ದಿನದ ಸುದ್ದಿ
ಸಂಚಾರಿ ಸಿಗ್ನಲ್ ವೃತ್ತಗಳಲ್ಲಿ ಬ್ಯಾನರ್ಗಳು ಮತ್ತು ಬಂಟಿಂಗ್ಸ್ ಗಳ ನಿಷೇಧ
ಸುದ್ದಿದಿನ,ದಾವಣಗೆರೆ: ನಗರದ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ದಾವಣಗೆರೆ ನಗರದ ಎಲ್ಲಾ ಪೊಲೀಸ್ ಠಾಣಾ ಸರಹದ್ದಿನಲ್ಲಿನ ಎಲ್ಲಾ ಧಾರ್ಮಿಕ ಮುಖಂಡರನ್ನು ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಮುದ್ರಣ ಮಾಡುವ ಮಾಲೀಕರನ್ನು ಹಾಗೂ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಟ್ಟುವಂತಹ ಗುತ್ತಿಗೆದಾರರನ್ನು ಬರಮಾಡಿಕೊಂಡು ಈ ಸಭೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹನುಮಂತರಾಯ ಐಪಿಎಸ್ ಇವರ ಅಧ್ಯಕ್ಷತೆಯಲ್ಲಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದ್ದಜ್ಜಿ ರವರ ಉಪಸ್ಥಿತಿಯಲ್ಲಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ವಿವಿಧ ಪೊಲೀಸ್ ಅಧಿಕಾರಿಗಳು ಈ ಸಭೆಗೆ ಹಾಜರಾಗಿದ್ದು ಈ ಸಭೆಯಲ್ಲಿ ಚರ್ಚಿಸಲಾಗಿ ಮುಂದಿನ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರ ಈ ಕೆಳಕಂಡಂತೆ ಇರುತ್ತದೆ.
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ ಸಿಟಿ ಯೋಜನೆಯ ಅಡಿಯಲ್ಲಿ ನಗರದ ಸುಗಮ ಸಂಚಾರಕ್ಕೆ ಅನುಗುಣವಾಗಿ ಸಿ.ಟಿ ಟಿವಿ, ಸ್ಮಾರ್ಟ ಪಾರ್ಕಿಂಗ್, ಸಂಚಾರ ಸಿಗ್ನಲ್ಗಳನ್ನು ಅಳವಡಿಸಲಾಗುತ್ತಿದ್ದು ಈ ಕಾಮಗಾರಿಗಳು ಸಂಪೂರ್ಣ ಪೂರ್ಣಗೊಳ್ಳುವ ಹಂತದಲ್ಲಿದ್ದು ನಗರದಲ್ಲಿ ವಿವಿಧ ಹಬ್ಬ-ಹರಿದಿನಗಳು, ಜನ್ಮ ದಿನಾಚರಣೆ, ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಮುಖಂಡರವರುಗಳು ನಗರದ ಎಲ್ಲಾ ಟ್ರಾಫಿಕ್ ಸಿಗ್ನಲ್ ವೃತ್ತಗಳಲ್ಲಿ ದೊಡ್ಡ ಪ್ರಮಾಣದ ಬ್ಯಾನರ್ ಕಟೌಟ್ಗಳನ್ನು ಅಳವಡಿಸಲಾಗುತ್ತಿದೆ.
ಈ ಪ್ರಕ್ರಿಯೆಯು ನಗರದ ಸುಗಮ ಸಂಚಾರಕ್ಕೆ ಹಾಗೂ ಟ್ರಾಫಿಕ್ ಸಿಗ್ನಲ್ ದೀಪಗಳು ರಸ್ತೆ ಬಳಕೆದಾರರಿಗೆ ಹಾಗೂ ವಾಹನ ಸವಾರರಿಗೆ ಗೋಚರಿಸದೇ ಇರುವ ಕಾರಣ ಲಘು ಅಪಘಾತಗಳು ಹಾಗೂ ಮಾರಣಾಂತಿಕ ಅಪಘಾತಗಳು ಸಂಭವಿಸುತ್ತಿದ್ದು ಈ ಕುರಿತಂತೆ ಅನೇಕಬಾರಿ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಟ್ಟುವಂತಹ ಗುತ್ತಿಗೆದಾರರಿಗೆ ಮೌಖಿಕವಾಗಿ ಎಚ್ಚರಿಕೆಯನ್ನು ನೀಡಿದ್ದರೂ ಸಹ ಅದೇ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.
ಅದೇ ರೀತಿ ಸಿ.ಟಿ ಟಿವಿ, ಅಳವಡಿಸಲಾದ ಸ್ಥಳಗಳಲ್ಲಿ ಕ್ಯಾಮೇರಾಗಳ ದೃಶ್ಯಗಳು ಕಾಣದಂತೆ ಸಿ.ಟಿ ಟಿವಿ ಕಂಬಗಳಿಗೆ ಹಾಗೂ ಕ್ಯಾಮೇರಾಗಳ ದೃಶ್ಯಗಳು ಕಾಣದಂತೆ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಟ್ಟುತ್ತಿರುತ್ತಾರೆ.
ಮುಂದಿನ ದಿನಗಳಲ್ಲಿ ಈ ಪ್ರವೃತ್ತಿಯನ್ನು ಮುಂದುವರೆಸಿದರೆ, ಅಥವಾ ಯಾವ ಟ್ರಾಫಿಕ್ ಸಿಗ್ನಲ್ ವೃತ್ತಗಳಲ್ಲಿ ಅಥವಾ ರಸ್ತೆಗಳಲ್ಲಿ ಅಳವಡಿಸಿಲಾದ ಸೂಚನಾ ಫಲಕಗಳಿಗೆ ಬ್ಯಾನರ್ ಮತ್ತು ಬಂಟಿಂಗ್ಸ್ ಅಥವಾ ಪೂಸ್ಟರ್ಗಳನ್ನು ಅಳವಡಿಸಿ ರಸ್ತೆ ಬಳಕೆದಾರರಿಗೆ ಹಾಗೂ ವಾಹನ ಸವಾರರಿಗೆ ಗೋಚರಿಸದೇ ಲಘು ಅಥವಾ ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದಲ್ಲಿ ಅಪಘಾತ ಪ್ರಕರಣಗಳಲ್ಲಿ ಆರೋಪಿತರಾಗಿ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಟ್ಟುವಂತಹ ಗುತ್ತಿಗೆದಾರರನ್ನು, ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಮುದ್ರಣ ಮಾಡುವ ಮಾಲೀಕರನ್ನು ಹಾಗೂ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಮುದ್ರಣ ಮಾಡಿಸಿರುತ್ತಾರೋ ಅವರನ್ನು ಪ್ರಕರಣದಲ್ಲಿ ಸೇರಿಸಲಾಗುವುದು.
ಅದೇ ರೀತಿ ಸರ್ಕಾರಿ ಸೌಮ್ಯದ ಆಸ್ತಿಯನ್ನು ವಿರೋಪಗೊಳಿಸಿದ ಪ್ರಯುಕ್ತ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು.
ಈ ಕುರಿತಂತೆ ದಾವಣಗೆರೆ ಮಹಾನಗರ ಪಾಲಿಕೆಯವರುಗಳು ನಗರದಲ್ಲಿ ವಿವಿಧ ಹಬ್ಬ-ಹರಿದಿನಗಳು, ಜನ್ಮ ದಿನಾಚರಣೆ, ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಮುಖಂಡರವರುಗಳವರಿಗೆ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಅಳವಡಿಸಲು ಅನುಮತಿಯನ್ನು ನೀಡುವ ಸಂದರ್ಭದಲ್ಲಿ ಈ ಮೇಲ್ಕಂಡ ವಿಷಯದ ನೋಟಿಸ್ ಮೇಲೆ ಸಹಿಯನ್ನು ಪಡೆದು ನಂತರ ಅನುಮತಿಯನ್ನು ನೀಡಲಾಗುವುದು.
ಇದನ್ನು ಉಲ್ಲಂಘಿಸಿದವರ ಮೇಲೆ Karnataka Open Places (Prevention of Disfigurement Act), 1981 and Karnataka Municipalities Act1964 ರಿತ್ಯ ಪ್ರಕರಣವನ್ನು ದಾಖಲಿಸಿ, ಕಾನೂನು ಕ್ರಮ ಜರುಗಿಸುತ್ತಾರೆ.
ಆದ್ದರಿಂದ ನಗರದಲ್ಲಿನ ಈ ಮೇಲ್ಕಂಡ ಯಾವುದೇ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಮುಖಂಡರವರುಗಳು, ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಮುದ್ರಣ ಮಾಡುವ ಮಾಲೀಕರು ಹಾಗೂ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಟ್ಟುವಂತಹ ಗುತ್ತಿಗೆದಾರರು ಈ ಕುರಿತಂತೆ ಜಾಗೃತೆಯನ್ನು ವಹಿಸಲು ಈ ಮೂಲಕ ತಿಳಿಯಪಡಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ10 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ9 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

