ದಿನದ ಸುದ್ದಿ
ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ : ಧರ್ಮ, ಜಾತಿ ಮೀರಿದ ವಧು-ವರರ ಸಂಗಾತಿ ಆಯ್ಕೆಗೆ ಹೊಸ ವೇದಿಕೆ
ಭಾರತದಂತಹ ಬಹುಸಂಸ್ಕೃತಿಯ ದೇಶದಲ್ಲಿ ಮದುವೆ ಎನ್ನುವುದು ಕೇವಲ ಎರಡು ಕುಟುಂಬಗಳ ನಡುವಿನ ಸಂಬಂಧವನ್ನು ಬೆಸೆಯುವ ಕಾರ್ಯವಾಗಿಯಷ್ಟೇ ಉಳಿದುಕೊಳ್ಳದೇ ಅದರ ಆಳದಲ್ಲಿ ಜಾತೀಯತೆಯ ಪೋಷಣೆ, ಪುರುಷ ಪ್ರಧಾನ ಸಮಾಜ ನಿರ್ಮಾಣ, ಆಸ್ತಿಯ ಹಕ್ಕನ್ನು ಉಳ್ಳವರ ಬಳಿಯೇ ಉಳಿಸಿಕೊಳ್ಳುವ, ಸಾರ್ವಜನಿಕ ಪ್ರತಿಷ್ಠೆಯಂತಹ ಪೊಳ್ಳು ಆದರ್ಶಗಳನ್ನು ಸೇರಿದಂತೆ ಇನ್ನೂ ಅನೇಕ ಮನುಷ್ಯ ವಿರೋಧಿ ಗುಣಗಳನ್ನು ಪೋಷಿಸುವ ಪರೋಕ್ಷ ಕಾರ್ಯವಾಗಿಯೂ ಉಳಿದುಕೊಂಡಿದೆ.
ನಿಜವಾದ ಅರ್ಥದಲ್ಲಿ ಮದುವೆ ಎನ್ನುವ ಬಾಂಧವ್ಯ ಇರಬೇಕಾಗಿರುವುದೇ ಬೇರೆಯ ರೀತಿ. ಎಲ್ಲರನ್ನೂ ಬೆಸೆಯುವ ಮದುವೆ ಎನ್ನುವ ಕ್ರಿಯೆ ನಡೆಯಬೇಕಾಗಿರುವುದು ಎರಡು ಸಮಾನ ಮನಸ್ಕರ ನಡುವೆ. ಭಿನ್ನ ರುಚಿಗಳಲ್ಲಿದ್ದರೂ ಪರಸ್ಪರ ಗೌರವವನ್ನು ಹೊಂದಿರುವರ ವ್ಯಕ್ತಿತ್ವಗಳ ನಡುವೆ. ಹೀಗೆ ನಡೆಯಬೇಕಾಗಿದ್ದ ಮದುವೆ ಏಕೆ ಜಾತಿ ಹಾಗೂ ಅನಗತ್ಯ ಸಂಪ್ರಾದಯಗಳ ನಡುವೆ ಸಿಲುಕಿ ನಲುಗುತ್ತಿದೆ? ಇಂತಹ ಸೂಕ್ಷ್ಮ ವಿಚಾರಗಳು ಬಸವಣ್ಣವರಿಂದ ಆರಂಭವಾಗಿ ಕುವೆಂಪುವರಗೆ ಇನ್ನೂ ಅನೇಕರು ವಿವಿಧ ರೀತಿಯಲ್ಲಿ ಎಲ್ಲರನ್ನೂ ಎಚ್ಚರಿಸುತ್ತಲೇ ಬಂದಿದ್ದಾರೆ.
ಸಂವಿಧಾನವನ್ನು ಇಂದಿನ ಅಗತ್ಯಕ್ಕೆ ತಕ್ಕಂತೆ ತಿದ್ದಬೇಕು, ಆ ಮೂಲಕ ಭಾರತವನ್ನು ಆರೋಗ್ಯವಾಗಿ ರೂಪಿಸಬಹುದು ಎನ್ನುವ ಮಾತುಗಳೂ ಕೇಳಿ ಬರುತ್ತಿವೆ. ಇದೇ ದಿನಗಳಲ್ಲಿ ಭಾರತದ ನೆಲದಲ್ಲೇ ಮೂಡಿರುವ ಸಂಸ್ಕೃತಿಗಳಲ್ಲೂ ಕೆಲವು ಅನಿವಾರ್ಯ ಬದಲಾವಣೆಯನ್ನು ರೂಪಿಸಬೇಕು.
ಹೀಗೆ ಆಚರಣೆಯ ರೂಪದಲ್ಲಿರುವ ಅನೇಕ ಸಂಸ್ಕೃತಿಗಳನ್ನು ಈ ಶತಮಾನದ ಮನುಷ್ಯ ಜೀವನಕ್ಕೆ ಅಗತ್ಯವಾಗಿ ತಿದ್ದುಪಡಿ ಮಾಡಿದರೆ ಆ ಮೂಲಕ ಭಾರತವನ್ನು ಬೌದ್ಧಿಕವಾಗಿ ಇನ್ನಷ್ಟು ಗಟ್ಟಿಯಾಗಿ ನಿರ್ಮಾಣ ಮಾಡಲು ಸಾಧ್ಯವಿದೆ ಎನ್ನುವುದು ನಾವು ಗೆಳೆಯರು ಕಾಲೇಜಿನ ದಿನಗಳಿಂದ ಆರಂಭಿಸಿ ಅನೇಕ ವರ್ಷಗಳಿಂದ ಚರ್ಚಿಸಿ, ಕಾದಾಡಿ ಕಂಡುಕೊಂಡಿರುವ ಈ ಕ್ಷಣದ ಸತ್ಯ. ಈ ಚರ್ಚೆಯ ಫಲಿತಾಂಶವಾಗಿಯೇ ಸದ್ಯ “The Change Makers Matrimony” ರೂಪುಗೊಂಡಿದೆ.
ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದಾಗಲೇ ನಾವು ಒಂದಷ್ಟು ಗೆಳೆಯರು ಈ ಬಗ್ಗೆ ಸಾಕಷ್ಟು ಚರ್ಚಿಸುತ್ತಿದ್ದೆವು. ಕೇವಲ ಜಾತಿ ಆಧರಿತ ಮ್ಯಾಟ್ರಿಮೋನಿಯಲ್ ಸೈಟ್ಗಳಿಗೆ ಪರ್ಯಾಯವಾಗಿ ಯಾವುದೇ ಜಾತಿ, ಧರ್ಮ, ಕುಲಗಳ ಮನುಷ್ಯ ವಿರೋಧಿ ಬೇಲಿಗಳಿಂದ ಹೊರಗೆ ನಿಂತು ನಮ್ಮ ಜೀವನದೃಷ್ಠಿಗೆ ಹೊಂದುವ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವೇದಿಕೆಯನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆಯಲ್ಲಿ ತೊಡಗಿದ್ದೆವು.
ನಮಗೆ ಶಿಕ್ಷಕರಾಗಿದ್ದ ಕ್ರಾಂತಿರಾಜ್ ಒಡೆಯರ್ ಕೂಡ ನಮ್ಮ ಆಲೋಚನೆಗಳಿಗೆ ಕೈ ಜೋಡಿಸಿದ್ದರು. ಆದರೆ, ಕಾಲೇಜು ಮುಗಿಯುತ್ತಿದ್ದಂತೆ ಚರ್ಚೆಯಲ್ಲಿ ಭಾಗವಹಿಸಿದ್ದ ಗೆಳೆಯರು ಹೆಚ್ಚಿನ ಓದಿಗೆ ಇಂಗ್ಲೆಂಡ್ಗೆ ಹೊರಟರೆ, ಕೆಲವುರ ಉದ್ಯೋಗದ ಕಾರಣಕ್ಕೆ ಬೆಂಗಳೂರಿಗೆ ಹೊರಟಿದ್ದರು. ಸದ್ಯ ಎಲ್ಲರೂ ಮರಳಿ ಮೈಸೂರಿಗೆ ಮರಳಿದ್ದೇವೆ. ಶಿಕ್ಷಕರಾದ ಕ್ರಾಂತಿರಾಜ್ ಒಡೆಯರ್ ಸೇರಿದಂತೆ ನಾವು ಎಲ್ಲಾ ಗೆಳೆಯರು ಮತ್ತೊಮ್ಮೆ ಚರ್ಚಿಸಿ ನಮ್ಮ ಹಳೆಯ ಕನಸಿಗೆ ಮರು ಚಾಲನೆ ನೀಡುತ್ತಿದ್ದೇವೆ.
ಮುಂದಿನ ದಿನಗಳಲ್ಲಿ ನಮ್ಮ “The Change Makers Matrimony”ಯ ವೆಬ್ಸೈಟ್ ಆರಂಭವಾಗಲಿದ್ದು ಇದರೊಂದಿಗೆ ಎಲ್ಲ ಬಗೆಯ ಸ್ಮಾರ್ಟ್ಫೋನ್ಗಳಿಗೂ ಹೊಂದುವಂತಹ ಅಪ್ಲಿಕೇಶನ್ ಸಹ ಬಿಡುಗಡೆಗೊಳಿಸಲಿದ್ದೇವೆ. ನಮ್ಮ ವೆಬ್ಸೈಟ್ ಬಿಡುಗಡೆ ಕಾರ್ಯಕ್ರಮವನ್ನು ಪ್ರತ್ಯೇಕವಾಗಿ ನಡೆಸಲು ತೀರ್ಮಾನಿಸಿದ್ದು ಸಾಮಾಜಿಕ ಜವಾಬ್ದಾರಿಯನ್ನು ಹೊಂದಿರುವ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಮ್ಮ ವೆಬ್ಸೈಟ್ನಲ್ಲಿ ನೋದಾಂಯಿಸುವ ಮೂಲಕ ಮದುವೆಯಾಗಲು ಇಚ್ಛಿಸುವವರು ಉಳಿದ ಮ್ಯಾಟ್ರಿಮೋನಿಯಲ್ ಸೈಟ್ಗಳಲ್ಲಿ ನೀಡುವಂತೆ ಜಾತಿ, ಧರ್ಮಗಳ ವಿವವರಣೆಯನ್ನು ನೀಡುವ ಅಗತ್ಯವಿಲ್ಲ. ನಿಮ್ಮ ಆಲೋಚನೆ, ಉದ್ಯೋಗ, ಹವ್ಯಾಸ, ಸಮಾಜಿಕ ಜವಾಬ್ದಾರಿ ಗುಣಗಳನ್ನು ವಿವವರಿಸಿದರೆ ಸಾಕು.
“The Change Makers Matrimony“ಯ ಉದ್ದೇಶ ಸ್ಪಷ್ಟ. ಗಂಡನ್ನು ಹೆಣ್ಣನ್ನು ಬೆಸೆಯುವ ಮದುವೆ ಎನ್ನುವ ಕ್ರಿಯೆಗೆ ಜಾತಿ, ಧರ್ಮದ ಅಗತ್ಯವಿಲ್ಲ. ಮದುವೆ ಸಫಲವಾಗುದಕ್ಕೆ ನಮ್ಮ ಬದುಕಿನ ಕುರಿತ ಅಭಿರುಚಿ, ಆಸಕ್ತಿಗಳು, ಆಯ್ಕೆ ಹಾಗೂ ಜೀವನ ಜೀವನದೃಷ್ಠಿ ಮುಖ್ಯ ಸಾಮಗ್ರಿಯೇ ಹೊರತು ನಮ್ಮ ಕಣ್ಣಿಗೆ ಕಾಣದ, ಸ್ಪರ್ಶಕ್ಕೆ ಸಿಗದ ಜಾತಿಯಲ್ಲ. ಈ ಕಾರಣದಿಂದ “The Change Makers Matrimony“ಯಲ್ಲಿ ಬಹುಮುಖ್ಯವಾಗಿ ಸಂಗಾತಿಯನ್ನು ನಿಮ್ಮ ಆಸಕ್ತಿ ಹಾಗೂ ಅಭಿರುಚಿಗೆ ತಕ್ಕಂತೆ ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ವೇದಿಕೆಯನ್ನು ಕಲ್ಪಿಸಿಕೊಡಲಾಗುತ್ತದೆ.
ಈಗಾಗಲೇ ಅನೇಕ ಮಹನೀಯರು ಜಾತಿ ವ್ಯವಸ್ಥೆಯ ಕರಾಳ ಮುಖವನ್ನು ಹಲವು ರೂಪಗಳಲ್ಲಿ, ಹಲವು ವೇದಿಕೆಗಳಲ್ಲಿ ಬಯಲು ಮಾಡುತ್ತಲೇ ಬಂದಿದ್ದಾರೆ. ಈಗಾಗಲೇ ಬಯಲಾಗಿರ ಜಾತೀಯತೆಯ ಕರಾಳ ಮುಖವನ್ನು ಇನ್ನಷ್ಟು ಬಯಲು ಮಾಡುತ್ತಲೇ ಸಮಯ ಕೊಲ್ಲುವ ಬದಲು, ಬದಲಾವಣೆಗೆ ಮುಂದಾಗಬೇಕಾದ ತುರ್ತು ಎದುರಾಗಿದೆ.
ಯಾವುದೇ ಜಾತಿ ಹಾಗೂ ಧರ್ಮದ ಸೋಂಕಿಲ್ಲದೆ ಸಮಾನ ಮನಸ್ಕರಷ್ಟೇ ಉತ್ತಮ ಗೆಳೆಯರಾಗಬಹುದು ಎನ್ನುವುದು ಹೇಗೆ ಸಾಮಾನ್ಯ ಜ್ಞಾನವೋ ಅದೇ ರೀತಿಯಲ್ಲಿ ನಮ್ಮ ಆಲೋಚನೆಗೆ ಹೊಂದಬಲ್ಲವರಷ್ಟೇ ಉತ್ತಮ ಜೀವನ ಸಂಗಾತಿಯಾಗಬಹದು ಎನ್ನುವುದು ಅಷ್ಟೇ ಸಾಮಾನ್ಯ ಜ್ಞಾನ.
ಮದುವೆಯಾಗುವ ಇಚ್ಛೆಯನ್ನು ಹೊಂದುವ ಮೂಲಕ ನೋಂದಾಯಿಸಿದವರಿಗೆ ನಮ್ಮ ವೆಬ್ಸೈಟ್ನಲ್ಲಿ ಯಾವುದಾದರೂ ಹುಡುಗ/ಗಿ ಒಪ್ಪಿಗೆಯಾದರೆ ಅವರನ್ನು ಮಾತನಾಡಿಸುವ, ಅವರೊಂದಿಗೆ ಮದುವೆಯ ಕುರಿತ ಇಂಗಿತವನ್ನು ವ್ಯಕ್ತಪಡಿಸುವ ಅವಕಾಶವನ್ನು ಒದಗಿಸಲಾಗುತ್ತದೆ. ಒಂದೊಮ್ಮೆ ನೀವು ಇಬ್ಬರು ಪರಸ್ಪರ ಒಪ್ಪಿಕೊಂಡು ಮದುವೆಯಾಗಲು ನಿರ್ಧರಿಸಿದರೆ ಮದುವೆಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ಮನೆಯವರೊಂದಿಗೆ ನೀವೇ ಮಾತನಾಡಬೇಕು.
ಅದು ಸಂಪೂರ್ಣವಾಗಿ ನಿಮ್ಮದೇ ವಯಕ್ತಿಕ ವಿಷಯವಾಗಿರುತ್ತದೆ. “The Change Makers matrimony” ಸಂಸ್ಥೆಗೂ ಸಂಬಂಧವಿರುವುದಿಲ್ಲ. ಮದುವೆಗೆ ಎರಡೂ ಮನೆಯವರ ಒಪ್ಪಿಗೆ ದೊರೆತ ನಂತರ ಮದುವೆಗೆ ಬೇಕಾದ ಪೂರಕ ಕೆಲಸಗಳನ್ನು “The Change Makers Matrimony” ಸಂಸ್ಥೆಯೇ ಮಾಡಿಕೊಡುತ್ತದೆ.
“The Change Makers Matrimony” ವೆಬ್ಸೈಟ್ನಲ್ಲಿ ಮದುವೆಯಾಗಲು ತಮ್ಮ ಹೆಸರನ್ನು ನೋಂದಾಯಿಸಲು ಇಚ್ಛಿಸುವವರು ಒಂದು ಸಾವಿರ ರೂಪಾಯಿಗಳನ್ನು ಶುಲ್ಕವಾಗಿ ನೀಡಬೇಕಾಗಿದೆ. “The Change Makers Matrimony” ಸಂಸ್ಥೆಯು ಈ ಹಣವನ್ನು ಸಂಸ್ಥೆಯ ನಿರ್ವಹಣೆಯ ಸೇರಿದಂತೆ ಹಲವು ಅಗತ್ಯ ಕೆಲಸಗಳಿಗೆ ವಿನಿಯೋಗಿಸುತ್ತದೆ. ಸಂಸ್ಥೆ ಕಾರ್ಯವನ್ನು ಆರಂಭಿಸಲು ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದು ಇನ್ನು ಕೆಲವೇ ದಿನಗಳಲ್ಲಿ ಕಾರ್ಯಾರಂಭಗೊಳ್ಳಲಿದೆ.
– ದೀ ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
ಸತ್ಯಕೀರ್ತಿ. ಜೆ
ಸಂಸ್ಥಾಪಕ, ಸಿಇಎ
ಚೇಂಜ್ ಮೇಕರ್ ಮ್ಯಾಟ್ರಿಮೋನಿ
+918867701357
ರವಿ ಕುಮಾರ್. ಜೆ
ಸಹ ಸಂಸ್ಥಾಪಕ,
+917899980515
ಕ್ರಾಂತಿರಾಜ್ ಒಡೆಯರ್
ಮುಖ್ಯ ಸಲಹೆಗಾರರು
+919164061662
ಸಂದೀಪ್ ಈಶಾನ್ಯ
ಕಾರ್ಯದರ್ಶಿ
+919741705944
ಸುದ್ದಿದಿನ.ಕಾ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ಅಂತರಂಗ4 hours agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ19 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

