Connect with us

ದಿನದ ಸುದ್ದಿ

ಕೊರೋನಾ ಭಯಬಿಡಿ, ಶಿಕ್ಷಣದ ಕಡೆಗೆ ನಡಿ

Published

on

  • ಹೆಚ್.ಎಂ.ಸಂತೋಷ್,ಎಐವೈಎಫ್, ರಾಜ್ಯ ಕಾರ್ಯದರ್ಶಿ, ಹರಪನಹಳ್ಳಿ

ಕೊರೋನ ಸೋಂಕಿನ ಭಯದಿಂದಲೇ ಬದುಕುವ ಬದಲು, ಎಚ್ಚರಿಕೆ ಕ್ರಮಗಳನ್ನು ಅನುಸರಿಸಿ ಬದುಕಲು ಮುಂದಾಗಬೇಕೆಂಬ ಆಲೋಚನೆಗಳು ಈಗ ಸಮುದಾಯದಲ್ಲಿ ಮೂಡುತ್ತಿವೆ. ಸರಕಾರವೂ ಕೂಡ ಕರೋನದೊಂದಿಗೆ ಬದುಕುವುದನ್ನು ಕಲಿಯಬೇಕು ಎಂಬುದನ್ನು ಹೇಳುತ್ತಿದೆ.ಈ ಹಿನ್ನಲೆಯಲ್ಲಿ ದೇಶದ ಆರ್ಥಿಕ ಚಟುವಟಿಕೆ ಪುನ್ಸಶ್ಚೇನ ನೀಡುವ ಕಾರ್ಯವೂ ಆರಂಭವಾಗಿದೆ.

ಹಂತ, ಹಂತವಾಗಿ ಎಲ್ಲಾ ರಂಗಗಳಲ್ಲೂ ಸಡಿಲಿಕೆ ಕಂಡುಬರುತ್ತಿದೆ. ಇದೆ ಸಂದರ್ಭದಲ್ಲಿ ಶಿಕ್ಷಣ ಚಟುವಟಿಕೆ ನಡೆಸಬೇಕೆ?, ಬೇಡವೇ? ಎಂಬ ಪ್ರಶ್ನೆಗಳು ಸರಕಾರಕ್ಕೂ, ಪೋಷಕರಲ್ಲಿ ಮೂಡಿಬರುತ್ತಿದೆ.

ಕರೋನ ಸೋಂಕಿನ ಕಾರಣದಿಂದ ಈಗಾಲೇ ಪ್ರರೀಕ್ಷೆಗಳನ್ನು ಎದುರಿಸದೆ ಮಕ್ಕಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಶೈಕ್ಷಣಿಕ ಚಟುವಟಿಕೆಗಳ ಪುನರ್ ಆರಂಭವು ಉಳಿದ ಕ್ಷೇತ್ರದಂತೆ ಸರಳವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂಬುದೇನೋ ನಿಜ ಆದರೆ ಆರಂಭಿಸದಿರಲು ಆಗುವುದಿಲ್ಲ.

ಕೆಲವರು ಸಧ್ಯ ಶೈಕ್ಷಣಿಕ ಚಟುವಟಿಕೆ ಆರಂಭಿಸದಿರುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವಿಷಯವಾಗಿ ಪೋಷಕರು ಬಹಳ ಗೊಂದಲಕ್ಕೆ ಒಳಗಾಗಿದ್ದಾರೆ. ಶಾಲೆ-ಕಾಲೇಜುಗಳು ಪ್ರಾರಂಭವಾದರೆ ಎಲ್ಲಿ ಮಕ್ಕಳಿಗೆ ಸೋಂಕು ಹರಡಿಬಿಡುತ್ತೋ ಅನ್ನೋ ಭಯವಿದ್ದರು, ಆರಂಭವಾಗದಿದ್ದರೆ ಮಕ್ಕಳ ಭವಿಷ್ಯದ ಏನಾಗುತ್ತೋ ಅನ್ನೋ ಚಿಂತೆಯೂ ಅವರಲ್ಲಿ ಕಾಡುತ್ತಿದೆ.

ಇಂದು ಶಿಕ್ಷಣದ ವಿಚಾರಕ್ಕೆ ಹಲವಾರು ಅಭಿಪ್ರಾಯಗಳು ಬರತೊಡಗಿವೆ. ಅದರಲ್ಲಿ ಶೈಕ್ಷಣಿಕ ವರ್ಷದ ಕಡಿತಗೊಳಿಸುವೆ, ವಾರ್ಷಿಕ ಪಠ್ಯಗಳ ಕಡಿತಗೊಳಿಸುವಿಕೆ ಮಾಡಬೇಕು ಎಂಬುದು ಒಂದಾದರೆ, ಕೆಲವರು ಆನ್‍ಲೈನ್ ತರಗತಿಯ ಮೂಲಕ ತರಗತಿಗಳನ್ನು ಪ್ರಾರಂಭಿಸಬೇಕು ಎಂಬುದನ್ನು ಹೇಳುತ್ತಿದ್ದಾರೆ.

ಇವುಗಳಲ್ಲಿ ಯಾವುದು ಮಕ್ಕಳ ಭವಿಷ್ಯವನ್ನು ರೂಪಿಸಲು ಉತ್ತಮ ಎಂಬುದರ ಕುರಿತುಯಾರಲ್ಲೂ ಸ್ಪಷ್ಟತೆ ಇಲ್ಲ. ಶೈಕ್ಷಣಿಕ ಅವಧಿಯ ಕಡಿತಗೊಳಿಸುವುದು ಮತ್ತು ಪಠ್ಯಕ್ರಮ ಕಡಿತಗೊಳಿಸುವುದು ಹೆಚ್ಚು ಸೂಕ್ತವಲ್ಲ, ಜೂನ್ ತಿಂಗಳ ಆರಂಭದಲ್ಲೆ ಶೈಕ್ಷಣಿಕ ಆರಂಭವಾಗಬೇಕಿತ್ತು ಆದರೆ ಇನ್ನೂ ಆರಂಭಿಸಿಲ್ಲ, ಆರಂಭಿಸುವ ಚರ್ಚೆಗಳು ಇನ್ನೂ ನಡೆಯುತ್ತಿವೆ.

ಶಾಲೆ- ಕಾಲೇಜು ಆರಂಭ ತಡವಾದಷ್ಟು ಮಕ್ಕಳ ಕಲಿಕೆಯ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ಅನುಕೂಲಸ್ಥ ವಿದ್ಯಾವಂತ ಪೋಷಕರು ತಮ್ಮ ಮಕ್ಕಳ ಕಲಿಕೆಯನ್ನು ಸ್ವತಹ ತಾವೇ ಹೇಳಿಕೊಡುವ ಅಥವಾ ಇನ್ಯಾವುದೋ ಮಾರ್ಗದಲ್ಲಿ ಕಲಿಸುತ್ತಿರುತ್ತಾರೆ.

ಆದರೆ ದುಡಿಯುವ ವರ್ಗದವರ ಮಕ್ಕಳ ಸ್ಥಿತಿ ಹೀಗಿರಿರಲು ಸಾಧ್ಯವೇ ಇಲ್ಲ. ಈ ಮಕ್ಕಳು ಶಾಲೆಗಳ ಪ್ರಾರಂಭ ತಡವಾದಷ್ಟು ಕಲಿಕೆಯ ಮೇಲೆ ನಿರಾಸಕ್ತರಾಗುವುದೆ ಹೆಚ್ಚು. ಇನ್ನು ಶೈಕ್ಷಣಿಕ ಚಟುವಟಿಕೆ ತಡವಾಗಿ ಆರಂಭಿಸಿದಾಗ ಶಿಕ್ಷಕರು ನೇರವಾಗಿ ಮಕ್ಕಳಿಗೆ ನೂತನ ತರಗತಿಯ ಪಠ್ಯ ಚಟುವಟಿಕೆಯನ್ನು ಪ್ರಾರಂಭಿಸಲು ಸಾಧ್ಯವಿಲ್ಲ.

ಈಗಾಲೇ ಮಕ್ಕಳು ಬಹುದಿನಗಳಿಂದ ಕಲಿಕಾ ಚಟುವಟಿಕೆಗಳಿಂದ ದೂರ ಉಳಿದಿರುವುದರಿಂದ ಹಿಂದಿನ ತರಗತಿಯ ಕಲಿಕೆಯ ಫಲಗಳನ್ನು ಅರಿಯದೆ, ನೇರವಾಗಿ ಹೊಸ ವಿಷಯಗಳ ಕಲಿಕೆಗೆ ತೊಡಗಿಸುವುದು ಸೂಕ್ತವಲ್ಲ.

ಈ ವಿಷಯವನ್ನು ಗಮನದಲ್ಲಿ ಇಟ್ಟುಕೊಂಡು ಶೈಕ್ಷಣಿಕ ಚಟುವಟಿಕೆಗೆ ಪ್ರಾರಂಭದ ಕುರಿತು ಚರ್ಚಿಸುವು ಸೂಕ್ತವಾಗುತ್ತದೆ. ಆನ್‍ಲೈನ್ ತರಗತಿಗಳ ಬಗ್ಗೆ ದೊಡ್ಡ ಮಟ್ಟದ ಅಭಿಪ್ರಾಯ ಬರುತ್ತಿದೆ.

ಇಂದಿನ ಮಾಧ್ಯಮಗಳಲ್ಲಿ ಆನ್‍ಲೈನ್ ಕಲಿಕೆಯನ್ನು ಬಿಂಬಿಸುತ್ತಿರುವುದನ್ನು ನೋಡಿದರೆ, ಈ ಪರಿಸ್ಥಿತಿಯಲ್ಲಿ ಇದೆ ಪರ್ಯಾಯ ಎಂಬ ಅಭಿಪ್ರಾಯ ಮೂಡದಿರಲು ಸಾಧ್ಯವಿಲ್ಲ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ಬೋಧನೆ ಮತ್ತು ಕಲಿಕೆ ಎಂದರೆ ಯಾಂತ್ರಿಕ ಪ್ರಕ್ರಿಯೆ ಅಲ್ಲ. ಮಕ್ಕಳು ನೇರ ಶಿಕ್ಷಕರ ಮೇಲ್ವಿಚಾರಣೆಯಲ್ಲಿ ಕಲಿಯೂವುದಕ್ಕೂ, ಶಿಕ್ಷಕರ ಮೇಲ್ವಿಚಾರಣೆ ಇಲ್ಲದೆ ಕಲಿಯುವುದಕ್ಕೂ ವ್ಯಾತ್ಯಾಸವಿದೆ.

ಈ ರೀತಿ ಕಲಿಕೆಗಳು ದೊಡ್ಡ ಹಂತದ ತರಗತಿಗಳಿಗೆ ಅಂದರೆ ಕಲಿಕೆಯಲ್ಲಿ ಸ್ವ ಆಸಕ್ತಿ ವಹಿಸುವ ಹಂತದವರಿಗೆ ಉತ್ತಮವೇ ಹೊರತು, ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ತರಗತಿಗಳಿಗೆ ಉತ್ತಮ ಕಲಿಕಾ ವಿಧಾನವಲ್ಲ. ಅಲ್ಲದೆ ತಂತ್ರಜ್ಞಾನವನ್ನು ಅನುಸರಿಸುವಷ್ಟು ಮಟ್ಟಿಗೆ ನಮ್ಮ ದೇಶದ ಸಮಾಜಿಕ ಮತ್ತು ಆರ್ಥಿಕ ಪರಿಸ್ಥಿಗಳು ಇವೆಯೇ? ಎಂಬುದನ್ನು ಗಮನಿಸಬೇಕು.

ಇಂದಿಗೂ ಶಾಲೆಗಳು ಉನ್ನತಿಕರಣ ಗೊಳ್ಳದಿರುವಾಗ, ಆನ್‍ಲೈನ್ ತರಗತಿ ಪ್ರಸ್ತಾಪ ಹಾಸ್ಯಾಸ್ಪದವಾಗುತ್ತದೆ.
ಇನ್ನೂ ಶಾಲೆಗಳು ಪ್ರಾರಂಭವಾದರೆ, ಮಕ್ಕಳು ಶಾಲೆಗಳಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವಷ್ಟು ಪರಿಸರ ಇದೆಯೇ? ವರ್ಗಕೋಣೆಗಳು ಅಂತರ ಕಾಯ್ದುಕೊಂಡು ಕಲಿಕೆಗೆ ಪ್ರೋತ್ಸಾಹ ನೀಡಬಲ್ಲವೇ? ಅಂತರ ಕಾಯ್ದುಕೊಳ್ಳುವಷ್ಟು ಮಕ್ಕಳ – ಶಿಕ್ಷಕರ ಅನುಪಾತ ನಿರ್ಮಿಸಲು ಸಾಧ್ಯವೇ? ಮಕ್ಕಳು ದೈಹಿಕ ಅಂತರ ಕಾಯ್ದುಕೊಳ್ಳುವಷ್ಟು ಜಾಗೃತರಾಗಿರುತ್ತಾರೆಯೇ?

ಊಟ, ಆಟ, ಪಾಠಗಳಲ್ಲಿ ಸದಾ ಅಂತರ ಕಾಯ್ದುಕೊಳ್ಳುವಂತೆ ಮಕ್ಕಳನ್ನು ಗಮನಿಸುತ್ತಿರಲು ಸಾಧ್ಯವೇ? ಶಾಲೆಯಅವಧಿ ಮುಗಿದ ಬಳಿಕ ಮಕ್ಕಳು ಮನೆಗೆ ತೆರಳುವಾಗಲೂ ಈ ಇದೆ ಕ್ರಮಗಳನ್ನು ಅನುಸರಿಸುತ್ತಾರೆಯೇ? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡರೆ ಶೈಕ್ಷಣಿಕ ಚಟುವಟಿಕೆ ಆರಂಭ ಮಾಡಲು ಸಾಧ್ಯವಿದೆ.
ಹಾಗಾದರೆ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಏನೂ ಮಾಡಬಹುದು.

ಮೊದಲು ಸರಕಾರ ಈ ಸಮಸ್ಯೆಯ ಪರಿಹಾರಕ್ಕೆ ಬಹುದೊಡ್ಡ ಮಾನವ ಶಕ್ತಿಯನ್ನು ನಿರ್ಮಾಣ ಮಾಡಿಕೊಳ್ಳಬೇಕು.ಈಗಿರುವ ಶಿಕ್ಷಕರು ಮತ್ತು ಶಾಲೆಗಳ ಸಂಖ್ಯೆಗಳಿಂದ ದೈಹಿಕ ಅಂತರ ಕಾಯ್ದುಕೊಳ್ಳುವಷ್ಟರ ಮಟ್ಟಿಗೆ ವಾತವಾರಣ ಇಲ್ಲ ಎಂಬುದಂತು ಸತ್ಯ. ಸರಕಾರವು ಪ್ರಾಥಮಿಕ ಹಂತದ ಮಕ್ಕಳಿಗೆ ಶಿಕ್ಷಕ ಮತ್ತು ವಿದ್ಯಾರ್ಥಿಗಳ ಅನುಪಾತ 15:1 ಮಾತ್ರ ಇರುವಂತೆ, ಮಾಧ್ಯಮಿಕ ಹಂತಗಳಲ್ಲಿ ಗರಿಷ್ಟ ವೆಂದರೂ 25:1 ಅನುಪಾತದಂತೆ ನೋಡಿಕೊಳ್ಳಬೇಕು.

ಇದರಲ್ಲಿ ಎರಡು ಸಮಸ್ಯೆಗಳು ಉದ್ಬವಿಸುತ್ತವೆ ಮೊದಲನೆಯದು ಶಿಕ್ಷಕರು, ಎರಡನೆಯದು ವರ್ಗಕೋಣೆಗಳು. ಇವುಗಳನ್ನು ಹೇಗೆ ಸೃಷ್ಟಿಸುಬೇಕು?, ಎಂಬುದು ಸರಕಾರಕ್ಕೆ ಸವಾಲು ಎದುರಾಗುತ್ತದೆ.
ಮೊದಲನೆಯದು ಶಿಕ್ಷಕರ ಸಮಸ್ಯೆಗೆ ಸಂಬಂಧಿಸಿದಂತೆ ಸರಕಾರವು ಈಗಾಗಲೇ ಶಿಕ್ಷಕ ತರಬೇತಿ ಪೂರ್ಣಗೊಳಿಸಿದ ಡಿ.ಇಡಿ ಮತ್ತು ಬಿ.ಇಡಿ ನಿರುದ್ಯೋಗಿ ಯುವಕರನ್ನು ಈ ಸಂದರ್ಭದಲ್ಲಿ ಬಳಸಿಕೊಳ್ಳವುದು ಉತ್ತಮ.

ಈಗಾಗಲೇ ಕೆಲವರು ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ ಸಾವಿರಾರು ಸಂಖ್ಯೆಯಲ್ಲಿ ಹೊರಗಿದ್ದಾರೆ. ಸರಕಾರ ಇವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಜೀವನ ನಿರ್ವಹಣೆಗೆ ಸಹಾಯವಾಗುಂತಹ ಯೋಜನೆ ರೂಪಿಸಿದರೆ ಸಧ್ಯದ ಸಂದರ್ಭಕ್ಕೆ ಎದುರಾಗುವ ಮಾನವ ಸಂಪನೂಲ್ಮದ ಸಮಸ್ಯೆ ನಿವಾರಣೆಯಾಗುತ್ತದೆ.

ಎರಡನೇ ಸಮಸ್ಯೆ ಕಟ್ಟಡದ ಸಮಸ್ಯೆ, ಕಿರಿಯ ಪ್ರಾಥಮಿಕ ತರಗತಿಯ ಮಕ್ಕಳು ಅಂದರೆ 1 ರಿಂದ 4ನೇ ತರಗತಿಯ ಮಕ್ಕಳಿಗೆ ಅವರ ಮನೆಯ ಸುತ್ತು ಮುತ್ತಲಿರುವ ನೆರಳಿರುವ ಪ್ರದೇಶದಲ್ಲಿ ಸ್ವಚ್ಚತೆಗೆ ಮಹತ್ವ ನೀಡಿರುವ ಸ್ಥಳದಲ್ಲಿ ಕಲಿಸುವ ಕಾರ್ಯ ಆರಂಭಿಸಬಹುದು. ಇದು ಸೂಕ್ತವಲ್ಲದಿದ್ದರು ಇಂದು ಶಾಲೆಗಳನ್ನು ಪ್ರಾರಂಭವೇ ಮಾಡದಿರವುದರ ಬದಲು ಶೈಕ್ಷಣಿಕ ಚಟುವಟಿಕೆಯ ಪ್ರಾರಂಭಕ್ಕೆ ಬದಾರಿಯಾಗುತ್ತದೆ.

ಇನ್ನೂ ಉನ್ನತ ಹಂತದ ಮಕ್ಕಳಿಗೆ ಖಾಲಿ ಉಳಿದ ತರಗತಿಗಳನ್ನು ಸೇರಿಸಿ ಮಕ್ಕಳ ಸಂಖ್ಯೆಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ತರಗತಿಗಳನ್ನು ಪ್ರಾರಂಭಿಸಬಹುದು. ಹೈಸ್ಕೂಲ್ ಮತ್ತು ಕಾಲೇಜ್ ಮಕ್ಕಳಲ್ಲಿ ಜಾಗೃತಿ ಇರುವುದರಿಂದ ಬೋಧಕರೆ ಎಚ್ಚರಿಸುತ್ತ ತರಗತಿಗಳನ್ನು ಆರಂಭಿಸಬಹುದು.

ಶಿಕ್ಷಣ ಕೇಂದ್ರಗಳು ಸ್ವಚ್ಚವಾಗಿರುವಂತೆ ಇತರೆ ಮುನ್ನಚ್ಚರಿಕೆಯ ಕ್ರಮಗಳನ್ನು ಅನುಸರಿಸುವುದು, ಜೊತೆಗೆ ಎಚ್ಚರ ತಪ್ಪಂದತೆ ಜಾಗೃತಿ ವಹಿಸಿದರೆ ಸಾಕಾಗುತ್ತದೆ. ಕರೋನದ ಭಯದಿಂದಲೇ ನಾವು ಮಕ್ಕಳ ಭವಿಷ್ಯವನ್ನು ಕುಟಿಂತಗೊಳಿಸುವ ಬದಲು ಪರ್ಯಾಯ ಮಾರ್ಗದೆಡೆಗೆ ಸಾಗುವುದು ಉತ್ತಮ. ಎಚ್ಚರಿಕೆಯ ಕ್ರಮಗಳಿಂದ ಮಕ್ಕಳ ಹಕ್ಕುಗಳನ್ನು ಒದಗಿಸಲು ಅವಕಾಶವಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending