Connect with us

ಲೈಫ್ ಸ್ಟೈಲ್

ಹೃದ್ರೋಗದ ಹಟಾತ್ ಸಾವುಗಳ ಬಗ್ಗೆ ನಾಗೇಶ್ ಹೆಗಡೆ ಬರಹ : ಕೋವಿಡ್ ಬದಿಗಿಟ್ಟು CVD ನೋಡೋಣವೆ..?

Published

on

(ಕೋವಿಡ್‌-19ರಿಂದಾಗಿ ಇದುವರೆಗೆ ನಮ್ಮ ದೇಶದಲ್ಲಿ 1,23,456 ಜನ ಸತ್ತಿದ್ದಾರೆ ಅಂದುಕೊಳ್ಳಿ. ಇದೇ 100 ದಿನಗಳ ಅವಧಿಯಲ್ಲಿ CVD ಕಾಯಿಲೆಯಿಂದ ಭಾರತದಲ್ಲಿ ಅಂದಾಜು ಆರು ಲಕ್ಷ ಜನ ಸತ್ತಿದ್ದಾರೆ. ಸುದ್ದಿ ಮಾಧ್ಯಮಗಳಲ್ಲಿ ಅದರ ಸದ್ದೇ ಇಲ್ಲ.)

CVD ಅಂದರೆ ಕಾರ್ಡಿಯೊ ವಾಸ್ಕುಲರ್ ಡಿಸೀಸ್. ಅಂದರೆ ಹೃದ್ರೋಗ. ಈ ಕಾಯಿಲೆಯಿಂದ ಪ್ರತಿ ದಿನ ನಮ್ಮಲ್ಲಿ ಸರಾಸರಿ ಆರು ಸಾವಿರ ಜನರು ಸಾಯುತ್ತಾರೆ.

ಕಳೆದ ಹತ್ತು ವರ್ಷಗಳಿಂದ ಸಿವಿಡಿ ಸಾವಿನ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದೆ. ಸ್ಟೆಂಟ್ ತಯಾರಿಸುವವರ ವೆಬ್ ಸೈಟ್‌ಗಳನ್ನು ನೋಡಿದರೆ ಹೃದ್ರೋಗಿಗಳ ಸಂಖ್ಯೆ ಹತ್ತು ಪಟ್ಟು ಏರಲಿದೆ ಎಂದು ಖುಷಿಯಿಂದೆಂಬಂತೆ ಸಾರುತ್ತಾರೆ.

ಹೃದ್ರೋಗಗಳ ಹೆಚ್ಚಳಕ್ಕೆ ಮುಖ್ಯ ಕಾರಣ ಏನೆಂದರೆ ಕಳಪೆ ಖಾದ್ಯತೈಲ, ವ್ಯಾಯಾಮವಿಲ್ಲದ ದಿನಚರಿ, ಮತ್ತು ಆತಂಕ. ಈ ಮೂರು ಹೆಚ್ಚಾದಾಗ ಬರುವ ಬೊಜ್ಜು, ಬಿಪಿ, ಕೊಲೆಸ್ಟೆರಾಲ್ ಶೇಖರಣೆ, ಲಿವರ್ನಲ್ಲಿ ಉತ್ಪನ್ನವಾಗುವ LP(a) ಎಂಬ ಕೊಬ್ಬು ಇವೆಲ್ಲ ಸೇರಿ ರಕ್ತನಾಳಗಳಲ್ಲಿ ಗಂಟುಮೂಟೆ ಇಡುತ್ತವೆ. ಬ್ಯಾಂಕಿನಲ್ಲಿ ಡಿಪಾಸಿಟ್ ಇಟ್ಟ ಹಾಗೆ. ಹೃದಯ ಪಾಪ, ಏದುಸಿರು ಬಿಡುತ್ತ ರಕ್ತವನ್ನು ಪಂಪ್ ಮಾಡಿ ಮಾಡಿ ಹೈರಾಣಾಗುತ್ತದೆ. ಈ ಮೂರರ ಜೊತೆಗೆ ತಂಬಾಕು ಸೇವನೆ ಇದ್ದರೆ ಅದೂ ಹೃದಯ ಬಡಿತವನ್ನು ಹೆಚ್ಚಿಸುತ್ತ ಇನ್ನಷ್ಟು ಕಷ್ಟ ಕೊಡುತ್ತಿರುತ್ತದೆ.

ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಇವೆಲ್ಲವುಗಳ ಬಳಕೆ ಹೆಚ್ಚಾಗಿದೆ. ಮನೆಯಲ್ಲಿ ಕೂತು ಮಾಡಿದ್ದೆಲ್ಲ ಇದೇ ತಾನೆ? (ಸಿಗರೇಟು ಪೂರೈಕೆ ಮಾಡಲೆಂದು 60 ಲಕ್ಷ ಲಂಚ ಪಡೆವರದ್ದೂ ಇದೇ ಗತಿ). ಲಾಕ್‌ಡೌನ್ ಮುಗಿದ ನಂತರ ಇವೆಲ್ಲ ಇನ್ನೂ ಹೆಚ್ಚಾಗಿದೆ. ರಸ್ತೆಗಳಲ್ಲಿ ಪಕೋಡಾ ಮಾರುವವರಿಗೆ ಗಿರಾಕಿಗಳು ಹೆಚ್ಚಾಗಿದ್ದಾರೆ. ಬೇಕರಿಗಳಲ್ಲಿ ಮೊದಲಿಗಿಂತ ಜಾಸ್ತಿ ನೂಕು ನುಗ್ಗಲು.

ತಿಂಡಿ-ಊಟಗಳಲ್ಲಿ ಟ್ರಾನ್ಸ್‌ ಫ್ಯಾಟ್ (ಕಳಪೆ ತೈಲ) ಬಳಕೆ ಜಾಸ್ತಿ ಇದ್ದರೆ ಹೃದಯಕ್ಕೆ ಡಬಲ್ ಟ್ರಬಲ್ ಎನ್ನುತ್ತಾರೆ ತಜ್ಞರು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರತಿ ವರ್ಷ ಐದು ಲಕ್ಷ ಜನರು ಇದರಿಂದಾಗಿಯೇ ಸಾಯುತ್ತಿದ್ದಾರೆ. ಇನ್ನು ಎರಡು ವರ್ಷಗಳಲ್ಲಿ ಎಲ್ಲ ದೇಶಗಳೂ ಇದನ್ನು ನಿಷೇಧಿಸಬೇಕೆಂದು ಕರೆ ಕೊಟ್ಟಿದೆ. ಬಹಳಷ್ಟು ದೇಶಗಳು (ಕೆನಡಾ, ಬ್ರಿಟನ್, ಸಿಂಗಪೂರ್, ಸ್ವೀಡನ್, ಯುಎಸ್, ಸಿಂಗಪೂರ್ ಇತ್ಯಾದಿ) ಆಗಲೇ ಇದರ ಬಳಕೆಯ ಮೇಲೆ ಕಟ್ಟುನಿಟ್ಟಿನ ನಿಬಂಧನೆಗಳನ್ನು ಹಾಕಿವೆ.

ನಮ್ಮಲ್ಲಿ ಅಂಥ ನಿಬಂಧನೆ ಜಾರಿಗೆ ಬರುವುದೇ ಕಷ್ಟ. ಬಳಸಿದ ಎಣ್ಣೆಯನ್ನೇ ಮತ್ತೆ ಮತ್ತೆ ಬಳಸಬೇಡಿ ಎಂದು ರಸ್ತೆ ಪಕ್ಕದಲ್ಲಿ ಪಕೋಡಾ ಕರಿದು ಮಾರುವವನ ಮೇಲೆ ಎಂಥ ನಿಬಂಧನೆ ಜಾರಿಗೆ ಬಂದೀತು? ಬೇಕರಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಅವುಗಳ ಪಕ್ಕದಲ್ಲೇ ಔಷಧ ಅಂಗಡಿಗಳೂ ಹೆಚ್ಚುತ್ತಿವೆ. ಗೋಭಿ ಮಂಚೂರಿಗೆ ಬೇಡಿಕೆಯೂ ಹೆಚ್ಚುತ್ತಿದೆ.

ಬೇರೆ ದೇಶಗಳಲ್ಲಿ ನಿರ್ಬಂಧಿಸಲಾದ 57 ಬಗೆಯ ಕೀಟನಾಶಕ ವಿಷಗಳು ನಮ್ಮಲ್ಲಿ ಸಲೀಸಾಗಿ ಮಾರಾಟವಾಗುತ್ತವೆ. ಹೂಕೋಸು (ಗೋಭಿ) ಬೆಳೆಯಲು ಭಾರೀ ವಿಷದ ಸಿಂಪಡನೆ ಆಗಲೇಬೇಕು. ಅತ್ತ ಬೆಳೆದವನಿಗೂ ವಿಷ ಸಿಂಚನ, ಇತ್ತ ಬಳಸುವವನಿಗೂ ಕಂಟಕ. ಚಿಕ್ಕವರು, ದೊಡ್ಡವರು, ನಗರದವರು, ಹಳ್ಳಿಯವರು ಅವರಿವರೆನ್ನದೆ ಯಾರನ್ನು ಬೇಕಾದರೂ ಬಲಿತೆಗೆದುಕೊಳ್ಳುತ್ತದೆ ಈ ಕೊರೊನರಿ ಹಾರ್ಟ್ ಡಿಸೀಸ್.

ಇದಕ್ಕೂ ಕೊರೊನಾ ಸಂಬಂಧ ಇದೆ. ದೇಹಕ್ಕೆ ಶುದ್ಧರಕ್ತವನ್ನು ಪೂರೈಸುವ ರಕ್ತನಾಳಗಳು ಹೃದಯವನ್ನು ಕಿರೀಟದಂತೆ ಸುತ್ತಿಕೊಂಡಿದ್ದರಿಂದ ಇದಕ್ಕೆ ಕೊರೊನರಿ ಆರ್ಟರಿ ಎನ್ನುತ್ತಾರೆ. ಕೊರೊನಾ ಕುರಿತು ಗಾಬರಿ ಹುಟ್ಟಿಸುವ ಅಂಕಿಸಂಖ್ಯೆಗಳನ್ನೂ ಗ್ರಾಫಿಕ್‌ಗಳನ್ನೂ ತೋರಿಸುತ್ತ ಭಯಾನಕ ದೃಶ್ಯಗಳನ್ನು ಬಿತ್ತರಿಸುವವರು ಸದ್ಯಕ್ಕೇನೊ ದೇಶದ ಗಮನವನ್ನು ಗಡಿಯ ಕಡೆ ಸೆಳೆಯುತ್ತಿದ್ದಾರೆ. ರಸ್ತೆ ಪಕ್ಕ ಗೋಭೀ ಮಂಚೂರಿ ತಿನ್ನುತ್ತ ನಾವೆಲ್ಲ ಚೀನೀ ವಸ್ತುಗಳನ್ನು ನಿಷೇಧಿಸುವ ಚರ್ಚೆಯಲ್ಲಿ ತೊಡಗಿದ್ದೇವೆ. ಚಾನೆಲ್‌ಗಳ ಕೆಲವರು ರಕ್ತ ಹೆಪ್ಪುಗಟ್ಟುವಂಥ ಗ್ರಾಫಿಕ್‌ಗಳನ್ನು ಹಾಕುತ್ತಿದ್ದಾರೆ.

ಯಾಕೆ ಯಾರೂ ಖಾದ್ಯ ತೈಲಗಳ ಗುಣಮಟ್ಟದ ಬಗ್ಗೆ, ಆಹಾರದಲ್ಲಿರುವ ವಿಷಗಳ ಬಗ್ಗೆ ಜಾಗೃತಿ ಮೂಡಿಸುತ್ತಿಲ್ಲ? ದಿನಕ್ಕೆ ಆರೇಳು ಸಾವಿರ ಸಾವಾಗುತ್ತಿದ್ದರೂ ಯಾರೂ ಯಾಕೆ ಹೃದ್ರೋಗವನ್ನು ತಡೆಗಟ್ಟಬಲ್ಲ ಸರಳ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸುತ್ತಿಲ್ಲ? ಯಾಕೆ ಫೋನ್ ನಲ್ಲಿ ಎಚ್ಚರಿಕೆಯ ಮಾತುಗಳು ಬರುತ್ತಿಲ್ಲ?

ಯಾಕೆಂದರೆ CVDಯನ್ನು ತಡೆಗಟ್ಟುವಲ್ಲಿ ಮತ್ತು ಎಕ್ಸ್-ರೇ, ಇಸಿಜಿ, ಆಂಜಿಯೊಗ್ರಾಮ್, ಕೊರೊನರಿ ಬೈಪಾಸ್‌ ಅಥವಾ ಸ್ಟೆಂಟ್ ಬಳಕೆಯನ್ನು ಕಡಿಮೆ ಮಾಡುವಲ್ಲಿ ಯಾವ ಲಾಭವೂ ಇಲ್ಲ. ಅದಕ್ಕೇ ಸಿವಿಡಿಗೆ ಯಾರೂ ಕ್ಯಾರೇ ಅನ್ನುವವರಿಲ್ಲ. ಬದಲಿಗೆ ಕೊರೊನಾ ಮಾರಿಯ ಬಗ್ಗೆ ಬ್ರೆಕಿಂಗ್ ನ್ಯೂಸ್ ಕೊಟ್ಟು ಕೊಟ್ಟು ಹೃದಯ ಬಡಿತವನ್ನು ಹೆಚ್ಚಿಸುವ ಯತ್ನಗಳೇ ಎದ್ದು ಕಾಣುತ್ತಿವೆ. ಒಂದು ದಿನ ಈ ಸುದ್ದಿಯೂ ನೇಪಥ್ಯಕ್ಕೆ ಸೇರುತ್ತದೆ.

ನೋಡುತ್ತಿರಿ, ಇಂದು ಸಿವಿಡಿಗೆ ಬಂದ ಸ್ಥಿತಿಯೇ ಮುಂದೆ ಕೋವಿಡ್‌-19ಕ್ಕೂ ಬರಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

Trending