Connect with us

ದಿನದ ಸುದ್ದಿ

ತುರ್ತುಪರಿಸ್ಥಿತಿಯ ಛಾಯೆಯೂ, ‘ಅರ್ನಾಬ್’ ಮಾಯೆಯೂ..!

Published

on

  • ನಾ ದಿವಾಕರ

“ಭೂತದ ಬಾಯಲ್ಲಿ ಭಗವದ್ಗೀತೆ,,,,” ಈ ಗಾದೆ ಮಾತಿಗೆ ಭಾರತವೇ ಜನ್ಮಭೂಮಿ. ಕರ್ಮಭೂಮಿಯೂ ಹೌದು. ಈ ಗಾದೆಯ ಅರ್ಥ ಏನು ಎಂದು ಕೇಳುವವರಿಗೆ ಭಾರತದ ರಾಜಕಾರಣಿಗಳ ಭಾಷಣ, ಹೇಳಿಕೆಗಳನ್ನು ಕೇಳುವಂತೆ ಸಲಹೆ ನೀಡಿದರೆ ಸಾಕು. ಅರ್ಥವಾಗಿಬಿಡುತ್ತದೆ. ಕಳೆದ ಆರು ವರ್ಷಗಳಲ್ಲಿ ಪ್ರಜಾತಂತ್ರ ಮೌಲ್ಯಗಳನ್ನು ಹಿಮಾಲಯದೆತ್ತರದಲ್ಲಿಟ್ಟು ವಿಶ್ವಮಾನ್ಯತೆ ಪಡೆದಿದ್ದ ಭಾರತದ ಆಡಳಿತ ವ್ಯವಸ್ಥೆ, ನ್ಯಾಯ ವ್ಯವಸ್ಥೆ ಮತ್ತು ಪ್ರಭುತ್ವಕ್ಕೆ ಇಂದು 1975ರ ಕರಾಳ ಛಾಯೆ ಆವರಿಸಿದಂತೆ ಕಾಣುತ್ತಿದೆ !!! ಈ ಹಿನ್ನೆಲೆಯಲ್ಲೇ ಮೇಲಿನ ಗಾದೆ ಮಾತು ಸಹ ನೆನಪಾಗುತ್ತಿದೆ.

ಜನಸಾಮಾನ್ಯರ ಪರಿಭಾಷೆಯಲ್ಲಿ ಬಚ್ಚಲುಬಾಯಿ ಎಂಬ ಪದವನ್ನು ಬಳಸುವುದನ್ನು ಕೇಳಿದ್ದೇವೆ. ಇತ್ತೀಚೆಗೆ ಈ ಬಚ್ಚಲು ಬಾಯಿ ಎಂಬ ಪದದ ಅರ್ಥವನ್ನೂ ನಮ್ಮ ರಾಜಕೀಯ ನಾಯಕರುಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಭಾರತ ಸ್ವಚ್ಚವಾಗುತ್ತಿದೆ ಆದರೆ ಅಧಿಕಾರ ರಾಜಕಾರಣದ ವಾರಸುದಾರರ, ಜನಪ್ರತಿನಿಧಿಗಳ ಬಚ್ಚಲು ಬಾಯಿ ಸಂಸ್ಕೃತಿಯಿಂದ ಸಮಸ್ತ ಭಾರತವೇ ಕೊಳಕು ಎನಿಸುತ್ತಿದೆ.

ಬಹುಶಃ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತವನ್ನು ಕೊಳಕು ಎಂದಾಗ ಇದೂ ಅವರ ಮನಸಿನಲ್ಲಿದ್ದಿರಬಹುದು ಈ ಹೊಲಸು ರಾಜಕಾರಣದ ಆಂತರಿಕ ಮಾಲಿನ್ಯವನ್ನು, ಬಾಹ್ಯ ಸ್ವರೂಪದ ತ್ಯಾಜ್ಯವನ್ನು ಹೊರಹಾಕಿ, ಪ್ರಜೆಗಳಲ್ಲಿ ಪ್ರಜಾತಂತ್ರ ಮೌಲ್ಯಗಳ ಬಗ್ಗೆ ಸುಪ್ರಜ್ಞೆ ಮೂಡಿಸುವ ಗುರುತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ಡಿಜಿಟಲ್ ಯುಗದಲ್ಲಿ ಇದು ವಿದ್ಯುನ್ಮಾನ ಸುದ್ದಿಮನೆಗಳ ಆದ್ಯತೆಯೂ ಆಗಬೇಕಿದೆ.

ಇಂತಹ ಒಂದು ಪ್ರಯತ್ನಕ್ಕೆ ಅವಕಾಶವನ್ನೂ ನೀಡದಂತೆ ಮಾಧ್ಯಮ ಜಗತ್ತನ್ನೇ ಘನತ್ಯಾಜ್ಯ ಶಿಖರವನ್ನಾಗಿ ಮಾಡುವುದರಲ್ಲಿ ತಮ್ಮದೇ ಆದ ಕೊಡುಗೆ ಸಲ್ಲಿಸಿರುವ ಸುದ್ದಿವಾಹಿನಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ಇಂದು ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.

ಮುಂಜಾನೆಯ ಹೊತ್ತಿನಲ್ಲಿ, ಯಾವುದೇ ಪೂರ್ವ ಸೂಚನೆ ಇಲ್ಲದೆ, ಏಕಾಏಕಿ ಮನೆಗೆ ನುಗ್ಗಿ, ಮೂರು ವರ್ಷದ ಹಿಂದಿನ ಆತ್ಮಹತ್ಯೆ ಪ್ರಕರಣವೊಂದರ ಹಿನ್ನೆಲೆಯಲ್ಲಿ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿರುವ ರೀತಿ ಒಪ್ಪುವಂತಹುದಲ್ಲ.
ಟಿ ಆರ್ ಪಿ ಹಗರಣದಲ್ಲಿ ಗೋಸ್ವಾಮಿಯ ವಿರುದ್ಧ ಗುರುತರ ಆರೋಪಗಳು ಇರುವುದನ್ನೂ ಮರೆಯುವಂತಿಲ್ಲ. ಆದರೆ ಇಂದಿನ ಘಟನೆ ಮುಂಬೈ ಪೊಲೀಸರ ಉದ್ಧಟತನ, ಮಹಾರಾಷ್ಟ್ರ ಸರ್ಕಾರದ ಪ್ರಜಾತಂತ್ರ ವಿರೋಧಿ ಧೋರಣೆಯ ಸಂಕೇತ.

ನಿಜ, ಆದರೆ ಹೀಗೆ ಹೇಳುವ ನೈತಿಕ ಹಕ್ಕು ಮತ್ತು ಹೊಣೆಗಾರಿಕೆ ಇರುವ ರಾಜಕೀಯ ನಾಯಕರು ನಮ್ಮ ನಡುವೆ ಇದ್ದಾರೆಯೇ ? ಗೋಸ್ವಾಮಿಯ ಬಂಧನದ ನಂತರ ರಿಪಬ್ಲಿಕ್ ವಾಹಿನಿಯ ನಿರೂಪಕರು ವಾಕ್ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿದ್ದುದನ್ನು ( ಸುದ್ದಿಮನೆಯ ಕೂಗುಮಾರಿ ಪರಿಭಾಷೆಯಲ್ಲಿ ಅರಚುತ್ತಿದ್ದುದು ಎಂದು ಓದಿಕೊಳ್ಳಬಹುದು) ಕಂಡು “ ಭೂತದ,,,,,” ಗಾದೆ ನೆನಪಾಯಿತು. ಈ ಗಾದೆಯ ಬಗ್ಗೆಯೇ ಅಸಹ್ಯ ಬರುವಂತಾಗಿದ್ದು ಕೆಲವು ಕೇಂದ್ರ ಬಿಜೆಪಿ ಸಚಿವರ ಟ್ವಿಟರ್ ಸಂದೇಶಗಳನ್ನು ಕಂಡು.

ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ “ ಹಿರಿಯ ಪತ್ರಕರ್ತ ಅರ್ನಾಬ್ ಗೋಸ್ವಾಮಿಯ ಬಂಧನ ಖಂಡನಾರ್ಹವಾಗಿದ್ದು, ಚಿಂತೆಗೀಡುಮಾಡುವ ವಿಚಾರವಾಗಿದೆ. ನಾವು 1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದೆವು ”
ಕೇಂದ್ರ ಗೃಹ ಸಚಿವ ಅಮಿತ್‍ಶಾ “ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಪ್ರಜಾತಂತ್ರಕ್ಕೆ ಅವಮಾನ ಮಾಡಿವೆ.

ರಿಪಬ್ಲಿಕ್ ಟಿವಿ ವಿರುದ್ಧ ಅಧಿಕಾರ ದುರುಪಯೋಗ ಮಾಡಿದೆ. ವ್ಯಕ್ತಿಗತ ಸ್ವಾತಂತ್ರ್ಯ ಮತ್ತು ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಸ್ತಂಭದ ಮೇಲೆ ಆಕ್ರಮಣ ನಡೆಸುವ ಮೂಲಕ ತುರ್ತುಪರಿಸ್ಥಿತಿಯನ್ನು ನೆನಪಿಸಿದೆ ”. ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವ ಪ್ರಕಾಶ್ ಜಾವಢೇಕರ್ “ ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದಿರುವ ಆಕ್ರಮಣವನ್ನು ನಾವು ಖಂಡಿಸುತ್ತೇವೆ. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇದೇ ರೀತಿ ನಡೆಯುತ್ತಿದ್ದುದನ್ನು ಇದು ನೆನಪಿಸುತ್ತದೆ.”

ಈ ಮೂರೂ ಅಣಿಮುತ್ತುಗಳನ್ನು ಕೇಳಿಸಿಕೊಳ್ಳುವ ಕಿವಿಗಳೇ ಧನ್ಯ ಅಲ್ಲವೇ ? ನಿಜ, ಮಹಾರಾಷ್ಟ್ರ ಪೊಲೀಸರ ನಡೆ ಅಕ್ಷಮ್ಯ, ಸರ್ಕಾರದ ಧೋರಣೆ ಖಂಡನಾರ್ಹ ಆದರೆ ಶಿವಸೇನೆ ಪಳಗಿರುವ ಗರಡಿಯಲ್ಲೇ ಈ ಮೂವರೂ ನಾಯಕರು ಪಳಗಿರುವುದಲ್ಲವೇ ? ಅರ್ನಾಬ್ ಗೋಸ್ವಾಮಿಯ ವಿರುದ್ಧ ಗಂಭೀರ ಆರೋಪಗಳು ಇದ್ದುದೇ ಆದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಇದು ಶಿವಸೇನೆಯ ಸಂಸ್ಕೃತಿಗೆ ಹೊರತಾದದ್ದು ಎನ್ನುವುದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ ? ಇಂದು ಶಿವಸೇನೆ ಕಾಂಗ್ರೆಸ್ ಬಾಹುಗಳಲ್ಲಿದೆ. ಆದರೆ ಹುಟ್ಟಿದ ದಿನದಿಂದಲೂ ಬೆಳೆದಿದ್ದು ಸಂಘಪರಿವಾರದ ಮಡಿಲಲ್ಲೇ ಅಲ್ಲವೇ ?

ಈ ಗೋಸುಂಬೆಗಳನ್ನು ಬದಿಗಿಟ್ಟು ಭಾರತದ ಪ್ರಸ್ತುತ ಸನ್ನಿವೇಶವನ್ನು ಒಮ್ಮೆ ಗಮನಿಸೋಣ. ಇತ್ತೀಚೆಗೆ ತಾನೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗನ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದ ಪವರ್ ಟಿವಿ ವಾಹಿನಿಯನ್ನು ಮಾನ್ಯ ಮುಖ್ಯಮಂತ್ರಿಯವರು ಮುಚ್ಚಿಸಿಬಿಟ್ಟರು. ಈಗ ಮತ್ತೊಂದು ಹೆಸರಿನಲ್ಲಿ ಆರಂಭವಾಗಿದ್ದರೂ ಬಾಯಿ ಮುಚ್ಚಿಸಿದಂತೆ ಕಾಣುತ್ತಿದೆ.

ಮಾಧ್ಯಮ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಇವೆಲ್ಲವನ್ನೂ ಗೌರವಿಸುತ್ತಲೇ ಅರ್ನಾಬ್ ಅವರನ್ನು ಬಂಧಿಸಿದ ರೀತಿಯನ್ನು ಖಂಡಿಸೋಣ. ಆದರೆ ದೇಶಾದ್ಯಂತ ಪತ್ರಕರ್ತರ ವಿರುದ್ಧ ರಣಬೇಟೆಯಾಡಿದ ಕೇಂದ್ರ ಸರ್ಕಾರದ ಕ್ರಮಗಳನ್ನು ಮೇಜು ಕುಟ್ಟಿ ಸ್ವಾಗತಿಸುತ್ತಾ ಭಟ್ಟಂಗಿಯಂತೆ ಪ್ರಭುತ್ವದ ಹೆಜ್ಜೆಗೆ ಗೆಜ್ಜೆಯಾಗಿ, ತಮ್ಮ ಪತ್ರಿಕಾ ವೃತ್ತಿಧರ್ಮವನ್ನೂ ಮರೆತು ವರ್ತಿಸಿದ ಅರ್ನಾಬ್ ಗೋಸ್ವಾಮಿಯಾಗಲೀ ಅಥವಾ ಇತರ ಬಿಜೆಪಿ ನಾಯಕರಾಗಲೀ ಈ ಪ್ರಕರಣದ ಬಗ್ಗೆ ಕನಿಷ್ಟ ಮಾತನಾಡುವ ನೈತಿಕತೆಯನ್ನು ಉಳಿಸಿಕೊಂಡಿದ್ದಾರೆಯೇ ? ನಮ್ಮನ್ನೇ ಪ್ರಶ್ನಿಸಿಕೊಳ್ಳೋಣ.

ಅರ್ನಾಬ್ ಗೋಸ್ವಾಮಿಯನ್ನು ಮೂರು ವರ್ಷದ ಹಿಂದಿನ ಆತ್ಮಹತ್ಯೆಯ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಿರುವುದೇ ಮಹಾರಾಷ್ಟ್ರ ಸರ್ಕಾರದ ಘೋರ ಅಪರಾಧ ಎಂದಾದರೆ, ಸುಮ್ಮನೆ ಗುಜರಾತ್‍ನ ಹಿರಿಯ ಅಧಿಕಾರಿ ಸಂಜೀವ್ ಭಟ್ ಅವರನ್ನು ನೆನೆಯಿರಿ. ಮೂವತ್ತು ವರ್ಷದ ಹಿಂದಿನ , ಮುಚ್ಚಿಹೋಗಿದ್ದ ಪ್ರಕರಣದ ಕಡತವನ್ನು ಹೆಕ್ಕಿ ತೆಗೆದು ಅವರನ್ನು ಬಂಧಿಸಿದಾಗ ಭಾರತದ ಎಷ್ಟು ಸುದ್ದಿಮನೆಗಳು ವಿರೋಧಿಸಿದ್ದವು ? ಮಾನ್ಯ ಗೋಸ್ವಾಮಿ ಎಲ್ಲಿದ್ದರು ಸ್ವಾಮಿ ? ಭಾರತದ ಜನಸಾಮಾನ್ಯರು ಮಾಸ್ಕ್ ಧರಿಸುತ್ತಿರುವುದು ಕೊರೋನಾ ಬಂದ ನಂತರ. ಭಾರತದ ಬಹುತೇಕ ಸುದ್ದಿಮಾಧ್ಯಮಗಳು 2014ರಿಂದಲೇ ಮಾಸ್ಕ್ ಧರಿಸಲಾರಂಭಿಸಿವೆ.

ಸ್ವತಂತ್ರ ಭಾರತದ ಕಾನೂನು ವ್ಯವಸ್ಥೆಯಲ್ಲಿ ಎಫ್‍ಐಆರ್ ಎಂಬ ಪದ ಜನಸಾಮಾನ್ಯರ ಅರಿವಿಗೆ ನಿಲುಕದಷ್ಟು ಅಪರೂಪವಾಗಿತ್ತು. ಯಾವುದೋ ಗಂಭೀರ ಅಪರಾಧಗಳಲ್ಲಿ ಮಾತ್ರ ಈ ಪದ ಕೇಳಿಬರುತ್ತಿತ್ತು. ಆದರೆ ಕಳೆದ ಆರು ವರ್ಷಗಳಲ್ಲಿ ಎಫ್‍ಐಆರ್ ಎನ್ನುವುದು ಸಂತೆಯಲ್ಲಿನ ಸರಕಿನಂತೆ ಕಾಣುತ್ತಿದೆ.

ದೇಶದ್ರೋಹದ ಆರೋಪ ಮತ್ತು ಎಫ್‍ಐಆರ್ ಅಧಿಕಾರಸ್ಥರ ಬತ್ತಳಿಕೆಯಲ್ಲಿರುವ ಸುಲಭ ಅಸ್ತ್ರಗಳಾಗಿರುವುದರಿಂದಲೇ ಕೊರೋನಾ ಸಂದರ್ಭದಲ್ಲೇ 55 ಪತ್ರಕರ್ತರ ವಿರುದ್ಧ 22 ಎಫ್‍ಐಆರ್ ದಾಖಲಿಸಲಾಗಿದೆ. ಮಾರ್ಚ್ 25 ರಿಂದ ಜೂನ್ 30ರ ಅವಧಿಯಲ್ಲಿ ಕೋವಿದ್19 ವರದಿಗಳಿಗೆ ಸಂಬಂಧಪಟ್ಟಂತೆ ಇಷ್ಟು ಎಫ್‍ಐಆರ್‍ ಗಳನ್ನು ಪತ್ರಕರ್ತರ ವಿರುದ್ಧ ದಾಖಲಿಸಲಾಗಿದೆ.

ದ ವೈರ್ ಪತ್ರಿಕೆಯ ಸಿದ್ಧಾರ್ಥ ವರದರಾಜನ್, ವಿನೋದ್ ದುವಾ, ಅಮ್ನೆಸ್ಟಿ ಇಂಟರ್‍ನ್ಯಾಷನಲ್ ಸಂಸ್ಥೆಯ ಮಾಜಿ ನಿರ್ದೇಶಕ ಮತ್ತು ಅಂಕಣಕಾರ ಆಕರ್ ಪಟೇಲ್, ಸ್ಕ್ರೋಲ್ ಪತ್ರಿಕೆಯ ಸುಪ್ರಿಯಾ ಶರ್ಮ ಇವರು ಕೇಂದ್ರ ಸರ್ಕಾರದ ಪ್ರಹಾರಕ್ಕೆ ಬಲಿಯಾಗುತ್ತಿದ್ದಾರೆ. ಸುಪ್ರಿಯಾ ಶರ್ಮ ಅವರ ಅಪರಾಧ ಏನು ಗೊತ್ತೇ ? ಪ್ರಧಾನಮಂತ್ರಿ ಮೋದಿ ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ದತ್ತುಪಡೆದಿರುವ ವಾರಣಾಸಿಯ ದೊಹಾರಿ ಗ್ರಾಮದಲ್ಲಿನ ಜನಜೀವನವನ್ನು ತೆರೆದಿಟ್ಟಿದ್ದು. ಉತ್ತರಪ್ರದೇಶದಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ವರದಿ ಮಾಡಿದ್ದ ಪವನ್ ಕುಮಾರ್ ಜೈಸ್ವಾಲ್ ಮತ್ತೋರ್ವ ಎಫ್‍ಐಆರ್ ಬಲಿ.

ಕೊರೋನಾ ಸಂದರ್ಭದಲ್ಲಿ ಮಹಾರಾಷ್ಟ್ರದ ವಲಸೆ ಕಾರ್ಮಿಕರ ಸಮಸ್ಯೆಗೆ ಕೋಮು ಬಣ್ಣ ನೀಡಿದ್ದ ಅರ್ನಾಬ್ ವಿರುದ್ಧ ದಾಖಲಿಸಿದ್ದ ಎಫ್‍ಐಆರ್ ಮುಂಬೈ ಹೈಕೋರ್ಟ್ ಕೃಪೆಯಿಂದ ರದ್ದಾಗಿದೆ. ಸೂಫಿ ಸಂತ ಮೊಯಿನುದ್ದಿನ್ ಕ್ರಿಸ್ಟಿಯನ್ನು ದರೋಡೆಕೋರ ಎಂದು ಅವಮಾನಿಸಿದ ಅಮೀಶ್ ದೇವಗನ್ ಸಹ ಕೋರ್ಟ್ ಕೃಪೆಗೆ ಪಾತ್ರರಾಗಿದ್ದಾರೆ. ಆದರೆ ತಮ್ಮ ಪತ್ರಿಕಾ ಧರ್ಮ ಪಾಲಿಸುತ್ತಾ ಜನಸಾಮಾನ್ಯರಿಗೆ ಸತ್ಯ ಹೇಳುವ ಆಕರ್ ಪಟೇಲ್, ವಿನೋದ್ ದುವಾ ಪೊಲೀಸ್ ಠಾಣೆಗೆ ಅಲೆಯುತ್ತಿದ್ದಾರೆ.

ಅರ್ನಾಬ್ ಗೋಸ್ವಾಮಿ ಬಂಧನದ ವೈಖರಿಯನ್ನು ಖಂಡಿಸೋಣ. ಬಂಧನಕ್ಕೆ ಕಾರಣಗಳಿದ್ದರೆ ಬಿಡುಗಡೆಗೂ ಕಾರಣಗಳಿರುತ್ತವೆ. ಎಲ್ಲವೂ ಅಧಿಕಾರ ಪೀಠದ ಕೃಪೆಯನ್ನು ಆಧರಿಸಿರುತ್ತದೆ. ಯಾವುದೇ ಆರೋಪ ಇಲ್ಲದೆ, ವಾರಂಟ್ ಇಲ್ಲದೆ, ಏಕಾಏಕಿ ಬಂಧಿಸುವುದು ಘೋರ ಅಪರಾಧವೇನೋ ಹೌದು. ಇದು ಕಾನೂನು, ಸಂವಿಧಾನ, ಪೊಲೀಸ್ ನಿಯಮಾವಳಿ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಮಾನ್ಯತೆ ನೀಡುವವರಿಗೆ ಅನ್ವಯಿಸುವ ಮಾತು.

ಭೀಮಾ ಕೊರೆಗಾಂವ್ ಪ್ರಕರಣದ ಹಿನ್ನೆಲೆಯಲ್ಲಿ ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿದ ರೀತಿ ಜಗಜ್ಜಾಹೀರಾಗಿದೆ. ಈ ಬಂಧನದ ಸಮಯದಲ್ಲಿ ಗೋಸ್ವಾಮಿಯವರ ಕೂಗುಮಾರಿ ಸುದ್ದಿವಾಚನವನ್ನು ಪ್ರಜ್ಞೆ ಇರುವವರು ಮರೆತಿರಲಾರರು. ಇತ್ತೀಚೆಗೆ 83ರ ವೃದ್ಧ, ಸಾಮಾಜಿಕ ಕಾರ್ಯಕರ್ತರಾದ ಸ್ಟಾನ್ ಸ್ವಾಮಿಯವರನ್ನು ಬಂಧಿಸಿದಾಗ, ಸುಧಾ ಭರದ್ವಾಜ್, ವರಾವರರಾವ್, ಉಮರ್ ಖಲೀದ್, ಗರ್ಭಿಣಿ ಮಹಿಳೆ ಸಫೂರ ಜರ್ಗರ್ ಅವರನ್ನು ಬಂಧಿಸಿದಾಗ ಗೋಸ್ವಾಮಿಯಾಗಲೀ, ತುರ್ತುಪರಿಸ್ಥಿತಿಯಲ್ಲಿ ಹೋರಾಡಿದ, ಇಂದಿನ ಟ್ವಿಟರ್ ವೀರರಾಗಲೀ ಖಂಡಿಸಿದ್ದರೇ ? ಪ್ರಭುತ್ವ ಅಥವಾ ಆಡಳಿತ ವ್ಯವಸ್ಥೆಯ ಒಂದು ಅಂಗ ಯಾರನ್ನೋ ನಗರ ನಕ್ಸಲರು ಎಂದು ಹೇಳಿಬಿಟ್ಟರೆ ಅವರನ್ನು ಯಾವ ಹೊತ್ತಿನಲ್ಲಾದರೂ, ಯಾವ ರೀತಿಯಲ್ಲಾದರೂ ಬಂಧಿಸಬಹುದು ಎಂದು ಸಂವಿಧಾನದಲ್ಲಿ ಹೇಳಲಾಗಿದೆಯೇ ?

ಇದು ವ್ಯಕ್ತಿ ಅಥವಾ ಸಂಸ್ಥೆಯ ಪ್ರಶ್ನೆಯಲ್ಲ. ಮೌಲ್ಯಗಳ ಪ್ರಶ್ನೆ. ಗೋಸ್ವಾಮಿ ಯಾವ ಮೌಲ್ಯಗಳನ್ನು ಪ್ರತಿನಿಧಿಸುತ್ತಾರೆ, ಪ್ರತಿನಿಧಿಸುತ್ತಿದ್ದಾರೆ ? ಇವರನ್ನೇ ಅನುಕರಿಸಿ, ಅನುಸರಿಸುವ ಕನ್ನಡದ ಕೂಗುಮಾರಿ ಸುದ್ದಿಮನೆಗಳು ಯಾವ ಸಂಸ್ಕೃತಿಯನ್ನು ಅನುಸರಿಸುತ್ತಿವೆ ? ತುರ್ತುಪರಿಸ್ಥಿತಿಯಲ್ಲಿ ತಾವು ಪ್ರಜಾತಂತ್ರದ ಉಳಿವಿಗಾಗಿ ನಡೆಸಿದ ಹೋರಾಟವನ್ನು ಹೆಮ್ಮೆಯಿಂದ ನೆನೆಯುವ ಸಚಿವರು, ರಾಜಕೀಯ ನಾಯಕರು ಯಾವ ಸಂಸ್ಕೃತಿ ಅನುಸರಿಸುತ್ತಿದ್ದಾರೆ ?

ಓರ್ವ ಗೋಸ್ವಾಮಿಯ ಬಂಧನದಿಂದ ತುರ್ತುಪರಿಸ್ಥಿತಿಯ ಛಾಯೆ ಕವಿದಂತೆ ಭಾವಿಸುವ ಕೇಂದ್ರ ಸಚಿವರಿಗೆ ಒಂದು ವರ್ಷದ ಕಾಲ ಗೃಹಬಂಧನದಲ್ಲಿದ್ದ ಕಾಶ್ಮೀರದ ಸಮಸ್ತ ಜನತೆ ಹೇಗೆ ಕಂಡಿದ್ದರು ? ಯಾವುದೇ ಅಪರಾಧ ಮಾಡದಿದ್ದರೂ ಸೆರೆಮನೆಯಲ್ಲಿರುವ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಹೇಗೆ ಕಾಣುತ್ತಿದ್ದಾರೆ ?

ನಡೆದಾಡುವ ಸ್ಥಿತಿಯಲ್ಲೂ ಇಲ್ಲದ ಸಾಯಿಬಾಬಾ ಅವರಂತಹ ವಿದ್ವಾಂಸರನ್ನು ಉಗ್ರಗಾಮಿ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿ, ಜಾಮೀನು ಸಹ ನೀಡದೆ ಇರುವ ಆಡಳಿತ ವ್ಯವಸ್ಥೆಗೆ ಮತ್ತು ಅಧಿಕಾರಪೀಠದ ವಾರಸುದಾರರಿಗೆ ಗೋಸ್ವಾಮಿಯ ಬಂಧನ ತುರ್ತುಪರಿಸ್ಥಿತಿಯನ್ನು ನೆನಪಿಸುವುದೆಂದರೆ, ಭಾರತ ಮೌಲಿಕವಾಗಿ, ನೈತಿಕವಾಗಿ ಹಾದಿ ತಪ್ಪಿದೆ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

“ ಬಂಧಿಸಲಿ ಬಿಡಿ, ತಪ್ಪು ಮಾಡದಿದ್ದರೆ ಬಿಡುಗಡೆಯಾಗುತ್ತಾರೆ,,,,,” ಮಧ್ಯಮ ವರ್ಗಗಳ ಹಿತವಲಯದಲ್ಲಿ, ಬೌದ್ಧಿಕ ವಲಯದಲ್ಲಿ, ಬುದ್ಧಿಜೀವಿಗಳಲ್ಲದವರಲ್ಲಿ ಮತ್ತು ವಂದಿಮಾಗಧ ಸುದ್ದಿಮನೆಗಳಲ್ಲಿ ಕೇಳಿಬರುವ ಈ ಹೇಳಿಕೆ ಅರ್ನಾಬ್ ಗೋಸ್ವಾಮಿಗೂ ಅನ್ವಯಿಸುತ್ತದೆ. ಅವರಿಗೆ ಪ್ರಭುತ್ವವೂ ನೆರವಾಗಬಹುದು, ನ್ಯಾಯಾಂಗವೂ ನೆರವಾಗಬಹುದು.

ಇಂದಿನ ಭಾರತ ಕೇವಲ ಸಾಂವಿಧಾನಿಕ ಮೌಲ್ಯಗಳನ್ನು ಮಾತ್ರ ಕಳೆದುಕೊಳ್ಳುತ್ತಿಲ್ಲ, ಪ್ರಜಾತಂತ್ರ ಮೌಲ್ಯಗಳನ್ನೂ ಕಳೆದುಕೊಂಡಿದೆ. ಈ ಪ್ರಜ್ಞೆ ತಮ್ಮೊಳಗಿದ್ದು, ತಾವು ಪ್ರತಿನಿಧಿಸುವ “ಪತ್ರಿಕೋದ್ಯಮ ಅಥವಾ ಮಾಧ್ಯಮ ” ಎನ್ನುವ ಮೌಲ್ಯಯುತ ಸ್ತಂಭಕ್ಕೆ ಬದ್ಧತೆಯಿಂದ ನಡೆದುಕೊಂಡಿದ್ದರೆ ಬಹುಶಃ ಅರ್ನಾಬ್ ಗೋಸ್ವಾಮಿ ಜನತೆಯ ಅನುಕಂಪಕ್ಕೆ ಅರ್ಹರಾಗುತ್ತಿದ್ದರೇನೋ !

ನೆನ್ನೆ ಬಿಜೆಪಿ-ಶಿವಸೇನೆ ಮಾಡಿರುವುದನ್ನೇ ಇಂದು ಶಿವಸೇನೆ-ಕಾಂಗ್ರೆಸ್ ಸರ್ಕಾರ ಮಾಡಿದೆ. ಇದು ಒಂದು ಸರ್ಕಾರ ಅಥವಾ ಒಬ್ಬ ಮುಖ್ಯಮಂತ್ರಿಯ ಪ್ರಶ್ನೆಯಲ್ಲ.. ಮೌಲ್ಯಗಳ ಪ್ರಶ್ನೆ. ಮೌಲ್ಯ ಎಂದರೇನು ? ಇದು ಇಂದಿನ ಸಂದರ್ಭದಲ್ಲಿ ಕಾಡಬೇಕಾದ ಗಹನವಾದ ಪ್ರಶ್ನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.

ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.

‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.

ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

Published

on

ಗಿರೀಶ್ ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.

ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.

ಸಾಧಿಕ್ ಪೊಲೀಸರಿಗೆ ಸಾಥ್

ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.

“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

Published

on

~ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ ಕಲಿಕೆ ಎನ್ನುವುದು ಶಿಕ್ಷಣ ಕ್ಷೇತ್ರದಲ್ಲಿ ಬಳಸಲಾಗುವ ಒಂದು ವ್ಯವಸ್ಥಿತ ಮತ್ತು ಪ್ರಭಾವಶಾಲಿ ಬೋಧನಾ ವಿಧಾನವಾಗಿದ್ದು, ವಿಶೇಷವಾಗಿ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – NEP ಯಲ್ಲೂ ಇದರ ಪ್ರಸ್ತಾಪವಿದೆ ಎನ್ನಲಾಗಿದೆ.

ಪಂಚಪಾಡಿ ಎಂದರೇನು?

ಪಂಚಪಾಡಿ ಎಂದರೆ ಮಗುವಿನ ಸಮಗ್ರ ವಿಕಾಸಕ್ಕಾಗಿ ಐದು ಹಂತಗಳ ಕಲಿಕಾ ಪ್ರಕ್ರಿಯೆಯನ್ನು ಬಳಸಲಾಗುತ್ತದೆ.
​ಅಂದರೆ ಜ್ಞಾನರ್ಜನೆಗೆ ಐದು ಹೆಜ್ಜೆಗಳು ಅಥವಾ ಐದು ಹಂತಗಳು ಎಂದರ್ಥ.

ಜ್ಞಾನವನ್ನು ಕೇವಲ ನೆನಪಿನಲ್ಲಿಟ್ಟುಕೊಳ್ಳುವುದರ ಬದಲಾಗಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಈ ವಿಧಾನ ಸಹಾಯ ಮಾಡುತ್ತದೆ.

ಪಂಚಪಾಡಿ ಕಲಿಕೆಯ 5 ಹಂತಗಳು

ಅದಿತಿ ( ಪರಿಚಯ / ಗ್ರಹಿಕೆ): ​ಈ ಪದ್ಧತಿಯ ಮೊದಲ ಹಂತವೇ ಅದಿತಿ. ಇಲ್ಲಿ ವಿದ್ಯಾರ್ಥಿಗೆ ಹೊಸ ವಿಷಯವನ್ನು ಪರಿಚಯಿಸಲಾಗುತ್ತದೆ. ಶಿಕ್ಷಕರು ಕಥೆ,ಚಿತ್ರ ಉದಾಹರಣೆ ಅಥವಾ ಚಟುವಟಿಕೆಗಳ ಮೂಲಕ ಹೊಸ ವಿಷಯವನ್ನು ಮಗುವಿನ ಮುಂದೆ ಪ್ರಸ್ತುತಪಡಿಸುತ್ತಾರೆ. ಮಗು ವಿಷಯವನ್ನು ಕೇಳಿ, ನೋಡಿ ಗ್ರಹಿಸಲು ಆರಂಭಿಸುತ್ತದೆ.

ಬೋಧ : (ತಿಳುವಳಿಕೆ / ಅರ್ಥೈಸಿಕೊಳ್ಳುವಿಕೆ): ಪರಿಚಯಿಸಿಕೊಂಡ ವಿಷಯವನ್ನು ಆಳವಾಗಿ ಅರ್ಥಮಾಡಿಕೊಳ್ಳುವ ಹಂತವಿದು. ಮಗು ವಿಷಯದ ಹಿಂದಿರುವ ಪರಿಕಲ್ಪನೆ ಮತ್ತು ಕಾರಣಗಳನ್ನು ಅರ್ಥಮಾಡಿಕೊಳ್ಳುತ್ತದೆ. ಪ್ರಶ್ನೆಗಳನ್ನು ಕೇಳುವ ಮೂಲಕ ಮತ್ತು ಚರ್ಚೆಗಳಲ್ಲಿ ಭಾಗವಹಿಸುವ ಮೂಲಕ ತನ್ನ ಗೊಂದಲಗಳನ್ನು ನಿವಾರಿಸಿಕೊಳ್ಳುತ್ತದೆ.

ಅಭ್ಯಾಸ : (ರೂಢಿಸಿಕೊಳ್ಳುವುದು / ತರಬೇತಿ): ಕಲಿತ ವಿಷಯ ಮನಸ್ಸಿನಲ್ಲಿ ಗಟ್ಟಿಯಾಗಲು ನಿರಂತರ ಸ್ಮರಣೆ ಅಥವಾ ಅಭ್ಯಾಸದ ಅಗತ್ಯವಿದೆ. ಮಕ್ಕಳು ಕಲಿತ ವಿಷಯವನ್ನು ಬರವಣಿಗೆ, ಗಣಿತದ ಲೆಕ್ಕಗಳು, ಪ್ರಯೋಗಗಳು ಅಥವಾ ಪುನರಾವರ್ತನೆ (Revision) ಮೂಲಕ ಅಭ್ಯಾಸ ಮಾಡುತ್ತಾರೆ. ಇದು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಕೇವಲ ಪುಸ್ತಕದಲ್ಲಿ ಕಲಿತದ್ದನ್ನು ನಿಜ ಜೀವನದಲ್ಲಿ ಅಥವಾ ಹೊಸ ಸಂದರ್ಭಗಳಲ್ಲಿ ಬಳಸಿ ನೋಡುವುದೇ ಪ್ರಯೋಗ.

​ಉದಾಹರಣೆಗೆ, ಗಣಿತದಲ್ಲಿ ‘ಲಾಭ-ನಷ್ಟ’ ಕಲಿತ ನಂತರ ಮಗು ಮಾರುಕಟ್ಟೆಗೆ ಹೋಗಿ ವ್ಯವಹಾರ ಮಾಡುವುದು, ಅಥವಾ ವಿಜ್ಞಾನದ ತತ್ವವನ್ನು ಪ್ರಾಜೆಕ್ಟ್ ಮೂಲಕ ಮಾಡಿ ನೋಡುವುದು.

ಪ್ರಸಾರ : (ಹಂಚಿಕೊಳ್ಳುವುದು) ​ಕಲಿಕೆಯ ಅತ್ಯುನ್ನತ ಹಂತವೆಂದರೆ ತಾನು ಕಲಿತ ಜ್ಞಾನವನ್ನು ಇತರರಿಗೆ ಮನವರಿಕೆ ಮಾಡಿಕೊಡುವುದು. ​ವಿದ್ಯಾರ್ಥಿ ತನಗೆ ತಿಳಿದ ವಿಷಯವನ್ನು ತನ್ನ ಸಹಪಾಠಿಗಳಿಗೆ ವಿವರಿಸುವುದು, ಭಾಷಣ ಮಾಡುವುದು ಅಥವಾ ಗುಂಪು ಚರ್ಚೆಯಲ್ಲಿ ಹಂಚಿಕೊಳ್ಳುವುದು. “ಕಲಿಸುವುದರಿಂದ ಕಲಿಕೆ ಪೂರ್ಣವಾಗುತ್ತದೆ” ಎಂಬ ತತ್ವ ಇದರ ಹಿಂದಿದೆ.

ಪಂಚಪಾಡಿ ಕಲಿಕೆಯ ಮಹತ್ವ

​”ಶುಷ್ಕ ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನವೇ ಮೇಲು.”
​ಇದು ಮಕ್ಕಳಲ್ಲಿ ಸ್ವಯಂ ಕಲಿಕೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ.

​ಕಂಠಪಾಠ ಮಾಡುವ ಪದ್ಧತಿಯನ್ನು ತಪ್ಪಿಸಿ, ವಿಷಯದ ಆಳವಾದ ತಿಳುವಳಿಕೆಗೆ ನೆರವಾಗುತ್ತದೆ.
​ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸುತ್ತದೆ.

ಶಾಲೆಯ ವೈಶಿಷ್ಟ

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.

ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.

ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..

ಜೂನ್ 2ಕ್ಕೆ ಶಾಲಾ ಪ್ರವೇಶಕ್ಕೆ ಕೊನೆದಿನ

2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ.

ಶಾಲೆಯ ವೈಶಿಷ್ಟ

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.

ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.

ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..

2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ. ಕೇವಲ ಪುಸ್ತಕ ಆಧಾರಿತ ಆಧುನಿಕ ಪದ್ಧತಿಯ ಕಲಿಕೆ ಮಾತ್ರವಲ್ಲದೆ ಹಿಂದಿನ ಗುರುಕುಲ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡಿ ಮಕ್ಕಳಿಗೆ ಉತ್ತಮ ರೀತಿಯ ವಿದ್ಯಾಭ್ಯಾಸ ನೀಡುವ ಮಹಾದಾಸೆ ಇದೆ.”

|  ವೀಣಾ ಮಂಜುನಾಥ್ ಮುಖ್ಯಸ್ಥರು

ಪ್ರವೇಶ ಪ್ರಾರಂಭ : ಸದರಿ ಶಾಲೆಯಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಮೇ 17ರಿಂದ ಆರಂಭವಾದ ಪ್ರವೇಶ ಪ್ರಕ್ರಿಯೆ ಜೂನ್ 2ಕ್ಕೆ ಕೊನೆಗೂಳ್ಳುತ್ತದೆ. ಸಂಪರ್ಕಿಸಿ : Mandara School Tyavanige 919148141665

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending