Connect with us

ದಿನದ ಸುದ್ದಿ

ಅಂತರ್ರಾಷ್ಟ್ರೀಯ ರೇಬೀಸ್ ದಿನಾಚರಣೆ 2020: ಸಹಯೋಗದೊಂದಿಗೆ ಲಸಿಕೆ ಹಾಕಿಸಿ ತಡೆಗಟ್ಟೋಣ

Published

on

  • ಡಾ||.ಕಮಲೇಶ್ ಕುಮಾರ್ ಕೆ ಎಸ್, ಪಶುವೈದ್ಯಾಧಿಕಾರಿಗಳು, ಶಿವಮೊಗ್ಗ

ರೇಬೀಸ್ (Rabies) ಒಂದು ವೈರಾಣುವಿನಿಂದ (Virus) ಹರಡುವ ಮಾರಕ ಖಾಯಿಲೆಯಾಗಿದ್ದು ಇದರ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ಭಯಾನಕ ರೋಗವನ್ನು ಸೋಲಿಸುವಲ್ಲಿ ಪ್ರಗತಿಯನ್ನು ಸಾಧಿಸಲು ಈ ದಿನವನ್ನು ವಾರ್ಷಿಕವಾಗಿ ಆಚರಿಸಲಾಗುತ್ತದೆ.

ಮೊಟ್ಟ ಮೊದಲ ರೇಬೀಸ್ ಲಸಿಕೆಯನ್ನು ಅಭಿವೃದ್ಧಿಪಡಿಸಿದ ಫ್ರೆಂಚ್ ರಸಾಯನಶಾಸ್ತ್ರಜ್ಞ (Chemist) ಮತ್ತು ಸೂಕ್ಷ್ಮ ಜೀವಶಾಸ್ತ್ರಜ್ಞ (Microbiologist) ಲೂಯಿಸ್ ಪಾಶ್ಚರ್ (Louis Pasteur) ಅವರ ಮರಣದ ವಾರ್ಷಿಕೋತ್ಸವವನ್ನು ಅಂತರ್ರಾಷ್ಟ್ರೀಯ ರೇಬೀಸ್ ದಿನಾಚರಣೆಯನ್ನಾಗಿ ವಿಶ್ವದಾದ್ಯಂತ ಆಚರಿಸಲಾಗುತ್ತದೆ.

ಈ ಬಾರಿ “ಸಹಯೋಗದೊಂದಿಗೆ ಲಸಿಕೆ ಹಾಕಿಸಿ ರೇಬೀಸ್‌ಅನ್ನು ತಡೆಗಟ್ಟೋಣ” (“End rabies collaborate Vaccinate”) ಎಂಬ ವಿಷಯದ ಕುರಿತು ಮಹತ್ವವನ್ನು ನೀಡಲಾಗಿದೆ.

ಇಂದು, ಸುರಕ್ಷಿತ ಮತ್ತು ಪರಿಣಾಮಕಾರಿಯಾದ ಪ್ರಾಣಿ ಮತ್ತು ಮಾನವ ಲಸಿಕೆಗಳು ರೇಬೀಸ್‌ನಿಂದ ಮಾನವ ಹಾಗು ಎಲ್ಲ ಬೆಚ್ಚಗಿನ ರಕ್ತದ ಪ್ರಾಣಿಗಳ ಸಾವುಗಳನ್ನು ತೊಡೆದುಹಾಕಲು ಇರುವ ಪ್ರಮುಖ ಸಾಧನಗಳಾಗಿವೆ, ಆದರೆ ಸಮುದಾಯಗಳು ಪರಿಣಾಮಕಾರಿ ರೇಬೀಸ್ ತಡೆಗಟ್ಟುವಲ್ಲಿ ತೊಡಗಿಸಿಕೊಳ್ಳಲು ಅರಿವು ಪ್ರಮುಖ ಚಾಲಕವಾಗಿದೆ.

ಲಸಿಕೆ ಹಾಕಿಸದೆ ರೇಬೀಸ್ ರೋಗ ಪೀಡಿತವಾಗಿರಿವ ಅಥವಾ ವಾಹಕವಾಗಿರುವ (carrier) ಸಾಕು ಪ್ರಾಣಿಗಳು ಕಚ್ಚುವುದರಿಂದ ಈ ರೋಗ ಅನ್ಯ ಪ್ರಾಣಿಗಳಿಗೆ ಹಾಗು ಮನುಷ್ಯರಿಗೆ ಹರಡುತ್ತದೆ. ಇದನ್ನು ತಡೆಯಲು ಪಶುವೈದ್ಯಕೀಯ ಹಾಗು ಮಾನವ ವೈದ್ಯಕೀಯ ಶಾಸ್ತ್ರದಲ್ಲಿ ಇರುವುದು ಒಂದೇ ಮದ್ದು ಅದುವೇ ರೇಬೀಸ್ ವಿರುದ್ಧ ನಿಮ್ಮ ಹಾಗು ನಿಮ್ಮ ಸಾಕು ಪ್ರಾಣಿಗಳಿಗೆ ಲಸಿಕೆ ಹಾಕಿಸುವುದು. ಈ ರೀತಿ ಮಾಡುವುದರಿಂದ ನಿಮ್ಮ, ಕುಟುಂಬದ ಹಾಗು ನಿಮ್ಮ ಪರಿಸರವನ್ನು ರೇಬೀಸ್ ಮುಕ್ತವನ್ನಾಗಿಸಬಹುದು.

ರೇಬೀಸ್ ವಿರುದ್ಧ ಬೀದಿ ನಾಯಿ ಹಾಗು ಸಾಕು ಪ್ರಾಣಿಗಳನ್ನು ರಕ್ಷಿಸುವುದು ರೇಬೀಸ್ ರೋಗದಿಂದ ನಮ್ಮನ್ನು ಸಂರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಕೇವಲ 12 ವಾರ ವಯಸ್ಸಿನ ನಾಯಿ ಮರಿಗಳಿಗೆ ಲಸಿಕೆ ಹಾಕಿಸುವ ಕ್ರಮ ಶುರುವಾಗುವುದು, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯರನ್ನು ಸಂಪರ್ಕಿಸಿ ನಿಮ್ಮನ್ನು, ನಿಮ್ಮ ಸಾಕು ಪ್ರಾಣಿಗಳನ್ನು, ನಿಮ್ಮ ಪರಿಸರವನ್ನು ರೇಬೀಸ್ ವಿರುದ್ಧ ರಕ್ಷಿಸಿಕೊಳ್ಳಲು ಕೈ ಜೋಡಿಸಿ.

ಡಾ||.ಕಮಲೇಶ್ ಕುಮಾರ್ ಕೆ ಎಸ್
ಪಶುವೈದ್ಯಾಧಿಕಾರಿಗಳು
ಪಶುಚಿಕಿತ್ಸಾಲಯ, ಮತ್ತೂರು,
ಶಿವಮೊಗ್ಗ.
ಈ ಮೇಲ್ : kskamalesh93@gmail.com
ಫೋನ್ : 9164282969

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending