ದಿನದ ಸುದ್ದಿ
ಕೋವಿಡ್ ಶವಗಳಿಗೆ ಮಿಡಿಯುವ ಕವಿ ಹೃದಯ..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/07/covid_Suddidina_75332.jpg&description=ಕೋವಿಡ್ ಶವಗಳಿಗೆ ಮಿಡಿಯುವ ಕವಿ ಹೃದಯ..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/07/covid_Suddidina_75332.jpg&description=ಕೋವಿಡ್ ಶವಗಳಿಗೆ ಮಿಡಿಯುವ ಕವಿ ಹೃದಯ..!', 'pinterestShare', 'width=750,height=350'); return false;" title="Pin This Post">
- ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರ
ಉತ್ತರಪ್ರದೇಶ ಲಕ್ನೋದ 45 ವರ್ಷ ಪ್ರಾಯದ ವರ್ಷಾ ವರ್ಮಾ ಒಬ್ಬ ಕವಯಿತ್ರಿ. ಆದರೆ, ಇವರ ಕವಿ ಹೃದಯ ಇತರರ ನೋವು ನಲಿವುಗಳಿಗೆ ಸ್ಪಂಧಿಸಿ ಕವನಗಳನ್ನು ಬರೆದು ಸುಮ್ಮನಾಗುವಂತಹ ಸಾಮಾನ್ಯ ಹೃದಯವಲ್ಲ! ಇವರು ದೀಪಕ್ ಮಹಾಜನ್ ಎಂಬ 60 ವರ್ಷ ಪ್ರಾಯದ ಸರ್ಕಾರಿ ನೌಕರ ಮತ್ತು ಮಹಮ್ಮದ್ ಅಝರ್ ಹುಸೇನ್ ಎಂಬ 26 ವರ್ಷದ ಒಬ್ಬ ಸಾಮಾಜಿಕ ಕಾರ್ಯಕರ್ತರ ಜೊತೆ ಸೇರಿ ಲಕ್ನೋ ನಗರದಲ್ಲಿ ಕೋವಿಡ್ ಸೋಂಕು ತಗಲಿ ಸಾಯುವ ಅನಾಥರಿಗೆ ಗೌರವಯುತವಾದ ಅಂತ್ಯ ಸಂಸ್ಕಾರವನ್ನು ನೀಡುತ್ತಿದ್ದಾರೆ.
ನಿರ್ಗತಿಕರು ಮಾತ್ರವಲ್ಲ, ಸಾಕಷ್ಟು ಬಂಧು ಬಳಗವಿರುವವರೂ ಸೋಂಕು ತಗಲಿ ಸತ್ತರೆ ಅನಾಥರಂತೆ ಚಿತಾಗಾರ ಸೇರುವುದು ಸಾಮಾನ್ಯವಾಗುತ್ತಿರುವ ಕೋವಿಡ್ ನ ಈ ಬಿಕ್ಕಟ್ಟಿನ ದಿನಗಳಲ್ಲಿ ವರ್ಷಾ ವರ್ಮಾ ಮತ್ತು ಅವರ ಸಂಗಡಿಗರ ಈ ಕಾರ್ಯ ಮನಕಲಕುವಂತಹದ್ದು. ಮಾರ್ಚಿನಿಂದ ಈವರೆಗೂ ಇವರು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಆನೇಕ ಕೋವಿಡ್ ಶವಗಳ ಅಂತ್ಯಕ್ರಿಯೇ ನಡೆಸಿದ್ದಾರೆ.
ವಾಸ್ತವದಲ್ಲಿ, ವರ್ಷಾ ವರ್ಮಾ ಮತ್ತು ಅವರ ಸಂಗಡಿಗರು ಎರಡೂವರೆ ವರ್ಷಗಳ ಹಿಂದಿನಿಂದಲೇ ಅನಾಥ ಶವಗಳ ಅಂತ್ಯ ಸರ್ಕಾರ ನಡೆಸುವ ಕೆಲಸವನ್ನು ಶುರು ಮಾಡಿದ್ದರು. ಈ ಕೆಲಸಕ್ಕೆಂದೇ ಇವರು 2017 ರಲ್ಲಿ ‘ದಿವ್ಯ ಸೇವಾ ಫೌಂಡೇಷನ್’ ಎಂಬ ಒಂದು ಸಾಮಾಜಿಕ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ.
ಸಾಮಾನ್ಯವಾಗಿ ಪೋಲಿಸರು ಅನಾಥ ಶವಗಳನ್ನು ಬಟ್ಟೆಯಲ್ಲಿ ಸುತ್ತಿ ತೆರೆದ ಗಾಡಿಗಳಲ್ಲಿ ಹಾಕಿ ಚಿತಾಗಾರಕ್ಕೆ ಕೊಂಡೊಯ್ಯುತ್ತಾರೆ. ಆದರೆ, ವರ್ಮಾ ಈ ಅನಾಥ ಶವಗಳನ್ನು ಗೌರವಯುತವಾದ ಚಟ್ಟದ ಮೇಲಿರಿಸಿ, ಚಿಕ್ಕದೊಂದು ಬಸ್ಸಿನೊಳಗಿಟ್ಟು ಸಕಲ ಮರ್ಯಾದೆಗಳ ಮೂಲಕ ಅವುಗಳ ಅಂತ್ಯ ಕ್ರಿಯೆ ನಡೆಸುತ್ತಾರೆ. ಹೀಗೆ ಈವರೆಗೆ ಮೂವರೂ ಸೇರಿ 800 ಕ್ಕೂ ಹೆಚ್ಚಿನ ಅನಾಥರ ಶವಗಳಿಗೆ ಗೌರವಯುತವಾದ ಮುಕ್ತಿ ನೀಡಿದ್ದಾರೆ.
ವರ್ಷಾ ವರ್ಮಾರ ಪತಿ ರಾಕೇಶ್ ವರ್ಮಾ ಉತ್ತರಪ್ರದೇಶ ಸರ್ಕಾರದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಒಬ್ಬ ಎಂಜಿನಿಯರ್. 14 ವರ್ಷದ ಮಗಳು ನಂದಿನಿ ವರ್ಮಾ. “ಈ ನತದೃಷ್ಟರು ಹೇಗೇಗೋ ಬದುಕಿ ತಮ್ಮ ಜೀವನ ಕಳೆದಿರುತ್ತಾರೆ.ಆದರೆ, ಅವರ ಬದುಕಿನ ಪಯಣದ ಕೊನೆಯನ್ನಾದರೂ ತುಸು ಗೌರಯುತವಾಗಿಸುವುದಕ್ಕೆ ನೆರವಾಗುವ ಮೂಲಕ ನನ್ನ ಮನಸ್ಸಿಗೇನೋ ಒಂದು ರೀತಿಯ ಸಮಾಧಾನ ಸಿಗುತ್ತದೆ. ಈ ಕೆಲಸದಿಂದ ನನಗೆ ಸಿಗುವ ಪ್ರತಿಫಲ ಇದೊಂದೇ” ಎನ್ನುತ್ತಾರೆ ವರ್ಷಾ. ತನ್ನ ತಾಯಿಯ ಕೆಲಸಗಳನ್ನು ನೋಡಿ ಬೆಳೆದ ನಂದಿನಿಯೂ ಮುಂದೆ ತಾನೂ ತಾಯಿಯಂತೆ ಸಾಮಾಜಿಕ ಕಾರ್ಯಕರ್ತೆಯಾಗುತ್ತೇನೆ ಅನ್ನುತ್ತಾಳೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ7 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ6 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

