Connect with us

ಸಿನಿ ಸುದ್ದಿ

ಮೆಗಾಸ್ಟಾರ್ ಚಿರಂಜೀವಿ ಸೊಸೆ ಉಪಾಸನಾ ಹೊಸ ಸಾಹಸ; URLife.co.in. ವೆಬ್​ಸೈಟ್​ಗೆ ಅತಿಥಿ ಸಂಪಾದಕಿಯಾದ ರಶ್ಮಿಕಾ ಮಂದಣ್ಣ

Published

on

ಸುದ್ದಿದಿನ, ಹೈದರಾಬಾದ್: ತೆಲುಗಿನ ಖ್ಯಾತ ನಟ ಚಿರಂಜೀವಿ ಅವರ ಸೊಸೆ, ರಾಮ್​ಚರಣ್ ತೇಜ ಅವರ ಪತ್ನಿ ಉಪಾಸನಾ ಕಮಿನೇನಿ ಕೊನಿಡೇಲಾ ಅವರೀಗ ಆನ್​ಲೈನ್​ನಲ್ಲಿ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ಅವರ ಆ ಸಾಹಸಕ್ಕೆ ಸದ್ಯ ಟ್ರೆಂಡಿಂಗ್​ನಲ್ಲಿರುವ ಕನ್ನಡತಿ, ಸೌತ್ ಸೆನ್ಸೆಷನಲ್ ರಶ್ಮಿಕಾ ಮಂದಣ್ಣ ಕೈ ಜೋಡಿಸಿದ್ದಾರೆ.

ಆರೋಗ್ಯ, ಲೈಫ್​ಸ್ಟೈಲ್, ಮಾನಸಿಕ ಮತ್ತು ದೈಹಿಕ ಆರೋಗ್ಯ, ಪ್ರಸ್ತುತ ಟ್ರೆಂಡಿಂಗ್ ವಿಚಾರಗಳನ್ನು ಯೂಆರ್​ಲೈಫ್​ ಮೂಲಕ ಉಪಾಸನಾ ಹೇಳಹೊರಟಿದ್ದಾರೆ. URLife.co.in. ಅನ್ನೋ ನೂತನ ವೆಬ್​ಸೈಟ್​ ತೆರೆದಿದ್ದು, ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಉಪಾಸನಾ ಉಸ್ತುವಾರಿ ವಹಿಸಿಕೊಂಡರೆ, ಈ ಹಬ್ಬದ ಸಮಯದಲ್ಲಿ ಅತಿಥಿ ಸಂಪಾದಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ.

ಅಂದಹಾಗೆ, URLife.co.in. ಎಂಬುದು ಒಂದು ಆರೋಗ್ಯಕರ ವೇದಿಕೆ. ಇಲ್ಲಿ ಆಯ್ದ ಕೆಲ ಕ್ಷೇತ್ರಗಳ ನುರಿತ ಪರಣಿತರು, ವೈದ್ಯರು ಸದ್ಯದ ಲೈಫ್​​ಸ್ಟೈಲ್, ತಂತ್ರಜ್ಷಾನದ ಬಗ್ಗೆ ಈ ವೇದಿಕೆ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಓದುಗರಿಗೆ ಅತ್ಯುತ್ತಮವಾದ ಡಯಟ್​ ಟಿಪ್ಸ್, ನುರಿತವರಿಂದ ಉಪಯುಕ್ತ ಮಾಹಿತಿ, ಉಚಿತ ತರಗತಿಗಳು, ವಿಡಿಯೋ ಮಾಹಿತಿ, ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯೂ ಬೆರಳ ತುದಿಯಲ್ಲಿಯೇ URLife.co.in. ನಲ್ಲಿ ಲಭ್ಯವಾಗಲಿದೆ.

ಈ ವಿಶೇಷಗಳ ಗುಚ್ಛದ URLife.co.in. ಗೆ ಈ ಸಲದ ಗೆಸ್ಟ್​ ಎಡಿಟರ್​ ಆಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದು, ಅವರನ್ನೇ ಆಯ್ದುಕೊಳ್ಳುವುದಕ್ಕೆ ಒಂದಷ್ಟು ಅಂಶಗಳನ್ನು ಸ್ವತಃ ಉಪಾಸನಾ ಹೇಳಿಕೊಂಡಿದ್ದಾರೆ. ರಶ್ಮಿಕಾ ಸದು ನಗುಮೊಗದ ಮತ್ತು ಪಾಸಿಟಿವ್​ ವೈಬ್​ಅನ್ನು ತನ್ನೊಳಗೆ ಇಟ್ಟುಕೊಂಡಿರುವ ನಟಿ. ಕೋಟ್ಯಂತರ ಯುವ ಪೀಳಿಗೆಯ ನೆಚ್ಚಿನ ನಟಿಯಾಗಿ ಗುರುತಿಸಿಕೊಳ್ಳುವುದರ ಜತೆಗೆ ನಗುವಿನ ಮೂಲಕವೇ ಆರೋಗ್ಯಕರ ಸಂದೇಶವನ್ನು ನೀಡುತ್ತಿದ್ದಾರೆ. ಅದು URLife.co.in. ನಲ್ಲಿಯೂ ಮುಂದುವರಿಯಲಿದೆ ಎಂಬುದು ಉಪಾಸನಾ ಮಾತು.

ಸೋಷಿಯಲ್ ಮೀಡಿಯಾದಲ್ಲಿ 10 ಮಿಲಿಯನ್​ಗೂ ಅಧಿಕ ಹಿಂಬಾಲಕರನ್ನು ಹೊಂದಿರುವ ರಶ್ಮಿಕಾ, ಸದ್ಯ ಭಾರತೀಯ ಸಿನಿಮಾ ರಂಗದಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು. ಅದೆಷ್ಟೋ ಯುವಕ ಯುವತಿಯರ ಹಾಟ್ ಫೇವರಿಟ್ ನಟಿಯಾಗಿದ್ದಾರೆ.

ಸೇವಿಸುವ ಆಹಾರ ಮತ್ತು ವ್ಯಾಯಾಮ, ಯೋಗದ ಬಗ್ಗೆಯೂ ತಮ್ಮ ಅಭಿಮಾನಿಗಳಿಗೆ ಮಾಹಿತಿ ನೀಡುತ್ತಿರುತ್ತಾರೆ. ಇದೀಗ ರಶ್ಮಿಕಾ ಅವರ ಲೈಫ್​ಸ್ಟೈಲ್ ಬಗ್ಗೆ URife ಮಾಹಿತಿ ಬಿಚ್ಚಿಡಲಿದೆ. ಅವರ ಆರೋಗ್ಯಕರ ಜೀವನದ ಗುಟ್ಟನ್ನು ಓದುಗರಿಗೆ ಈ ಮೂಲಕ ತಲುಪಿಸಲಿದೆ. ಮಾನಸಿಕ ಆರೋಗ್ಯದ ಬಗ್ಗೆಯೂ ಇಲ್ಲಿ ಮಾಹಿತಿ ಇರಲಿದೆ.

ಭಾರತೀಯ ಕಾರ್ಪೊರೇಟ್ ವಲಯದಲ್ಲಿ URLife.co.in 14 ಮಿಲಿಯನ್ ಗೂ ಅಧಿಕ ಓದುಗರನ್ನು ಒಳಗೊಂಡ ಭಾರತದ ಅತಿದೊಡ್ಡ ಆರೋಗ್ಯ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. ತಜ್ಞರ ಸಲಹೆ, ಅತ್ಯಾವಶ್ಯಕ ಸಂಪಾದಕೀಯ ವಿಷಯ, ವಿವರವಾದ ಮಾಹಿತಿಯನ್ನು ಒದಗಿಸುತ್ತಿದೆ. ಭಾರತದ ಕಿರಿಯ ಮತ್ತು ಅತ್ಯಂತ ಕ್ರಿಯಾತ್ಮಕ ಯೋಗಕ್ಷೇಮ ಮೇಲ್ವಿಚಾರಕರಾದ ಉಪಾಸನ ಕೊನಿಡೆಲಾ ಅವರ ಮಾರ್ಗದರ್ಶನದಲ್ಲಿ URLife.co.in ಅಭಿವೃದ್ಧಿಪಡಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ

Published

on

ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.

ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ

Published

on

ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ

Published

on

ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.

ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.

ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್‌ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್‌ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending