Connect with us

ನಿತ್ಯ ಭವಿಷ್ಯ

ಶುಕ್ರವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ

Published

on

ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:
9945410150

ಮೇಷ ರಾಶಿ

ಕ್ಷುಲ್ಲಕ ವಿಚಾರಗಳಿಗಾಗಿ ಬಂಧುಗಳು ನಿಮ್ಮನ್ನು ದ್ವೇಷಿಸಬಹುದು. ಹಿರಿಯರು ತಾವು ಈ ಹಿಂದೆ ಮಾಡಿದ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಿ. ಕೃಷಿ ವಿಚಾರದ ಸಂಕೀರ್ಣದಲ್ಲಿ ನೀವು ಮಂಡಿಸಿದ ವಿಚಾರಗಳಿಗೆ ಪ್ರಶಂಸೆ .ಕೃಷಿಭೂಮಿ ಅಥವಾ ಸ್ಥಿರಾಸ್ತಿಗಳನ್ನು ಖರೀದಿಸಲು ಈಗ ಸರಿಯಾದ ಸಮಯವಲ್ಲ. ಆಪ್ತರನ್ನು ಅವರು ತಪ್ಪು ಮಾಡಿದಾಗಲೂ ಸಮರ್ಥಿಸ ಬೇಡಿ. ಅನಾವಶ್ಯಕವಾಗಿ ಯಾರನ್ನು ನಿಂದಿಸಬೇಡಿ ಮತ್ತು ಅವಮಾನ ಮಾಡಬೇಡಿ. ಬೇರೆ ಕೆಲಸ ಸಿಗುವವರೆಗೂ ಅಲ್ಲಿಯೇ ಮುಂದುವರೆಯಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ನಿಮ್ಮ ಎದುರಾಳಿಗಳ ಬಗ್ಗೆ ಗಮನವಿರಲಿ ಮತ್ತು ಎಚ್ಚರಿಕೆ ವಹಿಸಿ. ಸ್ಥಿರಾಸ್ತಿ ಬಗ್ಗೆ ಗೊಂದಲ ಸೃಷ್ಟಿಯಾಗಿ ಮಾನಸಿಕ ಮನಸ್ತಾಪ. ಉದ್ಯೋಗ ಹುಡುಕಾಟದಲ್ಲಿ ವಿಳಂಬ. ತಮ್ಮ ಮಕ್ಕಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಮಗನ ನಡವಳಿಕೆ ತಮಗೆ ಬೇಸರವಾಗಲಿದೆ. ನವದಂಪತಿಗಳಿಗೆ ಒಬ್ಬರಿಗೊಬ್ಬರು ಅರ್ಥೈಸಿಕೊಳ್ಳುವುದುರಲ್ಲಿ ಕಾಲ ಕಳೆಯುವಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಕುಟುಂಬ ಸದಸ್ಯರ ಅನಾರೋಗ್ಯ ಸಮಸ್ಯೆ ಕಾಡಲಿದೆ. ವಿಚ್ಛೇದನದ ಹೆಣ್ಣುಮಕ್ಕಳಿಗೆ ಮರುವಿವಾಹ ಸಂಭವ. ಬೇರೆಯವರ ಕುಟುಂಬದ ಬಗ್ಗೆ ಚಿಂತನೆ ಮಾಡಬೇಡಿ ಇದರಿಂದ ನೀವು ಅಪವಾದಕ್ಕೆ ಗುರಿಯಾಗುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ವೇದನೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಕೃಷಿಕರಿಗೆ ಹೆಚ್ಚಿನ ಧನಾಗಮನ ನಿರೀಕ್ಷೆ. ಜಮೀನಿಗಾಗಿ ಹೊಸ ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವುದುಕ್ಕಾಗಿ ಚಿಂತಿಸುವಿರಿ. ಮಕ್ಕಳು ಅಡ್ಡದಾರಿ ಹೋಗುವುದರ ಬಗ್ಗೆ ಚಿಂತನೆ ಮಾಡುವಿರಿ. ಮಹಿಳಾ ರಾಜಕಾರಣಿಗಳಿಗೆ ಸಿಹಿಸುದ್ದಿ ಲಭಿಸಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಭಾಗ್ಯ. ನೌಕರಸ್ಥರು ಸಹೋದ್ಯೋಗಿಗಳಿಂದ ಮನಸ್ತಾಪ. ಬಂಧು ಮತ್ತು ಸ್ನೇಹಿತರಿಂದ ಅತಿಥಿಸತ್ಕಾರ ಭಾಗ್ಯ ಸಿಗಲಿದೆ. ಇರುವ ಕೆಲಸ ಕಾರ್ಯಗಳು ಯಶಸ್ವಿನ ಹಂತಕ್ಕೆ ಬಂದಿರುತ್ತದೆ. ಮಕ್ಕಳ ಕಂಕಣಬಲ ಕೂಡಿ ಬರುವ ಸಾಧ್ಯತೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ನಿಮ್ಮಿಂದ ದೇವರ ಪ್ರತಿಷ್ಠಾಪನಾ ಮಾಡುವುದರ ಬಗ್ಗೆ ಚಿಂತನೆ. ಜಮೀನಲ್ಲಿ ತಕರಾರು ನ್ಯಾಯ ಶುರುವಾಗುವುದು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆಯ ಬಗ್ಗೆ ಚಿಂತನೆ ಮಾಡುವಿರಿ. ಪ್ರೇಮಿಗಳು ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಿಂದ ಮನಸ್ತಾಪವಾಗಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ವ್ಯವಹಾರದಲ್ಲಿ ಕುಶಲತೆ ಪಡೆಯುವ ಸಮಗ್ರ ದೃಷ್ಟಿಕೋನ ಕಾಣಬಹುದಾಗಿದೆ. ಭೂ ಸಂಬಂಧಿತ ವ್ಯಾಜ್ಯಗಳನ್ನು ಪರಿಹಾರದ ನಿಟ್ಟಿನಲ್ಲಿ ಯೋಚಿಸಬೇಕಾದ ಅನಿವಾರ್ಯತೆ ಇದೆ. ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಉದ್ಯೋಗದ ಅಭದ್ರತೆಯ ಭಾವನೆ ತೆಗೆದುಹಾಕುವಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ. ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ. ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯಲು ಚಾಲನೆ ನೀಡುವರು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಆತುರದ ವರ್ತನೆಗಳು ಸರಿಯಲ್ಲ. ಯೋಜನೆಗಳಲ್ಲಿ ನೀವು ಚೈತನ್ಯದಿಂದ ವರ್ತಿಸುವುದು ಅವಶ್ಯಕವಿದೆ. ಮನೆಯಲ್ಲಿ ಲಗುಬಗೆಯಿಂದ ವಸ್ತುಗಳು ಮರೆತುಹೋಗುವ ಅಥವಾ ಕಳೆದು ಹೋಗುವ ಸಾಧ್ಯತೆ ಇದೆ ಆದಷ್ಟು ಸಮಾಧಾನದಿಂದ ವರ್ತಿಸಿ. ಹಣಗಳಿಕೆಯಲ್ಲಿ ಉತ್ತಮ ಸ್ವರೂಪ ಪಡೆಯಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಳ್ಳೆಯದು. ಅನಿರೀಕ್ಷಿತವಾದ ದೂರದ ಪ್ರಯಾಣ ಬರಬಹುದು. ಈ ದಿನ ಲಾಭಾಂಶ ಸಹ ಹೆಚ್ಚಾಗಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಅಂಶಗಳು ಕಂಡುಬರಲಿದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಕಾಣಬಹುದು. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗುವುದು ನಿಶ್ಟಿತ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending