Connect with us

ದಿನದ ಸುದ್ದಿ

ಬಹುಜನ ನಾಯಕನ ‘ದಾದಾಸಾಹೇಬ್ ಕಾನ್ಸಿರಾಂ’ ಪರಿನಿಬ್ಬಾಣದ ಸ್ಮರಣೆ

Published

on

ಭಾರತದ ಬಹುಜನ ರಾಜಕಾರಣ ಕಟ್ಟಿ ಯಶಸ್ವಿಯಾದ ರಾಜಕೀಯ ಸಾಮಾಜಿಕ ವಿಜ್ಞಾನಿ ‘ದಾದಾಸಾಹೇಬ್ ಕಾನ್ಸಿರಾಂ ಜೀ’ ಅವರನ್ನು ‘ಪೊಲಿಟಿಕಲ್ ಲೆಜೆಂಡ್ ಆಫ್ ಇಂಡಿಯಾ’ ಎಂದು ಕರೆಯಲಾಗುತ್ತದೆ. ರಾಜಕಾರಣ ಎಂದರೆ ನಮಗೆ ಬೇಡವೇ ಬೇಡ ಎನ್ನುವ ಅಸಮರ್ಥ ಅಸಹಾಯಕ ಸಮುದಾಯದ ಎದೆಯೊಳಗೆ ಅರಸೊತ್ತಿಗೆಯ ಕನಸು ಬಿತ್ತಿದ ಮಹಾನ್ ಚೇತನ ಕಾನ್ಸಿರಾಮ್ ಜಿ.

ಭಾರತದಲ್ಲಿ ಯಾವುದಾದರೂ ಒಂದು ಹಿಂದೂಳಿದ ವರ್ಗ ದಲಿತ,ಅಲ್ಪಸಂಖ್ಯಾತ, ಎಂದು ಬಹುಜನ ಪರಿವರ್ತನಾ ಚಳವಳಿ ಯಶಸ್ವೀ ಆಗಿದೆ ಅಧಿಕಾರ ಇಡಿದ ರಾಜಕಾರಣ ಮಾದರಿ ಇದ್ದರೆ ಅದೊಂದು BSP ಎಂದು ಹೇಳಬಹುದು. ಭಾರತಾದ್ಯಂತ ಕಾನ್ಸಿರಾಂ ಜೀ ರಾಜಕಾರಣ ವಿದ್ಯೆ ಬಳಸಿಕೊಂಡು ಇಂದಿಗೂ ರಾಜಕಾರಣ ಮಾಡಿ ಕಡಿಮೆ ಸಂಖ್ಯೆಯ ಶಾಸಕರು ಆಯ್ಕೆಯಾದರು ಮುಖ್ಯಮಂತ್ರಿ ಪದವಿ ಪಡೆಯಬಹುದು ಎಂದು ತೋರಿಸಿಕೊಟ್ಟರು.

ಇಂದಿಗೂ ಭಾರತದಲ್ಲಿ ಬ್ರಾಹ್ಮಣಶಾಹಿ ವ್ಯವಸ್ಥೆ ಅಡಿಯಲ್ಲಿ ಹುಟ್ಟಿದ ಪಕ್ಷಗಳಾದ CONGRESS,BJP, ಅಂತಹ ಪಕ್ಷಗಳು ಪರ್ಯಾಯವಾಗಿ ರಾಜಕಾರಣ ಮಾಡಬಹುದು ಮತ್ತು ಅತಿ ಕಡಿಮೆ ಸಮಯದಲ್ಲಿ BSP ರಾಷ್ಟ್ರದ ಮೂರನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಹಿಂದೂಳಿದ ವರ್ಗದ ಮಹಾತ್ಮರ ಬಗ್ಗೆ ಸಂಶೋಧನೆ ನಡೆಸಿ ಇವತ್ತಿಗೂ ಸಂತ ರವಿದಾಸ್, ಜ್ಯೋತಿ ಬಾಹುಪುಲೆ ದಂಪತಿಗಳ ಶಾಹುಮಹರಾಜ್,ಸಯ್ಯಾಜಿ ಗಾಯಕವಾಡ,ನಾಲ್ವಡಿ ಕೃಷ್ಣರಾಜ ಒಡೆಯರ್,ಪೆರಿಯಾರ್ ನಾರಯಣಗುರು,ಬುದ್ದ ಬಸವ ಬಾಬಾಸಾಹೇಬ್ ಸಂವಿಧಾನವನ್ನು ಅಂತಹ ಮಹನೀಯರು ವಿಚಾರಧಾರೆ ತನ್ನ ಮೊದಲ ತತ್ವ ಸಿದ್ದಾಂತ ಚಳವಳಿಯನ್ನು ಮುನ್ನಡೆಗೆ ಕಾರಣವಾದ ಬಹುಜನ ಚಳವಳಿ ಒಂದು ಪರಿವರ್ತನಾ ಹಾದಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.

ಬಹುಶಃ ಭಾರತದಲ್ಲಿ ಕಾಂಗ್ರೆಸ್ ಬಿಜೆಪಿ ಹೊರತುಪಡಿಸಿ ಶೋಷಿತ ವರ್ಗದ ಜನರು ಕೂಡ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿಯಬಹುದು ಎಂದು ತೊರೊಸಿಕೊಟ್ಟ ರಾಜಕೀಯ ನಿಪುಣ ಕಾನ್ಸಿರಾಮ್ ಜೀ.

ದಲಿತ,ಅಲ್ಪಸಂಖ್ಯಾತ, ಹಿಂದೂಳಿದ ವರ್ಗಗಳು ಅಧಿಕಾರ ವಂಚಿತ ಸಣ್ಣಪುಟ್ಟ ಸಮುದಾಯದವರು ನಾವು ಕೂಡ ಸ್ವಂತ ಪವರ್ ಪಾಲಿಟಿಕ್ಸ್ ಮಾಡಬೇಕು ಅದನ್ನು ತಮ್ಮ ಜೀವಿತಾವಧಿಯಲ್ಲಿ ನೋಡಲೇಬೇಕು ಎಂದು ಪಣತೊಟ್ಟ ದಾದಾಸಾಹೇಬ್ ಕಾನ್ಸಿರಾಮ್ ದೇಶ ಬಹುದೊಡ್ಡ ಪ್ರಮಾಣದ ಜನಸಂಖ್ಯೆಯುಳ್ಳ ಉತ್ತರ ಪ್ರದೇಶದಲ್ಲಿ ಕುಮಾರಿ ಮಾಯಾವತಿ ಮೇಡಂ ಅವರಿಗೆ ನಾಲ್ಕು ಸಾರಿ ಮುಖ್ಯಮಂತ್ರಿ ಮಾಡೋದು ಎಂದರೆ ಸಾಮಾನ್ಯ ಕಾರ್ಯವಲ್ಲ.

ಬಹುತೇಕ ಇತ್ತೀಚೆನ ವರ್ಷಗಳ ರಾಜಕಾರಣದಲ್ಲಿ ಕಾನ್ಸಿರಾಮ್ ಜೀ ಅವರ ರಾಜಕೀಯ ಲೆಕ್ಕಾಚಾರ ಮಾದರಿ ಬಳಸಿಕೊಂಡು ಇಪ್ಪತ್ತೈದು ಶಾಸಕರನ್ನು ಹೊಂದಿರುವ ಪಕ್ಷಗಳು ಕೂಡ ಮುಖ್ಯಮಂತ್ರಿ ನಾನೆ ಆಗುವೆ ಎಂದು ಆತ್ಮವಿಶ್ವಾಸದಿಂದ ಹೇಳಬಹುದು ಎಂದರೆ ಆದರ ಮೂಲಪುರುಷ ಕಾನ್ಸಿರಾಮ್ ರಾಜಕಾರಣ ಮಾದರಿ ಕೊನೆಗೆ ಉ.ಪ್ರ.ಬಿಹಾರ್,ಕರ್ನಾಟಕದ ಜೆಡಿಎಸ್ ಪಕ್ಷ ಕೂಡ ಅಲ್ಪಸ್ವಲ್ಪ ಶಾಸಕರು ಹೊಂದಿದ್ದರೂ ಕೂಡ ಮುಖ್ಯಮಂತ್ರಿ ಗಾದಿಯನ್ನು ಅನುಭವಿಸಲು ಸಾಧ್ಯವಾಗಿದೆ ಎಂದರೆ ಕಾನ್ಸಿರಾಮ್ ರಾಜಕಾರಣ ತಂತ್ರ ನೀತಿಗಳನ್ನು ಇವೆಲ್ಲವೂ ಪಕ್ಷಗಳು ಅವರು ನಾಯಕರು ಅನುಸರಿಸಿ ಅಧಿಕಾರ ಪಡೆದುಕೊಂಡರು.

ಕರ್ನಾಟಕದಲ್ಲಿ ಒಂದೂವರೆ ಕೋಟಿಗೂ ಅಧಿಕ
ಜನಸಂಖ್ಯೆ ಅಸ್ಪೃಶ್ಯರಾದ ದಲಿತ ವರ್ಗದವರು
ಇದ್ದಾರೆ ಹಾಗೂ ವಾಲ್ಮೀಕಿ, ಅಲ್ಪಸಂಖ್ಯಾತ,ಗೊಲ್ಲರ ಸಮುದಾಯ,ಮಡಿವಾಳ,ಉಪ್ಪಾರ,ಸವಿತಾ,ಇನ್ನಿತರ ಸಣ್ಣಪುಟ್ಟ ಸಮುದಾಯದವರು ಕೂಡಿಕೊಂಡು ಬಹುಜನ ಸಮಾಜದ ಚಳುವಳಿ ಮುನ್ನಡೆಸಿದರೆ ಕೇವಲ ಹತ್ತು ವರ್ಷಗಳಲ್ಲಿ ಒಬ್ಬ ಮುಖ್ಯಮಂತ್ರಿಯಾದರು ಆಗಬಹುದು.

ಆದರೆ ಈ ಸಮುದಾಯದವರು ಕೇವಲ ಹಲವು ಪಕ್ಷಗಳಿಗೆ ಮತಬ್ಯಾಂಕ್ ಆಗಿವೆ ಸ್ವಂತ ಅಧಿಕಾರ ಗದ್ದುಗೆ ಹಿಡಿಯಬಹುದು ಎನ್ನುವ ಆಶಭಾವನೆ ಕಳಕೊಂಡು ಕಮರಿ ಹೋಗಿವೆ ಆದರೆ ನಮ್ಮ ಮುಂದೆ ಇರುವ ಒಕ್ಕಲಿಗರ ಸಮುದಾಯದವರು ತಮ್ಮದೆ ಜಾತಿ ಜನಸಂಖ್ಯೆ ಇಟ್ಟುಕೊಂಡು ಪಕ್ಷ ಕಟ್ಟಿ ಎರಡು ಬಾರಿ ಮುಖ್ಯಮಂತ್ರಿ, ಒಂದು ಬಾರಿ ದೇಶದ ಪ್ರಧಾನಿ ಆದರೂ ಇದೇ ರೀತಿ ಸಂಘಪರಿವಾರದ ಪೋಷಕ ಪಾತ್ರದಲ್ಲಿ ವಹಿಸಿಕೊಂಡ ಲಿಂಗಾಯತರು ಸತತ ಮುಖ್ಯಮಂತ್ರಿ ಗಾದಿ ಅನುಭವಿಸುತ್ತಲೇ ಇದ್ದಾರೆ ಆದರೆ ಜನಸಂಖ್ಯೆನೆ ಇಲ್ಲದ ಬ್ರಾಹ್ಮಣರು ಎಲ್ಲಾ ಸಚಿವ ಸಂಪುಟದಲ್ಲಿ ನಾಲ್ಕು ಖಾತೆಯನ್ನು ಹೊಂದಬಹುದು.

ಈ ದಲಿತರಲ್ಲೆ ಬಲಾಡ್ಯ ಸಮುದಾಯಗಳಾದ,ವಾಲ್ಮಿಕಿ,ಮಾದಿಗರು,ಹೊಲೆಯರು, ಗಳು,ಮುಸ್ಲಿಂರು,ಸದಾಕಾಲವೂ BJP,CONG,ಪಕ್ಷಗಳು ಕಾಲಕೆಳಗೆ ಅಧಿಕಾರ ಪಡೆದು ತನ್ನದೆ ಸಮುದಾಯದ ಜನರ ಮೇಲೆ ದಿನ ನಿತ್ಯ ನಡೆಯುವ ದೌರ್ಜನ್ಯ ಹಿಂಸೆ ಕೊಲೆ ಅತ್ಯಾಚಾರ ಮಾಡುವುದನ್ನು ಕನಿಷ್ಟ ವಿರೋಧ ವ್ಯಕ್ತಪಡಿಸದಷ್ಟು ನಿಷ್ಪ್ರಯೋಜಕ ಅಸಹಾಯಕ ಜೀವಂತ ಸಮಾಧಿ ಆಗಿದ್ದಾರೆ.

ಕರ್ನಾಟಕದಲ್ಲಿ ಬಹುಸಂಖ್ಯಾತರಾದ ದಲಿತ,
ಅತಿ ಹಿಂದೂಳಿದ ವರ್ಗ,ಅಲ್ಪಸಂಖ್ಯಾತರು ಈ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಅಧಿಕಾರದಿಂದ ವಂಚಿತ ಈ ಸಮುದಾಯಗಳು ಅಧಿಕಾರವನ್ನು ಹಿಡಿಯಬಹುದು ಏಕೆಂದರೆ ಈ ಚಳವಳಿ ಮರೆಮಾಚಿದ ಇತಿಹಾಸವನ್ನು ಪೂರ್ವಿಕರು ಬಗ್ಗೆ ತನ್ನ ಚಳವಳಿ ಭಾಗವಾಗಿ ತೆಗೆದುಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಬಹುಜನ ಚಳುವಳಿ ನೇತೃತ್ವವನ್ನು ಅಹಿಂದ ವರ್ಗಕ್ಕೆ ಕೈಗೆ ಕೊಟ್ಟು ತ್ಯಾಗ ಮನೋಭಾವ ಇಟ್ಟುಕೊಂಡು ರಾಜಕಾರಣ ಯುದ್ಧನೀತಿ ನಿರೂಪಿಸಿದರೆ ಅನೇಕ ಸಣ್ಣಪುಟ್ಟ ಅಧಿಕಾರ ವಂಚಿತ ಸಮುದಾಯಗಳು ಅಧಿಕಾರ ವಹಿಸಿಕೊಳ್ಳಲು ಅವಕಾಶ ಮಾಡಿಕೊಟ್ಟರೆ
ಈ ರಾಜ್ಯದ ಸುಧಾರಣೆ ಕಾಣಲು ಸಾದ್ಯ ಜೊತೆಗೆ ಕಾನ್ಸಿರಾಂ ಜೀ ಅವರ ರಾಜಕೀಯ ವಿಚಾರಧಾರೆ ಪ್ರಸ್ತುತ ರಾಜಕಾರಣದಲ್ಲಿ ಸಮೀಕರಣವನ್ನು ಬಳಸಿಕೊಂಡು ಒಂದು ಅದ್ಭುತ ಯಶಸ್ಸನ್ನು ದಾಖಲಿಸಬಹುದು ಸಕ್ಸಸ್ ಮಾದರಿ ರಾಜಕಾರಣ ಬಗ್ಗೆ ಹೆಚ್ಚು ಗಮನ ಹರಿಸಿದರೆ ಈ ಮಾದರಿ ರಾಜಕಾರಣ ಸಕ್ಸಸ್ ಆಗಬಹುದು.

-ಹನುಮೇಶ್ ಗುಂಡೂರು, ವಕೀಲರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬೆಂಗಳೂರು ಜಲಸಂಚಾರಕ್ಕೆ ಹೊಸ ವೇಗ: ಬಿನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ 65 ಕಿ.ಮೀ. ನೀರು ಮಾರ್ಗ!

Published

on

ಮಳೆಗಾಲದ ನೀರು ನಿರ್ವಹಣೆಗೆ ಮಹತ್ವದ ಯೋಜನೆ; ರೈಲು ಸಂಚಾರಕ್ಕೂ ಹೊಸ ಸುರಕ್ಷತಾ ಕ್ರಮ

ಸುದ್ದಿದಿನ,ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದಾಗಲೆಲ್ಲಾ ಎದುರಾಗುವ ನೀರು ನಿಲ್ಲುವಿಕೆ ಹಾಗೂ ಪ್ರವಾಹದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಾಂತ್ರಿಕ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಇದರ ಭಾಗವಾಗಿ ಬಿನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ನೀರಿನ ಹರಿವನ್ನು ನಿಯಂತ್ರಿಸುವ ವಿಶೇಷ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಯೋಜನೆಯಡಿ ಸುಮಾರು 65 ಕಿ.ಮೀ. ಉದ್ದದ ನೀರಿನ ಮಾರ್ಗ ನಿರ್ಮಿಸುವ ಚಿಂತನೆ ನಡೆದಿದೆ.

ನಗರದಲ್ಲಿ ಮಳೆ ಸುರಿದಾಗ ರಸ್ತೆಗಳು ಜಲಾವೃತವಾಗುವುದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು ಹಾಗೂ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನೀರಿನ ಹರಿವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಪ್ರಮುಖ ಗುರಿಯಾಗಿದೆ.

http://Visit : www.suddidina.com

ಮೆಟ್ರೋ ಮಾರ್ಗದ ಸಮೀಪ ವಿಶೇಷ ವ್ಯವಸ್ಥೆ

ಬಿನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ಮಧ್ಯದಲ್ಲಿರುವ ಓಲ್ಡ್‌ ಮದ್ರಾಸ್‌ ಗರ್ದನ್‌ಸೇತುವೆಯಲ್ಲಿ ಪ್ರಸಕ್ತ ನೀರು ಹರಿವಿಗೆ ಸಂಬಂಧಿಸಿದ ನಿಯಂತ್ರಣ ಕಾಮಗಾರಿ ನಡೆಯುತ್ತಿದೆ. ತಾಂತ್ರಿಕ ತಂಡದ ಪರಿಶೀಲನೆ ಬಳಿಕ ಗರ್ದನ್‌ಸೇತುವೆ ಸುರಕ್ಷತಾ ತಪಾಸಣೆ ನಡೆಸಲಾಗಿದ್ದು, ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಈ ಭಾಗದಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ರೂಪಿಸುವುದರಿಂದ ಜಲಾವೃತ ಸಮಸ್ಯೆಯನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ. ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ನೀರು ನಿಂತು ಉಂಟಾಗುವ ಸಮಸ್ಯೆಗಳಿಗೆ ಇದು ಪ್ರಮುಖ ಪರಿಹಾರ ಕ್ರಮವಾಗಬಹುದು.

ರೈಲು ಸಂಚಾರಕ್ಕೂ ಸುರಕ್ಷತೆ

ರೈಲು ಸುರಕ್ಷತಾ ನಿಯಮಗಳ ಪ್ರಕಾರ ತಾಂತ್ರಿಕ ಮೇಲ್ವಿಚಾರಣೆ ನಡೆಸಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ನಿರಂತರ ಮಳೆ ಸುರಿದ ಸಂದರ್ಭದಲ್ಲೂ ರೈಲು ಸಂಚಾರಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಲಾಗಿದೆ.

ರೈಲು ಸಂಪರ್ಕ ಇರುವ ಪ್ರದೇಶಗಳಲ್ಲಿ ನೀರು ಸಂಗ್ರಹವಾಗುವುದರಿಂದ ಹಳಿಗಳ ಸುರಕ್ಷತೆ ಹಾಗೂ ರೈಲು ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ನೀರು ಹರಿವಿನ ವ್ಯವಸ್ಥೆಯನ್ನು ಸುಧಾರಿಸುವುದರ ಜೊತೆಗೆ ರೈಲು ಮೂಲಸೌಕರ್ಯದ ಸುರಕ್ಷತೆಯನ್ನೂ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಲಾಗುತ್ತಿದೆ.

ಮುಂದಿನ ಹಂತದಲ್ಲಿ ದೊಡ್ಡ ಯೋಜನೆ

ಈ ನೀರಿನ ನಿರ್ವಹಣಾ ಕಾಮಗಾರಿಯ ಆಚ್ಚೋಬಲದಂದೇ ವಾರದೊಳಗೆ ಪೂರ್ಣಗೊಳಿಸುವ ನಿರೀಕ್ಷೆ ಇದೆ. ಕಾಮಗಾರಿ ಮುಗಿದ ಬಳಿಕ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ರೂಪಿಸಲಾಗುತ್ತದೆ. ಮುಂದಿನ ಹಂತದಲ್ಲಿ ಮಳೆ ನೀರು ಸಂಗ್ರಹಣೆ ಹಾಗೂ ನೀರಿನ ಹರಿವಿನ ನಿರ್ವಹಣೆಯನ್ನು ಇನ್ನಷ್ಟು ಬಲಪಡಿಸುವ ಯೋಜನೆಗಳೂ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ನಗರದ ವೇಗದ ಬೆಳವಣಿಗೆಗೆ ತಕ್ಕಂತೆ ಮೂಲಸೌಕರ್ಯ ವಿಸ್ತರಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಳೆ ನೀರು ನಿರ್ವಹಣೆ ಬೆಂಗಳೂರಿಗೆ ಅತ್ಯಂತ ಅಗತ್ಯವಾಗಿದೆ. 65 ಕಿ.ಮೀ. ನೀರು ಮಾರ್ಗದ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾದರೆ, ಮಳೆಗಾಲದ ಜಲಾವೃತ ಸಮಸ್ಯೆ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆಯಾಗಲಿದೆ.

Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

Published

on

kalaburagi-municipal-corporation-mayor-deputy-mayor-election-congress-win
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.

ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ

ಈ ಚುನಾವಣೆಯಲ್ಲಿ 21ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.

ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು

20ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.

ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ

ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.

ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.

ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading

Trending