Connect with us

ದಿನದ ಸುದ್ದಿ

ಸೋಬೆರಾನ್ ಬೆಳಗಿದ ಜ್ಯೋತಿ..! : ಕಸದ ರಾಶಿಯಲ್ಲಿ ಸಿಕ್ಕ ಹೆಣ್ಣು ಮಗುವೀಗ ‘ಕಮೀಷನರ್’..!

Published

on

  • ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರರು, ಮುಂಬೈ

ಸ್ಸಾಮಿನ ತಿನ್ಸುಖಿಯಾ ಎಂಬಲ್ಲಿನ ಫುಟ್ ಪಾತ್ ತರಕಾರಿ ವ್ಯಾಪಾರಿ 30 ವರ್ಷ ಪ್ರಾಯದ ಸೋಬೆರಾನ್ ಎಂದಿನಂತೆ ಅಂದು ತರಕಾರಿ ಮಾರಿ ಗಾಡಿ ತಳ್ಳಿಕೊಂಡು ಮನೆಗೆ ವಾಪಾಸಾಗುತ್ತಿದ್ದ. ದಿನವಿಡೀ ನಿಂತು ವ್ಯಾಪಾರ ಮಾಡಿ ದಣಿದ ಅವನ ದೇಹ, ಮನಸ್ಸು ಎರಡೂ ವಿಶ್ರಾಂತಿಗೆ ಹಾತೊರೆಯುತ್ತಿದ್ದವು.

ಆದಷ್ಟು ಬೇಗ ಮನೆ ತಲುಪಿ ಅಡುಗೆ ಮಾಡಿಕೊಂಡು ಉಂಡು ಅಡ್ಡ ಬೀಳಬೇಕು ಎಂದು ಆಲೋಚಿಸುತ್ತ ಬರಬೇಕಾದರೆ ಅತ್ತಲೆಲ್ಲಿಂದಲೋ ಮಗುವೊಂದರ ಅಳುವಿನ ದನಿ ಕೇಳಿತು. ದನಿಯ ಜಾಡನ್ನು ಅರಸಿ ಹೋಗಿ ನೋಡಿದರೆ ಕಸದ ರಾಶಿಯಲ್ಲಿ ನವಜಾತ ಹೆಣ್ಣು ಮಗುವೊಂದು ಅಳುತ್ತಿತ್ತು! ಆ ಮಗುವಿನ ತಾಯಿ ಹತ್ತಿರದೆಲ್ಲೆಲ್ಲಾದರೂ ಇರಬಹುದೋ ಎಂದು ಸುತ್ತ ಮುತ್ತ ಹುಡುಕಾಡಿದರೆ ಯಾರೂ ಕಣ್ಣಿಗೆ ಬೀಳಲಿಲ್ಲ.

ಅಲ್ಲೇ ನಿಂತು ಮಗುವಿಗೆ ಸಂಬಂಧಪಟ್ಟವರ್ಯಾರಾದರೂ ಬರಬಹುದೋ ಎಂದು ಕಾದರೆ ಯಾರೂ ಬರಲಿಲ್ಲ. ಏನು ಮಾಡಲೀ ಎಂದು ಆಲೋಚಿಸಿದ ಸೋಬೆರಾನ್ ಆಗುವುದಾಗಲೀ ತಾನೇ ಆ ಮಗುವನ್ನು ಸಾಕುತ್ತೇನೆ ಎಂದು ತೀರ್ಮಾನಿಸಿ ಅದನ್ನೆತ್ತಿಕೊಂಡು ಮನೆಗೆ ಬಂದನು.

ಇದು ಮೂವತ್ತು ವರ್ಷಗಳ ಹಿಂದೆ ನಡೆದ ಘಟನೆ. ಮನೆಗೆ ತಂದ ಮಗುವಿಗೆ ಜ್ಯೋತಿ ಎಂದು ನಾಮಕರಣ ಮಾಡಿದನು. ಅವಿವಾಹಿತನಾದ ಸೋಬೆರಾನ್ ಜ್ಯೋತಿಗೆ ಅಪ್ಪನಾದನು. ಅದೂ ಎಂತಹ ಅಪ್ಪ ಅಂತೀರಿ! ಇಷ್ಟರ ತನಕ ಒಂದೇ ಹೊಟ್ಟೆಯನ್ನು ತುಂಬಿಸುತ್ತಿದ್ದವನ ಹೆಗಲ ಮೇಲೆ ಈಗ ಎರಡು ಹೊಟ್ಟೆಗಳ ಜವಾಬ್ದಾರಿ ಬಿತ್ತು.

ಅದಕ್ಕಾಗಿ ಮೊದಲಿಗಿಂತ ಹೆಚ್ಚು ಕಷ್ಟಪಡಬೇಕಾಯಿತು. ಜ್ಯೋತಿ ದೊಡ್ಡವಳಾದ ಮೇಲೆ ಅವಳನ್ನು ಶಾಲೆಗೆ ಸೇರಿಸಿದನು. ಆ ಬಡತನದಲ್ಲೂ ಅವಳಿಗೆ ಏನೊಂದೂ ಕೊರತೆಯಾಗದಂತೆ ನೋಡಿಕೊಂಡನು. ಎಷ್ಟೋ ಬಾರಿ ತಾನು ಉಪವಾಸವಿದ್ದು ಅವಳ ಹೊಟ್ಟೆ ತುಂಬುವಂತೆ ನೋಡಿಕೊಂಡನು.

ಜ್ಯೋತಿ ಅಪ್ಪನನ್ನೂ ಮೀರಿಸಿದ ಮಗಳು. 2013 ರಲ್ಲಿ ಅವಳು ಕಂಪ್ಯೂಟರ್ ಸಯನ್ಸ್ ಡಿಗ್ರಿ ಪಡೆದಳು. 2014 ರಲ್ಲಿ ಅಸ್ಸಾಂ ಪಬ್ಲಿಕ್ ಸರ್ವೀಸ್ ಪರೀಕ್ಷೆ ಪಾಸು ಮಾಡಿ ‘ಅಸಿಸ್ಟಂಟ್ ಇನ್ಕಮ್ ಟ್ಯಾಕ್ಸ್ ಕಮಿಷನರ್’ ಅಧಿಕಾರಿಯಾದಳು. ಕಸದ ತೊಟ್ಟಿಯಲ್ಲಿ ಬಿದ್ದು ಇನ್ನೆಂತಹದೋ ದುರಂತದ ಬದುಕನ್ನು ಕಾಣಬೇಕಾಗಿದ್ದ ಜೀವವೊಂದು ತನ್ನನ್ನು ಎತ್ತಿ ತಂದು ಬೆಚ್ಚಗಿನ ಮಡಿಲಲ್ಲಿಟ್ಟು ಸಾಕಿ ಬೆಳೆಸಿದ ಕೈಗಳಿಗೆ ಕೊಟ್ಟ ಈ ಕಾಣಿಕೆ ಸಾಮಾನ್ಯದಾದುದಲ್ಲ!

ತಾನು ಮದುವೆಯಾದಾರೆ ಬರುವವಳು ಜ್ಯೋತಿಯನ್ನು ಹೇಗೆ ಕಾಣುತ್ತಾಳೋ ಎಂಬ ಕಾರಣಕ್ಕೆ ಸೋಬೆರಾನ್ ಮದುವೆಯಾಗಲಿಲ್ಲ. ಅವನ ಬದುಕಿನ ಸರ್ವಸ್ವವೇ ಜ್ಯೋತಿಯಾಗಿದ್ದಾಳೆ. ಜ್ಯೊತಿಯೂ ತನ್ನ ಅಪ್ಪನಿಗೆ ಯಾವುದಕ್ಕೂ ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದಾಳೆ. ಅವಳು ಅವನಿಗೆ ಮಗಳಲ್ಲದೆ ಅವನ ತಾಯಿಯೂ ಆಗಿದ್ದಾಳೆ! ‘ನೀನಿನ್ನೂ ತರಕಾರಿ ಏಕೆ ಮಾರಬೇಕು, ಮನೆಯಲ್ಲಿದ್ದು ವಿಶ್ರಾಂತಿ ಪಡೆ. ನಾನಿದ್ದೇನೆಲ್ಲ’ ಎಂದು ಅಪ್ಪನಿಗೆ ಹೇಳುತ್ತಾಳೆ. ಆದರೆ, ಸೋಬೆರಾನ್ ಈಗ ತಾನೊಬ್ಬ ಸರ್ಕಾರಿ ಅಧಿಕಾರಿಯೊಬ್ಬಳ ಅಪ್ಪನಾದರೂ ತರಕಾರಿ ಮಾರುವುದನ್ನು ಇನ್ನೂ ನಿಲ್ಲಿಸಿಲ್ಲ.

“ನಾನು ಅಂದು ಆ ಕಸದ ರಾಶಿಯಿಂದ ಎತ್ತಿ ತಂದುದು ಒಂದು ಹೆಣ್ಣು ಮಗುವಲ್ಲ, ನನ್ನ ಬದುಕನ್ನು ಬೆಳಗಿದ ಅಮೂಲ್ಯವಾದ ಒಂದು ರತ್ನವನ್ನು” ಎಂದು ಹೇಳುವಾಗ ಸೋಬೆರಾನ್ ನ ಎದೆ ಹೆಮ್ಮೆಯಿಂದ ಉಬ್ಬುತ್ತದೆ!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending