Connect with us

ದಿನದ ಸುದ್ದಿ

ಮಂಡ್ಯದ ‘ಐದು ರೂಪಾಯಿ ಡಾಕ್ಟ್ರು’ ಬಗ್ಗೆ ಸಂಸದೆ ಸುಮಲತಾ ಹೇಳಿದ್ದೇನು ಗೊತ್ತಾ..?

Published

on

  • ಸುಮಲತಾ ಅಂಬರೀಶ್, ಲೋಕ ಸಭಾ ಸದಸ್ಯೆ, ಮಂಡ್ಯ

ನನ್ನ ಮಂಡ್ಯ ನನ್ನ ಹೆಮ್ಮೆ

ಲ್ಲರಿಗೂ ಮಣ್ಣಿನ ಗುಣ ಇರುತ್ತಂತೆ. ಅಂತ ಮಂಡ್ಯದ ಮಣ್ಣಿನ ಗುಣ ಇರೋ ಒಬ್ಬ ವ್ಯಕ್ತಿ ಇವರು. ಇವರ ಬಗ್ಗೆ ನೀವು ಕೇಳಿರಬಹುದು.

ಥಟ್ಟಂತೆ ನೋಡಿದರೆ ಅವರು ಸಾಮಾನ್ಯರಲ್ಲಿ ಸಾಮಾನ್ಯ. ಆದರೆ, ಅವರ ಮುಂದೆ ಸಾಲುಗಟ್ಟಿ ನಿಲ್ಲುವ ಜನ, ಇವರು ತಪಾಸಣೆ ಮಾಡಿ ಬರೆದು ಕೊಡುವ ಔಷದಿ ಚೀಟಿ, ಇವೆಲ್ಲ ಕಣ್ಣಿಗೆ ಕಟ್ಟಿದಂತೆ ಬರುತ್ತೆ, ಇವರ ಹೆಸರು ಕೇಳಿದರೆ. ಅವರೇ ನಮ್ಮ ಡಾ. ಶಂಕರೇಗೌಡರು. ಇಂಗ್ಲಿಷ್ ಪತ್ರಿಕೆಗಳಲ್ಲಿ, ನ್ಯಾಷನಲ್ ಮೀಡಿಯಾದಲ್ಲಿ ಕೂಡ ಇವರ ಬಗ್ಗೆ ವರದಿಗಳು ಬಂದಿವೆ. ಅವೆಲಕ್ಕೂ ಮೀರಿದ ಸಹಜ ಪ್ರಾಮಾಣಿಕ ಸಂಬಂಧ ಇವರಿಗೆ ನಮ್ಮ ಮಂಡ್ಯ ಜನರ ಜೊತೆ ಇದೆ.

ನಮ್ಮ ಮಂಡ್ಯ ಕ್ಷೇತ್ರದ ರಿಯಲ್ ಹೀರೋಗಳಲ್ಲಿ ಒಬ್ಬರು ಇವರು. ವೈದ್ಯಕೀಯ ಕ್ಷೇತ್ರದಲ್ಲಿ ದುಡ್ಡೇ ಮಾಡಬೇಕು ಅಂತಿದ್ದರೆ, ಬಂಗಲೆಯಲ್ಲಿ ವಾಸ, ದುಬಾರಿ ಕಾರು, ದೊಡ್ಡದೊಂದು ಆಸ್ಪತ್ರೆ ಕಟ್ಟಬಹುದಿತ್ತು. ಆದರೆ, ವೈದ್ಯ ವೃತ್ತಿಯನ್ನು ಅವರು ಬಳಕೆ ಮಾಡಿಕೊಂಡಿದ್ದು ಕೇವಲ ಕಾಯಿಲೆಯನ್ನು ಗುಣಪಡಿಸುವುದಕ್ಕಾಗಿ. ಅದರಲ್ಲೂ ಬಡವರ, ನಿರ್ಗತಿಕರ ಸೇವೆಗಾಗಿ.

ಈಗಲೂ ಅವರು ಎರಡು ಕೋಣೆಯ ಚಿಕ್ಕ ಮನೆಯಲ್ಲಿ ವಾಸ. ಸಣ್ಣದೊಂದು ಆಸ್ಪತ್ರೆ ಕಟ್ಟಲು ಕೋಟ್ಯಾಂತರ ರೂಪಾಯಿ ಬೇಕು. ಚಿಕ್ಕದೊಂದು ಕೋಣೆ ನಿರ್ಮಿಸಲೂ ಲಕ್ಷಾಂತರ ರೂಪಾಯಿ ಬೇಕು. ಅದನ್ನು ತರಲು ರೋಗಿಯನ್ನೇ ಅವಲಂಬಿಸಬೇಕು. ಈ ಹೊರೆಯನ್ನು ರೋಗಿಗಳ ಮೇಲೆ ಹಾಕದೇ, ಒಂದು ಅಂಗಡಿ ಮುಂದಿನ ಕಟ್ಟೆಯಲ್ಲೇ ಕೂತು ರೋಗಿಯನ್ನು ನೋಡುತ್ತಾರೆ. ಅಗ್ಗದ ಔಷಧಿ ಚೀಟಿಗಳನ್ನು ಬರೆದು ಕೊಡುತ್ತಾರೆ.

ಬೆಳಗ್ಗೆ 8 ಗಂಟೆಯಿಂದ ಶುರುವಾಗುವ ಈ ಕಾಯಕ ಮಧ್ಯಾಹ್ನದವರೆಗೆ ಮತ್ತು ಸಾಯಂಕಾಲ ಕೂಡ ನಿರಂತರವಾಗಿ ಇರುತ್ತದೆ. ನಿತ್ಯವೂ ನೂರಾರು ರೋಗಿಗಳಿಗೆ ಇವರು ಚಿಕಿತ್ಸೆ ನೀಡುತ್ತಾರೆ. ಹೆಚ್ಚಾಗಿ ಚರ್ಮರೋಗಕ್ಕೆ ಸಂಬಂಧಿಸಿದಂತೆ ಔಷಧಿ ನೀಡುತ್ತಾರೆ. ಕೇವಲ ಮಂಡ್ಯದ ಜನರು ಮಾತ್ರವಲ್ಲ, ರಾಜ್ಯದ ನಾನಾ ಭಾಗಗಳಿಂದಲೂ ಜನರು ಬರುತ್ತಾರೆ. ಹಲವು ರಾಜ್ಯಗಳಿಂದಲೂ ಬಂದಿದ್ದು ಉಂಟು. ಆಚೆ ದುಬಾರಿ ಅನಿಸುವ ಈ ಚಿಕಿತ್ಸೆಗೆ ಶಂಕರೇಗೌಡರು ಪಡೆಯುವ ಹಣವೆಷ್ಟು ಗೊತ್ತಾ? ಕೇವಲ ಐದು ರೂಪಾಯಿ ಮಾತ್ರ! ಹಾಗಾಗಿ ಇವರನ್ನು ಪ್ರೀತಿಯಿಂದ ಜನರು “ಐದು ರೂಪಾಯಿ ಡಾಕ್ಟ್ರು” ಅಂತ ಕರೀತಾರೆ.

ಎಂಡಿ ಮಾಡಿರುವ ವೈದ್ಯರೊಬ್ಬರು ಕೇವಲ ಐದು ರೂಪಾಯಿಗೆ ಚಿಕಿತ್ಸೆ ಕೊಡುತ್ತಾರೆ ಎಂದರೆ ಅಚ್ಚರಿ ಆಗೋದು ನಿಜ. ಇಂಥದ್ದೊಂದು ಅಚ್ಚರಿಯ ಕೆಲಸವನ್ನು ನಿತ್ಯ ಮಾಡುವ ಶಂಕರೇಗೌಡರಿಗೆ ನನ್ನದೊಂದು ನಮಸ್ಕಾರ. ಇಂತಹ ಮಹನೀಯರ ಸಂಖ್ಯೆ ಇನ್ನೂ ಹೆಚ್ಚಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending