ದಿನದ ಸುದ್ದಿ
ಮಸೀದಿ ಧ್ವಂಸದ ಚಾರಿತ್ರಿಕ ನೋಟ : ಎಲ್ಲರೂ ನಿರ್ದೊಷಿಗಳಾದರೆ ಧ್ವಂಸಗೈದವರಾರು..?
- ಹಾರೋಹಳ್ಳಿ ರವೀಂದ್ರ
ಅಯೋಧ್ಯೆ ಭಾರತದ ಪ್ರಾಚೀನ ನಗರಗಳಲ್ಲಿ ಒಂದು. ಇದು ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯಲ್ಲಿದೆ. ಅಯೋಧ್ಯೆಯು ಸರಾಯು ನದಿಯ ತೀರದಲ್ಲಿದ್ದು, ಭಾರತದ ರಾಜಧಾನಿ ದೆಹಲಿಯಿಂದ 555 ಕಿಲೋಮೀಟರ್ ದೂರದಲ್ಲಿದೆ. ಮೊಘಲ್ ಸಾಮ್ರಾಜ್ಯವು ಭಾರತೀಯ ಉಪಖಂಡ ಉತ್ತರ ಭಾಗಗಳನ್ನು 16ನೇ ಶತಮಾನದಲ್ಲಿ ಆಳಿದ ಪ್ರಮುಖ ಸಾಮ್ರಾಜ್ಯಗಳಲ್ಲಿ ಒಂದು.
ಮೊಘಲ್ ಸಾಮ್ರಾಜ್ಯ ಅಸ್ತಿತ್ವಕ್ಕೆ ಬರುವ ಮುನ್ನ ದೆಹಲಿ ಸುಲ್ತಾನರು ಅಧಿಕಾರ ನಡೆಸುತ್ತಿದ್ದರು. ದೆಹಲಿ ಸುಲ್ತಾನರ ಕೊನೆಯ ದೊರೆಯಾದ ಇಬ್ರಾಹಿಂ ಲೂದಿಯನ್ನು 1526ರ ಮೊದಲನೇ ಪಾಣಿಪತ್ ಕದನದಲ್ಲಿ ಸೋಲಿಸಿ ಮೊಘಲ್ ಸಾಮ್ರಾಜ್ಯದ ಅಸ್ತಿತ್ವಕ್ಕೆ ಬಾಬರ್ನು ಕಾರಣಕರ್ತನಾಗುತ್ತಾನೆ.
ಅಯೋಧ್ಯೆಯಲ್ಲಿ ಒಂದು ಐತಿಹಾಸಿಕ ಹಿನ್ನೆಲೆಯುಳ್ಳ ಮಸೀದಿಯಿತ್ತು ಎಂದರೆ ಅದು ಬಾಬ್ರೀ ಮಸೀದಿ. ಈ ಬಾಬ್ರೀ ಮಸೀದಿಯನ್ನು ಮಸ್ವಿದ್-ಇ-ಜನ್ಮಸ್ಥಾನ್, ಜಾಮೀಮಸೀದಿ ಎಂದು ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಆ ಸ್ಥಳದಲ್ಲಿ ದೇವಸ್ಥಾನ ಇದ್ದಿದ್ದೆ ಹಿಂದೂ ಹಾಗೂ ಮುಸ್ಲಿಮರ ಮನಸ್ಥಾಪಕ್ಕೆ ಕಾರಣವಾಗಿದ್ದು, ಆ ಸ್ಥಳದಲ್ಲಿ ಹಿಂದೂ ಮತ್ತು ಮುಸ್ಲೀಮರು ಒಟ್ಟಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದರು.
ಆದರೆ ದೇಗುಲ ನೆಪ ಮಾಡಿಕೊಂಡು ಹಿಂದೂ ಮತ್ತು ಮುಸಲ್ಮಾನರಿಗೆ ಮನಸ್ಥಾಪ ಉಂಟಾಗುವಂತೆ ಮಾಡಿದ್ದು ಹಿಂದೂಪರ ಸಂಘಟನೆಗಳು. ಕೋಮುವಾದದ ಬೆಂಕಿಯನ್ನು ಬಾಬ್ರೀ ಮಸೀದಿಯನ್ನು ಧ್ವಂಸಮಾಡುವ ಮೂಲಕ ಹಚ್ಚಿದರು. ಆ ಮೂಲಕ ಆತನಕವೂ ಇಲ್ಲದಿದ್ದ ಧರ್ಮ ಕಲಹ ಮೊಳಕೆಯೊಡೆಯಿತು. ಅದಕ್ಕೆ ಅವರು ನೆಪ ಮಾಡಿಕೊಂಡಿದ್ದು ರಾಮ ಮಂದಿರ ಘೋಷಾವಾಕ್ಯ.
ರಾಮಮಂದಿರ ಕಟ್ಟುವ ಘೋಷಣೆಯೊಂದಿಗೆ ಆಂದೋಲನ ಆರಂಭಿಸಿದ್ದು ವಿಶ್ವ ಹಿಂದೂ ಪರಿಷತ್ತೇ ಆದರು, ಆ ಹೋರಾಟದ ಹಿಂದಿನ ಶಕ್ತಿ ಹಾಗೂ ಅದನ್ನು ಉತ್ತುಂಗಕ್ಕೆ ಕೊಂಡೊಯ್ದದ್ದು ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ, ರಾಮ ರಥಯಾತ್ರೆ ಅವರದೇ ಕಲ್ಪನೆ. ಅದು ರಾಮಭೂಮಿ ಹೋರಾಟಕ್ಕೂ ಆ ಮೂಲಕ ಹಿಂದುತ್ವ ಹೋರಾಟಕ್ಕೂ ಜೊತೆಗೆ ದೇಶದಾದ್ಯಂತ ಬಿಜೆಪಿಗೂ ಟಾನಿಕ್ ನೀಡಿತು. ಮುಂದೆ ಅದೇ ಮಸೀದಿ ಧ್ವಂಸಕ್ಕೂ ಕಾರಣವಾಯಿತು.
ದೇಶದಾದ್ಯಂತ ಹಲವು ರಥಯಾತ್ರೆಗಳನ್ನು ನಡೆಸಿ ಪ್ರಸಿದ್ದಿಗಳಿಸಿರುವ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಅವರ ಮೊದಲ ರಥಯಾತ್ರೆ ‘ರಾಮ ರಥಯಾತ್ರೆ’ ರಾಮ ಜನ್ಮ ಭೂಮಿಯನ್ನು ಸ್ವತಂತ್ರಗೊಳಿಸುವ ಉದ್ದೇಶಗೊಳೊಂದಿಗೆ ಬಿಜೆಪಿ 1990 ಸೆಪ್ಟೆಂಬರ್ 25 ರಂದು ಗುಜರಾತ್ನ ಸೋಮನಾಥದಲ್ಲಿ ರಥಯಾತ್ರೆಗೆ ಚಾಲನೆ ನೀಡಿದರು. 10 ಸಾವಿರ ಕಿ.ಮೀ ಕ್ರಮಿಸಿ ಅದು ಅಕ್ಟೋಬರ್ 30 ರಂದು ಅಯೋಧ್ಯೆಗೆ ತಲುಪುವುದು ಎಂದು ನಿಗದಿಯಾಗಿತ್ತು. ಬಿಜೆಪಿ ಕಾರ್ಯಕರ್ತರು ಹಿಂದೂಗಳ ಮನೆಮನೆಗೆ ತೆರಳಿ ರಾಮಮಂದಿರ ಕಟ್ಟಲು ಇಟ್ಟಿಗೆ ಸಂಗ್ರಹಿಸಿದರು ಆದರೆ ಯಾತ್ರೆ ಕೊನೆಗೊಳ್ಳಲಿಲ್ಲ.
1992, ಡಿಸೆಂಬರ್ 6, ದೇಶದ ಮೂಲೆ ಮೂಲೆಗಳಿದ ಉತ್ತರ ಪ್ರದೇಶದ ಅಯೋಧ್ಯೆಗೆ ಕರಸೇವಕರ ದಂಡು ತೆರಳಿತು. ವಿಎಚ್ಪಿ, ಶಿವಸೇನೆ, ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಅಲ್ಲಿ ನೆರೆದಿದ್ದರು. ನೋಡ ನೋಡುತ್ತಿದ್ದಂತೆಯೇ ಕರಸೇವಕರ ಸೇನೆ ರಾಮ್ಕೋರ್ಟ್ ಪರ್ವತ ಏರಿ ಸಂಜೆಯ ಸೂರ್ಯ ಬಾನಂಚು ಸೇರುವುದೊಳಗೆ ಬಾಬರಿ ಮಸೀದಿಯ ಮೂರು ಗುಮ್ಮಟಗಳನ್ನು ನೆಲಕ್ಕುರುಳಿಸಿದರು. ಅವಶೇಷಗಳಡಿ ಸಿಕ್ಕಿ ಕೆಲ ಕರಸೇವಕರು ಪ್ರಾಣಬಿಟ್ಟರು.
ಕೇಂದ್ರ ಸರ್ಕಾರ ಸ್ಥಳಕ್ಕಟ್ಟಿದ್ದ ಸೇನಾಪಡೆಯ ಯೋಧರಿಗೆ ಮಸೀದಿಯ ಸಮೀಪಕ್ಕು ಹೋಗಲು ಸಾಧ್ಯವಾಗಲಿಲ್ಲ. ಅಂದು ಕೇಂದ್ರ ಸರ್ಕಾರದಲ್ಲಿ ಕಾಂಗ್ರೆಸ್ ಅಸ್ತಿತ್ವದಲ್ಲಿದ್ದು, ಈ ದುರಂತವನ್ನು ತಡೆಯುವಲ್ಲಿ ವಿಫಲವಾಯಿತು. ತದನಂತರ ಪಿ.ವಿ.ನರಸಿಂಹರಾವ್ ನೇತೃತ್ವದ ಕೇಂದ್ರ ಸಕರ್ಾರ ಉತ್ತರ ಪ್ರದೇಶದ ಕಲ್ಯಾಣ್ಸಿಂಗ್ ಅವರ ಬಿ.ಜೆ.ಪಿ ಸರ್ಕಾರವನ್ನು ವಜಾಮಾಡಿ ರಾಷ್ಟ್ರಪತಿ ಆಳ್ವಿಕೆ ಜಾರಿಮಾಡಿತು.
ಬಾಬ್ರಿ ಮಸೀದಿ ಬೆನ್ನಲ್ಲೆ ದೇಶದಾದ್ಯಂತ ಕೋಮುಗಲಭೆಗಳು ಆರಂಭವಾದವು. ಅಯೋಧ್ಯೆಗೆ ತೆರಳಿದ ಕರ ಸೇವಕರು ತವರಿಗೆ ಬಂದು ಸೇರುವುದಕ್ಕೂ ಮುನ್ನವೇ ಅವರ ಊರು ಹೊತ್ತಿ ಉರಿಯುತ್ತಿದ್ದವ್ತು. ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಸೇರಿದಂತೆ ದೇಶದ ಮೂಲೆ ಮೂಲೆಗಳಲ್ಲೂ ಎರಡು ಕೋಮುಗಳ ನಡುವೆ ಸಂಘರ್ಷ ನಡೆಯಿತು.
ಕರ್ನಾಟಕದಲ್ಲಿ ಬೆಂಗಳೂರು, ಮೈಸೂರು, ಗುಲ್ಬರ್ಗ, ಬೀದರ್, ಹುಬ್ಬಳ್ಳಿ, ಧಾರವಾಡ, ದ.ಕನ್ನಡ, ರಾಯಚೂರು, ಚಿತ್ರದುರ್ಗ, ಮಂಡ್ಯ ಮತ್ತು ತುಮಕೂರು ಸೇರಿದಂತೆ ಕೋಮು ಗಲಭೆಗಳು ನಡೆದವು ಡಿ.7 ರಂದು ಆರಂಭವಾದ ಕರ್ನಾಟಕದಲ್ಲಿನ ಹಿಂಸಾಚಾರವು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯಿತು.
ಇದಕ್ಕೆ 78 ಮಂದಿ ಬಲಿಯಾಗಿದ್ದರು, ಅದರಲ್ಲಿ ಪೊಲೀಸರ ಗುಂಡಿಗೆ ಬಲಿಯಾದವರು 33 ಜನ. ಒಟ್ಟಾರೆ ದೇಶದಾಧ್ಯಂತ ಈ ಕೋಮುಗಲಭೆಯಿಂದ ಸುಮಾರು 2000ಕ್ಕು ಹೆಚ್ಚು ಜನರು ಪ್ರಾಣಬಿಟ್ಟರು. ಇದಾದ ನಂತರ 1996ರಲ್ಲಿ ಕೇಂದ್ರದಲ್ಲಿ ಮೊದಲಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂತು. ಅಟಲ್ಬಿಹಾರಿ ವಾಜಪೇಯಿ ಪ್ರಧಾನಿಯಾದರು.
ಲಿಬ್ಹರಾನ್ ಆಯೋಗ
16 ಡಿಸೆಂಬರ್ 1992 ರಂದು ನ್ಯಾಯಮೂರ್ತಿ ಲಿಬ್ಹರಾನ್ ನೇತೃತ್ವದಲ್ಲಿ ಬಾಬ್ರಿ ಮಸೀದಿ ಧ್ವಂಸ ಕುರಿತು ತನಿಖೆಗಾಗಿ ಆಯೋಗವೊಂದನ್ನು ರಚಿಸಲಾಯಿತು. ಆಯೋಗಕ್ಕೆ ಮೊದಲ ಆದೇಶದಲ್ಲಿ ನೀಡಿದ್ದು ಮೂರೇ ತಿಂಗಳ ಅವಧಿ. ಆದರೆ ಪ್ರಧಾನಿಯ ಕೈಗೆ ನ್ಯಾಯಮೂರ್ತಿ ಲಿಬ್ಹರಾನ್ ವರದಿಯನ್ನು ಒಪ್ಪಿಸಿದ್ದು ಅದಾದ ಹದಿನೇಳು ವರ್ಷಗಳ ನಂತರ, 48 ಬಾರಿ ಕೇಂದ್ರ ಸರ್ಕಾರ ಆಯೋಗದ ಅವಧಿಯನ್ನು ವಿಸ್ತರಿಸಬೇಕಾಯಿತು.
ವರದಿಯು 900 ಕ್ಕು ಹೆಚ್ಚು ಪುಟ್ಳನ್ನು ಒಳಗೊಂಡಿದ್ದು ಆಯೋಗದ ಕಾರ್ಯಕಲಾಪಕ್ಕೆ ಸುಮಾರು 8 ಕೋಟಿ ವೆಚ್ಚವಾಗಿದೆ. ಲಿಬ್ಹರಾನ್ ವರದಿಯಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಸಚಿವ ಮುರುಳಿ ಮನೋಹರ ಜೋಶಿ, ಉಮಾಭಾರತಿ ಇವರು ಧ್ವಂಸಕ್ಕೆ ನೇರ ಕಾರಣರು, ಇದಲ್ಲದೆ ಮಸೀದಿ ಧ್ವಂಸ ತಡೆಯಲು ಅಂದಿನ ಕಾಂಗ್ರೆಸ್ ಸರ್ಕಾರ ಪ್ರಧಾನಿಯಾದ ನರಸಿಂಹರಾವ್ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಅಡ್ವಾಣಿ ರಥಯಾತ್ರೆ ಮಾಡಿದ್ದು ತಪ್ಪು. ಇಡೀ ಘಟನೆಯಲ್ಲಿ ವಿ ಎಚ್ ಪಿ ನಾಯಕರ ಪಾತ್ರ ಪ್ರಮುಖ ಎಂದು ಹೇಳಿತು.
ಮಸೀದಿಯ 2010ರ ಸೆಪ್ಟೆಂಬರ್ ತೀರ್ಪು
ಅಯೋಧ್ಯೆಯನ್ನು ಹೊಂದಿರುವ ಉತ್ತರಪ್ರದೇಶ ಭಯದ ಕಾರ್ಮೋಡ, ಇತರೆ ರಾಜ್ಯಗಳಲ್ಲಿಯೂ ಜನಮನದಲ್ಲೂ ಎಂಥದ್ದೊ ಒಂದು ರೀತಿಯ ಆತಂಕ ಮತ್ತು ಕಳವಳ, ಮುಂಜಾಗ್ರತ ಕ್ರಮವಾಗಿ ಉತ್ತರ ಪ್ರದೇಶದ ಅಂದಿನ ಮಾಯಾವತಿ ಸರ್ಕಾರವು ಅಯೋಧ್ಯೆಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ಆಗಸ್ಟ್ 30 ರಿಂದಲೇ ಜಾರಿಗೆ ತಂದಿತ್ತು. ಕೋಮು ಸಂಘರ್ಷ ಮರುಕಳಿಸದಂತೆ ತಡೆಯಲು ಅವಳಿ ನಗರಗಳಾದ ಅಯೋಧ್ಯೆ, ಫೈಜಾಬಾದ್ನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಎಲ್ಲಿ ನೋಡಿದರೂ ಖಾಕಿಗಳ ದಂಡು ಸುಮಾರು 2 ಲಕ್ಷ ಭದ್ರತಾ ಸಿಬ್ಬಂದಿ, ಉತ್ತರ ಪ್ರದೇಶದ ಪ್ರಮುಖ ಬೀದಿಗಳಲ್ಲಿ ಗಸ್ತು ತಿರುಗುತ್ತಿದ್ದರು. 1500 ಪೊಲೀಸರು ಹೈಕೋರ್ಟ್ ಆವರಣದಲ್ಲಿ ನಿಯೋಜಿಸಲಾಗಿತ್ತು.
2010 ಸೆಪ್ಟೆಂಬರ್ 30 ರಂದು ಅಲಹಬಾದ್ ಹೈಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿತು. ನ್ಯಾಯಮೂರ್ತಿಗಳಾದ ಡಿ.ವಿ.ಶರ್ಮಾ, ಸುಧೀರ್ ಅಗರವಾಲ್ ಮತ್ತು ಎಸ್.ಯು ಖಾನ್ ಅವರಿದ್ದ ತ್ರಿಸದಸ್ಯ ಪೀಠ 2-1 ರ ಆಧಾರದ ಮೇಲೆ 2.77 ಎಕರೆ ಮಸೀದಿ ಜಾಗವನ್ನು ಮೂರು ಭಾಗವಾಗಿ ವಿಂಗಡಿಸಿತು. ಹಿಂದೂ ಮಹಾಸಭಾ ಪ್ರತಿನಿಧಿತ್ವದ ರಾಮಲಲ್ಲ, ಇಸ್ಲಾಂ ಪ್ರತಿನಿಧಿತ್ವದ ಸುನ್ನಿವಕ್ಫ್ ಮಂಡಳಿ ಹಾಗೂ ನಿರ್ಮೋಹಿ ಅಖಾಡಕ್ಕೆ ಸೇರಿದಂತೆ ಮೂರು ಭಾಗಮಾಡಿತು.
ಫಲಕಾರಿಯಾಗದ ಸಂಧಾನ
ಮಸೀದಿ ವಿವಾದ ತೀರ್ಪನ್ನು ಎರಡೂ ಕಡೆಯ ಧಾರ್ಮಿಕ ಮುಖಂಡರು ಒಪ್ಪಲಿಲ್ಲ. ಆದರೆ ಇದನ್ನು ಮಾತುಕತೆ ಮೂಲಕ ಬಗೆಹರಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡರು. ಆದರೆ ಕಾಂಗ್ರೆಸ್ನ ಈ ಪ್ರಯತ್ನವನ್ನು ಬಿಜೆಪಿ ತಳ್ಳಿ ಹಾಕಿತು. ಸಂಪೂರ್ಣ ಜಾಗ ನಮ್ಮದೇ ಆಗಬೇಕೆಂದು ಹಿಂದೂ ಧಾರ್ಮಿಕ ಮುಖಂಡರು ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಂಧಾನಕ್ಕೆ ವಿರೋಧ ವ್ಯಕ್ತಪಡಿಸಿದರು. ಸಂಧಾನದ ಮೂಲಕ ಬಗೆಹರಿಯದ ಈ ಸಮಸ್ಯೆ ಅಂತಿಮವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತು.
2019 ರ ಸುಪ್ರೀಂಕೋರ್ಟ್ ತೀರ್ಪೀ
2010 ರ ಅಲಹಬಾದ್ ಕೋರ್ಟ್ ನ ತೀರ್ಪನ್ನು ಒಪ್ಪದ ರಾಮಲಲ್ಲ ಮತ್ತು ಸುನ್ನಿವಕ್ಫ್ ಬೋರ್ಡ್ ಇಬ್ಬರೂ ಸೇರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದರು 8 ವರ್ಷಗಳ ಸುಧೀರ್ಘ ವಿಚಾರಣೆಯ ನಂತರ 2019ಕ್ಕೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್, ಎಸ್.ಎ.ಬೊಬ್ಬೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಹಾಗೂ ಎಸ್.ಎ.ನಝೀರ್ ಅವರನ್ನೊಳಗೊಂಡ ಪೀಠ ತನ್ನ ತೀರ್ಪನ್ನು ಪ್ರಕಟಿಸಿತು. ಈ ಹಿಂದೆ ಅಲಹಬಾದ್ ಹೈಕೋರ್ಟ್ ಮೂವರಿಗು ಸಮನಾಗಿ ಹಂಚಿದರೆ ಸುಪ್ರೀಂಕೋರ್ಟ್ 2.77 ಎಕರೆ ಮಸೀದಿಯ ಜಾಗವನ್ನು ಮಂದಿರ ಕಟ್ಟಲು ಹಸ್ತಾಂತರಿಸಿ ಮಸೀದಿ ಕಟ್ಟಲು ಬೇರೆ ಕಡೆ ಭೂಮಿಯನ್ನು ನೀಡಲು ತೀರ್ಪು ನೀಡಿತು.
2003 ಮತ್ತು 2020 ರ ಪುರಾವೆ
2019 ರಲ್ಲಿ ಸುಪ್ರೀಂಕೋರ್ಟ್ ಮಂದಿರ ಕಟ್ಟಲು ಸಂಪೂರ್ಣ ಮಸೀದಿ ಜಾಗವನ್ನು ಹಸ್ತಾಂತರಿಸಿ ತೀರ್ಪು ನೀಡಿತು. ಈ ತೀರ್ಪಿಗೆ ಅದು ಆಧರಿಸಿಕೊಂಡಿದ್ದು 2003 ರ ಪುರಾತತ್ವ ಇಲಾಖೆ ವರದಿಯನ್ನು. ದೇವಾಲಯ ಮಾದರಿಯಲ್ಲಿ ಗೋಡೆ ಮತ್ತು ಗೋಪುರಗಳು ಇರುವುದರಿಂದ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ಪುರಾವೆ ಹೇಳಿತು.
ಇದನ್ನು ಸುಪ್ರೀಂಕೋರ್ಟ್ ಕೂಡ ಗಂಭೀರವಾಗಿ ಪರಿಗಣಿಸಿತು. ಮಂದಿರ ಕಟ್ಟಲು ಮಸೀದಿಯನ್ನು ಹಗೆಯುವಾಗ 24 ಮೇ 2020 ರಂದು ಬುದ್ಧನ ವಿಗ್ರಹ ಮಸೀದಿಯ ಕೆಳಗೆ ಸಿಕ್ಕಿತು. ಇದು ಆ ಸಂದರ್ಭದಲ್ಲಿ ಭಾರತದಾಧ್ಯಂತ ದೊಡ್ಡ ಚರ್ಚೆಯಾಯಿತು. ಅಯೋಧ್ಯೆಯು ಹಿಂದೆ ಸಾಕೇತ್ ನಗರವಾಗಿದ್ದು ಬೌದ್ಧರ ಕೇಂದ್ರವಾಗಿತ್ತು ಇದನ್ನು ನಮಗೆ ಹಸ್ತಾಂತರಿಸಿ ಎಂದು ಸಾಕಷ್ಟು ಪ್ರತಿಭಟನೆಗಳು ನಡೆದವು. 2003 ರ ಪುರಾವೆಯನ್ನು ಗಣನೆಗೆ ತೆಗೆದುಕೊಂಡ ಕೋರ್ಟ್ 2020 ರಲ್ಲಿ ಸಿಕ್ಕ ಬುದ್ಧನ ಉತ್ಖನನದ ಬಗೆ ವಿವರಣೆಯನ್ನೆ ಕೇಳಲಿಲ್ಲ.
05 ಆಗಸ್ಟ್ 2020 ಮಂದಿರ ಶಿಲಾನ್ಯಾಸ
ಸುಪ್ರೀಂಕೋರ್ಟ್ 2019 ರಲ್ಲಿ ಸಂಪೂರ್ಣ ಜಾಗವನ್ನು ರಾಮಜನ್ಮಭೂಮಿಗೆ ಹಸ್ತಾಂತರಿಸಿದ ಮೇಲೆ ಅದನ್ನು ಕಟ್ಟಲು ಮೊದಲ ಶಿಲಾನ್ಯಾಸ ಆಗಸ್ಟ್ 5 ರಂದು ನಡೆಯಿತು. ಒಂದು ಖಾಸಗಿ ಟ್ರಸ್ಟ್ ನಿರ್ಮಿಸುತ್ತಿರುವ ರಾಮ ಮಂದಿರ ಶಿಲಾನ್ಯಾಸಕ್ಕೆ ದೇಶದ ಪ್ರಧಾನಿಯಾದ ನರೇಂದ್ರ ಮೋದಿಯವರೇ ನೆರವೇರಿಸಿದರು. ಅದರ ಉಪಸ್ಥಿತಿಯ ಭಾಗವಾಗಿ ಆರ್ ಎಸ್ ಎಸ್ ನ ರಾಷ್ಟ್ರೀಯ ಸಂಚಾಲಕರಾದ ಮೋಹನ್ ಭಾಗವತ್ ಕೂಡ ಇದ್ದರು. ಇಲ್ಲಿಗೆ ಮಸೀದಿ ಕತೆ ಮುಗಿಯಿತು.
ಅಂತಿಮ ತೀರ್ಪು 30 ಸೆಪ್ಟೆಂಬರ್ 2020
ಮಸೀದಿ ಜಾಗದ ವಿವಾದ ಮುಗಿದ ನಂತರ ಮಸೀದಿ ಕೆಡವಿದ ಆರೋಪಿಗಳ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ವಹಿಸಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 49 ಆರೋಪಿಗಳಿದ್ದು ಈಗಾಗಲೇ 17 ಜನ ಮೃತಪಟ್ಟಿದ್ದರಿಂದ 32 ಆರೋಪಿಗಳು ಬದುಕುಳಿದಿದ್ದರು ಅವರಲ್ಲಿ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ, ಕಲ್ಯಾಣ್ ಸಿಂಗ್, ರಾಮಜನ್ಮಭೂಮಿ ಟ್ರಸ್ಟ್ ನ ಗೋಪಾಲ್ ದಾಸ್, ವಿನಯ್ ಕಟಿಯಾರ್, ಧರ್ಮದಾಸ್, ವೇದಾಂತಿ, ಲಲ್ಲುಸಿಂಗ್, ಸಾಕ್ಷಿ ಮಹಾರಾಜ್, ಸಾಧ್ವಿ ರಿತಂಬರಾ, ಚಂಪತ್ ರಾಯ್ ಮತ್ತು ಪವನ್ ಪಾಂಡೆ ಮುಂತಾದವರು ಇದ್ದರು. ಆದರೆ ಸಿಬಿಐ ನ್ಯಾಯಾಲಯವು ಮಸೀದಿ ಕೆಡವಿದ್ದಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಎಲ್ಲಾ ಆರೋಪಿಗಳನ್ನು ನಿರ್ದೋಷಿಗಳೆಂದು ತೀರ್ಪು ನೀಡಿತು.
ಕಾಂಗ್ರೇಸ್ ನ ವೈಫಲ್ಯ
ಲಿಬ್ಹರಾನ್ ವರದಿ ಸಲ್ಲಿಕೆಯ ನಂತರ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಂಡಿಸುವುದಾಗಿ ಘೋಷಿಸಿದ ಅಂದಿನ ಕಾಂಗ್ರೇಸ್ ಸರ್ಕಾರ ಲಿಬ್ಹರಾನ್ ಆಯೋಗದ ವರದಿಯ ಕಡೆ ತಿರುಗಿಯೂ ನೋಡಲಿಲ್ಲ. ಇದು ಕಾಂಗ್ರೇಸ್ ನ ನಿರ್ಲಕ್ಷ್ಯವೂ ಹೌದು. ಲಿಬ್ಹರಾನ್ ಆಯೋಗದ ವರದಿಯನ್ನು ಅಂದು ಕಾಂಗ್ರೇಸ್ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿ ಸೂಕ್ತ ಕ್ರಮ ಕೈಗೊಂಡಿದ್ದರೆ ಬಿಜೆಪಿಯ ಬಹುತೇಕ ನಾಯಕರು ಜೈಲಿನಲ್ಲಿರುತ್ತಿದ್ದರು.
ಕಾಂಗ್ರೇಸ್ ಕ್ರಮೇಣವಾಗಿ ಆಯೋಗದ ವರದಿಯನ್ನು ನಿರ್ಲಕ್ಷಿಸಿದ ಕಾರಣ ಇಂದು ಬಿಜೆಪಿ ಅಧಿಕಾರಕ್ಕೆ ಬಂದು ನ್ಯಾಯಾಂಗದ ದೃಷ್ಟಿಯಲ್ಲಿ ಎಲ್ಲರೂ ನಿರ್ದೋಷಿಗಳಾದರು. ಬಿಜೆಪಿ ನಾಯಕರ ರಕ್ಷಣೆಯ ಹಿಂದೆ ಕಾಂಗ್ರೇಸ್ ನ ಇಂತಹ ಆಷಾಢಭೂತಿತನವು ಕಾರಣವಾಗಿದೆ. ಕಾಂಗ್ರೆಸ್ ತನ್ನ ಹಳೆಯ ಸಾಂಪ್ರದಾಯಿಕ ನೆಲೆಯ ಸಂಧಾನಕ್ಕೆ ಮತ್ತು ಓಲೈಕೆ ರಾಜಕಾರಣಕ್ಕೆ ಮುಂದಾಹಿತೇ ವಿನಃ ಕೋಮು ಶಕ್ತಿಗಳನ್ನು ಹಿಮ್ಮೆಟ್ಟಿಸಲು ಸಂಪೂರ್ಣ ವಿಫಲವಾಯಿತು.
ಕೊನೆಯದಾಗಿ
1992 ಡಿಸೆಂಬರ್ 6 ರಂದು ಅಡ್ವಾಣಿ ನೇತೃತ್ವದ ರಾಮರಥಯಾತ್ರೆಯ ಮೂಲಕ ಬಂದ ಕರಸೇವಕರು ಮಸೀದಿಯನ್ನು ಧ್ವಂಸಗೊಳಿಸಿದರು ಎಂಬುದು ಇಂದಿಗೂ ಅಂತರಾಷ್ಟ್ರೀಯ ವಿಚಾರ. ಈ ಒಂದು ಘಟನೆಯಿಂದ ದೇಶದಾಧ್ಯಂತ ಗಲಭೆಗಳು ನಡೆದಿವೆ 2000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸುಧೀರ್ಘವಾಗಿ 28 ವರ್ಷಗಳ ವಿಚಾರಣೆ ನಡೆದಿದೆ ಎರಡು ಬಾರಿ ಕೋರ್ಟ್ ತೀರ್ಪು ನಿಡಿವೆ. ಈಗಿರುವಾಗ ಮಸೀದಿಯ ಧ್ವಂಸಕ್ಕೆ ಯಾರು ಕಾರಣ ಎಂಬುದು ತನಿಖೆಯಲ್ಲಿ ತಿಳಿಯಲೇ ಇಲ್ಲವೆ? ವಿಚಾರಣೆಯಲ್ಲಿದ್ದವರೆಲ್ಲಾ ನಿರ್ದೋಷಿಗಳು ಎಂದಾದ ಮೇಲೆ ಮಸೀದಿ ಧ್ವಂಸ ಮಾಡಿದವರು ಯಾರು? ಬಹುಶಃ ಕಣ್ಕಟ್ಟು ಎಂದರೆ ಇದೇ ಇರಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.
ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.
ಸಾಧಿಕ್ ಪೊಲೀಸರಿಗೆ ಸಾಥ್
ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.
“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
~ವಿದ್ಯಾನಾಯ್ಕ್ ಅರೇಹಳ್ಳಿ
ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ ಕಲಿಕೆ ಎನ್ನುವುದು ಶಿಕ್ಷಣ ಕ್ಷೇತ್ರದಲ್ಲಿ ಬಳಸಲಾಗುವ ಒಂದು ವ್ಯವಸ್ಥಿತ ಮತ್ತು ಪ್ರಭಾವಶಾಲಿ ಬೋಧನಾ ವಿಧಾನವಾಗಿದ್ದು, ವಿಶೇಷವಾಗಿ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – NEP ಯಲ್ಲೂ ಇದರ ಪ್ರಸ್ತಾಪವಿದೆ ಎನ್ನಲಾಗಿದೆ.
ಪಂಚಪಾಡಿ ಎಂದರೇನು?
ಪಂಚಪಾಡಿ ಎಂದರೆ ಮಗುವಿನ ಸಮಗ್ರ ವಿಕಾಸಕ್ಕಾಗಿ ಐದು ಹಂತಗಳ ಕಲಿಕಾ ಪ್ರಕ್ರಿಯೆಯನ್ನು ಬಳಸಲಾಗುತ್ತದೆ.
ಅಂದರೆ ಜ್ಞಾನರ್ಜನೆಗೆ ಐದು ಹೆಜ್ಜೆಗಳು ಅಥವಾ ಐದು ಹಂತಗಳು ಎಂದರ್ಥ.
ಜ್ಞಾನವನ್ನು ಕೇವಲ ನೆನಪಿನಲ್ಲಿಟ್ಟುಕೊಳ್ಳುವುದರ ಬದಲಾಗಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಈ ವಿಧಾನ ಸಹಾಯ ಮಾಡುತ್ತದೆ.
ಪಂಚಪಾಡಿ ಕಲಿಕೆಯ 5 ಹಂತಗಳು
ಅದಿತಿ ( ಪರಿಚಯ / ಗ್ರಹಿಕೆ): ಈ ಪದ್ಧತಿಯ ಮೊದಲ ಹಂತವೇ ಅದಿತಿ. ಇಲ್ಲಿ ವಿದ್ಯಾರ್ಥಿಗೆ ಹೊಸ ವಿಷಯವನ್ನು ಪರಿಚಯಿಸಲಾಗುತ್ತದೆ. ಶಿಕ್ಷಕರು ಕಥೆ,ಚಿತ್ರ ಉದಾಹರಣೆ ಅಥವಾ ಚಟುವಟಿಕೆಗಳ ಮೂಲಕ ಹೊಸ ವಿಷಯವನ್ನು ಮಗುವಿನ ಮುಂದೆ ಪ್ರಸ್ತುತಪಡಿಸುತ್ತಾರೆ. ಮಗು ವಿಷಯವನ್ನು ಕೇಳಿ, ನೋಡಿ ಗ್ರಹಿಸಲು ಆರಂಭಿಸುತ್ತದೆ.
ಬೋಧ : (ತಿಳುವಳಿಕೆ / ಅರ್ಥೈಸಿಕೊಳ್ಳುವಿಕೆ): ಪರಿಚಯಿಸಿಕೊಂಡ ವಿಷಯವನ್ನು ಆಳವಾಗಿ ಅರ್ಥಮಾಡಿಕೊಳ್ಳುವ ಹಂತವಿದು. ಮಗು ವಿಷಯದ ಹಿಂದಿರುವ ಪರಿಕಲ್ಪನೆ ಮತ್ತು ಕಾರಣಗಳನ್ನು ಅರ್ಥಮಾಡಿಕೊಳ್ಳುತ್ತದೆ. ಪ್ರಶ್ನೆಗಳನ್ನು ಕೇಳುವ ಮೂಲಕ ಮತ್ತು ಚರ್ಚೆಗಳಲ್ಲಿ ಭಾಗವಹಿಸುವ ಮೂಲಕ ತನ್ನ ಗೊಂದಲಗಳನ್ನು ನಿವಾರಿಸಿಕೊಳ್ಳುತ್ತದೆ.
ಅಭ್ಯಾಸ : (ರೂಢಿಸಿಕೊಳ್ಳುವುದು / ತರಬೇತಿ): ಕಲಿತ ವಿಷಯ ಮನಸ್ಸಿನಲ್ಲಿ ಗಟ್ಟಿಯಾಗಲು ನಿರಂತರ ಸ್ಮರಣೆ ಅಥವಾ ಅಭ್ಯಾಸದ ಅಗತ್ಯವಿದೆ. ಮಕ್ಕಳು ಕಲಿತ ವಿಷಯವನ್ನು ಬರವಣಿಗೆ, ಗಣಿತದ ಲೆಕ್ಕಗಳು, ಪ್ರಯೋಗಗಳು ಅಥವಾ ಪುನರಾವರ್ತನೆ (Revision) ಮೂಲಕ ಅಭ್ಯಾಸ ಮಾಡುತ್ತಾರೆ. ಇದು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಕೇವಲ ಪುಸ್ತಕದಲ್ಲಿ ಕಲಿತದ್ದನ್ನು ನಿಜ ಜೀವನದಲ್ಲಿ ಅಥವಾ ಹೊಸ ಸಂದರ್ಭಗಳಲ್ಲಿ ಬಳಸಿ ನೋಡುವುದೇ ಪ್ರಯೋಗ.
ಉದಾಹರಣೆಗೆ, ಗಣಿತದಲ್ಲಿ ‘ಲಾಭ-ನಷ್ಟ’ ಕಲಿತ ನಂತರ ಮಗು ಮಾರುಕಟ್ಟೆಗೆ ಹೋಗಿ ವ್ಯವಹಾರ ಮಾಡುವುದು, ಅಥವಾ ವಿಜ್ಞಾನದ ತತ್ವವನ್ನು ಪ್ರಾಜೆಕ್ಟ್ ಮೂಲಕ ಮಾಡಿ ನೋಡುವುದು.
ಪ್ರಸಾರ : (ಹಂಚಿಕೊಳ್ಳುವುದು) ಕಲಿಕೆಯ ಅತ್ಯುನ್ನತ ಹಂತವೆಂದರೆ ತಾನು ಕಲಿತ ಜ್ಞಾನವನ್ನು ಇತರರಿಗೆ ಮನವರಿಕೆ ಮಾಡಿಕೊಡುವುದು. ವಿದ್ಯಾರ್ಥಿ ತನಗೆ ತಿಳಿದ ವಿಷಯವನ್ನು ತನ್ನ ಸಹಪಾಠಿಗಳಿಗೆ ವಿವರಿಸುವುದು, ಭಾಷಣ ಮಾಡುವುದು ಅಥವಾ ಗುಂಪು ಚರ್ಚೆಯಲ್ಲಿ ಹಂಚಿಕೊಳ್ಳುವುದು. “ಕಲಿಸುವುದರಿಂದ ಕಲಿಕೆ ಪೂರ್ಣವಾಗುತ್ತದೆ” ಎಂಬ ತತ್ವ ಇದರ ಹಿಂದಿದೆ.
ಪಂಚಪಾಡಿ ಕಲಿಕೆಯ ಮಹತ್ವ
”ಶುಷ್ಕ ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನವೇ ಮೇಲು.”
ಇದು ಮಕ್ಕಳಲ್ಲಿ ಸ್ವಯಂ ಕಲಿಕೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ.
ಕಂಠಪಾಠ ಮಾಡುವ ಪದ್ಧತಿಯನ್ನು ತಪ್ಪಿಸಿ, ವಿಷಯದ ಆಳವಾದ ತಿಳುವಳಿಕೆಗೆ ನೆರವಾಗುತ್ತದೆ.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸುತ್ತದೆ.
ಶಾಲೆಯ ವೈಶಿಷ್ಟ
ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.
ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.
ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.
ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.
ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..
ಜೂನ್ 2ಕ್ಕೆ ಶಾಲಾ ಪ್ರವೇಶಕ್ಕೆ ಕೊನೆದಿನ
2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ.
ಶಾಲೆಯ ವೈಶಿಷ್ಟ
ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.
ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.
ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.
ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.
ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..
“2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ. ಕೇವಲ ಪುಸ್ತಕ ಆಧಾರಿತ ಆಧುನಿಕ ಪದ್ಧತಿಯ ಕಲಿಕೆ ಮಾತ್ರವಲ್ಲದೆ ಹಿಂದಿನ ಗುರುಕುಲ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡಿ ಮಕ್ಕಳಿಗೆ ಉತ್ತಮ ರೀತಿಯ ವಿದ್ಯಾಭ್ಯಾಸ ನೀಡುವ ಮಹಾದಾಸೆ ಇದೆ.”
| ವೀಣಾ ಮಂಜುನಾಥ್ ಮುಖ್ಯಸ್ಥರು
ಪ್ರವೇಶ ಪ್ರಾರಂಭ : ಸದರಿ ಶಾಲೆಯಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಮೇ 17ರಿಂದ ಆರಂಭವಾದ ಪ್ರವೇಶ ಪ್ರಕ್ರಿಯೆ ಜೂನ್ 2ಕ್ಕೆ ಕೊನೆಗೂಳ್ಳುತ್ತದೆ. ಸಂಪರ್ಕಿಸಿ : Mandara School Tyavanige 919148141665
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ6 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ2 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ



