Connect with us

ಲೈಫ್ ಸ್ಟೈಲ್

ಹಣೆಬರಹ ಪೂರ್ವ – ನಿಯೋಜಿತವೇ..?

Published

on

ದಾ ಸ್ವರ್ಗ ಹಾಗೂ ನರಕದ ಆಮಿಷ ಹಾಗೂ ಭಯಕ್ಕೆ ಒಳಗಾಗಿ ಅತೀವ ಧಾರ್ಮಿಕತೆಗೆ ಒಳಗಾದ ಮಂದಿ ಜನರಲ್ ಆಗಿ ಒಪ್ಪುವ ಕಾಮನ್ ಸಂಗತಿಯೆಂದರೆ “ಹಣೆಬರಹ”. ನಾವು ಇಲ್ಲಿ ಹುಟ್ಟಿದ್ದು ನೆಪ ಮಾತ್ರ , ಎಲ್ಲವೂ ಅವನಾಡಿಸಿದಂತೆ ಆಡುವ ಆಟ. ಹೀಗೆ ಸದಾ ಜೀವನದಲ್ಲಿ ಈ ರೀತಿಯ ಯೋಚನೆಯಲ್ಲೇ ಅಥವ ಜಿಗುಪ್ಸೆಯನ್ನೇ ತುಂಬಿ ಬದುಕುವ ಮಂದಿ ಎಲ್ಲವೂ ಪೂರ್ವನಿಯೋಜಿತಗೊಂಡಂತೆ ನಮ್ಮ ಬದುಕಿನಲ್ಲಿ ನಡೆಯುತ್ತದೆ ಅದನ್ನು ತಪ್ಪಿಸಲು ಹಣೆಬರಹ ಬರೆದವನಿಂದಲೂ ಸಾಧ್ಯವಿಲ್ಲ ಎಂದು ಬಹಳ ಗಟ್ಟಿಯಾಗಿ ನಂಬುತ್ತಾರೆ.

ಇದಕ್ಕಾಗಿ ಪುರಾಣದ ಪುಟಗಳಿಂದ ಒಂದೆರಡು ಉದಾಹರಣೆಯಾಗಿ ಕಥೆಗಳನ್ನೂ ಉಲ್ಲೇಖ ಮಾಡುತ್ತಾರೆ. ಎಲ್ಲವೂ ಪೂರ್ವನಿಯೋಜಿತ ಹಾಗೂ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವ “ಹಣೆಬರಹ”ವನ್ನೇ ಒಂದು ಸುತ್ತು ಹಾಕಿಕೊಂಡು ಬರೋಣ.

ನನಗೆ ಒಳ್ಳೆಯದಾಗಲಿ, ಕುಟುಂಬಕ್ಕೆ ಶ್ರೇಯಸ್ಸಾಗಲಿ, ವಿಧ್ಯಾರ್ಥಿಗಳಿಗೆ ಶ್ರೇಯಸ್ಸಾಗಲಿ (ನಮ್ಮ ವಿಟ್ಲದಲ್ಲಿ ಈಗ ವಿಧ್ಯಾರ್ಥಿಗಳ ಕ್ಷೇಮಕ್ಕಾಗಿ ಕಾಲೇಜಿನಲ್ಲೇ ಹೋಮ ನಡೆಯುವ ತಯಾರಿ ನಡೆಯುತ್ತಿದೆ), ದೋಷ ಕಳೆಯಲಿ, ದುಡ್ಡು ಬರಲಿ, ಲಾಸ್ ಆಗದಿರಲಿ, ಆರೋಗ್ಯ ವೃದ್ಧಿಸಲಿ, ಅಯಸ್ಸು ವೃದ್ಧಿಸಲಿ, ಮರಣದ ದವಡೆಯಿಂದ ತಪ್ಪಿಸಿಕೊಳ್ಳಲಿ, ನನ್ನ ವೈರಿ ಸಾಯಲಿ ಅಥವಾ ಹಾಳಾಗಿ ಹೋಗಲಿ ಎಂದು ಹರಕೆ, ಇತ್ಯಾದಿ ಬೇಡಿಕೆಗಳನ್ನಿಟ್ಟು ವಿಧ ವಿಧ ಬಗೆಯ ಆಚರಣೆ, ಪೂಜೆ, ಆರಾಧನೆಗಳೆಲ್ಲಾ ನಡೆಯುತ್ತದೆ. ಇದರ ಜೊತೆಗೆ ಮನೆಗಳಲ್ಲಿ ಶಾಂತಿ ನೆಲಸಲಿ ಎಂದು ಹೋಮ ಕೂಡಾ ಸೇರ್ಪಡೆಗೊಳಿಸಬಹುದು.

ಎಲ್ಲವೂ ನಿಮ್ಮ ನಿಮ್ಮ ಧಾರ್ಮಿಕ ನಂಬಿಕೆ. ಅದರಲ್ಲಿ ಎರಡು ಮಾತಿಲ್ಲ, ಆದರೆ ಇಲ್ಲಿ ಪ್ರಶ್ನೆ ಏನೆಂದರೆ, ಈ ಎಲ್ಲಾ ಆಚರಣೆ, ಆರಾಧನೆ, ಪೂಜೆ ನಡೆಸುವ ಉದ್ದೇಶದ ಬಗ್ಗೆ? ಇದನ್ನೆಲ್ಲಾ ಮಾಡಿದರೆ ನಮಗೆ ಒಳ್ಳೆಯದಾಗುತ್ತದೆ ಅಥವಾ ಕೆಟ್ಟದಾಗುವುದು ಬೇಡ ಎಂಬುದೊಂದೇ ಉದ್ದೇಶವಲ್ಲವೆ? ಲೋಕಕಲ್ಯಾಣಕ್ಕಾಗಿ ಎಂಬ ಹಣೆಪಟ್ಟಿಹೊತ್ತು ನಡೆಸುವ ಆಚರಣೆಗಳಲ್ಲೂ ನಾನು, ನೀವು ಆ ಲೋಕದಲ್ಲಿ ಸೇರ್ಪಡೆಗೊಂಡಿದ್ದೇವೆ ಎಂಬುದೂ ಸತ್ಯವಲ್ಲವೆ?

ಈಗ ಹಣೆಬರಹಕ್ಕೆ ಬರೋಣ. ಎಲ್ಲವೂ ಪೂರ್ವನಿಯೋಜಿತ, ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ, ಅದು ಸೃಷ್ಟಿಕರ್ತನ ನಿಯಮ ಎನ್ನುವುದನ್ನೂ ನೀವು ನಂಬುವುದಾದರೆ, ಈ ಒಳ್ಳೆಯದಾಗಲಿ, ಕೆಟ್ಟದಾಗುವುದು ಬೇಡ ಎಂಬ ಆಸೆ, ಆತಂಕಕ್ಕೆ ಒಳಗಾಗಿ ಪೂಜೆ, ಆಚರಣೆ ನಡೆಸುವ ಅಗತ್ಯವಾದರೂ ಏನು? ನೀವು ಹುಟ್ಟಿದಾಗಲೇ ನಿಮ್ಮ ಸ್ಕ್ರಿಪ್ಟ್ ತಯಾರಾಗಿಯೇ ಬಂದಿದ್ದಲ್ಲವೆ? (ನನ್ನ ಪ್ರಕಾರವಲ್ಲ ನಿಮ್ಮ ಪ್ರಕಾರವೇ ಈ ಮಾತು). ಹಣೆಬರಹವನ್ನು ತಿದ್ದಲು, ಬದಲಾಯಿಸಲು ಸಾಧ್ಯವಿಲ್ಲವೆಂದರೆ ಈ ಪೂಜೆ, ಆಚರಣೆ, ಪ್ರಾರ್ಥನೆಗಳಿಂದ ನಿಮಗೆ ಒಳ್ಳೆಯದು ಹೇಗಾಗುತ್ತದೆ? ನಿಮಗೆ ಏನಾಗಬೇಕೋ ಅದು ಈಗಾಗಲೇ ಫಿಕ್ಸ್ ಆಗಿದೆ ಎಂದ ಮೇಲೆ ನಿಮಗೆ ಅನಗತ್ಯ ಚಿಂತೆ ಯಾಕೆ? ಈ ಗ್ರಹಣ ಸಂಧರ್ಭವನ್ನೂ ಸೇರಿಸಿಕೊಳ್ಳಿ, ಆ ರಾಶಿಯವನಿಗೆ ಹಾಗಾಗುತ್ತದೆ, ಈ ರಾಶಿ, ನಕ್ಷತ್ರದವನಿಗೆ ಹೀಗಾಗುತ್ತದೆ ಎಂದು ದೇವಸ್ಥಾನದಲ್ಲಿ ಕ್ಯೂ ನಿಂತು ನೂರೈವತ್ತರಿಂದ ಐನೂರು ಸಾವಿರದವರೆಗೂ ದುಡ್ಡು ಎಣಿಸಿ ಪೂಜೆ, ಅಭಿಷೇಕ ಮಾಡುವುದರಿಂದ ನಿಮ್ಮ ಹಣೆಬರಹ ಬದಲಾಗಿ ನಿಮಗೆ ಒಳ್ಳೆಯದಾಗುವು ದಾದರೂ ಹೇಗೆ?
ಒಂದೋ ಹಣೆಬರಹ ಅನ್ನೋದೇ ಸುಳ್ಳು. ಇಲ್ಲ ಹಣೆಬರಹ ಎಡಿಟ್ ಮಾಡುವುದು ಸಾಧ್ಯವಿಲ್ಲ, ಅಥವಾ ಎಡಿಟ್ ಮಾಡಬಹುದು.

ಈ ಮೂರರಲ್ಲಿ ಯಾವುದಾದರೂ ಒಂದು ನಿಲುವು ನಿಮ್ಮದಾಗಿರಬೇಕು. ನಿಮ್ಮ ನಂಬಿಕೆ ಪ್ರಕಾರ ಎಡಿಟಿಂಗ್ ಸಾಧ್ಯವೇ ಇಲ್ಲ. ಹಾಗಿದ್ದೂ ಈ ಎಡಿಟಿಂಗ್ ಮಾಡುವುದಕ್ಕೆ ಪೂಜೆ, ಅಭಿಷೇಕ ಎಲ್ಲಾ ಮಾಡೋ ಅಗತ್ಯವಾದರೂ ಏನು? ಇಲ್ಲಿ ನಿಮ್ಮ ಧಾರ್ಮಿಕ ನಂಬಿಕೆಗಳ ಬಗ್ಗೆ ತಕರಾರಿಲ್ಲ, ಆದರೆ ಪ್ರಶ್ನೆ, ನಿಮ್ಮಲ್ಲಿರುವ ಗೊಂದಲದ ಬಗ್ಗೆ ಅಥವಾ ದ್ವಂದ್ವ ನೀತಿಯ ಬಗ್ಗೆ. ಹಾಗೊಂದು ವೇಳೆ ದೇವರು ಮನಸ್ಸು ಮಾಡಿದರೆ ಹಣೆಬರಹ ಬದಲಾಗುತ್ತದೆ ಎನ್ನುವುದಾದರೆ ಅದನ್ನು ಅಪ್ರೋಚ್ ಮಾಡುವ ಬಗೆ ಹೇಗೆ?

ಹೀಗೆ ಪೂಜೆ, ಅಭಿಷೇಕ ಮಾಡುವುದರಿಂದ, ಅಂದರೆ ಥ್ರೂ ಪರ್ಟಿಕುಲರ್ ಪರ್ಸನ್ , ದೇವರಿಗೆ ಅವಹಾಲು ಸಲ್ಲಿಸುವುದರಿಂದ ನಿಮ್ಮ ಹಣೆಬರಹ ಎಡಿಟಿಂಗ್ ಮಾಡಬಹುದೇ? ಕನ್ಫರ್ಮ್ ಆಗುತ್ತದೆ ಎಂದಾದರೆ ದೇಶದಲ್ಲಿ ದಾರಿದ್ರ್ಯ ಅನ್ನೋದೇ ಇರಬಾರದಿತ್ತಲ್ಲವೇ? ಕಷ್ಟದಲ್ಲಿರುವವರ ಹಣೆಬರಹ ಎಡಿಟ್ ಮಾಡಿ ಅವರಿಗೂ ಒಂದು ನಿಮ್ಮದಿಯ ಬಾಳು ಕೊಡಬಹುದಿತ್ತಲ್ಲವೆ? ಒಬ್ಬ ಕಷ್ಟ ಅನಿಭವಿಸುವಾಗ ಒಂದೇ ಉಸಿರಲ್ಲಿ ಅದು ಅವನ ಹಣೆಬರಹ ಅಂತ ಷರಾ ಬರೆಯುವ ನೀವು ಅವನ ಹಣೆಬರಹವನ್ನು ತಿದ್ದಲು ಯಾಕೆ ಅಹವಾಲು ನೀಡಬಾರದು?

ಹಣೆಬರಹ ಎಂಬ ಭ್ರಮೆಯಲ್ಲಿ ತೇಲಾಡುವ ಮಂದಿ ಕನಿಷ್ಟ ನಿಮ್ಮನ್ನು ನೀವು ಪ್ರಶ್ನಿಸಿಕೊಳ್ಳಿ. ನಿಮ್ಮ ನೆಮ್ಮದಿಯ ಬದುಕನ್ನು ನಂಬಿಕೆಯ ಹೆಸರಲ್ಲಿ ಕಿತ್ತು ತಿನ್ನುವ ಅನಾಗರಿಕ ಜನರ ಬಗ್ಗೆ ಜಾಗ್ರತರಾಗಿ. ಇದೆಲ್ಲಾ ಹಿಂದಿನಿಂದಲೂ ಬಂದದ್ದು ಎನ್ನುವವರಲ್ಲಿ ನನ್ನ ಚರ್ಚೆಯಿಲ್ಲ. ಆದರೆ ಕನಿಷ್ಟ ತಮ್ಮ ಬಗ್ಗೆಯಾದರೂ ಪ್ರಜ್ಞೆಯಿಂದ ಯೋಚಿಸುವ ಮಂದಿಗೆ ವಿಮರ್ಷೆ ಮಾಡಲು ಸಹಕಾರಿಯಾದರೆ ಅಷ್ಟೇ ಸಾಕು. ನನ್ನನ್ನು ವಿರೋಧಿಸಲು, ಅಥವಾ ಅನ್ಯಧರ್ಮೀಯರಿಗೆ ಕಾಂಪಿಟೇಷನ್ ಕೊಡಲೆಂದೇ ಮೌಢ್ಯಕ್ಕೆ ಶರಣಾಗುವವರ ಬಗ್ಗೆ ನನ್ನ ತಕರಾರಿಲ್ಲ. ಕೀಪ್ ಕಂಟಿನ್ಯೂ.

– ಭಾಸ್ಕರ್ ವಿಟ್ಲ
ಪ್ರಾಧ್ಯಾಪಕರು
ಮಾನಸಿಕ ತಜ್ಞರು

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

Trending