ದಿನದ ಸುದ್ದಿ
ದಾವಣಗೆರೆ | ಅಶೋಕ ಟಾಕೀಸ್ ಬಳಿಯ ರೈಲ್ವೇ ಗೇಟ್ ಸಮಸ್ಯೆಗೆ ಪರಿಹಾರ : ಎರಡು ಕಡೆ ಅಂಡರ್ ಬ್ರಿಡ್ಜ್ ನಿರ್ಮಿಸಿ ಕಾಮಗಾರಿ ಆರಂಭ : ರೈಲ್ವೇ ಸಚಿವ ಸುರೇಶ್ ಅಂಗಡಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/06/Davangere_railway-gate_Suddidina.jpg&description=ದಾವಣಗೆರೆ | ಅಶೋಕ ಟಾಕೀಸ್ ಬಳಿಯ ರೈಲ್ವೇ ಗೇಟ್ ಸಮಸ್ಯೆಗೆ ಪರಿಹಾರ : ಎರಡು ಕಡೆ ಅಂಡರ್ ಬ್ರಿಡ್ಜ್ ನಿರ್ಮಿಸಿ ಕಾಮಗಾರಿ ಆರಂಭ : ರೈಲ್ವೇ ಸಚಿವ ಸುರೇಶ್ ಅಂಗಡಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/06/Davangere_railway-gate_Suddidina.jpg&description=ದಾವಣಗೆರೆ | ಅಶೋಕ ಟಾಕೀಸ್ ಬಳಿಯ ರೈಲ್ವೇ ಗೇಟ್ ಸಮಸ್ಯೆಗೆ ಪರಿಹಾರ : ಎರಡು ಕಡೆ ಅಂಡರ್ ಬ್ರಿಡ್ಜ್ ನಿರ್ಮಿಸಿ ಕಾಮಗಾರಿ ಆರಂಭ : ರೈಲ್ವೇ ಸಚಿವ ಸುರೇಶ್ ಅಂಗಡಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ಅಶೋಕ ಟಾಕೀಸ್ ಬಳಿಯ ರೈಲ್ವೇ ಗೇಟ್ಗೆ ಸಂಬಂಧಿಸಿದಂತೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೇ ಅಂಡರ್ ಬ್ರಿಡ್ಜ್ ಅಥವಾ ಓವರ್ಬ್ರಿಡ್ಜ್ ಸಮಸ್ಯೆಗೆ ಪರಿಹಾರ ದೊರೆತಿದ್ದು, ಶೀಘ್ರದಲ್ಲಿಯೇ ಈ ಸ್ಥಳದಲ್ಲಿ ಎರಡು ಕಡೆ ವೆಂಟ್ಗಳ(ಅಂಡರ್ಬ್ರಿಡ್ಜ್)ನಿರ್ಮಾಣಕ್ಕೆ ಯೋಜನೆ ಸಿದ್ದಪಡಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಕೇಂದ್ರದ ರಾಜ್ಯ ರೈಲ್ವೇ ಸಚಿವರಾದ ಸುರೇಶ್ ಸಿ.ಅಂಗಡಿ ಹೇಳಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ರೈಲ್ವೇ ಯೋಜನೆಗಳ ಕುರಿತು ಶುಕ್ರವಾರ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಶೋಕ ಟಾಕೀಸ್ ಬಳಿ ಇರುವ ರೇಲ್ವೇ ಗೇಟ್ ಬಳಿ ಸಾರ್ವಜನಿಕರು ಸೇರಿದಂತೆ ಓಡಾಟಕ್ಕೆ ಅನೇಕ ವರ್ಷಗಳಿಂದ ಸಮಸ್ಯೆ ಉಂಟಾಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ಹಲವಾರು ಬಾರಿ ಪ್ರಯತ್ನಿಸಿದ್ದು, ಈ ಬಾರಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ.
ಪ್ರಸ್ತುತ ರೇಲ್ವೇ ಗೇಟ್ ಬಳಿ ಒಂದು ಮತ್ತು ಪುಷ್ಪಾಂಜಲಿ ಟಾಕೀಸ್ ಬಳಿ ಲಾರಿಗಳನ್ನು ನಿಲ್ಲಿಸುವ ಜಾಗದಲ್ಲಿ ಒಂದು ಒಟ್ಟು ಎರಡು ರೈಲ್ವೇ ಅಂಡರ್ ಬಿಡ್ಜ್ (ಆರ್ಯುಬಿ-ವೆಂಟ್)ಗಳನ್ನು ನಿರ್ಮಿಸಲಾಗುವುದು. ಈ ವೆಂಟ್ಗಳಿಂದ ದೊಡ್ಡ ದೊಡ್ಡ ವಾಹನಗಳೂ ಓಡಾಡುವ ರೀತಿಯಲ್ಲಿ ಯೋಜನೆ ಸಿದ್ದಪಡಿಸಿ ನಿರ್ಮಿಸುವ ಮೂಲಕ ಅನೇಕ ವರ್ಷಗಳ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದರು.
ಹಾಗೂ ಪಿ.ಬಿ.ರಸ್ತೆಯಲ್ಲಿರುವ ಎ.ಸಿ ರವರ ಕಚೇರಿಯನ್ನು ಬೇರೆಡೆ ಶಿಫ್ಟ್ ಮಾಡಿ, ಆ ಜಾಗದಲ್ಲಿ ಆರ್ಯುಬಿ ನಿರ್ಮಿಸಲಾಗುವುದು. ಜೊತೆಗೆ ಸಣ್ಣ ಪುಟ್ಟ ಮೋಟಾರ್ ಸೈಕಲ್ ಓಡಾಡಲು ಪಾಥ್ ನಿರ್ಮಿಸಲಾಗುವುದು ಎಂದರು.
ರೈಲ್ವೇ ಸಚಿವರ ಪ್ರಮುಖ ಹೇಳಿಕೆಗಳು
- 2022 ರ ವೇಳೆಗೆ ದೇಶಾದ್ಯಂತ ಎಲ್ಲ ರೈಲ್ವೆಗಳನ್ನು ವಿದ್ಯುದೀಕರಣ ಮಾಡಲಾಗುವುದು. ಹಾಗೂ 2022 ರ ಅಂತ್ಯಕ್ಕೆ ರಾಜ್ಯಾದ್ಯಂತ ರೈಲ್ವೇ ಡಬ್ಲಿಂಗ್ ಕಾಮಗಾರಿಗಳನ್ನು ಮುಗಿಸಲು ಸಂಪೂರ್ಣ ಪ್ರಯತ್ನ ಮಾಡಲಾಗುವುದು.
- ಮುಂಬೈ ಕೋಲ್ಕತ್ತಾ ವರೆಗೆ ರಫ್ತು ಮತ್ತು ಆಮದು ಮಾಡಲಿಕ್ಕೋಸ್ಕರ ಒಂದು ಡೆಡಿಕೇಟೆಡ್ ಟ್ರೈನ್ ಬಿಡಲಾಗಿದ್ದು ಇದೇ ರೀತಿಯ ರೈಲನ್ನು ರಾಜ್ಯದ ಅಂಕೋಲ-ಹುಬ್ಬಳಿಯಲ್ಲಿ ಬಿಡಲು ಪ್ರಸ್ತಾವನೆ ಆಗಿದೆ. ಆದರೆ ಈ ರೈಲಿನ ಕುರಿತಾಗಿ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುವ ಕಾರಣ ಈಗ ಬಾಕಿ ಇದೆ. ಇದು ಇತ್ಯರ್ಥವಾದ ಬಳಿಕ ಆದಷ್ಟು ಶೀಘ್ರದಲ್ಲಿ ಕೆಲಸ ಆರಂಭಿಸಲಾಗುವುದು.
- ರಾಜ್ಯದ ಪ್ರಸ್ತಾಪಿತ ರೈಲ್ವೇ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿ ಗಳು ಮತ್ತು ಎಸ್ಎಲ್ಓ ಗಳು ಎಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆ ನಡಸಿ ಜಾಗ ನೀಡುತ್ತಾರೋ ಅಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.
ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲ್ವೆ ಲೈನ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ದಾವಣಗೆರೆ ತಾಲ್ಲೂಕಿನ 14 ಗ್ರಾಮಗಳು ಒಳಪಡಲಿದ್ದು ಒಟ್ಟು ವಿಸ್ತೀರ್ಣ 238 ಎಕರೆ ಭೂಸ್ವಾಧೀನ ಮಾಡಬೇಕಿದ್ದು, ಈ ಪೈಕಿ 209 ಎಕರೆ ಭೂಸ್ವಾಧೀನಕ್ಕೆ ಅಂತಿಮ ನೋಟಿಫಿಕೇಷನ್ ಆಗಿದೆ. ಇನ್ನೊಂದು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ವಿಶೇಷ ಭೂಸ್ವಧೀನಾಧಿಕಾರಿ ರೇಷ್ಮಾ ಹಾನಗಲ್ ಹೇಳಿದರು.
ಹುಬ್ಬಳ್ಳಿ-ಚಿಕ್ಕಜಾಜೂರು ರೈಲ್ವೇ ಟ್ರ್ಯಾಕ್ ಡಬ್ಲಿಂಗ್ ಲೈನ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ. ಆದರೆ ಒಂದು ಸ್ಟ್ರೆಚ್ಗೆ ಜನರಲ್ ಅವಾರ್ಡ್ ಮಾಡಬೇಕಿದ್ದು ರೂ. 5 ಕೋಟಿ ಠೇವಣಿ ಇರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕಾಗಿ ಎರಡು ಹಂತದಲ್ಲಿ ಒಟ್ಟು 1349.23 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಬೇಕಿದ್ದು ಇದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿಶೇಷ ಭೂಸ್ವಾಧೀನಾಧಿಕಾರಿ ಸರೋಜಾ ಹೇಳಿದಾಗ, ಸಚಿವರು ಇನ್ನು ನಾಲ್ಕು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿಸುವಂತೆ ತಿಳಿಸಿದರು.
ಸಚಿವರು ಮಾತನಾಡಿ, ರೈಲ್ವೇ ಸೇವೆಗೆ ಸಂಬಂಧಿಸಿದಂತೆ ನಮ್ಮ ಆದ್ಯತೆ ಸುರಕ್ಷತೆ, ಸ್ವಚ್ಚತೆ ಮತ್ತು sಸಮಯಪ್ರಜ್ಞೆ ಆಗಿದೆ. ಸಮಯಕ್ಕೆ ಕೂಡ ಹೆಚ್ಚಿನ ಒತ್ತು ನೀಡಲಾಗುವುದು. ರೈಲ್ವೆ ಸಾರ್ವಜನಿಕರ ಆಸ್ತಿಯಾಗಿದ್ದು ಸಾರ್ವಜನಿಕರು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.
ಸಂಸದರಾದ ಜಿ.ಎಂ.ಸಿದ್ದೇಶ್ವರ್ ಮಾತನಾಡಿ, ದಾವಣಗೆರೆಯ ಹೊಸ ರೇಲ್ವೇ ಸ್ಟೇಷನ್ನ ಪ್ಲಾಟ್ಫಾರಂಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಹಾಗೂ ಸ್ಟೇಷನ್ನ ಪ್ರವೇಶ ಮತ್ತು ನಿರ್ಗಮನಗಳಲ್ಲಿ ಎರಡು ಕಡೆ ಎಸ್ಕಲೇಟರ್ಗಳನ್ನು ಈ ಸಾಲಿನ ಡಿಸೆಂಬರ್ ಅಂತ್ಯದೊಳಗೆ ನಿರ್ಮಿಸಬೇಕು ಎಂದರು.
ಹರಿಹರ ರೈಲ್ವೇ ನಿಲ್ದಾಣದ ಉನ್ನತೀಕರಣ, ಹರಪನಹಳ್ಳಿ ಸ್ಟೇಷನ್ನಲ್ಲಿ ರಾತ್ರಿ ಮತ್ತು ಬೆಳಗಿನ ಜಾವ ಸ್ಟ್ರೀಟ್ ಲೈಟ್ಗಳ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯ ಆಗಬೇಕು. ಬಾತಿ-ಕರೂರ್ ರೈಲ್ವೇ ಕ್ರಾಸಿಂಗ್ ಬಳಿ ನೀರು ಸಂಗ್ರಹವಾಗುತ್ತಿದೆ. ಈ ಬಗ್ಗೆ ಇಂಜಿನಿಯರ್ಗಳು ಕ್ರಮ ಕೈಗೊಳ್ಳಬೇಕೆಂದರು
ಸಂಶೋಧನೆಗೆ ಸೂಚನೆ
ರೈಲ್ವೇ ಸಚಿವರು ಪ್ರತಿಕ್ರಿಯಿಸಿ, ರೈಲ್ವೇ ಅಂಡರ್ ಬ್ರಿಡ್ಜ್ಗಳಲ್ಲಿ ನೀರು ನಿಲ್ಲುವ ಸಮಸ್ಯೆ ಸಾಮಾನ್ಯವಾಗಿದ್ದು, ಈ ಸಮಸ್ಯೆ ಬಗೆಹರಿಸಲು ರೈಲ್ವೇ ಇಂಜಿನಿಯರ್ಗಳು ಸಂಶೋಧನೆ ನಡೆಸಬೇಕು. ಪಂಪ್ ಇಟ್ಟು ನೀರು ತೆಗೆಯುವುದು ಮುಖ್ಯವಲ್ಲ, ಬದಲಾಗಿ ಶಾಶ್ವತ ಪರಿಹಾರಕ್ಕಾಗಿ ಸಂಶೋಧನೆ ಕೈಗೊಳ್ಳುವಂತೆ ಅವರಿಗೆ ಸೂಚನೆ ನೀಡಿದರು.
ಸಂಸದರು, ವಾಸ್ಕೋ-ಯಶವಂತಪುರದ ಟ್ರೈನುಗಳು ಚಿಕ್ಕಜಾಜೂರಿನಲ್ಲಿ ನಿಲುಗಡೆ ಮಾಡಬೇಕು. ಎಲ್ಸಿ 174 ಆನಗೋಡು ಇಲ್ಲಿ ಫ್ಲೈಓವರ್ ಆಗಬೇಕು. ಮಂಡ್ಯ-ಹಡಗಲಿ ಹೈವೇ ಆಗಬೇಕು, ಜೊತೆಗೆ ಮಾಯಕೊಂಡದಲ್ಲಿ ಫ್ಲೈ ಓವರ್ ನಿರ್ಮಿಸಬೇಕು. ಭರಮಸಾಗರ-ಜಗಳೂರು ಏತ ನೀರಾವರಿ ಕಾಮಗಾರಿಗೆ ರೈಲ್ವೇಯವರು ಅನುಮತಿ ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಸಕರಾದ ಎಸ್.ಎ ರವೀಂದ್ರನಾಥ್, ಪ್ರೊ. ಲಿಂಗಣ್ಣ, ಎಸ್.ವಿ ರಾಮಚಂದ್ರಪ್ಪ, ಜಿಪಂ ಅಧ್ಯಕ್ಷೆ ದೀಪಾ ಜಗದೀಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ರೈಲ್ವೇ ಜಿಎಂ ಎ.ಕೆ ಸಿಂಗ್, ಮೈಸೂರ್ ರೈಲ್ವೇ ಡಿಆರ್ಎಂ ಅಪರ್ಣ ಗರಗ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಎಸಿ ಮಮತಾ ಹೊಸಗೌಡರ್, ದೂಡಾ ಆಯುಕ್ತ ಬಿ.ಟಿ ಕುಮಾರಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
ಸುದ್ದಿದಿನ,ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.
ಫಲಿತಾಂಶವನ್ನು ವೆಬ್ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ಗೆ ವಾಟ್ಸ್ಆ್ಯಪ್/ ಎಸ್ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.
ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.
ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.
ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.
ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.
ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.
ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.
ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ4 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ7 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ1 day agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ4 hours agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ4 hours agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

