Connect with us

ದಿನದ ಸುದ್ದಿ

ಆಸ್ಪತ್ರೆಯಲ್ಲಿ ಬೆಡ್‍ ಇಲ್ಲ ಎನ್ನುವ ಪ್ರಶ್ನೆಯೇ ಇಲ್ಲ : ಸಚಿವ ಭೈರತಿ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: ರೋಗಿಗಳಿಗೆ ಬೆಡ್ ಇಲ್ಲ ಎಂಬುದರ ಬಗ್ಗೆ ವರದಿ ಬಂದಿವೆ. ಬೆಡ್ ಇಲ್ಲ ಎನ್ನುವ ಪ್ರಶ್ನೆಯೇ ಇಲ್ಲ. ಇದು ಯಾರೋ ಹುಟ್ಟ ಹಾಕಿದ್ದಾರೆ. ಸಾಕಷ್ಟು ವ್ಯವಸ್ಥಿತವಾಗಿ ಸನ್ನದ್ದರಾಗಿದ್ದೇವೆ. ಯಾವುದೇ ತೊಂದರೆ ಇಲ್ಲ ಎಂದ ಅವರು, ಬೇರೆ ಆಸ್ಪತ್ರೆಗಳಿಗೆ ರೆಫರ್ ಮಾಡಿದ ಪ್ರಕರಣಗಳಲ್ಲಿ ಕೂಡ ಕೊರೊನಾ ರೋಗಿಗಳಿಗೆ ಸರ್ಕಾರವೇ ಹಣ ಭರಿಸುತ್ತದೆ ಈ ಬಗ್ಗೆ ಯಾವುದೇ ಅನುಮಾನ ಬೇಡ. ಎಬಿಆರ್‍ಕೆ ಆರೋಗ್ಯ ಯೋಜನೆಯಡಿ ಹಣ ಸಂದಾಯ ಮಾಡಲಾಗುತ್ತದೆ. ಯಾವುದೇ ಫೀ ನೀಡುವ ಅವಶ್ಯಕತೆ ಇಲ್ಲ ಎಂದು ಸಚಿವ ಭೈರತಿ ಬಸವರಾಜ್

ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಉಸ್ತುವಾರಿ ಸಚಿವನಾಗಿ ಬಂದಂತಹ ಸಂದರ್ಭದಲ್ಲಿ ಅನೇಕ ಮನವವಿಗಳನ್ನು ರೈತರು ಹಾಗೂ ಕಾರ್ಮಿಕರು ನೀಡಿದ್ದರು. ಆ ವೇಳೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ದಾವಣಗೆರೆ ವಿಶೇಷವಾಗಿ ಮೆಕ್ಕೆಜೋಳ ಬೆಳೆಯುವಂತಹ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ರೂ. 5 ಸಾವಿರದಂತೆ ಸುಮಾರು ರೂ. 500 ಕೋಟಿ ಹಣ ಪ್ರೋತ್ಸಾಹ ಧನವನ್ನು ರೈತರಿಗೆ ನೀಡಲಾಗಿದೆ.

ಕೊರೊನಾ ಸಂದರ್ಭದಲ್ಲಿ ಲಾಕ್‍ಡೌನ್ ಹಿನ್ನೆಲೆಯಿಂದಾಗಿ ಹೂ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಆ ವೇಳೆ ಒಂದು ಹೆಕ್ಟೇರ್‍ಗೆ ರೂ. 25 ಸಾವಿರ ಘೋಷಣೆ ಮಾಡಲಾಗಿದೆ. ಜೊತೆಗೆ ಆಟೋ ಟ್ಯಾಕ್ಸಿ ಚಾಲಕರು, ಕಾರ್ಮಿಕರು, ನೇಕಾರರು, ಸವಿತಾ ಸಮಾಜ, ನೇಕಾರರು ಸೇರಿದಂತೆ ಎಲ್ಲ ಸಮುದಾಯಗಳಿಗೆ ಆರ್ಥಿಕವಾಗಿ ಸಹಾಯ ಮಾಡುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ ಎಂದು ಸ್ಮರಿಸಿದರು.

ಇಡೀ ದೇಶದಲ್ಲಿ ನಮ್ಮ ರಾಜ್ಯ ರೂ. 2 ಸಾವಿರ ಕೋಟಿ ಹಣವನ್ನು ಬಡವರಿಗೆ ಪ್ರೋತ್ಸಾಹಧನವಾಗಿ ಕೊಟ್ಟು, ಅವರೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನು ನೀಡಲಾಗಿದೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ರೂ.22 ಕೋಟಿ ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ನಗರದಲ್ಲಿ 3 ಕೋವಿಡ್ ಟೆಸ್ಟಿಂಗ್ ಲ್ಯಾಬ್ ಮಾಡಲಾಗಿದೆ. ಚಿಗಟೇರಿ ಆಸ್ಪತ್ರೆಯನ್ನು ಉನ್ನತ ದರ್ಜೆಗೇರಿಸಲು ಮನವಿ ಮಾಡಿದ್ದೇನೆ. ತಾಲ್ಲೂಕು ಹಂತದಲ್ಲೂ ಪ್ರವಾಸ ಮಾಡಿ ಅವರ ಮನವಿಗೆ ಸ್ಪಂದಿಸಿದ್ದೇನೆ. ಅದೇ ರೀತಿ ಮುಂದೆಯೂ ಸಹ ಕಾರ್ಯ ನಿರ್ವಹಿಸುವೆ ಎಂದು ಭರವಸೆ ನೀಡಿದರು.

ಪ್ರಗತಿಪರ ನಾಯಕರಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಒಂದು ವರ್ಷ ಪೂರೈಸಿದೆ. ಕೊರೊನಾ ಹಿನ್ನೆಲೆಯ ಈ ಸಂದರ್ಭದಲ್ಲಿ ಸರ್ಕಾರದ ಆದೇಶ ಹಾಗೂ ಕೇಂದ್ರ ಸರ್ಕಾರದ ನಿಯಮದಂತೆ ಕಾರ್ಯಕ್ರಮ ನೆರವೇರಿಸಲಾಗಿದೆ ಎಂದರು.

ರಾಜ್ಯದ ಜನತೆಯನ್ನು ಉದ್ದೇಶಿಸಿ ಮುಖ್ಯಮಂತ್ರಿಗಳು ಅನೇಕ ತೀರ್ಮಾನ ಹಾಗೂ ದೃಢ ಸಂಕಲ್ಪಗಳನ್ನು ತಿಳಿಸಿದ್ದಾರೆ. ಕಳೆದ ಒಂದು ವರ್ಷದಿಂದ ಆದಂತಹ ಪರಿಸ್ಥಿತಿಗಳನ್ನು ಅವಲೋಕನ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಅನೇಕ ಸಂಕಷ್ಟಗಳು ಎದುರಾದವು. ಭೀಕರ ಬರಗಾಲ, ಅದಾದ ಮರು ಕ್ಷಣವೇ ಮಳೆಯ ರುದ್ರನರ್ತನದಿಂದ ಅನೇಕ ಮನೆ, ಬೆಳೆ ನಷ್ಟ ಜೊತೆಗೆ ಸಾವು ನೋವು ಎಲ್ಲವೂ ಕೂಡ ಸಂಭವಿಸಿತು.

ಆಗ ಸಚಿವ ಸಂಪುಟ ಇಲ್ಲದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಬ್ಬರೇ ಬಹಳ ಸಮರ್ಥವಾಗಿ ನಿಭಾಯಿಸಿದ್ದಾರೆ. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡುವ ಹಾಗೂ ಬೆಳೆ ಹಾನಿ ಆದವರಿಗೆ ಬೆಳೆ ಪರಿಹಾರ ಒದಗಿಸುವ ಕೆಲಸ ಮಾಡಿದ್ದಾರೆ. ಇದಾದ ಬಳಿಕ ಕೊರೊನಾ ಹೆಮ್ಮಾರಿ ಕಾಯಿಲೆ ಅವರಿಸಿತು. ಈ ವೇಳೆಯೂ ಕೂಡ ಧೃತಿಗೆಡದೆ ಕೊರೊನಾ ಮುಕ್ತಿಗೆ ಅನೇಕ ಕಾರ್ಯಕ್ರಮ ಹಮ್ಮಿಕೊಂಡು, ಸಾಕಷ್ಟು ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಅಭಿವೃದ್ಧಿ ಬಗ್ಗೆ ಅನೇಕ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಯ ನಿರೀಕ್ಷೆಗಳನ್ನು ಹುಸಿ ಮಾಡುವುದಿಲ್ಲ. ಅವರ ಋಣ ತೀರಿಸುವ ಕೆಲಸ ನನ್ನ ಮೇಲಿದೆ. ಖಂಡಿತವಾಗಿ ಇನ್ನು ಮೂರು ವರ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಕೊರೊನಾ ಬಾರದಿದ್ದರೆ ರಾಜ್ಯ ಅಭಿವೃದ್ಧಿ ಪಥದತ್ತ ಸಾಗುತಿತ್ತು. ಕೊರೊನಾ ಬಂದು ಆರ್ಥಿಕ ಸಮಸ್ಯೆ ಎದುರಿಸುವ ಕೆಲಸವಾಗಿದೆ. ರಾಜ್ಯದಲ್ಲಿ ಇನ್ನೂ ಅನೇಕ ಅಭಿವೃದ್ದಿ ಕಾರ್ಯಗಳನ್ನು ಮಾಡಬೇಕಾಗಿದೆ. ರೈತರಿಗೆ ಬೇಕಾದಂತಹ ಅನೇಕ ಕಾರ್ಯಕ್ರಮ, ಯಾವೊಬ್ಬ ಬಡವರು ಇನ್ನು ಮೂರು ವರ್ಷದಲ್ಲಿ ರಾಜ್ಯದಲ್ಲಿ ಮನೆ ಇಲ್ಲದೆ ಇರಬಾರದು ಎಂಬ ದೃಢ ಸಂಕಲ್ಪವನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಇದು ನಿಜವಾಗಲೂ ಹೆಮ್ಮೆ ತರುವಂತಹ ವಿಷಯವಾಗಿದೆ. ಅನೇಕ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಗಳು ಒಂದು ವರ್ಷದಲ್ಲಿ ಮಾಡಿದ್ದಾರೆ. ಇನ್ನೂ ಮೂರು ವರ್ಷ ಅವಧಿಯಿದೆ. ಅಷ್ಟರಲ್ಲಿ ಉಳಿದ ಕಾರ್ಯಕ್ರಮ ಹಾಗೂ ಅಭಿವೃದ್ಧಿ ಏನಾಗಬೇಕು ಅದರ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ‌ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆ‌ಎಸ್‌ಟಿ‌ಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending