Connect with us

ದಿನದ ಸುದ್ದಿ

ಕೊರೋನ ಕಾಲದಲ್ಲಿ ಹೃದಯವನ್ನು ಕಾಪಾಡಿ..!

Published

on

  • ಶ್ರೀನಿವಾಸ ಕಕ್ಕಿಲಾಯ

ಕೊರೋನ ಸೋಂಕಿನ ನೆಪದಲ್ಲಿ ಆಗಿರುವ ಸಮಸ್ಯೆಗಳಿಗೆ ಲೆಕ್ಕವಿಲ್ಲ. ಕೊರೋನ ಸೋಂಕಿಗೆ ಹೊರತಾದ ಇತರ ಸಮಸ್ಯೆಗಳನ್ನು ಹೊಂದಿರುವವರಿಗೆ, ಅದರಲ್ಲೂ, ಹೃದ್ರೋಗ, ಪಾರ್ಶ್ವವಾಯು, ಕ್ಯಾನ್ಸರ್ ಆದವರಿಗೆ, ತುರ್ತು ಸಮಸ್ಯೆಗಳಾದವರಿಗೆ ಹಾಗೂ ಗರ್ಭಿಣಿಯರಿಗೆ, ಕ್ಲಪ್ತ ಸಮಯದಲ್ಲಿ ಸೂಕ್ತ ಆರೋಗ್ಯ ಸೇವೆಗಳನ್ನು ಪಡೆಯುವುದಕ್ಕೆ ಬಹಳಷ್ಟು ಕಷ್ಟಗಳಾಗಿವೆ.

ಕೊರೋನ ಸೋಂಕನ್ನು ನಿಯಂತ್ರಿಸುವ ಹೆಸರಲ್ಲಿ ಅತಿ ಕಠಿಣ ದಿಗ್ಬಂಧನ ವಿಧಿಸಿದ್ದರಿಂದ ಜನರು ಆಸ್ಪತ್ರೆಗೆ ಹೋಗುವುದಕ್ಕೆ ಅಡ್ಡಿಗಳಾದವು. ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನ ಪೀಡಿತರಿಗೆ ಹೊರರೋಗಿ, ಒಳರೋಗಿ ಚಿಕಿತ್ಸೆ ನೀಡುವಂತೆ ಕಡ್ಡಾಯ ನಿಯಮಗಳನ್ನು ಮಾಡಿದ್ದರಿಂದ, ಅನ್ಯ ರೋಗಿಗಳ ಚಿಕಿತ್ಸೆಗೆ ಸಮಸ್ಯೆಗಳಾದವು.

ಕೊರೋನ ಬಗ್ಗೆ ವಿಪರೀತವಾದ ಭೀತಿಯನ್ನು ಹುಟ್ಟಿಸಿದ್ದರಿಂದ ಅನ್ಯ ಸಮಸ್ಯೆಗಳುಳ್ಳವರು ವೈದ್ಯರ ಬಳಿಗೆ, ಆಸ್ಪತ್ರೆಗಳಿಗೆ ಹೋಗುವುದಕ್ಕೆ ಅಂಜುವಂತೆ ಆಯಿತು. ಅನ್ಯ ರೋಗಗಳಿಗಾಗಿ ಆಸ್ಪತ್ರೆಗಳಿಗೆ ಬಂದವರೆಲ್ಲರಿಗೆ, ಹೆರಿಗೆಗಾಗಿ ಬಂದ ಎಲ್ಲಾ ಗರ್ಭಿಣಿಯರಿಗೆ ಕೊರೋನ ಲಕ್ಷಣಗಳಿಲ್ಲದಿದ್ದರೂ ಕಡ್ಡಾಯವಾಗಿ ಕೊರೋನ ಪರೀಕ್ಷೆ ಮಾಡಿ, ಆ ಬಳಿಕವೇ ಚಿಕಿತ್ಸೆ ನೀಡುವುದೆಂಬ ವ್ಯವಸ್ಥೆ ಮಾಡಿದ್ದು ಇನ್ನಷ್ಟು ಆತಂಕ, ಹೆದರಿಕೆ, ಗೊಂದಲಗಳಿಗೆ ಕಾರಣವಾಯಿತು.

ಕೊರೋನ ಒಂದೇ ಮಹಾವ್ಯಾಧಿ ಎಂಬಂತೆ ಎಲ್ಲವನ್ನೂ ಮುಚ್ಚಿ ಹಾಕಿದ ನಂತರದ ಈ ಆರು ತಿಂಗಳಲ್ಲಿ ಅನೇಕರು ತಮ್ಮ ಬಂಧುಮಿತ್ರರನ್ನು ಹೃದಯಾಘಾತದ ಕಾರಣಕ್ಕೆ ಕಳೆದುಕೊಂಡಿದ್ದಾರೆ. ಈ ಕೊರೋನ ಕಾಲದಲ್ಲಿ ಹೃದ್ರೋಗದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ 35% ಇಳಿಕೆಯಾಗಿದೆ.

ಆದರೆ ಹೃದ್ರೋಗಗಳಿಂದ ಸಾವುಂಟಾಗುವ ಪ್ರಮಾಣದಲ್ಲಿ 4% ಏರಿಕೆಯಾಗಿದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕರೂ, ಹಿರಿಯ ಹೃದ್ರೋಗ ತಜ್ಞರೂ ಆಗಿರುವ ಡಾ|| ಸಿ.ಎನ್. ಮಂಜುನಾಥ್ ಹೇಳಿರುವುದು, ಇನ್ನೊಂದೆಡೆ, ಹಲವರು ತಮ್ಮ ಮನೆಗಳಲ್ಲೇ ಹೃದಯಾಘಾತದಿಂದ ಮೃತರಾದರು ಎಂಬ ವರದಿಗಳಾಗುತ್ತಿರುವುದು, ಹೃದ್ರೋಗದ ಲಕ್ಷಣಗಳಿರುವವರು ಆಸ್ಪತ್ರೆಗೆ ಹೋಗಲು ಹಿಂಜರಿಯುತ್ತಿದ್ದಾರೆ, ಅಥವಾ ಹೋಗಲು ಸಾಧ್ಯವಾಗುತ್ತಿಲ್ಲ, ಅಥವಾ ತೀರಾ ತಡವಾಗಿ ಹೋಗುತ್ತಿದ್ದಾರೆ ಎನ್ನುವುದನ್ನು ಸೂಚಿಸುತ್ತವೆ.

ಇದಲ್ಲದೆ, ಕೊರೋನ ಸೋಂಕು ಕೂಡ ದೇಹದಲ್ಲಿ ಉರಿಯೂತವನ್ನು ಹೆಚ್ಚಿಸುತ್ತದೆ, ರಕ್ತವು ಹೆಪ್ಪುಗಟ್ಟುವುದನ್ನು ಪ್ರಚೋದಿಸುತ್ತದೆ. ಆದ್ದರಿಂದ ಅದಾಗಲೇ ರಕ್ತನಾಳಗಳಲ್ಲಿ ಸಮಸ್ಯೆಯಿದ್ದವರಿಗೆ ಕೊರೋನ ಸೋಂಕು ತಗಲಿದರೆ ಹೃದಯಾಘಾತವಾಗುವುದಕ್ಕೆ, ಹೃದಯದ ಸ್ನಾಯುಗಳಿಗೆ ಸಮಸ್ಯೆಯಾಗುವುದಕ್ಕೆ ಕಾರಣವಾಗಬಹುದು.

ಒಟ್ಟಿನಲ್ಲಿ, ಹೃದಯದ ರಕ್ತನಾಳಗಳಲ್ಲಿ ಸಮಸ್ಯೆಗಳಿರುವವರಿಗೆ ಈ ಕೊರೋನ ಸೋಂಕು ಕಷ್ಟಕರವಾಗಿ ಪರಿಣಮಿಸಿದೆ. ಆದ್ದರಿಂದ ಅವರೆಲ್ಲರೂ ವಿಶೇಷ ಎಚ್ಚರಿಕೆಗಳನ್ನು ವಹಿಸಬೇಕು, ರಕ್ತನಾಳಗಳ ಸಮಸ್ಯೆಯಿಂದ ಹೃದಯದ ಸ್ನಾಯುಗಳಿಗೆ ರಕ್ತ ಪೂರೈಕೆಯಲ್ಲಿ ಕೊರತೆಯಾಗುತ್ತಿರುವ ಯಾವುದೇ ಲಕ್ಷಣಗಳು ಗೋಚರಿಸಿದರೆ ತಕ್ಷಣವೇ ಅದಕ್ಕೆ ತಕ್ಕ ಪರೀಕ್ಷೆಗಳನ್ನು ಮತ್ತು ಚಿಕಿತ್ಸೆಯನ್ನು ಪಡೆಯಬೇಕು.

ವ್ಯಕ್ತಿಯು ಯಾವುದೇ ಕೆಲಸವನ್ನು ಮಾಡುವಾಗ ಹೃದಯದ ಸ್ನಾಯುಗಳಿಗೆ ಇನ್ನಷ್ಟು ರಕ್ತವು ಹರಿಯಬೇಕಾಗುತ್ತದೆ. ಹೃದಯದ ರಕ್ತನಾಳಗಳಲ್ಲಿ ಸಮಸ್ಯೆಯಾಗಿ, ಅವುಗಳಲ್ಲಿ ರಕ್ತಸಂಚಾರಕ್ಕೆ ಅಡ್ಡಿಯಾಗುತ್ತಿದ್ದರೆ ಹೆಚ್ಚುವರಿಯಾಗಿ ರಕ್ತವನ್ನು ಹರಿಯುವುದಕ್ಕೆ ಸಾಧ್ಯವಾಗುವುದಿಲ್ಲ.

ಆದ್ದರಿಂದ, ಹೃದಯದ ರಕ್ತನಾಳಗಳಲ್ಲಿ ಸಮಸ್ಯೆಯಿದ್ದವರು ಯಾವುದೇ ಕೆಲಸವನ್ನು ಹೆಚ್ಚು ಮಾಡತೊಡಗಿದಾಗ ಕಷ್ಟವೆನಿಸತೊಡಗುತ್ತದೆ. ಈ ಕಷ್ಟವು ಹಲವು ಬಗೆಯಲ್ಲಿ ವ್ಯಕ್ತವಾಗಬಹುದು. ಹೃದಯದ ಸಮಸ್ಯೆಯುಳ್ಳವರಿಗೆ ಎದೆ ನೋವುಂಟಾಗುತ್ತದೆ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆಯಾದರೂ ಅದು ಸಂಪೂರ್ಣ ಸತ್ಯವಲ್ಲ; ಹೃದ್ರೋಗವುಳ್ಳವರಿಗೆ ಎದೆ ನೋವು ಇಲ್ಲದಿರಬಹುದು, ಅದರ ಬದಲಿಗೆ ಇತರ ಲಕ್ಷಣಗಳಿರಬಹುದು, ಎದೆ ನೋವು ಹೃದ್ರೋಗವಲ್ಲದೆ ಇತರ ಹಲವು ಕಾರಣಗಳಿಂದಲೂ ಉಂಟಾಗಬಹುದು. ಹಾಗಾಗಿ, ಹೃದ್ರೋಗವು ಹೆಚ್ಚು ಸಾಮಾನ್ಯವಾಗುತ್ತಿರುವಾಗ, ಯುವಜನರಲ್ಲೂ ಕಾಣಿಸಿಕೊಳ್ಳುತ್ತಿರುವಾಗ, ಹೃದ್ರೋಗದ ಲಕ್ಷಣಗಳ ಬಗ್ಗೆ ಎಲ್ಲರಲ್ಲೂ ಸ್ಪಷ್ಟವಾದ ಅರಿವಿರುವುದು ಒಳ್ಳೆಯದು.

ಹೃದಯದ ರಕ್ತನಾಳಗಳ ಕಾಯಿಲೆಯಿದ್ದರೆ, ಹೃದ್ರೋಗದ ಸಮಸ್ಯೆಯಿದ್ದರೆ, ವ್ಯಕ್ತಿಯು ಶ್ರಮ ವಿನಿಯೋಗಿಸಿದಾಗ ಹೃದಯಕ್ಕೆ ಅದನ್ನು ನಿಭಾಯಿಸುವುದಕ್ಕೆ ಕಷ್ಟವಾಗುತ್ತದೆ, ಅದು ಬೇರೆ ಬೇರೆ ರೀತಿಗಳಲ್ಲಿ ಪ್ರಕಟಗೊಳ್ಳಬಹುದು. ವ್ಯಕ್ತಿಯು ನಿತ್ಯದಂತೆ ನಡೆದಾಡುವಾಗ, ಮೆಟ್ಟಲುಗಳನ್ನೇರುವಾಗ, ಕೆಲಸಗಳನ್ನು ಮಾಡುವಾಗ ಅಥವಾ ತುಂಬು ಊಟವನ್ನು ಮಾಡಿದಾಗ ದೇಹದ ಆಯಾ ಭಾಗಗಳಿಗೆ ಹೆಚ್ಚಿನ ರಕ್ತ ಪೂರೈಕೆಯ ಅಗತ್ಯವುಂಟಾಗುವುದರಿಂದ ಇಂಥ ಸಂದರ್ಭಗಳಲ್ಲಿ ಹೃದ್ರೋಗವನ್ನು ಸೂಚಿಸುವ ಲಕ್ಷಣಗಳು ಅನುಭವಕ್ಕೆ ಬರುತ್ತವೆ.

ಹೃದಯದ ಸ್ನಾಯುಗಳಲ್ಲಿ ನೋವನ್ನು ಗ್ರಹಿಸುವ ನರಗಳಿಲ್ಲದಿರುವುದರಿಂದ ನಮ್ಮ ಕೈಕಾಲುಗಳಿಗೆ ಗಾಯವಾದಾಗ ಉಂಟಾಗುವಂಥ ನೋವು ಹೃದಯದ ಸಮಸ್ಯೆಗಳಲ್ಲಿ ಉಂಟಾಗುವುದಿಲ್ಲ. ಬದಲಿಗೆ ಹೃದಯದ ಸುತ್ತುಮುತ್ತಲಿನ ಅಂಗಗಳಲ್ಲಿ ಬಗೆಬಗೆಯ ವೇದನೆಗಳು, ಅಥವಾ ‘ಕಷ್ಟಗಳು’, ಕಂಡುಬರಬಹುದು.

ನಡೆದಾಡುವಾಗ ಅಥವಾ ದುಡಿಯುವಾಗ ಅಥವಾ ತುಂಬು ಊಟ ಮಾಡಿದಾಗ ಕುತ್ತಿಗೆ ಅಥವಾ ಗಂಟಲು ಅಥವಾ ಎದೆ ಬಿಗಿದಂತಾಗುವುದು ಅಥವಾ ಭಾರವೆನಿಸುವುದು, ಎದೆ ಅಥವಾ ಗಂಟಲು ಅಥವಾ ಹೊಟ್ಟೆಯ ಮೇಲ್ಭಾಗದಲ್ಲಿ ಉಬ್ಬಿ ಬಂದಂತಾಗುವುದು (‘ಗ್ಯಾಸ್’ ತುಂಬಿದಂತಾಗುವುದು), ಎದೆ ಹಿಂಡಿದಂತಾಗುವುದು ಅಥವಾ ನೋವಾಗುವುದು (ಎದೆಯ ಎಡ, ಬಲ, ಮಧ್ಯ, ಎಲ್ಲೇ ಆಗಿರಬಹುದು), ಭುಜ, ತೋಳು, ದವಡೆ, ಕತ್ತಿನ ಬದಿಗಳು, ಬೆನ್ನಿನ ಮೇಲ್ಭಾಗಗಳಲ್ಲಿ ಸೆಳೆದಂತಾಗುವುದು ಅಥವಾ ನೋಯುವುದು, ಆಯಾಸವಾಗುವುದು, ಉಸಿರಾಡಲು ಕಷ್ಟವೆನಿಸುವುದು, ಎದೆ ಬಡಿತ ಹೆಚ್ಚುವುದು, ತಲೆ ಸುತ್ತುವುದು, ಇತ್ಯಾದಿಗಳೆಲ್ಲವೂ ಹೃದ್ರೋಗದ ಲಕ್ಷಣಗಳಾಗಿರಬಹುದು.

ಆದ್ದರಿಂದ ಯಾರಲ್ಲೇ ಆಗಲಿ, ಯಾವುದೇ ಶ್ರಮವುಳ್ಳ ಕೆಲಸಗಳಲ್ಲಿ ತೊಡಗಿದಾಗ ಹೊಕ್ಕಳಿಂದ ಮೇಲಕ್ಕೆ ಯಾವುದೇ ಅನುಭವಗಳಾದರೆ, ಮತ್ತು ಪ್ರತೀ ಬಾರಿ ಅದೇ ಕೆಲಸವನ್ನು ಮಾಡುವಾಗ ಆ ತೊಂದರೆಯು ಮರುಕಳಿಸುತ್ತಿದ್ದರೆ, ಅದನ್ನು ಹೃದ್ರೋಗದ ಸೂಚನೆಯೆಂದು ಪರಿಗಣಿಸುವುದೇ ಒಳ್ಳೆಯದು.

ಯಾವುದೇ ಶ್ರಮದ ಕೆಲಸವನ್ನು ಮಾಡುವಾಗ ಇಂತಹ ಲಕ್ಷಣಗಳುಳ್ಳವರು ಕೂಡಲೇ ತಜ್ಞ ವೈದ್ಯರನ್ನು ಕಾಣಲೇ ಬೇಕು ಮತ್ತು ಹೃದ್ರೋಗಕ್ಕೆ ಪರೀಕ್ಷೆಗಳನ್ನು ನಡೆಸುವಂತೆ ಒತ್ತಾಯಿಸಬೇಕು. ಕೆಲವೊಮ್ಮೆ ವೈದ್ಯರು ಕೂಡ ಈ ಲಕ್ಷಣಗಳನ್ನು ಲಘುವಾಗಿ ಪರಿಗಣಿಸಿ, ‘ಗ್ಯಾಸಿಗೋ’, ನೋವಿಗೋ ಮಾತ್ರೆಗಳನ್ನು ಕೊಟ್ಟು ಕಳುಹಿಸಬಹುದು, ಅದರಿಂದ ಹೃದ್ರೋಗದ ಪರೀಕ್ಷೆಗಳು ನಡೆಯದೆ ಸಮಸ್ಯೆಗಳಾಗಬಹುದು.

ಇಂಥ ಲಕ್ಷಣಗಳಿದ್ದವರು ಈ ಕೊರೋನ ಕಾಲದಲ್ಲಿ ಪರೀಕ್ಷೆಗೆ ಹೋಗಲು ಹಿಂಜರಿದಿರುವುದು, ವೈದ್ಯರು ಲಭ್ಯವಾಗದಿರುವುದು, ಹಾಗೊಮ್ಮೆ ದೊರೆತರೂ ಕೊರೋನ ಕಳೆಯಲಿ ಎಂದು ಮುಂದಕ್ಕೆ ಹಾಕಿರುವುದು, ಹೃದಯದ ಪರೀಕ್ಷೆಗೆ ಮುನ್ನ ಕೊರೋನ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದಾಗ ಒಪ್ಪದೆ ವಿಮುಖರಾಗಿರುವುದು ಎಲ್ಲವೂ ಘಟಿಸಿವೆ, ಅದರಿಂದ ಕೆಲವರಿಗೆ ಅಪಾಯಗಳಾಗಿರುವ ಸಾಧ್ಯತೆಗಳು ಇದ್ದೇ ಇವೆ.

ಆದ್ದರಿಂದ ಯಾರಿಗೇ ಆಗಲಿ, ಮೇಲೆ ಹೇಳಿದ ಲಕ್ಷಣಗಳಿದ್ದರೆ ಕೂಡಲೇ ಇಸಿಜಿ, ಅಥವಾ ಇನ್ನೂ ಒಳ್ಳೆಯದಾಗಿ, ಹೃದಯತಜ್ಞರನ್ನು ಕಂಡು ಟ್ರೆಡ್ ಮಿಲ್ ಪರೀಕ್ಷೆ ಇತ್ಯಾದಿ ಮಾಡಿಸಿಕೊಳ್ಳಬೇಕು, ಅದರಲ್ಲೇನಾದರೂ ಹೃದ್ರೋಗದ ಸೂಚನೆಗಳು ಕಂಡುಬಂದು ಇನ್ನಷ್ಟು ಉನ್ನತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕೆಂದು ವೈದ್ಯರು ಹೇಳಿದರೆ ಹಿಂಜರಿಯದೆ ಮಾಡಿಸಿಕೊಳ್ಳಬೇಕು.

ಹೃದಯದ ರಕ್ತನಾಳಗಳ ಕಾಯಿಲೆಗೆ ನಮ್ಮ ಆಧುನಿಕ ಆಹಾರವೇ ಅತಿ ಮುಖ್ಯ ಕಾರಣವಾಗಿದೆ. ಅದರ ಜೊತೆಗೆ, ವ್ಯಾಯಾಮವಿಲ್ಲದ ಜೀವನ, ಧೂಮಪಾನ, ಮದ್ಯಪಾನಗಳು ಕೂಡ ಕಾರಣಗಳಾಗಿವೆ. ಸಕ್ಕರೆ, ಎಲ್ಲಾ ಸಿಹಿ ತಿನಿಸುಗಳು, ಹಣ್ಣು ಮತ್ತು ಹಣ್ಣಿನ ರಸಗಳು (ಹಣ್ಣು – ತರಕಾರಿ ಸೇವಿಸಿದರೆ ಒಳ್ಳೆಯದು ಎಂದೇ ಹೆಚ್ಚಿನ ವೈದ್ಯರು ಹೇಳುತ್ತಿರುತ್ತಾರೆ, ಆದರೆ ಹಣ್ಣು ಮತ್ತು ತರಕಾರಿ ಒಂದೇ ಅಲ್ಲ, ಬೇರೆ ಬೇರೆಯೇ ಆಗಿವೆ ಎಂಬುದನ್ನು ಗಮನಿಸಿ, ಹಣ್ಣು ಅಂದರೆ ಸಕ್ಕರೆ, ಅಷ್ಟೇ), ಸಂಸ್ಕರಿತ ತಿನಿಸುಗಳು (ಮೈದಾ, ಬ್ರೆಡ್ಡು, ಬಿಸ್ಕತ್ತು ಇತ್ಯಾದಿ), ರಿಫೈನ್ಡ್ ಎಣ್ಣೆ, ಕರಿದ ತಿನಿಸುಗಳು ಮತ್ತು ವಿಪರೀತ ಪ್ರಮಾಣದಲ್ಲಿ ಧಾನ್ಯಗಳ ಸೇವನೆ ಹೃದ್ರೋಗವೂ ಸೇರಿದಂತೆ ಎಲ್ಲಾ ಆಧುನಿಕ ರೋಗಗಳಿಗೆ ಮುಖ್ಯ ಕಾರಣಗಳಾಗಿವೆ. ಇವೆಲ್ಲವನ್ನು ತ್ಯಜಿಸಿ, ನಿಯತವಾಗಿ ವ್ಯಾಯಾಮ ಮಾಡಿದರೆ ಈ ರೋಗಗಳನ್ನು ದೂರವಿಡಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.

ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.

ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.

ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

Published

on

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.

ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ

ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.

ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?

ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.

ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.

ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ನಿಮ್ಮದು ದರೋಡೆಕೋರ ಸರಕಾರವಲ್ಲವೇ?

ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..

ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending