Connect with us

ದಿನದ ಸುದ್ದಿ

‘ಸುದ್ದಿ ಸಂವಿಧಾನ’ ಕೃತಿ ಬಿಡುಗಡೆ ವೆಬಿನಾರ್ ಮಾಧ್ಯಮಕ್ಕೆ ಹೊಸ ಆಯಾಮ ಅಗತ್ಯ: ವೀರೇಂದ್ರ ಪಿ.ಎಂ

Published

on

ಸುದ್ದಿದಿನ,ಉಜಿರೆ: ಆಧುನಿಕ ಸುದ್ದಿಮಾಧ್ಯಮ ವಲಯವು ವಾಚಾಳಿತನದ ಶಾಪಕ್ಕೀಡಾಗಿದ್ದು, ಇದರ ನಕಾರಾತ್ಮಕ ಪರಿಣಾಮಗಳನ್ನು ತಡೆದು ಹೊಸ ಆಯಾಮ ನೀಡುವ ವೃತ್ತಿಪರ ಬದ್ಧತೆಯ ಅನಿವಾರ್ಯತೆ ಇದೆ ಎಂದು ಪತ್ರಕರ್ತ, ತುಂಗಭದ್ರಾ ನ್ಯೂಸ್ ಪೋರ್ಟಲ್ ಸಂಪಾದಕ ವೀರೇಂದ್ರ ಪಿ.ಎಂ ಅಭಿಪ್ರಾಯಪಟ್ಟರು.

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ಆಯೋಜಿತವಾದ ಸಹಾಯಕ ಪ್ರಾಧ್ಯಾಪಕ ಡಾ.ಎನ್.ಕೆ.ಪದ್ಮನಾಭ ಅವರ ‘ಸುದ್ದಿ ಸಂವಿಧಾನ’ ಕೃತಿ ಬಿಡುಗಡೆ ವೆಬಿನಾರ್‌ನಲ್ಲಿ ಕೃತಿಯ ಕುರಿತು ಅವರು ಮಾತನಾಡಿದರು.

ಯಾವಾಗ ಒಬ್ಬ ಪತ್ರಕರ್ತ ವಾಚಾಳಿತನಕ್ಕೆ ಬೀಳುತ್ತಾನೋ ಆಗ ಮಾಧ್ಯಮ ನಿರೀಕ್ಷಿಸುವ ವೃತ್ತಿಬದ್ಧತೆಯಿಂದನುಣುಚಿಕೊಳ್ಳಲಾರಂಭಿಸುತ್ತಾನೆ. ಮಾತಿನ ಮಂಟಪ ಕಟ್ಟುವುದರಿಂದ ಯಾವುದೇ ಪ್ರಯೋಜನವಿಲ್ಲ. ಸುದ್ದಿಲೋಕಕ್ಕೆ ಬೇಕಾದದ್ದು ವಾಚಾಳಿತನವಲ್ಲ. ಸುದ್ದಿಮಾಧ್ಯಮವು ಸಂಯಮಪೂರ್ಣ ಚಿಂತನೆ ಮತ್ತು ಅದಕ್ಕೆ ಅನುಗುಣವಾದ ಕಾರ್ಯನಿರ್ವಹಣೆಯನ್ನು ವರದಿಗಾರರು, ಸಂಪಾದಕರಿಂದ ನಿರೀಕ್ಷಿಸುತ್ತದೆ ಎಂದು ಹೇಳಿದರು.

ವರದಿಗಾರನಾದವನು ಕಣ್ಣು ಮತ್ತು ಕಿವಿಯನ್ನು ಸದಾ ಕಾಲ ಜಾಗೃತ ಸ್ಥಿತಿಯಲ್ಲಿಡಬೇಕು. ಆಗ ಮಾತ್ರ ವಿವಿಧ ವಿಚಾರಗಳನ್ನು ಭಿನ್ನವಾಗಿ ಗ್ರಹಿಸಿಕೊಳ್ಳಲು ಸಾಧ್ಯವಾಗುತ್ತದೆ. ಸುದ್ದಿಗೆ ಕಲೆ ಮತ್ತು ವಿಜ್ಞಾನದ ಆಯಾಮವೂ ಇದೆ ಎಂಬುದನ್ನು ಗ್ರಹಿಸಿಕೊಂಡ ವರದಿಗಾರರು ಸುದ್ದಿ ಮಾಧ್ಯಮದಲ್ಲಿ ಭಿನ್ನವಾಗಿ ಗುರುತಿಸಿಕೊಳ್ಳಲು ಸಾಧ್ಯ.

ಈ ಬಗೆಯ ಗ್ರಹಿಕೆಯು ವೃತ್ತಿಪರ ಯಶಸ್ಸನ್ನು ಕಂಡುಕೊಳ್ಳುವುದಕ್ಕೆ ಪೂರಕವಾಗುವುದಲ್ಲದೇ ಬರಹ-ಚಿಂತನೆಯ ಮೂಲಕ ಸಾಮಾಜಿಕ ಕೊಡುಗೆಯನ್ನೂ ನೀಡಬಹುದು. ಈ ಅಂಶವನ್ನು ಡಾ.ಎನ್.ಕೆ.ಪದ್ಮನಾಭ ಅವರ ‘ಸುದ್ದಿ ಸಂವಿಧಾನ’ ಕೃತಿಯು ಆಪ್ತವಾಗಿ ಕಟ್ಟಿಕೊಟ್ಟಿದೆ ಎಂದರು.

ವಿವಿಧ ಬಗೆಯ ಸಮಸ್ಯೆಗಳನ್ನು ಗ್ರಹಿಸುವ ವಿಧಾನ ಸುದ್ದಿ ಬರವಣಿಗೆಯಲ್ಲಿ ಬಹಳ ಮುಖ್ಯವಾದುದು. ಈ ಗ್ರಹಿಕೆಯ ನೆರವಿನೊಂದಿಗೇ ಜನರಿಗೆ ಮಾಹಿತಿ ನೀಡಿ ಅವರೊಳಗೆ ಜಾಗೃತಿ ಮೂಡಿಸಬಹುದಾದ ಸುದ್ದಿಸಂಸ್ಕೃತಿಯನ್ನು ಹುಟ್ಟುಹಾಕಬಹುದು. ಈ ಆಶಾವಾದದೊಂದಿಗೇ ಎಲ್ಲ ಸುದ್ದಿ ಮಾಧ್ಯಮ ವೃತ್ತಿಪರರು ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ನುಡಿದರು.

ಸುದ್ದಿ ಸಂವಿಧಾನ’ ಕೃತಿಯನ್ನು ಬಿಡುಗಡೆಗೊಳಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಭಾಸ್ಕರ ಹೆಗಡೆ ಮಾತನಾಡಿದರು. ಬಹುಮಾಧ್ಯಮಗಳು ತರಹೇವಾರಿ ಮಾಹಿತಿಯನ್ನು ನೀಡುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಯಾವುದು ನಿಜವಾದ ಸುದ್ದಿ ಎಂಬುದನ್ನು ಮನಗಾಣಿಸುವಲ್ಲಿ ಎನ್.ಕೆ.ಪದ್ಮನಾಭ ಅವರ ಕೃತಿ ಯಶಸ್ವಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೃತಿಯ ಲೇಖಕ ಡಾ.ಎನ್.ಕೆ.ಪದ್ಮನಾಭ ಪರಂಪರೆಯ ಚಲನಶೀಲತೆಯನ್ನು ಮುನ್ನಡೆಸುವ ಪಾತ್ರ ಸುದ್ದಿಯಿಂದ ನಿರ್ವಹಿಸಲ್ಪಡಬೇಕಾದ ಅಗತ್ಯವಿದೆ ಎಂದರು. ಸುದ್ದಿಮಾಧ್ಯಮವನ್ನು ಪ್ರಜಾಪ್ರಭುತ್ವದ ಕಾವಲುನಾಯಿ ಎಂದು ಹೇಳಲಾಗುತ್ತದೆ. ಆದರೆ, ಈ ಕಾವಲು ನಾಯಿಯ ಸ್ಥಾನವನ್ನು ಧನದಾಹದ ಸಂಕುಚಿತತೆಯನ್ನೇ ಗುಣಲಕ್ಷಣವನ್ನಾಗಿಸಿಕೊಂಡ ರಾಕ್ಷಸಪ್ರಾಣಿ ಆಕ್ರಮಿಸಿಕೊಂಡಿದೆ. ಇದರ ಹಿಡಿತದಿಂದ ಈ ಸ್ಥಾನವನ್ನು ವಿಮುಕ್ತಗೊಳಿಸಿ ಕಾವಲುನಾಯಿಯ ಪಾತ್ರ ನಿರಂತರವಾಗಬೇಕಿದೆ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಕೃತಿಯ ಮುಖಪುಟ ರಚಿಸಿದ ಸುಷ್ಮಾ ಉಪ್ಪಿನ್ ಇಸಳೂರು, ಗ್ರಾಫಿಕ್ ಸ್ಪರ್ಶ ನೀಡಿದ ಕೃಷ್ಣಪ್ರಶಾಂತ್, ಸಹಾಯಕ ಪ್ರಾಧ್ಯಾಪಕರಾದ ಸುನೀಲ್ ಹೆಗ್ಡೆ, ಡಾ.ಹಂಪೀಶ್, ಗೀತಾ ವಸಂತ್ ಇಜಿಮಾನ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending