಸಾಮಾನ್ಯ ಜನರ ನೆರವು ಸಿಗಲಿಲ್ಲಾ ಕ್ರಾಂತಿಕಾರಿಗಳ ಜೊತೆ ಸೇರಲು ಸಾಮಾನ್ಯಜನ ಎದುರುತ್ತಿದ್ದರು. ಆದರೂ ಎದೆಗುಂದದೆ ಚೆಗುವಾರ ತನ್ನ ಹೋರಾಟವನ್ನು ಮುಂದುವರಿಸಿದರು. ಆದರೆ ಅಮೆರಿಕಾದ CIA ನೆರವಿನಿಂದ ಬೊಲಿವಿಯಾ ಪಡೆಗಳು ಗೆರಿಲ್ಲಾ ಹೋರಾಟಗಾರರನ್ನು ಪತ್ತೆಹಚ್ಚಿ ಹಲವು ಗೆರಿಲ್ಲಾ ಯೋಧರನ್ನು ಕೊಂದು ಚೆಗುವಾರನನ್ನು 1967 ಅಕ್ಟೋಬರ್ 8ರಂದು ಸೆರೆಹಿಡಿದರು.
ನಂತರ ಹಿಗುಎರಾ ಎಂಬ ಗ್ರಾಮದ ಶಾಲೆಯಲ್ಲಿ ಕೂಡಿಹಾಕಿ ಮಾರನೆ ದಿನ ಅಕ್ಟೋಬರ್ 9 ರಂದು ಮಧ್ಯಾಹ್ನ 1.30ರ ಸುಮಾರಿಗೆ ಅಮೆರಿಕಾದ CIA ಅಧಿಕಾರಿಗಳ ಸಮ್ಮುಖದಲ್ಲಿ ಸಿಐಎ ರೇಂಜರ್ಗಳು ತೀರ ಸಮೀಪದಿಂದ ಗುಂಡಿಟ್ಟು ಚೆಗುವಾರನನ್ನು ಹತ್ಯೆಗೈಯುತ್ತಾರೆ. ನಂತರ ಅವನ ಮುಖವನ್ನು ಪಡಿಯಚ್ಚು ತೆಗೆದು ಅವನ ದೇಹವನ್ನು ಹತ್ತಿರದಿಂದ ಫೊಟೋ ತೆಗೆಯಲಾಯಿತು. ಮತ್ತು ಅವನ ಕೈಗಳನ್ನು ಮುಂಗೈಬಳಿ ಕತ್ತರಿಸಿ ಅವನ್ನು ಆಲ್ಕೊಹಾಲಿನಲ್ಲಿ ರಕ್ಷಿಸಿಟ್ಟರು. ಕಾರಣ ನಾವು ಕೊಂದ ವ್ಯಕ್ತಿ ಚೆಗೆವಾರ ಎಂಬುದರ ಋಜುವಾತುವಿಗಾಗಿ ಅವರ ಹಾಗೆ ಮಾಡಿದರು.
ಚೆ ಗುವೆರಾ ಸತ್ತ ಸುದ್ದಿ ತಿಳಿದು ಜಗತ್ತಿನಾದ್ಯಂತ ಅವನ ಸಂಗಾತಿಗಳು ಶೋಕತಪ್ತರಾದರು. ಈಗ ಚೆ ಕೈಗಳನ್ನು ಕ್ಯೂಬಾ ರಕ್ಷಿಸಿಟ್ಟಿದೆ. ಮತ್ತು ಇವು ವಿಮೋಚನೆಗಾಗಿ ಹೋರಾಟದಲ್ಲಿ ಅಸ್ತ್ರಗಳನ್ನು ಹಿಡಿದ ಕೈಗಳೂ, ತಮ್ಮ ಗಮನಾರ್ಹ ಚಿಂತನೆಗಳನ್ನು ಬರೆದು ಹಂಚಿದ ಕೈಗಳು, ಕಬ್ಬಿನ ಪ್ಲಾಂಟೇಷನ್ಗಳಲ್ಲಿ, ಬಂದರುಕಟ್ಟೆಗಳ ಮುಂತಾದ ನಿರ್ಮಾಣದ ಸ್ಥಳಗಳಲ್ಲಿ ಕೆಲಸ ಮಾಡಲು ಬಳಸಿದ ಕೈಗಳು ಎಂದು ಕ್ಯಾಸ್ಟ್ರೊ ಉದ್ಘರಿಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಅಮೇರಿಕಾದಂತ ದುಷ್ಟಶಕ್ತಿಗಳು ಚೆ ನ ದೇಹವನ್ನು ಮಾತ್ರ ಹತ್ಯೆ ಮಾಡಿರಬಹುದು.
ಆದರೆ ಚೆಗುವಾರ ಹಂಚಿದ ಕ್ರಾಂತಿಕಾರಿ ಆಲೋಚನೆಗಳನ್ನು ನಿಯಂತ್ರಿಸಲು ಅಥವಾ ಹತ್ಯೆ ಮಾಡಲು ಸಾಧ್ಯವಿಲ್ಲಾ ! ಚೆಗೆವಾರ ಶೋಷಿತ ಜನತೆಗೆ ತಮ್ಮ ಬದುಕನ್ನು ಅರ್ಪಿಸಿಕೊಂಡವರು. ಆಗಾಗಿ ಅವಕಾಶವಂಚಿತ ಸಮುದಾಯಗಳಿಗೆ ಚೆಗುವಾರ ಎಂದೆಂದಿಗೂ ಸ್ಫೂರ್ತಿಯಾಗಿರುತ್ತಾರೆ ಅನ್ನುವುದರಲ್ಲಿ ಯಾವ ಅನುಮಾವೂ ಇಲ್ಲ.
ಐರಿಶ್ ಬಂಡಾಯಗಾರರ ರಕ್ತ ನನ್ನ ಮಗನ ಧಮನಿಗಳಲ್ಲಿ ಹರಿಯುತ್ತಿತ್ತು ಎಂಬುದನ್ನು ನಾವು ಮೊಟ್ಟ ಮೊದಲು ಗಮನಿಸೇಕಾದ ವಿಚಾರ’ ಎಂದು ಚೆಗುವಾರನ ಮರಣದ ನಂತರ ಅವರ ತಂದೆ ಪ್ರತಿಕ್ರಿಯಿಸಿದ ಹಾಗೆ, ಚೆ… ಇಲ್ಲವಾಗಿ ಹಲವು ವರ್ಷಗಳು ಕಳೆದಿದ್ದರೂ ಅವನು ತನ್ನ ವಿಚಾರ, ಆಲೋಚನೆಗಳ, ಮಾನವೀಯವಾದ ವ್ಯಕ್ತಿತ್ವಗಳ ಮೂಲಕ ದಬ್ಬಾಳಿಕೆ, ಶೋಷಣೆ ಅನ್ಯಾಯಗಳ ವಿರುದ್ಧಾ ಇಂದಿಗೂ ಸಿಡಿದೇಳುವ ಕ್ರಾಂತಿಯ ಕಿಡಿಯಾಗಿ ತನ್ನ ನಂತರದ ತಲೆಮಾರಿಗೆ ಸ್ಫೂರ್ತಿಯ ಚಿಲುಮೆಯಾಗಿ ಸದಾ ಜೊತೆಯಾಗುತ್ತಲೇ ಇರುತ್ತಾನೆ.
ನಮ್ಮ ನಡುವೆ ಇರುವ ವಿದ್ಯಾವಂತ ಬುದ್ಧಿವಂತ ರೆನಿಸಿಕೊಂಡವರು, ನಾವು ಶ್ರೇಷ್ಠ ಉಳಿದವರು ಕನಿಷ್ಠವೆಂದು ಜಾತಿ ಧರ್ಮ ದೇವರುಗಳ ಹೆಸರಿನಲ್ಲಿ ಭಯ ಹುಟ್ಟಿಸಿ ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯವೆಸಗುತಿದ್ದರು ಇಲ್ಲಿನ ಸರ್ಕಾರಗಳು ಮತ್ತು ಜನಸಾಮಾನ್ಯರು ಅದರ ವಿರುದ್ಧ ಸಿಡಿದೇಳುವುದಿರಲಿ, ಕೊನೆ ಪಕ್ಷ ವಿರೋಧ ವ್ಯಕ್ತ ಪಡಿಸದೆ ಜಾಣ ಕುರುಡರಂತೆ ಮೌನವಹಿಸುತ್ತಿರುವುದು ದುರಂತವೇ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ ಚಿಕಿತ್ಸೆಗಳು ನೋವು ಕಡಿಮೆ ಮಾಡುವುದರ ಜೊತೆಗೆ, ರೋಗಿಗಳು ಮತ್ತೆ ಸ್ವತಂತ್ರವಾಗಿ ನಡೆಯಲು, ದಿನನಿತ್ಯದ ಚಟುವಟಿಕೆಗಳಿಗೆ ಮರಳಲು ಮತ್ತು ಆತ್ಮವಿಶ್ವಾಸದಿಂದ ಬದುಕಲು ನೆರವಾಗುತ್ತಿವೆ ಎಂದು ಮಣಿಪಾಲ್ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಲೋಕೇಶ್ ಎ. ವೀರಪ್ಪ ತಿಳಿಸಿದರು.
ಬುಧವಾರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು
‘ಆರೋಗ್ಯಕರ ವಯೋವೃದ್ಧತೆ: ಅಸ್ತಿ ಸಮಸ್ಯೆಗಳ ನಿರ್ವಹಣೆ ಮತ್ತು ಪರಿಣಾಮಕಾರಿ ಚಿಕಿತ್ಸಾ ವಿಧಾನಗಳು ಕುರಿತು ಮೂಳೆ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು.
ಇಂದಿನ ದಿನಗಳಲ್ಲಿ ಮೊಣಕಾಲು, ಸೊಂಟ ಮತ್ತು ಭುಜ ಸಂಧಿ ಸಮಸ್ಯೆಗಳು, ವಿಶೇಷವಾಗಿ ವಯೋವೃದ್ಧರಲ್ಲಿ ಹೆಚ್ಚುತ್ತಿವೆ. ‘ಇಂದು ಜನರು ಕೇವಲ ನೋವು ನಿವಾರಣೆಯನ್ನು ಮಾತ್ರ ಬಯಸುವುದಿಲ್ಲ. ಅವರು ಸುಲಭವಾಗಿ ನಡೆಯಲು, ಮೆಟ್ಟಿಲೇರಲು, ಮತ್ತೆ ಕೆಲಸಕ್ಕೆ ಹೋಗಲು, ಪ್ರವಾಸ ಮಾಡಲು ಮತ್ತು ಚುರುಕಿನ ಜೀವನವನ್ನು ಮುಂದುವರಿಸಲು ಬಯಸುತ್ತಾರೆ,” ಎಂದು ಹೇಳಿದರು.
“ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರಚಿಕಿತ್ಸೆ ಅಸ್ತಿ ಚಿಕಿತ್ಸೆಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರೋಗಿಯ ದೇಹರಚನೆಗೆ ಅನುಗುಣವಾಗಿ ಶಸ್ತ್ರಚಿಕಿತ್ಸೆಯನ್ನು ಹೆಚ್ಚು ನಿಖರವಾಗಿ ಯೋಜಿಸಲು ಈ ತಂತ್ರಜ್ಞಾನ ಸಹಕಾರಿಯಾಗಿದೆ. ಇದರಿಂದ ಇಂಪ್ಲಾಂಟ್ಗಳ ಸರಿಯಾದ ಅಳವಡಿಕೆ, ಉತ್ತಮ ಜಾಯಿಂಟ್ ಅಲೈನ್ಮೆಂಟ್ ಮತ್ತು ಸಹಜ ಚಲನೆಯ ಸಾಧ್ಯತೆ ಹೆಚ್ಚುತ್ತದೆ. ರೋಗಿಗಳಿಗೆ ಕಡಿಮೆ ರಕ್ತಸ್ರಾವ, ಕಡಿಮೆ ಶಸ್ತ್ರಚಿಕಿತ್ಸೆತರ ನೋವು, ವೇಗವಾದ ಚೇತರಿಕೆ ಹಾಗೂ ಬೇಗನೆ ಸಾಮಾನ್ಯ ಜೀವನಕ್ಕೆ ಮರಳುವ ಅವಕಾಶ ದೊರೆಯುತ್ತದೆ. ಮೊಣಕಾಲು ಮತ್ತು ಸೊಂಟದ ಸಂಪೂರ್ಣ ಅಥವಾ ಭಾಗಶಃ ಜಾಯಿಂಟ್ ಬದಲಾವಣೆ (TKR/PKR) ಶಸ್ತ್ರ ಚಿಕಿತ್ಸೆಗಳಲ್ಲಿ ಈ ತಂತ್ರಜ್ಞಾನ ಉತ್ತಮ ಫಲಿತಾಂಶ ನೀಡುತ್ತಿದೆ,” ಎಂದರು.
“ಇದರ ಜೊತೆಗೆ ಭುಜದ ಆರ್ಥೋಸ್ಕೋಪಿ ಅಥವಾ ‘ಕೀಹೋಲ್ ಸರ್ಜರಿ’ಯಂತಹ ಅತ್ಯಾಧುನಿಕ ಚಿಕಿತ್ಸೆಗಳಲ್ಲಿಯೂ ಉತ್ತಮ ಫಲಿತಾಂಶಗಳನ್ನು ಕಾಣುತ್ತಿದ್ದೇವೆ. ಭುಜದ ಡಿಪ್ಲೊಕೇಶನ್ (ಭುಜದ ಕೀಲಿನ ಸರಿತ) ರೋಟೇಟರ್ ಕಫ್ (ಹರಿದ ಭುಜದ ಮಾಂಸ ಖಂಡ) ಗಾಯಗಳು, ಫೋಜನ್ ಶೋಲ್ಡರ್ (ಭುಜದ ಬಿಗಿತ) ಮೊದಲಾದ ಸಮಸ್ಯೆಗಳು ಬಹಳ ಸಾಮಾನ್ಯವಾಗಿದ್ದು, ಸಮಯಕ್ಕೆ ಚಿಕಿತ್ಸೆ ಪಡೆಯದೇ ಇದ್ದರೆ ದೈನಂದಿನ ಚಟುವಟಿಕೆಗಳ ಮೇಲೆಯೇ ಪರಿಣಾಮ ಬೀರುತ್ತವೆ. ಈಗ ಮಿನಿಮಲ್ಲಿ ಇನ್ನೇಸಿವ್ ಸರ್ಜರಿಸ್ ಅಂದರೆ ಅತಿ ಸಣ್ಣ ಕಟ್ ಮೂಲಕ ಮಾಡುವ ಈ ಶಸ್ತ್ರಚಿಕಿತ್ಸೆಗಳು ರೋಗಿಗಳಿಗೆ ಕಡಿಮೆ ನೋವು ಹಾಗೂ ವೇಗವಾದ ಚೇತರಿಕೆಯನ್ನು ನೀಡುತ್ತಿವೆ, ಎಂದು ತಿಳಿಸಿದರು.
ಇದೇ ವೇಳೆ, ಸಂಕೀರ್ಣ ಪೆಲ್ವಿಕ್ ಟ್ರಾಮಾ ಶಸ್ತ್ರಚಿಕಿತ್ಸೆಗಳು, ‘ಕಪ್ ಅಂಡ್ ಬಾಲ್’ ಜಾಯಿಂಟ್ ಸಂಬಂಧಿತ ಪ್ರೊಸೀಜರ್ಗಳು, ಹಾಗು ಮೊಣಕಾಲು, ಅಂಕಲ್ ಮತ್ತು ಮೊಣಕೈಗೆ ಸಂಬಂಧಿಸಿದ ಮಿನಿಮಲಿ ಇನ್ನೇಸಿವ್ ಕೀಹೋಲ್ ಶಸ್ತ್ರಚಿಕಿತ್ಸೆಗಳ ಕುರಿತು ಕೂಡ ಅವರು ಮಾಹಿತಿ ಹಂಚಿಕೊಂಡರು.
