Connect with us

ದಿನದ ಸುದ್ದಿ

ನಾಳೆ ಸೂಪರ್ ಸ್ಪೇಷಾಲಿಟಿ ಟ್ರಾಮಾ ಕೇರ್‍ಗೆ ಇ-ಲೋಕಾರ್ಪಣೆ : ಸೂಪರ್ ಸ್ಪೇಷಾಲಿಟಿ ಟ್ರಾಮಾಕೇರ್ ಕೇಂದ್ರದ ಬಗೆಗಿಷ್ಟು

Published

on

ಸುದ್ದಿದಿನ,ಬಳ್ಳಾರಿ :ಪ್ರಧಾನಮಂತ್ರಿ ಸ್ವಸ್ಥ್ಯ ಸುರಕ್ಷಾ ಯೋಜನೆ ಅಡಿ ರೂ.150ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಪರ್ ಸ್ಪೇಷಾಲಿಟಿ ಟ್ರಾಮಾ ಕೇರ್(ತುರ್ತು ಚಿಕಿತ್ಸಾ ಘಟಕ)ಗೆ ಇ-ಲೋಕಾರ್ಪಣೆ ಆ.31ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ ಎಂದು ವಿಮ್ಸ್ ನಿರ್ದೇಶಕ ಡಾ.ದೇವಾನಂದ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಸಚಿವ ಡಾ.ಹರ್ಷವರ್ಧನ್ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆ.31ರಂದು ಬೆಳಗ್ಗೆ 11.30ಕ್ಕೆ ಎಲೆಕ್ಟ್ರಾನಿಕ್ ಉದ್ಘಾಟನೆ(ಇ-ಉದ್ಘಾಟನೆ)ಮಾಡಲಿದ್ದಾರೆ. ಕೇಂದ್ರ ಸಚಿವರಿಗೆ ಆರೋಗ್ಯ ಖಾತೆಯ ಕೇಂದ್ರ ರಾಜ್ಯ ಸಚಿವ ಅಶ್ವೀನಿಕುಮಾರ್ ಚೌಬೆ, ಸಿಎಂ ಯಡಿಯೂರಪ್ಪ ಅವರೊಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಉಪಸ್ಥಿತರಿರಲಿದ್ದಾರೆ.

ಬಳ್ಳಾರಿಯ ಟ್ರಾಮಾಕೇರ್ ಕೇಂದ್ರದ ಬಳಿ ನಡೆಯಲಿರುವ ವರ್ಚುವಲ್ ಕಾರ್ಯಕ್ರಮದಲ್ಲಿ ಅರಣ್ಯ,ಪರಿಸರ,ಜೀವವೈವಿಧ್ಯತೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಆನಂದಸಿಂಗ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಉಪಸ್ಥಿತರಿರಲಿದ್ದಾರೆ.ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಬಳ್ಳಾರಿ ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ,ಸಂಸದರಾದ ವೈ.ದೇವೇಂದ್ರಪ್ಪ,ಕರಡಿ ಸಂಗಣ್ಣ, ಸೈಯದ್ ನಾಸೀರ್ ಹುಸೇನ್, ಶಾಸಕರಾದಇ.ತುಕಾರಾಂ,ಪಿ.ಟಿ.ಪರಮೇಶ್ವರನಾಯಕ್, ಎನ್.ವೈ.ಗೋಪಾಲಕೃಷ್ಣ, ಎಲ್.ಬಿ.ಪಿ.ಭೀಮಾನಾಯಕ್, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿ.ಕರುಣಾಕರರೆಡ್ಡಿ, ಜಿ.ಸೋಮಶೇಖರ ರೆಡ್ಡಿ, ಸೋಮಲಿಂಗಪ್ಪ, ಜೆ.ಎನ್.ಗಣೇಶ, ಎಸ್.ವಿ.ರಾಮಚಂದ್ರ, ಚಂದ್ರಶೇಖರ ಪಾಟೀಲ್, ತಾಪಂ ಅಧ್ಯಕ್ಷೆ ಎಸ್.ಆರ್.ಲೀಲಾವತಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಕೇಂದ್ರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಸುನೀಲ್ ಶರ್ಮಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಟಿ.ಕೆ.ಅನಿಲಕುಮಾರ್, ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ಆರ್.ನಂದಿನಿ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಪಿ.ಜಿ.ಗಿರೀಶ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

ಸೂಪರ್ ಸ್ಪೇಷಾಲಿಟಿ ಟ್ರಾಮಾಕೇರ್ ಕೇಂದ್ರದ ಬಗೆಗಿಷ್ಟು

ವಿಮ್ಸ್ ಸಂಸ್ಥೆಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗಾಗಿ ಬರುವಂತಹ ರೋಗಿಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಮತ್ತು ಇತರೆ ಸ್ಥಳಗಳಿಗೆ ಕಳುಹಿಸಲಾಗುತ್ತಿತ್ತು, ಇದರಿಂದ ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿರುವುದನ್ನು ಗಮನಿಸಿದ ಸರ್ಕಾರವು ಈ ನಿಟ್ಟಿನಲ್ಲಿ ವಿಮ್ಸ್ ಸಂಸ್ಥೆಯನ್ನು ಏಮ್ಸ್ ಮಾದರಿಯನ್ನಾಗಿ ಪರಿವರ್ತಿಸಲು ಉನ್ನತೀಕರಣಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

ಈ ಪ್ರಸ್ತಾವನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಸ್ಪಂದಿಸಿ ವಿಮ್ಸ್ ಸಂಸ್ಥೆಯಲ್ಲಿ ಪ್ರಧಾನಮಂತ್ರಿ ಸ್ವಸ್ಥ್ಯ ಸುರಕ್ಷಾ-3 ಯೋಜನೆ ಅಡಿಯಲ್ಲಿ ಟ್ರಾಮಾ ಕೇರ್ ಕೇಂದ್ರ (ತುರ್ತು ಚಿಕಿತ್ಸಾ ಘಟಕವನ್ನು) ಪ್ರಾರಂಭಿಸಲು ಮತ್ತು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ಅವಶ್ಯಕವಿರುವ ಉಪಕರಣಗಳನ್ನು ಅಳವಡಿಸಲು ಅನುಮೋದನೆ ನೀಡಿತ್ತು.

ಅದರಂತೆ ವಿಮ್ಸ್ ಅಧೀನದಲ್ಲಿ ಪಿಎಂಎಸ್‍ಎಸ್‍ವೈ-3 ಯೋಜನೆ ಅಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಯೋಗದಲ್ಲಿ ರೂ.150ಕೋಟಿಗಳ ವೆಚ್ಚದಲ್ಲಿ ಸೂಪರ್ ಸ್ಪೇಷಾಲಿಟಿ ಟ್ರಾಮ ಕೇರ್ ಕೇಂದ್ರ ಕಟ್ಟಡ ಮತ್ತು ಹೈಟೆಕ್ ವೈದ್ಯಕೀಯ ಉಪಕರಣಗಳು ಒಳಗೊಂಡ ಯೋಜನೆ ರೂಪಿಸಲಾಗಿರುತ್ತದೆ.

ಕೇಂದ್ರ ಸರ್ಕಾರದ ವತಿಯಿಂದ ರೂ.120ಕೋಟಿಗಳು ಮತ್ತು ರಾಜ್ಯ ಸರ್ಕಾರದ ವತಿಯಿಂದ ರೂ.30 ಕೋಟಿಗಳು(80:20 ಅನುಪಾತದಲ್ಲಿ) ಟ್ರಾಮಾ ಕೇರ್ ಸೆಂಟರ್‍ನ ಕಟ್ಟಡ ಕಾಮಗಾರಿ, ಉಪಕರಣ ಮತ್ತು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಉಪಕರಣಗಳನ್ನು ಒದಗಿಸಲು ಹೈಟ್ಸ್ ಇವರಿಗೆ ವಹಿಸಲಾಗಿರುತ್ತದೆ. ಕಟ್ಟಡ ಕಾಮಗಾರಿಗೆ ರೂ.65ಕೋಟಿಗಳು ಮತ್ತು ಉಪಕರಣಗಳಿಗೆ ರೂ.85ಕೋಟಿಗಳು(ಟ್ರಾಮಾ ಕೇರ್ ಮತ್ತು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉಪಕರಣಗಳು ಒಳಗೊಂಡಿರುತ್ತವೆ)
ಟ್ರಾಮಾ ಕೇರ್ ಸೆಂಟರ್ ಕಟ್ಟಡವು 49 ಸಾಮಾನ್ಯ ಹಾಸಿಗೆ, 72 ಐಸಿಯು ಹಾಸಿಗೆ ಮತ್ತು ತುರ್ತು ಚಿಕಿತ್ಸ ಘಟಕದಲ್ಲಿ 79 ಹಾಸಿಗೆಗಳು ಒಟ್ಟಾರೆ 200 ಹಾಸಿಗೆಗಳ ಸಾಮಥ್ರ್ಯವನ್ನು ಹೊಂದಿದೆ.

ಇದರ ಜೊತೆಗೆನ್ಯೂರೋ ಸರ್ಜರಿ ವಿಭಾಗ(ಅಪಘಾತದಿಂದ ತಲೆಯ ಮೇಲೆ ಪೆಟ್ಟು, ಮೆದುಳು ಹಾಗೂ ನರಹುರಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ), ಪ್ಲಾಸ್ಟಿಕ್ ಸರ್ಜರಿ ವಿಭಾಗ(ಸುಟ್ಟ ಗಾಯಗಳು, ಮರು ನಿರ್ಮಾಣದ ಶಸ್ತ್ರ, ಸೂಕ್ಷ್ಮ ರಕ್ತನಾಳಗಳ ಶಸ್ತ್ರಚಿಕಿತ್ಸೆ ಹಾಗೂ ಸೌಂದರ್ಯ ವರ್ಧಕ ಶಸ್ತ್ರಚಿಕಿತ್ಸೆಗಳು),ಆರ್ಥೋಪಿಡಿಕ್ಸ್ ವಿಭಾಗ(ಮೂಳೆ ಮತ್ತು ಸಂಧಿಗಳು ಸಮಸ್ಯೆಗಳು),ರೇಡಿಯೋಲಜಿ ವಿಭಾಗ(ದೇಹದ ವಿವಿಧ ಭಾಗಗಳ ಸಿ.ಟಿಸ್ಕ್ಯಾನ್ ಮತ್ತು ರೋಗ ನಿರ್ಧಾರ ಮಾಡುವ ವ್ಯವಸ್ಥೆ),ಅನಸ್ಥೇಷಿಯ ವಿಭಾಗ(ವಿಶೇಷ ಶಸ್ತ್ರಚಿಕಿತ್ಸೆಗಳಿಗೆ ಅರವಳಿಕೆ ಮದ್ದು ನೀಡುವ ವಿಭಾಗ)ಗಳನ್ನು ಹೊಂದಿರುವುದು ವಿಶೇಷ.

ವಿಮ್ಸ್ ಬಗೆಗೊಂದಿಷ್ಟು

ವಿಮ್ಸ್ ಬಳ್ಳಾರಿಯ ದಂಡು ಪ್ರದೇಶದಲ್ಲಿರುವ ಅಲ್ಲಿಪುರದಲ್ಲಿದ್ದು, 173 ಎಕರೆ ವಿಸ್ತೀರ್ಣ ಹೊಂದಿದೆ. ಈ ಹಿಂದೆ ಕಾರಾಗೃಹ ಕಟ್ಟಡವಾಗಿತ್ತು;1958ರಲ್ಲಿ ಕಾರಗೃಹವನ್ನು ಮುಚ್ಚಲಾಗಿಯಿತು. ಈ ಪ್ರದೇಶವನ್ನು ಅಂದಿನ ಸರ್ಕಾರವು ವಿಮ್ಸ್ ಸ್ಥಾಪಿಸಲು 1961ರಲ್ಲಿ ಹಸ್ತಾಂತರಿಸಿರುತ್ತದೆ. 1962 ರಲ್ಲಿ 100 ವಿದ್ಯಾರ್ಥಿಗಳ ಸಾಮಥ್ರ್ಯವನ್ನು ಹೊಂದಿದ್ದು, ಇದರ ಅಧೀನದಲ್ಲಿ ವಿದ್ಯಾರ್ಥಿಗಳ ಬೋಧನೆಗಾಗಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ಕಟ್ಟಡವು ಮೊದಲನೆ ಹಂತ ಮತ್ತು ಎರಡನೇ ಹಂತದ ಕಟ್ಟಡವು 1977 & 1981-82 ರಲ್ಲಿ ನಿರ್ಮಾಣ ಮಾಡಲಾಗಿರುತ್ತದೆ. ಸದರಿ ಆಸ್ಪತ್ರೆಯು 512 ಹಾಸಿಗೆಗಳಿಗೆ ಮಂಜೂರಾಗಿರುತ್ತದೆ.

ಬಳ್ಳಾರಿ ವೈದ್ಯಕೀಯ ಕಾಲೇಜನ್ನು 1994ನೇ ಸಾಲಿನಲ್ಲಿ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸ್ವಾಯತ್ತ ಸಂಸ್ಥೆಯನ್ನಾಗಿ ಪರಿವರ್ತಿಸಲಾಗಿರುತ್ತದೆ. ಸರ್ಕಾರವು ಸದರಿ ಸಂಸ್ಥೆಯಲ್ಲಿ ಎಂ.ಬಿ.ಬಿ.ಎಸ್ ಪ್ರವೇಶ ಮಿತಿಯನ್ನು 100 ರಿಂದ 150ಕ್ಕೆ ಹೆಚ್ಚಿಸಲು ಹಾಗೂ 2010ನೇ ಸಾಲಿನಲ್ಲಿ 1017 ಹಾಸಿಗೆಗಳ ಸಾಮಥ್ರ್ಯಕ್ಕೆ ಮಂಜೂರಾತಿಯನ್ನು ನೀಡಲಾಗಿರುತ್ತದೆ.

ಈ ಆಸ್ಪತ್ರೆಗೆ ಬಳ್ಳಾರಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಮತ್ತು ನೆರೆ ರಾಜ್ಯವಾದ ಆಂಧ್ರ ಪ್ರದೇಶದ ಹಲವು ಊರುಗಳಿಗೆ ಅತ್ಯಂತ ಪ್ರಮುಖ ಆಸ್ಪತ್ರೆಯಾಗಿರುವುದರಿಂದ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಚಿಕಿತ್ಸೆಗಾಗಿ ಸಾರ್ವಜನಿಕರು ಮತ್ತು ರೋಗಿಗಳು ಬರುತ್ತಿರುತ್ತಾರೆ. ವಿಮ್ಸ್ ಆಸ್ಪತ್ರೆಯು ಬಳ್ಳಾರಿ ಜಿಲ್ಲೆ ಮತ್ತು ನೆರೆಯ ರಾಜ್ಯ ಆಂಧ್ರಪ್ರದೇಶವನ್ನು ಹಲವು ಪ್ರದೇಶಗಳಿಗೆ ಹೊಂದಿಕೊಂಡಿದ್ದು ಈ ಪ್ರದೇಶದಲ್ಲಿ ಬಳ್ಳಾರಿ ಜಿಲ್ಲೆಗೆ ಇರುವ ಏಕೈಕ ಆಸ್ಪತ್ರೆಯಾಗಿದ್ದು, ಇಲ್ಲಿ ಪ್ರಾಥಮಿಕ ಚಿಕಿತ್ಸೆ ಆರೈಕೆ ಮತ್ತು ಸ್ಪೇಷಾಲಿಟಿ ಮತ್ತು ಸೂಪರ್ ಸ್ಪೇಷಾಲಿಟಿ ಚಿಕಿತ್ಸಾ ಸೇವೆಗಳನ್ನು ಒದಗಿಸಲಾಗುತ್ತಿದೆ.

ಈ ಸಂಸ್ಥೆಯು ಸುಮಾರು 60 ವರ್ಷಗಳ ಹಳೆಯದಾಗಿದೆ. ಪ್ರಸ್ತುತ ವಿಮ್ಸ್ ಸಂಸ್ಥೆಯ ಅಧೀನದಲ್ಲಿರುವ ಆಸ್ಪತ್ರೆಗೆ ಪ್ರತಿ ದಿನ 1500 ರಿಂದ 2000 ವರೆಗೆ ಹೊರರೋಗಿಗಳು ಮತ್ತು 500 ರಿಂದ 800 ರವರೆಗೆ ಒಳರೋಗಿಗಳಾಗಿ ಚಿಕಿತ್ಸೆಗೆ ಬರುತ್ತಿರುತ್ತಾರೆ ಹಾಗೂ ಎಂ.ಬಿ.ಬಿ.ಎಸ್ 150, ಬಿಡಿಎಸ್-50, ಪಿ.ಜಿ-120, ಸೂಪರ್ ಸ್ಪೇಷಾಲಿಟಿ-05, ಪ್ಯಾರಾ ಮೇಡಿಕಲ್-150, ಬಿಎಸ್ಸಿ ನಸಿರ್ಂಗ್-100+30 ವಿದ್ಯಾರ್ಥಿಗಳ ಪ್ರವೇಶಾತಿಯ ಸಾಮರ್ಥ್ಯ ಹೊಂದಿದೆ.
ವಿಮ್ಸ್ ಸಂಸ್ಥೆಯ ಅಧೀನದಲ್ಲಿ ವೈದ್ಯಕೀಯ ಮಹಾವಿದ್ಯಾಲಯ, ದಂತ ಕಾಲೇಜು, ನಸಿರ್ಂಗ್ ಕಾಲೇಜು, ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಸ.ವೆ.ಕ್ಷಯ ರೋಗ ಆಸ್ಪತ್ರೆ, ನಗರ ಆರೋಗ್ಯ ಕೇಂದ್ರ ಹೊಂದಿರುತ್ತದೆ. ಇದಲ್ಲದೇ ಈ ಹಿಂದೆ ಜಿಲ್ಲಾ ಆಸ್ಪತ್ರೆಯು ಸಹ ವಿಮ್ಸ್ ಸಂಸ್ಥೆಯ ಅಧೀನದಲ್ಲಿತ್ತು;ಅದನ್ನು ಮೂರು ವರ್ಷಗಳ ಹಿಂದಷ್ಟೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಸ್ತಾಂತರಗೊಂಡಿರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending