ದಿನದ ಸುದ್ದಿ
Boycott China ಎನ್ನುವುದು ಬಹಳ ಸುಲಭ ಹಾಗೂ ಕೇಳಲೇನೋ ಚೆಂದ, ಆದರೆ ವಾಸ್ತವ..?
- ಗ್ಲಾಡ್ ಸನ್ ಅಲ್ಮೆಡಾ
Boycott China ಎನ್ನುವುದು ಬಹಳ ಸುಲಭ ಹಾಗೂ ಕೇಳಲೂ ಚೆಂದ. ಆದರೆ ವಾಸ್ತವ? ಸದ್ಯದ ಪರಿಸ್ಥಿತಿಯಲ್ಲಂತೂ ಅಲ್ಮೋಸ್ಟ್ ಇಂಪಾಸಿಬಲ್. ಯಾಕೆ ಗೊತ್ತೇ? ಚೀನಾದಿಂದ ಭಾರತ ಪಡೆಯುತ್ತಿರುವ ಆಮದಿನ ಒಟ್ಟು ಮೌಲ್ಯ ಸುಮಾರು 60 ಬಿಲಿಯನ್ ಡಾಲರ್. ಇದು ಚೀನಾದ ಒಟ್ಟು ರಫ್ತಿನ ಕೇವಲ 3% ಅಷ್ಟೇ.
ಹಾಗಾಗಿ ಭಾರತ ಸಂಪೂರ್ಣವಾಗಿ ಚೀನಾದ ಆಮದನ್ನು ನಿಲ್ಲಿಸಿದರೂ, ಚೀನಾಕ್ಕೆ ಹೊಡೆತ ಬೀಳಲ್ಲ. ಇನ್ನು ಈ ಆಮದಿನಲ್ಲಿ ಹಲವಾರು ಔಷಧಿಗಳ ಮೂಲಧಾತುಗಳನ್ನೂ ಕೂಡಾ ಭಾರತೀಯ ಜೌಷಧಿ ಕಂಪನಿಗಳು ತರಿಸುತ್ತಿವೆ. ಇವೆಲ್ಲಾವನ್ನು ಬೇರೆಡೆಯಿಂದ ತರಿಸಿಕೊಳ್ಳಲು ಭಾರತ ಶಕ್ತವಾಗಿದೆಯಾ ಎನ್ನುವ ಪ್ರಶ್ನೆಗೆ ಸರಕಾರದ ಬಳಿಯೇ ಉತ್ತರವಿಲ್ಲ.
ಆದರೆ ಚೀನಾದಿಂದ ಆಗುತ್ತಿರುವ ಆಮದು, ನಮ್ಮ ಒಟ್ಟು ಆಮದಿನ ಸುಮಾರು 14%. ಹಾಗಾಗಿ ಚೀನಾದಿಂದ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿದರೆ ಭಾರತದ ಆಮದಿನ ಮೇಲೆ ಭಾರೀ ಪರಿಣಾಮವುಂಟಾಗುತ್ತದೆ. ಒಂದೇ ಬೇರೆ ಯಾವುದೇ ದೇಶದಿಂದ ಭಾರತ ಆಮದು ಮಾಡಿ ಈ ಪರಿಣಾಮವನ್ನು ಸರಿದೂಗಿಸಬೇಕು ಇಲ್ಲವೇ ನಮ್ಮಲ್ಲೇ ಉತ್ಪಾದನೆ ಕೈಗೊಳ್ಳಬೇಕು. ಬೇರೆ ದೇಶದಿಂದ ಚೀನಾ ಮಾರುವ ಬೆಲೆಯಲ್ಲಿ ವಸ್ತುಗಳಂತೂ ಸಿಗೋಲ್ಲ. ಹಾಗಾಗಿ ಅದು ಕಷ್ಟಸಾಧ್ಯ. ಇನ್ನು ಭಾರತದಲ್ಲಿ ಉತ್ಪಾದನೆ.
ಮೇಕ್ ಇನ್ ಇಂಡಿಯಾ ಎಂದು ಸ್ಲೋಗನ್ ಮಾಡಿಕೊಂಡರೂ ಭಾರತದ ಉತ್ಪಾದನಾ ಕ್ಷೇತ್ರ ಕಳೆದ ಮೂರ್ನಾಲ್ಕು ವರುಷಗಳಲ್ಲಿ ಸತತವಾಗಿ ನಷ್ಟದಲ್ಲಿದೆ. ಹಾಗಾಗಿ ಮಾಧ್ಯಮಗಳು, ಭಕ್ತರು ಎಷ್ಟು ಬಾಯ್ಕಾಟ್, ಬಾಯ್ಕಾಟ್ ಎಂದರೂ, ನಮ್ಮ ಸರಕಾರ ಸದ್ಯಕ್ಕೆ ಚೀನಾದ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿದರೆ ನಮ್ಮ ಆರ್ಥಿಕತೆಯ ಮೇಲೆ ಆಗಬಹುದಾದ ಪರಿಣಾಮಗಳನ್ನೆದುರಿಸಲು ತಯಾರಾಗಿದೆಯೇ? ಶಕ್ತವಾಗಿದೆಯೇ? ನನ್ನ ಪ್ರಕಾರ ಎರಡೂ ಇಲ್ಲ. ವಿ ಆರ್ ನಾಟ್ ರೆಡಿ. ಐಟಿ ಸೆಲ್, ಫೇಸ್ಬುಕ್, ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಉತ್ಪಾದನೆ ಗಗನ ಮುಟ್ಟಿದೆಯಾದರೂ, ಆ ಔಟ್ಪುಟ್ಟನ್ನೂ ನಮ್ಮ ಸರ್ಕಾರನೇ ಖರೀದಿಸೋಲ್ಲ.
ಇನ್ನು ಸದ್ಯಕ್ಕೆ ಚೀನಾ ನಮ್ಮ ದೇಶದಲ್ಲಿ ಮಾಡಿರುವ ಹೂಡಿಕೆಯನ್ನು ಹೇಗೆ ನಿಲ್ಲಿಸುವುದು? ಭಕ್ತರು ಬಾಯ್ಕಾಟ್, ಬಾಯ್ಕಾಟ್ ಎಂದು ಊಳಿಡುತ್ತಿರುವಾಗಲೇ ಡೆಲ್ಲಿ-ಮೀರಟ್ ನಡುವಿನ ರೇಲ್ವೇ ಯೋಜನೆಯ ಕಾಮಗಾರಿಯೊಂದನ್ನು ಚೀನಾದ ಕಂಪನಿಯೊಂದಕ್ಕೆ ಗುತ್ತಿಗೆಗೆ ಕೊಡಲು ತಯಾರಿ ನಡೆಸುತ್ತಿದೆಯೆಂದು ವರದಿಯಾಗಿದೆ.
ಇನ್ನು ಈಗಾಗಲೇ ಆಗಿರುವ ಹೂಡಿಕೆ ದೊಡ್ಡ ಮೊತ್ತದ್ದು. ಬಾಯ್ಕಾಟ್ ಅನ್ನುವ ಮೊದಲು ವಾಸ್ತವವನ್ನು ಅರಿಯಿರಪ್ಪಾ. ಆರು ವರುಷಗಳಲ್ಲಿ ಚೀನಾಕ್ಕೆ ನಮ್ಮ ದೇಶದಲ್ಲಿ ಬೇಕಾಬಿಟ್ಟಿಯಾಗಿ ಹೂಡಿಕೆ ಮಾಡಲು ಬಿಟ್ಟು, ಅವರ ಆಮದನ್ನು ಹೆಚ್ಚಿಸಿ, ಈವಾಗ ಒಮ್ಮೆಗೆ ಬಾಯ್ಕಾಟ್ ಅಂದರೆ?
ಅದಕ್ಕೆ ಬಾಯ್ಕಾಟ್, ಬಾಯ್ಕಾಟ್ ಎನ್ನುವ ಕಾಂಟ್ರಾಕ್ಟನ್ನು ಸರಕಾರ ಮಾಧ್ಯಮಗಳು ಹಾಗೂ ಭಕ್ತ ಮಂಡಳಿಗೆ ಬಿಟ್ಟುಕೊಟ್ಟು, ತಾನು ಮಾತ್ರ ಮೌನಕ್ಕೆ ಜಾರಿದೆ. ಯಾಕೆಂದರೆ ಅವರಿಗೆ ವಾಸ್ತವ ತಿಳಿದಿದೆ. ಆದರೂ ಚುನಾವಣೆಗಳಿವೆಯಲ್ವಾ? ಹಾಂ! ಅದರಲ್ಲಿ ಈ ಬಾಯ್ಕಾಟ್, ಕಡೀ ನಿಂದಾಗಳು ತುಂಬಾ ಹೆಲ್ಪ್ ಮಾಡ್ತಾವೆ ಅಂತ ಬ್ರಹ್ಮಾಂಡ ಜ್ಯೋತಿಷಿಗಳು ಹೇಳಿದ ನೆನಪು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
-
ದಿನದ ಸುದ್ದಿ1 day agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ4 days agoಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

