Connect with us

ದಿನದ ಸುದ್ದಿ

ಮಧ್ಯ ಕರ್ನಾಟಕದ ಯಕ್ಷಗಾನ ಯುವಪ್ರತಿಭೆ ‘ಅಮೂಲ್ಯ ಸಿ.’

Published

on

  • ಡಾ.ಕೆ.ಎ.ಓಬಳೇಶ್

ರ್ನಾಟಕದ ಬಹುತ್ವವೆಲ್ಲ ಸಮನ್ವಯತೆಯನ್ನು ಕಂಡುಕೊಂಡಿರುವುದು ಮಧ್ಯ ಕರ್ನಾಟಕದಲ್ಲಿ. ಈ ಭಾಗವು ಯಾವುದೇ ಅನ್ಯ ಗಡಿಪ್ರಾಂತ್ಯ, ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿರುವುದು ಕಂಡುಬರುವುದಿಲ್ಲ. ಆದರೆ ಇವೆಲ್ಲವುಗಳನ್ನು ಸಮನ್ವಯದ ನೆಲೆಯಲ್ಲಿ ಕಾಪಾಡಿಕೊಂಡು ಬಂದ ವಿಶೇಷತೆ ಇದಕ್ಕಿದೆ. ಹಾಗೆಯೇ ಇದು ಸಾಂಸ್ಕೃತಿಕ ಸಮನ್ವಯತೆಗೂ ವಿಶೇಷತೆ ಮನ್ನಣೆಯನ್ನು ಕಲ್ಪಿಸಿಕೊಂಡು ಬಂದಿದೆ.

ಇಲ್ಲಿ ಹಲವಾರು ಸಾಂಸ್ಕೃತಿಕ ವೈಶಿಷ್ಟ್ಯತೆಗಳು ತನ್ನ ಅನನ್ಯತೆಯನ್ನು ಕಾಯ್ದುಕೊಂಡಿವೆ. ಉತ್ತರ ಕರ್ನಾಟಕಕ್ಕೆ ಹೋದರೆ ಬಯಲಾಟ, ದಕ್ಷಿಣ ಕರ್ನಾಟಕದಲ್ಲಿ ಕಂಸಾಳೆ, ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನ ಕಲೆಗಳು ವಿಶಿಷ್ಟವಾಗಿ ಗುರುತಿಸಿಕೊಂಡಿವೆ. ಆದರೆ ಮಧ್ಯ ಕರ್ನಾಟಕ ಮಾತ್ರ ಇವೆಲ್ಲವುಗಳನ್ನು ತನ್ನ ಆಂತರ್ಯದಲ್ಲಿ ಪ್ರಾಂತ್ಯಬೇಧ ಮರೆತು ಹುದುಗಿಸಿಕೊಂಡಿದೆ. ಹೀಗಾಗಿ ಮಧ್ಯ ಕರ್ನಾಟಕದಲ್ಲಿ ವಿವಿಧ ಸಾಂಸ್ಕೃತಿಕ ವಲಯದಲ್ಲಿ ಸಾಧನೆಗೈದ ವಿಭಿನ್ನ ಕಲಾ ಪ್ರತಿಭೆಗಳು ಕಂಡುಬರುತ್ತವೆ.

ಇಂತಹ ಕಲಾ ಪ್ರತಿಭೆಗಳಲ್ಲಿ ಅಮೂಲ್ಯ ಸಿ, ಅವರು ಒಬ್ಬರಾಗಿದ್ದಾರೆ. ಮಧ್ಯ ಕರ್ನಾಟಕದ ದಾವಣಗೆರೆ ಭಾಗದಲ್ಲಿ ಯಕ್ಷಗಾನದ ಮೂಲಕ ತನ್ನ ವಿಶಿಷ್ಟ ಪ್ರತಿಭೆಯನ್ನು ಅನಾವರಣಗೊಳಿಸುತ್ತಿರುವ ಅಮೂಲ್ಯ ಅವರ ಕಲಾ ಬದುಕನ್ನು ಅನಾವರಣಗೊಳಿಸುವುದು ಪ್ರಸ್ತುತ ಲೇಖನದ ಆಶಯವಾಗಿದೆ.

ಕುಮಾರಿ ಅಮೂಲ್ಯ ಅವರು ಚಂದ್ರಶೇಖರ್ ಹಾಗೂ ಸವಿತಾ ದಂಪತಿಗಳ ಪುತ್ರಿಯಾಗಿ ದಿನಾಂಕ 4 ಜನವರಿ 2001 ರಂದು ದಾವಣಗೆರೆಯಲ್ಲಿ ಜನಿಸಿದರು. ಇವರ ತಂದೆ ಹೊಸದುರ್ಗ ಮೂಲದವರಾಗಿದ್ದು, ಇವರ ತಾಯಿಯು ಕರಾವಳಿ ಮೂಲದವರಾಗಿದ್ದಾರೆ. ಇವರ ತಾಯಿಯ ತಂದೆ ಉಡುಪಿ ಜಿಲ್ಲೆ ಮುನಿಯಾಲ ಸಮೀಪದ ಕಾಡೊಳೆಯವರು.

ಇವರು ಬಾಲ್ಯದಲ್ಲಿಯೇ ಜೀವನ ನಿರ್ವಹಣೆಗಾಗಿ ದಾವಣಗೆರೆಯಲ್ಲಿ ನೆಲೆಯನ್ನು ಕಂಡುಕೊಂಡರು. ಹಾಗೆಯೇ ಈ ಭಾಗದಲ್ಲಿಯೇ ವಿವಾಹವಾಗಿ ತಮ್ಮ ಬದುಕನ್ನು ಕಟ್ಟಿಕೊಂಡವರು. ಕುಮಾರಿ ಅಮೂಲ್ಯ ಅವರ ತಾಯಿಯ ಮೂಲವು ಕರಾವಳಿ ಮೂಲವಾಗಿದ್ದರು ಯಕ್ಷಗಾನ ಕಲೆಯ ಯಾವುದೇ ನೇರ ಪ್ರಭಾವಗಳಾಗಿರುವುದಿಲ್ಲ. ಆದರೆ ಇವರು ಸೆಂಟ್ ಪಾಲ್ಸ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆಯುತ್ತಿರುವಾಗ ಯಕ್ಷಗಾನ ಕಲೆಯನ್ನು ಕಂಡು ಆಕರ್ಷಿತರಾಗಿದ್ದರು.

ಯಕ್ಷಗಾನ ಪ್ರತಿಭೆ ಅಮೂಲ್ಯ ಸಿ

ಈ ಶಾಲಾ ಅವಧಿಯಲ್ಲಿನ ಯಕ್ಷಗಾನ ಪ್ರದರ್ಶನ ಕಲೆಯನ್ನು ನೋಡಿ ಪ್ರಭಾವಿತರಾದ ಅಮೂಲ್ಯ ಅವರು ನಾನು ಒಂದಲ್ಲ ಒಂದು ದಿನ ಈ ಕಲೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದರು. ಆದರೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನವು ಅಷ್ಟೊಂದು ಪ್ರಸಿದ್ಧಿಯಾಗಿರದ ಕಾರಣ ಇವರ ಆಸೆಯು ಬಹುದಿನಗಳ ಕಾಲ ಮರೀಚಿಕೆಯಾಗಿಯೇ ಉಳಿದಿತ್ತು. ಇವರಲ್ಲಿ ಬಹುದಿನಗಳಿಂದಲೂ ಚಿಗುರಿದ ಕನಸನ್ನು ಸಾಕಾರಗೊಳಿಸಿದ್ದು ರಾಘವೇಂದ್ರ ಮಠ.

ರಾಘವೇಂದ್ರ ಗುರುಗಳಲ್ಲಿ ಅತಿಯಾದ ನಂಬಿಕೆಯನ್ನು ಹೊಂದಿದ್ದ ಅಮೂಲ್ಯ ಅವರು ಪ್ರತಿವಾರ ರಾಘವೇಂದ್ರ ಮಠಕ್ಕೆ ಹೋಗಿ ದರ್ಶನ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಒಮ್ಮೆ ರಾಯರ ಮಠದಲ್ಲಿ ಯಕ್ಷಗಾನ ತರಬೇತಿಯ ಬಗ್ಗೆ ಪ್ರದರ್ಶಿಸಿದ ಜಾಹಿರಾತು ಇವರ ಮನದ ಮೂಸೆಯಲ್ಲಿನ ಆಸೆಗೆ ವೇದಿಕೆಯೊಂದನ್ನು ಕಲ್ಪಿಸಿಕೊಟ್ಟಿತ್ತು. ಆಗ ಈ ಜಾಹಿರಾತು ನೀಡಿದ ಸೀತಾರಾಮ ಆಚಾರ್ಯ ಅವರನ್ನು ಸಂಪರ್ಕಿಸಿದಾಗ ಅಮೂಲ್ಯ ಅವರಿಗಿದ್ದ ಯಕ್ಷಗಾನ ತುಡಿತವನ್ನು ಅರಿತು ತನ್ನ ಶಿಷ್ಯೆಯಾಗಿ ಸ್ವೀಕರಿಸಿ, ‘ಯಕ್ಷ ಸೌರಭ’ ಕಲಾ ತಂಡದಿAದ ಯಕ್ಷಗಾನ ತರಬೇತಿಯನ್ನು ನೀಡುತ್ತ ಬಂದರು.

ಹೀಗೆ ಯಕ್ಷಗಾನ ಕಲಿಕೆಗೆ ಸೀತಾರಾಮ ಆಚಾರ್ಯರಿಂದ ದೀಕ್ಷೆಯನ್ನು ಪಡೆದ ಅಮೂಲ್ಯ ಅವರು ಈ ಕಲೆಯನ್ನು ತನ್ನ ಬದುಕಿನ ಒಂದು ಭಾಗವಾಗಿ ಮುಂದುವರೆಸಿಕೊAಡು ಬಂದಿದ್ದಾರೆ. ಹಾಗೆಯೇ ಈ ಯಕ್ಷಗಾನ ಕಲೆಯ ಮೇಲೆ ವಿಶಿಷ್ಟವಾದ ಕಾಳಜಿ ಮತ್ತು ಆಸ್ಥೆಯನ್ನು ಹೊಂದಿದ್ದು ಮಧ್ಯ ಕರ್ನಾಟಕದಲ್ಲಿ ಕರಾವಳಿಯ ವಿಶಿಷ್ಟ ಕಲೆಯನ್ನು ಅರಳಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿಕೊಂಡು ಬಂದಿದ್ದಾರೆ.

ಅಮೂಲ್ಯ ಅವರ ತಂದೆ ಚಂದ್ರಶೇಖರ್ ಅವರು ಅನಾರೋಗ್ಯದಿಂದ ಮರಣ ಹೊಂದಿದ ತರುವಾಯದಲ್ಲಿ ಇವರಿಗೆ ಉಚಿತವಾಗಿ ತರಬೇತಿ ನೀಡುವ ಮೂಲಕ ಸೀತಾರಾಮ ಆಚಾರ್ಯರು ತಮ್ಮ ಔದಾರ್ಯತೆಯನ್ನು ಮರೆಯುತ್ತ ಬಂದಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಅಮೂಲ್ಯ ಅವರಿಗಿರುವ ಕಲಾಸಕ್ತಿ ಮತ್ತು ಬದ್ಧತೆಯಾಗಿದೆ. ಹೀಗಾಗಿ ಸೀತಾರಾಮ ಆಚಾರ್ಯರು ತಮ್ಮ ಪ್ರೀತಿಯ ಮಗಳಂತೆ ಅಮೂಲ್ಯ ಅವರನ್ನು ಮುನ್ನಡೆಸುತ್ತ ಬಂದಿದ್ದಾರೆ.

ಇದರೊಂದಿಗೆ ತನ್ನೆಲ್ಲ ಕಲೆಯನ್ನು ಸೀತರಾಮ ಆಚಾರ್ಯರು ತನ್ನ ಶಿಷ್ಯೆಗೆ ಧಾರೆಯೆರೆಯುವ ಮೂಲಕ ಮಧ್ಯ ಕರ್ನಾಟಕದಲ್ಲೊಂದು ಅಮೋಘವಾದ ಯಕ್ಷಗಾನ ಪ್ರತಿಭೆಯೊಂದನ್ನು ರೂಪಿಸಿದ್ದಾರೆ. ಇದರ ಫಲವಾಗಿ ಅಮೂಲ್ಯ ಅವರು ಜಿಲ್ಲಾಡಳಿತ, ಕಾಲೇಜು, ವಿವಿಧ ಸಂಘ ಸಂಸ್ಥೆಗಳು ಹಾಗೂ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನ ಯಕ್ಷಗಾನ ಪ್ರತಿಭೆಯನ್ನು ಅನಾವರಣಗೊಳಿಸುತ್ತ ಬಂದಿದ್ದಾರೆ. ಇತ್ತೀಚೆಗೆ ‘ಮಲಬರ್ ಗೋಲ್ಡ್ ಅಂಡ್ ಡೈಮಂಡ್ಸ್’ ಕಂಪನಿಯವರು ಆಯೋಜಿಸಿದ್ದ ಟಾಲೆಂಟ್ ಶೋನಲ್ಲಿ ‘ಗೋಲ್ಡನ್ ಗರ್ಲ್’ ಅವಾರ್ಡ್ ಪಡೆದುಕೊಂಡಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ಅಮೂಲ್ಯ ಅವರು ದಾವಣಗೆರೆಯ ಎ.ವಿ.ಕಮಲಮ್ಮ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ಪದವಿಯನ್ನು ಅಧ್ಯಯನ ಮಾಡುತ್ತಿದ್ದು, ಬ್ಯಾಂಕ್ ಉದ್ಯೋಗಿಯಾಗಬೇಕೆಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದಾರೆ. ಯಕ್ಷಗಾನ ಮತ್ತು ಶಿಕ್ಷಣವನ್ನು ತನ್ನೆರಡು ಕಣ್ಣುಗಳೆಂದು ನಂಬಿರುವ ಅಮೂಲ್ಯ ಅವರು ಕಲೆಯೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ತರವಾದ ಸಾಧನೆಗೈಯುವ ಹಂಬಲವೊತ್ತಿದ್ದಾರೆ.

ಪ್ರೀತಿಯ ತಂದೆಯ ಅಗಲಿಗೆಯಿಂದ ನೊಂದಿರುವ ಅಮೂಲ್ಯ ಅವರು ತನ್ನ ತಾಯಿಯ ಪ್ರೀತಿ ಮತ್ತು ಗುರುಗಳ ಮಾರ್ಗದರ್ಶನದಲ್ಲಿ ಶಿಕ್ಷಣ ಮತ್ತು ಕಲಾ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಅಮೂಲ್ಯ ಅವರು ಯಕ್ಷಸೌರಭ ತಂಡದಿಂದ ಯಕ್ಷಗಾನ ತರಬೇತಿಯನ್ನು ಪಡೆಯುತ್ತಲೇ ಕಿರಿಯ ವಿದ್ಯಾರ್ಥಿಗಳಿಗೆ ಗುರುಗಳೊಂದಿಗೆ ತರಬೇತಿಯನ್ನು ನೀಡುವ ಮೂಲಕ ಕಲಾ ಸೇವೆಯನ್ನು ಆರಂಭಿಸಿದ್ದಾರೆ. ಅಮೂಲ್ಯಳ ಉಜ್ವಲ ಭವಿಷ್ಯಕ್ಕಾಗಿ ಮಾವ ಮತ್ತು ಸಹೋದರ ಆಸರೆಯಾಗಿ ನಿಂತಿದ್ದಾರೆ. ಇವರೆಲ್ಲರ ಆಸರೆಯಲ್ಲಿ ಶಿಕ್ಷಣದೊಂದಿಗೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನ ಕಲೆಯನ್ನು ಅರಳಿಸುತ್ತಿರುವ ಅಮೂಲ್ಯ ಅವರ ಮುಂದಿನ ಬದುಕಿನಲ್ಲಿ ಯಶಸ್ಸು ಕಾಣಲೆಂಬುದು ನಮ್ಮ ಹಾರೈಕೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending