ದಿನದ ಸುದ್ದಿ
ದಾವಣಗೆರೆ | ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿ ಪ್ರಕಟ : ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ
ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗವು ನ.30 ರಂದು ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ಕ್ಕೆ ಈ ಕೆಳಕಾಣಿಸಿದಂತೆ ವೇಳಾಪಟ್ಟಿಯನ್ನು ಹೊರಡಿಸಲಾಗಿರುತ್ತದೆ.
ಚುನಾವಣಾ ವೇಳಾಪಟ್ಟಿ
- 07.12.2020 ಮತ್ತು 11.12.2020 ಜಿಲ್ಲಾಧಿಕಾರಿಗಳು ಕ್ರಮವಾಗಿ ಮೊದಲನೇ ಮತ್ತು ಎರಡನೇ ಹಂತದ ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕಗಳಾಗಿವೆ.
- ಡಿ.11 ಮತ್ತು ಡಿ.16 ಕ್ರಮವಾಗಿ ಮೊದಲನೇ ಮತ್ತು ಎರಡನೇ ಹಂತದ ನಾಮಪತ್ರಗಳನ್ನು ಸಲ್ಲಿಸಲು ಕಡೆಯ ದಿನಗಳಾಗಿವೆ.
- ಡಿ.12 ಮತ್ತು ಡಿ.17 ನಾಮಪತ್ರ ಪರಿಶೀಲಿಸುವ ದಿನವಾಗಿದ್ದು, ಡಿ.14 ಮತ್ತು 19 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿದೆ.
- ಡಿ.22 ಮತ್ತು 27 ಮತದಾನ ಮತದಾನ ಅವಶ್ಯವಿದ್ದರೆ ಮತದಾನ ನಡೆಸಬೇಕಾದ ದಿನಾಂಕ(ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ).
- ಡಿ.24 ಮತ್ತು 29 ಮರು ಮತದಾನ ಇದ್ದಲ್ಲಿ ಮತದಾನದ ದಿನ(ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ). ಡಿ.30 ಮತ ಎಣಿಕೆ ದಿನ(ಬೆಳಿಗ್ಗೆ 8 ರಿಂದ ತಾಲ್ಲೂಕು ಕೇಂದ್ರಗಳಲ್ಲಿ).
- ಡಿ.31 ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನವಾಗಿದೆ.
ನ್ಯಾಮತಿ ತಾಲ್ಲೂಕಿನ ನ್ಯಾಮತಿ ಗ್ರಾಮಪಂಚಾಯಿತಿಯನ್ನು ಪಟ್ಟಣಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿ ಅಧಿಸೂಚನೆ ಹೊರಡಿಸಿರುವುದರಿಂದ ಈ ಗ್ರಾಮ ಪಂಚಾಯಿತಿನ್ನು ಚುನಾವಣೆಯಿಂದ ಕೈಬಿಡಲಾಗಿದೆ.
ದಾವಣಗೆರೆ ತಾಲ್ಲೂಕಿನ ಬೇತೂರು, ಕನಗೊಂಡನಹಳ್ಳಿ, ಕುಕ್ಕವಾಡ ಮತ್ತು ಮಾಯಕೊಂಡ ಗ್ರಾಮ ಪಂಚಾಯಿತಿಗಳ ಅವಧಿಪೂರ್ಣಗೊಳ್ಳದೇ ಇರುವುದರಿಂದ ಈ ಚುನಾವಣೆಯಿಂದ ಹೊರತುಪಡಿಸಲಾಗಿದೆ.
ಚುನಾವಣಾ ನಡೆಯುವ ಗ್ರಾಮಪಂಚಾಯಿತಿಗಳ ಸಂಖ್ಯಾ ವಿವರ
- ಮೊದಲನೇ ಹಂತ
ದಾವಣಗೆರೆ ತಾಲ್ಲೂಕು ಗ್ರಾ.ಪಂಗಳ ಸಂಖ್ಯೆ 38, ಮತಗಟ್ಟೆಗಳ ಸಂಖ್ಯೆ 276, ಕ್ಷೇತ್ರಗಳ ಸಂಖ್ಯೆ 213, ಸದಸ್ಯ ಸ್ಥಾನಗಳ ಸಂಖ್ಯೆ 581. ಹೊನ್ನಾಳಿ ತಾಲ್ಲೂಕಿನ ಗ್ರಾ.ಪಂಗಳ ಸಂಖ್ಯೆ 29, ಮತಗಟ್ಟೆಗಳ ಸಂಖ್ಯೆ 162, ಕ್ಷೇತ್ರಗಳ ಸಂಖ್ಯೆ 121, ಸದಸ್ಯ ಸ್ಥಾನಗಳ ಸಂಖ್ಯೆ 341. ಜಗಳೂರು ತಾಲ್ಲೂಕಿನ ಗ್ರಾ.ಪಂಗಳ ಸಂಖ್ಯೆ 22, ಮತಗಟ್ಟೆಗಳ ಸಂಖ್ಯೆ 219, ಕ್ಷೇತ್ರಗಳ ಸಂಖ್ಯೆ 176, ಸದಸ್ಯ ಸ್ಥಾನಗಳ ಸಂಖ್ಯೆ 397.
- ಎರಡನೇ ಹಂತದ
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಗ್ರಾ.ಪಂಗಳ ಸಂಖ್ಯೆ 24, ಮತಗಟ್ಟೆಗಳ ಸಂಖ್ಯೆ 179, ಕ್ಷೇತ್ರಗಳ ಸಂಖ್ಯೆ 133, ಸದಸ್ಯ ಸ್ಥಾನಗಳ ಸಂಖ್ಯೆ 378. ಚನ್ನಗಿರಿ ತಾಲ್ಲೂಕಿನ ಗ್ರಾ.ಪಂಗಳ ಸಂಖ್ಯೆ 61, ಮತಗಟ್ಟೆಗಳ ಸಂಖ್ಯೆ 368, ಕ್ಷೇತ್ರಗಳ ಸಂಖ್ಯೆ 295, ಸದಸ್ಯ ಸ್ಥಾನಗಳ ಸಂಖ್ಯೆ 735. ನ್ಯಾಮತಿ ತಾಲ್ಲೂಕಿನ ಗ್ರಾ.ಪಂಗಳ ಸಂಖ್ಯೆ 17, ಮತಗಟ್ಟೆಗಳ ಸಂಖ್ಯೆ 96, ಕ್ಷೇತ್ರಗಳ ಸಂಖ್ಯೆ 72, ಸದಸ್ಯ ಸ್ಥಾನಗಳ ಸಂಖ್ಯೆ 196 ಇರುತ್ತದೆ.
ಮತದಾರರ ವಿವರ (ದಿನಾಂಕ:11.08.2020ರ ಅಂತ್ಯಕ್ಕೆ)
- ಜಿಲ್ಲೆಯಲ್ಲಿ ಒಟ್ಟು 423484 ಪುರುಷ, 414243 ಮಹಿಳೆ ಸೇರಿ ಒಟ್ಟು 837727 ಮತದಾರರಿದ್ದಾರೆ.
- ದಾವಣಗೆರೆ ತಾಲ್ಲೂಕಿನ ಪುರುಷ ಮತದಾರರ ಸಂಖ್ಯೆ 90975, ಮಹಿಳೆ ಮತದಾರರ ಸಂಖ್ಯೆ 89906 ಒಟ್ಟು 180881.
- ಹರಿಹರ ತಾಲ್ಲೂಕಿನ ಪುರುಷ ಮತದಾರರ ಸಂಖ್ಯೆ 58649, ಮಹಿಳೆ ಮತದಾರರ ಸಂಖ್ಯೆ 57359 ಒಟ್ಟು 116008.
- ಹೊನ್ನಾಳಿ ತಾಲ್ಲೂಕಿನ ಪುರುಷ ಮತದಾರರ ಸಂಖ್ಯೆ 54480, ಮಹಿಳೆ ಮತದಾರರ ಸಂಖ್ಯೆ 53339 ಒಟ್ಟು 107819.
- ನ್ಯಾಮತಿ ತಾಲ್ಲೂಕಿನ ಪುರುಷ ಮತದಾರರ ಸಂಖ್ಯೆ 31800, ಮಹಿಳೆ ಮತದಾರರ ಸಂಖ್ಯೆ 31005 ಒಟ್ಟು 62805.
- ಚನ್ನಗಿರಿ ತಾಲ್ಲೂಕಿನ ಪುರುಷ ಮತದಾರರ ಸಂಖ್ಯೆ 121322, ಮಹಿಳೆ ಮತದಾರರ ಸಂಖ್ಯೆ 118169 ಒಟ್ಟು 239491.
- ಜಗಳೂರು ತಾಲ್ಲೂಕಿನ ಪುರುಷ ಮತದಾರರ ಸಂಖ್ಯೆ 66258, ಮಹಿಳೆ ಮತದಾರರ ಸಂಖ್ಯೆ 64465 ಒಟ್ಟು 130723.
ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ವಿವರ
ದಾವಣಗೆರೆ ತಾಲ್ಲೂಕಿನ 38 ಚುನಾವಣಾಧಿಕಾರಿ ಹಾಗೂ 38 ಸಹಾಯಕ ಚುನಾವಣಾಧಿಕಾರಿಯನ್ನು ನೇಮಿಸಲಾಗಿದೆ. ಹರಿಹರ ತಾಲ್ಲೂಕಿನ 24 ಚುನಾವಣಾಧಿಕಾರಿ ಹಾಗೂ 25 ಸಹಾಯಕ ಚುನಾವಣಾಧಿಕಾರಿಯನ್ನು ನೇಮಿಸಲಾಗಿದೆ. ಹೊನ್ನಾಳಿ ತಾಲ್ಲೂಕಿನಲ್ಲಿ 29 ಚುನಾವಣಾಧಿಕಾರಿ ಹಾಗೂ 29 ಸಹಾಯಕ ಚುನಾವಣಾಧಿಕಾರಿಯನ್ನು ನೇಮಿಸಲಾಗಿದೆ.
ನ್ಯಾಮತಿ ತಾಲ್ಲೂಕಿನ 17 ಚುನಾವಣಾಧಿಕಾರಿ ಹಾಗೂ 17 ಸಹಾಯಕ ಚುನಾವಣಾಧಿಕಾರಿಯನ್ನು ನೇಮಿಸಲಾಗಿದೆ. ಚನ್ನಗಿರಿ ತಾಲ್ಲೂಕಿನಗೆ 61 ಚುನಾವಣಾಧಿಕಾರಿ ಹಾಗೂ 64 ಸಹಾಯಕ ಚುನಾವಣಾಧಿಕಾರಿಯನ್ನು ನೇಮಿಸಲಾಗಿದೆ. ಜಗಳೂರು ತಾಲ್ಲೂಕಿಗೆ 22 ಚುನಾವಣಾಧಿಕಾರಿ ಹಾಗೂ 23 ಸಹಾಯಕ ಚುನಾವಣಾಧಿಕಾರಿಯನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