ಇವುಗಳ ಪ್ರಮುಖ ಉದ್ದೇಶ ರೋಗಿಗಳ ಚಲನವಲನವನ್ನು ಪುನಃಸ್ಥಾಪಿಸಿ, ಅವರನ್ನು ಆತ್ಮವಿಶ್ವಾಸದಿಂದ ದಿನನಿತ್ಯದ ಬದುಕಿಗೆ ಮರಳಿಸುವುದಾಗಿದೆ ಎಂದು ಹೇಳಿದರು.
ಸಂವಾದದ ವೇಳೆ ವೈದ್ಯರು, ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಅನೇಕ ರೋಗಿಗಳು ಸಂಕೀರ್ಣ ಅಸ್ಥಿ ಚಿಕಿತ್ಸೆಗಳು ಹಾಗೂ ಅತ್ಯಾಧುನಿಕ ಜಾಯಿಂಟ್ ಕೇರ್ಗಾಗಿ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ನಿರಂತರವಾಗಿ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.
ಈ ದೀರ್ಘಕಾಲದ ವಿಶ್ವಾಸವನ್ನು ಗುರುತಿಸಿಕೊಂಡಿರುವ ಆಸ್ಪತ್ರೆ, ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ವಿಶೇಷ ಅಸ್ಥಿ ತಜ್ಞರ ಸೇವೆಗಳು ಮತ್ತು ಪುನಶ್ವೇತನ ಚಿಕಿತ್ಸೆಯನ್ನು ಮಧ್ಯ ಕರ್ನಾಟಕದ ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪುನರುಚ್ಛರಿಸಿತು. “ನಮ್ಮ ಉದ್ದೇಶ ಕೇವಲ ಶಸ್ತ್ರಚಿಕಿತ್ಸೆ ನಡೆಸುವುದಲ್ಲ; ಜನರು ಮತ್ತೆ ಸ್ವತಂತ್ರವಾಗಿ ನಡೆಯಲು, ತಮ್ಮ ಜೀವನಶೈಲಿಗೆ ಮರಳಲು ಮತ್ತು ಸುಖಕರ ವಯೋವೃದ್ಧತೆಯನ್ನು ಅನುಭವಿಸಲು ಸಹಾಯ ಮಾಡುವುದಾಗಿದೆ,” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ “ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026″ ಎಂಬ ವಿಶಿಷ್ಟ ಮತ್ತು ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಕೊಟ್ರೇಶ್ ಅವರು ತಿಳಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಮತ್ತು ಕಾನೂನುಬದ್ದ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಕಡ್ಡಾಯ ಭೂ-ಪರಿವರ್ತನೆ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, RTE ಸಂಬಂಧಿತ ವಿಷಯಗಳು, ಶಾಲಾ ಕಟ್ಟಡಗಳಿಗೆ ಆಸ್ತಿ ತೆರಿಗೆ, ESI, PF, GRATUITY, LWF ಹಾಗೂ ಕಾರ್ಮಿಕ ಕಾನೂನುಗಳನ್ನು ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ ಎಂದರು.
ಇದಲ್ಲದೆ, ರಾಜ್ಯದಲ್ಲಿ ಯಶಸ್ವಿಯಾಗಿ 10 ವರ್ಷ ಹಾಗೂ 25 ವರ್ಷ ಪೂರೈಸಿರುವ ಖಾಸಗಿ ಶಾಲೆಗಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದ ಹೊಸ ತಂತ್ರಜ್ಞಾನಗಳು, ಆಡಳಿತಾತ್ಮಕ ಪರಿಹಾರಗಳು, ಕಾನೂನು ಸಲಹೆಗಳು ಹಾಗೂ ಶಿಕ್ಷಣ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ತಿಳಿದುಕೊಳ್ಳಲು ಇದು ಅತ್ಯುತ್ತಮ ವೇದಿಕೆಯಾಗಿದ್ದು, ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ Ours ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

