ದಿನದ ಸುದ್ದಿ
ಆನ್ಲೈನ್ ಶಿಕ್ಷಣ ಬೇಕೋ..? ಬೇಡವೋ..?
- ಸಂಗಮೇಶ ಎನ್ ಜವಾದಿ
ಕರೋನಾ ಎಂಬ ಮಹಾಮಾರಿಯ ಹಾವಳಿಯಿಂದ ಲಕ್ಷಾಂತರ ಜನರು ಇನ್ನು ಆತಂಕ ಸ್ಥಿತಿಯಲ್ಲಿ ಇದ್ದಾರೆ. ಜೊತೆಗೆ ಹಲವಾರು ಸಮಸ್ಯೆಗಳು ಜನಸಾಮಾನ್ಯರು ದಿನನಿತ್ಯ ಅನುಭವಿಸುತ್ತಿದ್ದಾರೆ. ಅದರಲ್ಲಿ ವಿಶೇಷವಾಗಿ ಮಕ್ಕಳ ಸ್ಥಿತಿಯಂತು ಹೇಳತೀರದು ಎನ್ನಬಹುದು. ಈಗ ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಅಂದರೆ ಅವರ ಶಿಕ್ಷಣದ ಉನ್ನತಿಗಾಗಿ ಶಿಕ್ಷಣ ಪಡೆಯುವುದು ಅನಿವಾರ್ಯವಾಗಿದೆ ಎನ್ನಬಹುದು.
ಆದರೆ ಈಗ ಸಧ್ಯ ಶಾಲೆಗಳಿಗೆ ಮಕ್ಕಳು ಹೋಗುವಂತಿಲ್ಲ.ಒಂದು ವೇಳೆ ಶಾಲೆಗಳಿಗೆ ತೆರಳಿ ಒಂದೇ ಕಡೆ ಮಕ್ಕಳು ಸೇರಿದರೇ, ಕೊರೋನಾ ಹಾವಳಿ ಹೆಚ್ಚಾಗುವದಂತು ಖಂಡಿತಾ ಹಾಗಾಗಿ ಕೊರೋನಾ ಹಾವಳಿ ಹೆಚ್ಚಾಗಬಹುದೆಂಬ ಭಯದ ಹಿನ್ನೆಲೆಯಲ್ಲಿ ಕೆಲ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ
ಆನ್ಲೈನ್ ಶಿಕ್ಷಣ ನೀಡುವ ವ್ಯವಸ್ಥೆ ಜಾರಿಗೆ ತಂದಿದ್ದಾರೆ.
ಆದರೆ ಈ ಆನ್ಲೈನ್ ಶಿಕ್ಷಣ ವ್ಯವಸ್ಥೆಯಿಂದ
ಮಕ್ಕಳ ಅಧ್ಯಯನದ ಮೇಲೆ ಎಷ್ಟು ಪರಿಣಾಮಕಾರಿಯಾಗಿ ಶಿಕ್ಷಣ(ಅಭ್ಯಾಸ)ದ ಪ್ರಭಾವ ಬೀರುತ್ತದೆ ಎಂಬುದು ಈಗಿರುವ ಮುಖ್ಯ ಪ್ರಶ್ನೆ ಜೊತೆಗೆ ಬಡ ಕುಟುಂಬದ ಮಕ್ಕಳ ಸ್ಥಿತಿಗತಿ, ಅವರ ಆರ್ಥಿಕ ಪರಿಸ್ಥಿತಿ ಹೇಗೆ ಎನ್ನುವುದು ಸೇರಿದಂತೆ ನೂರಾರು ಪ್ರಶ್ನೆಗಳು ಸಹಜವಾಗಿಯೇ ನಮ್ಮನ್ನು ಕಾಡುತ್ತಿವೆ ಮತ್ತು ಘಾಸಿಗೊಳಿಸುತ್ತಿವೆ.ಈ ನಿಟ್ಟಿನಲ್ಲಿ ಆನ್ಲೈನ್ ಶಿಕ್ಷಣ ಬೇಕೋ ಬೇಡವೋ ಎನ್ನುವ ಶೀರ್ಷಿಕೆ ಬಳಸಿಕೊಂಡು ಈ ಚಿಕ್ಕ ಲೇಖನ ಬರೆಯುವ ಕಾಯಕ ಮಾಡಿರುತ್ತೇನೆ.ಹಾಗಾಗಿ ತಮ್ಮ ಮುಂದೆ ಈ ಲೇಖನ ತರುವ ಪುಟ್ಟ ಪ್ರಯತ್ನ ನಮ್ಮದಾಗಿದೆ.
ಈ ಹಿನ್ನೆಲೆಯಲ್ಲಿ ಈಗ ಎಲ್ಲೆಡೆ ಆನ್ಲೈನ್ ಕ್ಲಾಸ್ ಗಳು ಪ್ರಾರಂಭವಾಗಿವೆ. ಆಯಾ ವಿಷಯಕ್ಕೆ ತಕ್ಕಂತೆ ದಿನಾಲೂ ಶಿಕ್ಷಕಿಯರು – ಶಿಕ್ಷಕರು ಪಾಠ ಮಾಡುತ್ತಿದ್ದಾರೆ.ಮಕ್ಕಳು ಆನ್ಲೈನ್ ಕ್ಲಾಸ್ನನಲ್ಲಿಯೇ
ಪಾಠಗಳನ್ನು ಕೇಳಿ ಮನೆಯಲ್ಲಿಯೇ ಅಭ್ಯಾಸ ಮಾಡಬೇಕು. ಶಾಲೆಯಲ್ಲಿ ಪಾಠ ಮಾಡುವಾಗ ಶಿಕ್ಷಕರು ಮಕ್ಕಳ ಮನಸ್ಸನ್ನು ಸೆರೆ ಹಿಡಿಯಲು ಪಾಠ ಬೋಧನೋಪಕರಣಗಳ ಜೊತೆಗೆ ನಾನಾ ತರಹದ ಸರ್ಕಸ್ಸುಗಳನ್ನು ಮಾಡುತ್ತಿರುತ್ತಾರೆ.
ಆದರೂ ಕೂಡ ಕೆಲವು ವಿದ್ಯಾರ್ಥಿಗಳು ಪಾಠಗಳನ್ನು ಕೇಳುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ ಹಾಗೂ ಮತ್ತೊಂದು ಕಡೆ ಬಡತನದ ಪರಿಸ್ಥಿತಿಯಲ್ಲಿ ಬದುಕು ಸಾಗಿಸುತ್ತಿರುವ ಬಡವರ ಹತ್ತಿರ ಮೊಬೈಲ್ ಇಲ್ಲದೇ ಇರಬಹುದು. ಇದ್ದರೂ ಹಳ್ಳಿಗಳಲ್ಲಿ ನೆಟ್ವರ್ಕ್ ಸಮಸ್ಯೆ. ಇದರಿಂದ ಆನ್ಲೈನ್ ಶಿಕ್ಷಣ ಎಲ್ಲರಿಗೂ ತಲುಪುವುದು ಕಷ್ಟವಾಗಬಹುದೆಂಬ ಅನುಮಾನ ಕೆಲ ಪೂಷಕರಲ್ಲಿ ಕಾಣುತ್ತವೆ.ಆದ್ದರಿಂದ ಹಿಗಿದ್ದ ಮೇಲೂ ಮಕ್ಕಳ ಮೇಲೆ ಈ ಶಿಕ್ಷಣ ಯಾವ ರೀತಿ ಪ್ರಭಾವ ಬೀರುತ್ತದೆಯೇ ಎಂಬುದು ಬರುವ ದಿನಮಾನಗಳಲ್ಲಿ ಕಾಣಬಹುದು.
ಇನ್ನೂ ನನ್ನ ಪ್ರಕಾರ ಹೇಳುವುದಾದರೆ ಆನ್ಲೈನ್ ಕ್ಲಾಸ್ ತೆಗೆದುಕೊಳ್ಳುವುದು ಸೂಕ್ತವಲ್ಲ. ಏಕೆಂದರೆ ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿಯೇ ಅಷ್ಟು ಚೆನ್ನಾಗಿ ಶಿಕ್ಷಕರು ಪಾಠ ಮಾಡಿದರು ಸಹ ಮಕ್ಕಳಿಗೆ ಆ ಪಾಠವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟಕರವಾಗುವಾಗ,ಇಂತಹ ಸಮಯದಲ್ಲಿ ಈಗ ಆನ್ಲೈನ್ ಪಾಠ ತಿಳಿದುಕೊಳ್ಳುತ್ತಾರೆಯೇ ಎನ್ನುವುದು ನಮ್ಮ ದೊಡ್ಡ ಯಕ್ಷ ಪ್ರಶ್ನೆ ? ಇದು ಒಂದು ಕಡೆಯಾದರೆ ಆನ್ಲೈನ್ ಕ್ಲಾಸ್ ಕೇಳಲು ಫೋನ್ ಮತ್ತು ಲ್ಯಾಪ್ಟಾಪ್ ಗಳ ಅವಶ್ಯಕತೆ ಇದೆ ಎನ್ನುವುದು ಸುಳ್ಳಲ್ಲ.
ಆದರೆ ಎಲ್ಲ ಪೋಷಕರು ಶ್ರೀಮಂತರಾಗಿರುವುದಿಲ್ಲ ಎನ್ನುವುದಂತು ನೂರಕ್ಕೆ ನೂರರಷ್ಟು ನಿಜ. ನಿಜವಾದರೆ ಅಂತಹ ಬಡ ವಿದ್ಯಾರ್ಥಿಗಳಿಗೆ ಫೋನ್ ಮತ್ತು ಲ್ಯಾಪ್ಟಾಪ್ ಗಳನ್ನು ಖರೀದಿಸಲು ಸಾಧ್ಯವಿಲ್ಲ ಅಂದ ಮೇಲೆ ಅಂತಹವರಿಗೆ ಆನ್ಲೈನ್ ಕ್ಲಾಸ್ ನಿಂದ ಅವರಿಗೇನು ಪ್ರಯೋಜನ ಎಂಬುದು ಇನ್ನು ಅರ್ಥವಾಗದೆ ಇರುವ ಮಾತು. ಅಂದರೆ ಇದು ಕೇವಲ ಉಳ್ಳುವವರಿಗೆ ಮಾತ್ರ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.ಹಿಗಾದಾಗ ಶ್ರೀಮಂತರು ಮಾತ್ರ ಪಾಠ ಕೇಳಬೇಕೆ? ಎನ್ನುವ ಪ್ರಶ್ನೆ ಕೆಲ ಬಡವರಲ್ಲಿ
ಮೂಡುತ್ತದೆ.
ಇದಲ್ಲದೆ ಚಿಕ್ಕಮಕ್ಕಳಂತೂ ಮನೆಯಲ್ಲಿ ಮೊಬೈಲ್ ದಾಸರಾಗಿಬಿಟ್ಟಿದ್ದಾರೆ. ಆನ್ಲೈನ್ ಕ್ಲಾಸ್ ಇದೆಯಂತ ಹೇಳಿ ವಿಡಿಯೋ ಗೇಮ್ ಗಳನ್ನು ಆಡುವುದೇ ಜಾಸ್ತಿ.ಒಂದಿಬ್ಬರು ಸೇರಿದರೆ ಇಡೀ ದಿನ ಆಟಆಡುವುದರಲ್ಲೆ ಮಗ್ನನಾಗಿರುತ್ತಾರೆ.ಒಂದೆಡೆ ಕೂತು ಆನ್ಲೈನ್ ಕ್ಲಾಸ್ ಕೇಳುವುದು ಇವರಿಗೆ ಕಷ್ಟವಾಗಬಹುದು. ಹಾಗೂ ಹೋಮ್ ವರ್ಕ್ ಮಾಡಲು ಕಿರಿಕಿರಿ ಮಾಡುತ್ತಾರೆ. ಅದರಿಂದ ಮಕ್ಕಳ ಪಾಲಕರಿಗೆ ಮಕ್ಕಳ ಶಿಕ್ಷಣದ ಬಗ್ಗೆ ಚಿಂತೆಯಾಗುವುದು ಸುಳ್ಳಲ್ಲ.
ಅಲ್ಲದೆ ಹಳ್ಳಿಗಳಲ್ಲಿ ಇರುವ ಮಕ್ಕಳು ಹೊಲ ಮನೆ ಕೆಲಸ, ಕೂಲಿ ಕೆಲಸ ಇನ್ನೂ ಅನೇಕ ಕೆಲಸಗಳನ್ನು ಮಾಡುವುದರಿಂದ ಪೂಷಕರೂಂದಿಗೆ ದುಡಿಯಲು ಹೋಗುತ್ತಾರೆ. ಇದರಿಂದ ಇವರ ಶಿಕ್ಷಣ ಕಡಿತ ಗೊಳ್ಳುವ ಸಂಬಂಧ ಎದುರಾಗಬಹುದು.
ಆದ್ದರಿಂದ ಹಳ್ಳಿಗಳಲ್ಲಿ ದುಡಿಮೆಯೇ ದೇವರು ಎಂದುಕೊಂಡವರು ಶಾಲೆಗಳ ಕಡೆಗೆ ಅಷ್ಟಾಗಿ ಒತ್ತು ಕೊಡುವುದಿಲ್ಲ. ಕರೋನಾದಿಂದ ಕೆಲಸ ಹುಡುಕಿ ಹೊಟ್ಟೆ ತುಂಬಿಸಿಕೊಳ್ಳುವುದೇ ಅನಿವಾರ್ಯವಾಗಿದೆ. ಇನ್ನು ಅವರ ಹತ್ತಿರ ಎಲ್ಲಿಂದ ಬರಬೇಕು ಸ್ಮಾರ್ಟ್ ಫೋನ್ ಗಳು? ಸ್ಮಾರ್ಟ್ ಫೋನ್ ಗಳು ಇದ್ದರೂ ಕೂಡ ಅತಿಯಾಗಿ ಮೊಬೈಲ್ ನೋಡುವುದರಿಂದ ಮಕ್ಕಳ ಕಣ್ಣಿನ ದೃಷ್ಟಿಯ ಮೇಲೆ ಹೆಚ್ಚು ಹಾನಿಯಾಗುತ್ತದೆ. ಶಿಕ್ಷಕರು ನೋಟ್ಸ ಕಳಿಸಿದ್ದರೆ ಅವುಗಳನ್ನು ಪ್ರತಿ ಶಬ್ದಕ್ಕೂ ಝೂಮ್ ಮಾಡಿ ನೋಡುವುದು ಕಷ್ಟದ ಕೆಲಸ.
ಇದರಿಂದ ಬರೆದುಕೊಳ್ಳಲು ಕೂಡ ಬೇಸರವಾಗುತ್ತದೆ. ಶಿಕ್ಷಕರು ಪಾಠವನ್ನು ವಿವರಿಸುತ್ತಾ ಹೋಗುತ್ತಾರೆ.ತಿಳಿಯದಿದ್ದರೆ ಮರಳಿ ಕೇಳಿ ತಿಳಿದುಕೊಳ್ಳುವ ಹಾಗಿಲ್ಲ. ಅದೇರೀತಿ ಗಣಿತವು ಕೂಡ ಲೆಕ್ಕಗಳನ್ನು ಬಿಡಿಸುವುದರಿಂದ ಅರ್ಥವಾಗುತ್ತದೆ. ತಿಳಿಯದಿದ್ದರೆ ವಾಪಸ್ ಕೇಳುವ ಹಾಗಿಲ್ಲ ಅಂದ ಮೇಲೆ ಈ ಆನ್ಲೈನ್ ಶಿಕ್ಷಣದಿಂದ ಏನು ಪ್ರಯೋಜನ ಅಲ್ಲವೇ ?
ಒಟ್ಟಾರೆಯಾಗಿ ಕರೋನ ಬಂದ ಕಾರಣ ಕಡ್ಡಾಯವಾಗಿ ಆನ್ಲೈನ್ ಕ್ಲಾಸ್ ಬೇಕೆ ಬೇಕು ಎಂತೇನಿಲ್ಲ. ಸ್ವಲ್ಪ ದಿನ ವಿದ್ಯಾಭ್ಯಾಸವನ್ನು ಮುಂದುಡಿದರೆ ನಷ್ಟವೇನಿಲ್ಲ.ಆನ್ಲೈನ್ ಶಿಕ್ಷಣದಿಂದ ಎಷ್ಟು ದುಷ್ಪರಿಣಾಮವೆಂದರೆ ಮಕ್ಕಳಿಗೆ ಮೊಬೈಲ್ ಚಟವನ್ನು ಹಿಡಿಸಿ ಬಿಡುತ್ತದೆ. ಹಾಗಂತ ನಾನು ಆನ್ಲೈನ್ ಶಿಕ್ಷಣವನ್ನು ತೆಗೆಳುತ್ತಿಲ್ಲ. ಶಿಕ್ಷಣವು ಮಕ್ಕಳ ಜೀವನದಲ್ಲಿ ಅತ್ಯಂತ ಮುಖ್ಯಪಾತ್ರವನ್ನು ವಹಿಸುತ್ತದೆ. ಆದರೆ ಆನ್ಲೈನ್ ಶಿಕ್ಷಣದಿಂದ ಮಕ್ಕಳ ಬುದ್ಧಿಯಂತು ಚುರುಕು ಮಾಡುವುದಿಲ್ಲ.
ಮಕ್ಕಳನ್ನು ಮಬ್ಬಾಗಿಸಿ ಬಿಡುತ್ತದೆ ಮತ್ತು ಕಣ್ಣಿಗೆ ಹಾನಿಯನ್ನುಂಟು ಮಾಡುವುದರಲ್ಲಿ ಸಂಶಯವಿಲ್ಲ. ಇನ್ನು ಕೆಲವೊಂದು ವಿಷಯಗಳನ್ನು ನೋಟ್ಸ್ ಮಾಡಿ ಹೇಗೋ ಓದಿ ಕಂಟಪಾಠ ಮಾಡಬಹುದು. ಆದರೆ ಗಣಿತವನ್ನು ಕಂಟಪಾಠ ಮಾಡಲಾಗುವುದಿಲ್ಲ. ಆನ್ಲೈನ್ ಕ್ಲಾಸಿನಲ್ಲಿ ಅರ್ಥ ಆಗುವುದಿಲ್ಲ. ತರಗತಿಯಲ್ಲಾದರೆ ಎಲ್ಲಾ ವಿದ್ಯಾರ್ಥಿಗಳ ಗಮನ ಪಾಠದ ಮೇಲಿರುತ್ತದೆ ಮತ್ತು ಅವರೆಲ್ಲರ ಉದ್ದೇಶ ಪಾಠ ಕೇಳುವುದಾಗಿರುತ್ತದೆ.
ಆದರೆ ಮನೆಯಲ್ಲಿ ಹಾಗಲ್ಲ ಎಲ್ಲರೂ ಬೇರೆ ಬೇರೆ ಕೆಲಸದಲ್ಲಿ ತೊಡಗಿರುವಾಗ ಆನ್ಲೈನ್ ಕ್ಲಾಸ್ ಮೇಲೆ ವಿದ್ಯಾರ್ಥಿಗಳಿಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ.ಇನ್ನೊಂದು ಇಲ್ಲಿ ಅತಿ ದೊಡ್ಡ ನಷ್ಟ ಏನು ಗೊತ್ತೆ? ಕೆಲವೊಂದು ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯವಿರುತ್ತದೆ, ಫೋನ್ ಇರುತ್ತೆ, ಇಂಟರ್ನೆಟ್ ಇರುತ್ತೆ ಆನ್ಲೈನ್ ಪಾಠ ಕೇಳಲು ಎಲ್ಲಾ ಸೌಲಭ್ಯವಿರುತ್ತದೆ ಆದರೆ ಅವರು ಅದನ್ನು ಬೇರೆ ಕಾರ್ಯಕ್ಕೆ ಬಳಸಲುಬಹುದು.
ಇದರ ಬಗ್ಗೆ ಸಹ ಎಚ್ಚರ ವಹಿಸುವುದು ಅನಿವಾರ್ಯವಾಗುತ್ತದೆ ಜೊತೆಗೆ ಮೊಬೈಲಿನ ಚಟವನ್ನು ಹತ್ತಿಕೊಂಡು ಬಿಡುತ್ತದೆ ಮತ್ತು ಅದನ್ನು ನೋಡಿ ನೋಡಿ ಮಾನಸಿಕವಾಗಿ ಬಳಲುತ್ತಿರುವ ವಿದ್ಯಾರ್ಥಿಗಳನ್ನು ನಾವು ಸಾಮಾನ್ಯವಾಗಿ ನೋಡಿದ್ದೇವೆ ಅಲ್ಲವೇ ? ಹಾಗಾಗಿ
ಮಕ್ಕಳಿಗೆ ಆನ್ಲೈನ್ ಶಿಕ್ಷಣ ಅಷ್ಟು ಪರಿಣಾಮಕಾರಿಯಲ್ಲ ಎಂಬುದು ನನ್ನ ಅನಿಸಿಕೆ ಜೊತೆಗೆ ಈ ಆನ್ಲೈನ್ ಶಿಕ್ಷಣದಿಂದ ಮಕ್ಕಳಿಗೆ ಶಿಕ್ಷಕರ ಬಗ್ಗೆ ಗೌರವ ಕಡಿಮೆಯಾಗಬಹುದು ಭಾವನೆಯೊಂದಿಗೆ ಹೀಗೆ ಹತ್ತು ಹಲವು ಸಮಸ್ಯೆಗಳು ಆನ್ಲೈನ್ ಶಿಕ್ಷಣದಲ್ಲಿ ಕಾಣಬಹುದಾಗಿದೆ.
ಆದ್ದರಿಂದ ಇಂತಹ ಆನ್ಲೈನ್ ಶಿಕ್ಷಣದ ವ್ಯವಸ್ಥೆಯಿಂದ ಮಕ್ಕಳ ಭವಿಷ್ಯ ಹೇಗೆ ಬೆಳಗಬಹುದು ಎಂಬುದು ಯೋಚಿಸಬೇಕಾಗಿದೆ. ಹಾಗಾಗಿ ಈಗ ಈ ವ್ಯವಸ್ಥೆಯಿಂದ ಉಪಯುಕ್ತವಾಗದೇ ಅನಾನೂಕುಲ ಹೆಚ್ಚು ವಾಗಬಹುದು.ಇದರಿಂದ ಯಾರಿಗೂ ನೆಮ್ಮದಿ ಖಂಡಿತಾ ಸೀಗುವುದಿಲ್ಲ. ಶಾಲೆಗಳಲ್ಲಿ ಶಿಸ್ತು ಕ್ರಮ ತೆಗೆದುಕೊಂಡು ಎಲ್ಲರನ್ನೂ ಒಂದು ಕಡೆ ಸೇರಿಸಿ ಪಾಠ ಮಾಡುವರು.ಮಾಡುವ ಮೂಲಕ ಮಕ್ಕಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬಹುದಾಗಿದೆ.
ಆದ್ದರಿಂದ ಆನ್ಲೈನ್ ಶಿಕ್ಷಣ ಬೇಕೂ,ಬೇಡವೂ ಎಂಬುದು ಯೋಚನೆ ಮಾಡುವ ಸಂಧರ್ಭ ಸಧ್ಯ ಇಂದು ಎದುರಾಗಿದೆ. ಸಂಬಂಧ ಪಟ್ಟವರು ಈ ಕುರಿತು ಒಳ್ಳೆಯ ನಿರ್ಧಾರ ಕೈಗೊಳ್ಳುವುದು ಅವಶ್ಯಕತೆ ಇದೆ. ಸಧ್ಯದ ಪರಿಸ್ಥಿತಿಯ ಬಗ್ಗೆ ಮಾತ್ರ ಯೋಚಿಸದೇ ವಿದ್ಯಾರ್ಥಿಗಳ ಮುಂದಿನ ಜೀವನದ ಬಗ್ಗೆ ಯೋಚಿಸಬೇಕಾಗುತ್ತದೆ ಎಂಬುದು ಸರ್ವರೂ ಅರಿತುಕೊಳ್ಳುವುದು ಅತ್ಯುತ್ತಮ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇಂದು ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.
ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.
ಸಾಧಿಕ್ ಪೊಲೀಸರಿಗೆ ಸಾಥ್
ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.
“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ7 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ4 hours agoದಾವಣಗೆರೆ | ಇಂದು ಕರೆಂಟ್ ಇರಲ್ಲ

