ದಿನದ ಸುದ್ದಿ
ಕುರಿ ಸಾಕಾಣಿಕೆಯಲ್ಲಿ ರೈತರ ಕಷ್ಟಗಳು
- ಆಶಾ ಸಿದ್ದಲಿಂಗಯ್ಯ
ಕುರಿಗಾರರು ತಮ್ಮ ಕುರಿ ಹಿಂಡನ್ನು ಮೇಯಿಸಲು ಸಾಮಾನ್ಯವಾಗಿ ಬೆಟ್ಟ ಗುಡ್ಡ ಪ್ರದೇಶಗಳು, ಕಾಡುಗಳು, ಕೆರೆ ಮೈದಾನಗಳನ್ನು ಅವಲಂಬಿಸಿರುತ್ತಾರೆ. ಬೆಳೆ ಕಟಾವು ಮಾಡಿದ ನಂತರ ಖುಷ್ಕಿ ಜಮೀನುಗಳಲ್ಲಿ ಮೇಯಿಸುವುದು ಬಹಳ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿ.
ಏಕೆಂದರೆ ಇವುಗಳನ್ನು ಕಟ್ಟಿ ಮೇಯಿಸುವುದಾಗಲಿ ಹಟ್ಟಿಗಳಲ್ಲಿ ಕೂಡಿ ಮೇಯಿಸುವುದಾಗಲಿ ಸಾಧ್ಯವಾಗುವುದಿಲ್ಲ. ಮಳೆಗಾಲದಲ್ಲಿ ಅಂದರೆ ಜೂನ್ ತಿಂಗಳಿಂದ ಸೆಪ್ಟೆಂಬರ್ವರೆಗೆ ಬೆಟ್ಟ ಗುಡ್ಡಗಳಲ್ಲಿ ಹಸಿರು ಹುಲ್ಲು ದೊರೆಯುವುದರಿಂದ ನಂತರ ಖುಷ್ಕಿ ಜಮೀನುಗಳಲ್ಲಿ ಪೈರುಗಳ ಉಳಿಕೆಗಳನ್ನು ಹಾಗೂ ಹೀಗೂ ಡಿಸೆಂಬರ್ ತಿಂಗಳವರೆಗೂ ಮೇಯಿಸಲು ಸಾಧ್ಯವಾಗಬಹುದು.
ಕುರಿಗಾರನ ನಿಜವಾದ ಕಷ್ಟದ ದಿನಗಳು ಜನವರಿಯಿಂದ ಪ್ರಾರಂಭವಾಗಿ ಮೇ ತಿಂಗಳವರೆಗೆ ಮುಂದುವರೆದು ಕುರಿಗಳ ಹೊಟ್ಟೆ ತುಂಬಿಸುವುದಕ್ಕಾಗಿ ಪಡಬಾರದ ಕಷ್ಟ ಪಡಬೇಕಾಗುತ್ತದೆ. ಇಂತಹ ದಿನಗಳಲ್ಲೇ ಕುರಿಗಾರರು ತಮ್ಮ ಹಿಂಡಿನೊಂದಿಗೆ ಜಿಲ್ಲೆಯಿಂದ ಜಿಲ್ಲೆಗೆ ವಲಸೆ ಹೋಗುತ್ತಾರೆ.
ಮಾರ್ಗಗಳ ಬದಿಯ ಮೇವಿನ ಮರಗಳ ಟೊಂಗೆಗಳನ್ನು ಕಡಿದು ಹಾಕಿ ಅವುಗಳನ್ನು ಬರಡುಗೊಳೆಸುತ್ತಾರೆ. ಮಲೆನಾಡಿನ ಕಾಡುಗಳಿಗೆ ಲಗ್ಗೆ ಇಡುತ್ತಾರೆ ಇಂತಹ ಸಂದರ್ಭಗಳಲ್ಲೇ ಕುರಿಗಳು ಕುಡಿಯಲು ಸಾಕಷ್ಟು ಮತ್ತು ಯೋಗ್ಯವಾದ ನೀರಿನ ಕೊರತೆಯಿಂದಾಗಿ ಜಂತು ಹುಳುವಿನ ಬಾಧೆ ಮತ್ತು ರೋಗ ರುಜಿನಗಳಿಗೆ ತುತ್ತಾಗುತ್ತವೆ.
ನೂರಾರು ವರ್ಷಗಳಿಂದ ಕುರಿಗಳು ಗೋಮಾಳಗಳಲ್ಲಿ, ಗುಡ್ಡ, ಬೆಟ್ಟ ಮತ್ತು ಅರಣ್ಯ ಪ್ರದೇಶಗಳಲ್ಲಿ ನಿರಂತರವಾಗಿ ಮೇದು ಅವುಗಳಲ್ಲಿ ಉಪಯುಕ್ತವಾದ ಮೇವಿನ ಮರಗಳು, ಹಸಿರು ಹುಲ್ಲಿನ ತಳಿಗಳು ಉಳಿಯದೆ ಭೂಮಿಯು ಬರಡಾಗಿ ಬರೀ ಮುಳ್ಳು ಕಂಟಿಗಳಿಂದಲೂ ಜಾನುವಾರುಗಳಿಗೆ ಉಪಯುಕ್ತವಲ್ಲದ ಸಸ್ಯಗಳಿಂದಲೂ ತುಂಬಿರುವುದಲ್ಲದೆ ಮಣ್ಣಿನ ಕೊರತಕ್ಕೆ ಎಡೆಕೊಟ್ಟು ಭೂಮಿಯ ಸಾರವು ನಿಸ್ಸಾರವಾಗುತ್ತಿದೆ.
ಇದರ ಜೊತೆಗೆ ಮಳೆಯು ಕಡಿಮೆ ಆಗುತ್ತಿದ್ದು, ಹಸಿರು ಹುಲ್ಲಿನ ಮತ್ತು ಗಿಡಮರಗಳ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ಇಂತಹ ಪ್ರದೇಶಗಳನ್ನು ಗುರುತಿಸಿ ಅಭಿವೃದ್ಧಿ ಪಡೆಸುವುದು ಸರ್ಕಾರದ ಹಾಗೂ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ.
ಇತ್ತೀಚೆಗೆ ಸರ್ಕಾರ ಹಮ್ಮಿಕೊಂಡಿರುವ ಜಲಾನಯನ ಪ್ರದೇಶ ಅಭಿವೃದ್ಧಿ ಅಡಿಯಲ್ಲಿ ಕೆಲವು ಪ್ರದೇಶಗಳು ಅಭಿವೃದ್ಧಿಗೊಂಡಿದ್ದರೂ ಈ ದಿಸೆಯಲ್ಲಿ ಇನ್ನೂ ಬಹಳಷ್ಟು ಕೆಲಸವಾಗಬೇಕಿದೆ. ಸಂರಕ್ಷಿತ ಅರಣ್ಯ ಪ್ರದೇಶಗಳು ಸಾಮಾಜಿಕ ಅರಣ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಸ್ಥಳಗಳಲ್ಲಿ ಜಾನುವಾರು, ಕುರಿ, ಮೇಕೆಗಳನ್ನು ಮೇಯಿಸುಲು ಬಿಡುವುದಿಲ್ಲ. ಜಾನುವಾರುಗಳನ್ನು ಕಟ್ಟಿ ಮೇಯಿಸಬಹುದಾದರು ಕುರಿಗಳನ್ನು ಅರಣ್ಯಗಳ ಅಂಚು ಪ್ರದೇಶಗಳಲ್ಲಾದರೂ ಮೇಯಿಸಲು ಅವಕಾಶವಿರಬೇಕು.
ತ್ವರಿತವಾಗಿ ಬೆಳೆಯುವ ಮೇವಿನ ಮರಗಳಾದ ಸುಬಾಬುಲ್, ಬ್ರಿಜ ಬಾಬುಲ್, ಬೋರೆ ಮರ, ಗೊಬ್ಬರದ ಗಿಡ, ಗಾಳಿ ಮರ, ಹಾಲವಾಣ, ಕ್ಯಾಲಿಯೊಂಡ್ರ, ಅಗಸೆ, ಸೇವರಿ, ಸರ್ವೆ, ಹೂವರಸೆ, ನುಗ್ಗೆ, ಹೆಬ್ಬೇವು, ಬಳ್ಳಾರಿ ಜಾಲಿ, ಬೆಂಗಾಲ ಜಾಲಿ ಹಾಗೂ ಲಂಟಾನಾ ಮತ್ತು ಹಿಪ್ಪುನೇರಳೆ ಇತ್ಯಾದಿ ಮರಗಳನ್ನು ಹೊಲಗಳ ಬದುಗಳು, ಕೆರೆಕುಂಟೆಗಳ ಅಕ್ಕಪಕ್ಕ ಪಾಳು ಭೂಮಿಯಲ್ಲಿ ಬೆಳೆಯಬೇಕು, ಈ ಮರಗಳಿಂದ ಎಲೆ ಚಿಗುರನ್ನು ತಂದು ಬಾಡಿಸಿ ಕುರಿಗಳಿಗೆ ಕೊಡಬಹುದು.
ಸರ್ಕಾರದವರು ರೈತರ ಜಮೀನುಗಳಲ್ಲಿ ಒಡ್ಡುಗಳನ್ನು ನಿರ್ಮಿಸುತ್ತಿದ್ದು, ಈ ಒಡ್ಡುಗಳ ಮೇಲೆ ಹಾಗೂ ಬದಿಯಲ್ಲಿ ಹುಲ್ಲು ಹಾಗೂ ಮೇವಿನ ಮರಗಳನ್ನು ನೆಡುವುದರಿಂದ ಭೂಮಿಯ ಕೊರೆತ ತಪ್ಪುವುದಲ್ಲದೆ ಭೂಮಿಯ ಸಾರಜನಕದ ಅಂಶ ಸಹ ಹೆಚ್ಚುವುದು. ಆಹಾರ ಧಾನ್ಯಗಳ ಬೆಳೆಗಳನ್ನು ಕಟಾವು ಮಾಡಿದ ನಂತರ ಪರ್ಯಾಯ ಬೆಳೆಯಾಗಿ ಮೇವಿನ ಬೆಳೆಗಳನ್ನು ಬೆಳೆಯಬಹುದು.
ಸರ್ಕಾರವು ಈಗಾಗಲೇ ಹಮ್ಮಿಕೊಂಡಿರುವಂತೆ ಜಲಾನಯನ ಪ್ರದೇಶ ಅಭಿವೃದ್ಧಿ ಅಡಿಯಲ್ಲಿ ಸುಧಾರಿಸಿದ ಹುಲ್ಲು ಹಾಗೂ ಮೇವಿನ ಮರಗಿಡಗಳನ್ನು ಬೆಳೆಸುವುದು; ಈ ಮರಗಿಡಗಳಿಂದ ಹಸಿರೆಲೆಗಳನ್ನು ತಂದು ಒಣಗಿಸಿ ಹದ ಮಾಡಿ ಕೂಡಿಟ್ಟು ಕೊಂಡು ಮೇವಾಗಿ ಕೊಡುವುದು; ಹುಲ್ಲುಗಾವಲು ಪುನಶ್ಚೇತನ ಹಾಗೂ ವಿಕಾಸಗೊಳಿಸುವ ಯೋಜನೆ, ವೀವು ತಳಿಗಳ ಬೀಜೋತ್ಪತ್ತಿ ಸಂಸ್ಕರಣೆ ಹಾಗೂ ಬೀಜಾಭಿವೃದ್ಧಿ ಯೋಜನೆ, ಮೇವು ನಿಧಿ, ಪೌಂಡರ್ ಮಿನಿಕಿಟ್ ವಿತರಣೆ ಯೋಜನೆ; ಮೇವು ಮರಗಳ ಸಸಿ ಬೆಳೆಸುವಿಕೆ ಸಂರಕ್ಷಣೆ ಹಾಗೂ ವಿತರಣೆ ಯೋಜನೆಗಳನ್ನು ಕ್ರಿಯಾತ್ಮಕಗೊಳಿಸುವುದು.
ಪ್ರಚಲಿತ ವ್ಯವಸ್ಥೆಯಲ್ಲಿ ಹೆಚ್ಚುವರಿ ಕುರಿಗಳನ್ನು ರೈತರು ಸ್ಥಳಕ್ಕೆ ಬಂದು ಕೊಂಡುಕೊಳ್ಳುವ ಕಟುಕ ವ್ಯಾಪಾರಸ್ಥರಿಗೆ ಮಾರುತ್ತಿದ್ದಾರೆ. ಗ್ರಾಮಗಳಿಗೆ ಭೇಟಿ ನೀಡಿ ಕೊಂಡ ಕಟುಕರು ಗ್ರಾಮಸ್ಥರ ಮಾಂಸದ ಬೇಡಿಕೆಯನುಸಾರ ಅಲ್ಲಿಯೇ ಕಟಾವು ಮಾಡಬಹುದು. ಹತ್ತಿರದ ಪಟ್ಟಣಗಳಿಗೆ ಸಾಗಿಸಬಹುದು ಅಥವಾ ಗುತ್ತಿಗೆದಾರರು ದಲ್ಲಾಳಿಗಳಿಗೆ ಮಾರಲೂಬಹುದು.
ಗ್ರಾಹಕರ ಮಧ್ಯೆ 3-4 ದಲ್ಲಾಳಿಗಳಿರುತ್ತಾರೆ. ಕುರಿಗಳ ಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಸಹ ಕುರಿ ಮತ್ತು ಆಡುಗಳ ಸಂಘಟಿತ, ಸುವ್ಯವಸ್ಥಿತ ಮಾರುಕಟ್ಟೆ ಇಲ್ಲ. ಈ ಪದ್ಧತಿಯಲ್ಲಿ ಉತ್ಪತ್ತಿದಾರರಿಗೂ ಲಾಭವಿಲ್ಲ ಮತ್ತು ಉಪಯೋಗಿಸುವ ಗ್ರಾಹಕರಿಗೆ ಉತ್ತಮ ಮಾಂಸ ಸರಿಯಾದ ಬೆಲೆಗೆ ದೊರಕುತ್ತಿಲ್ಲ. ಹೆಚ್ಚು ಲಾಭಾಂಶ ಮಧ್ಯವರ್ತಿ ದಲ್ಲಾಳಿಗಳಿಗೆ ದಕ್ಕುತ್ತದೆ.
ಕುರಿಗಳನ್ನು ವೈಜ್ಞಾನಿಕವಾಗಿ ತೂಕದ ಮಾಂಸದ ಇಳುವರಿ ಆಧಾರಿತವಲ್ಲದ ಬರೀ ಮೇಲ್ನೋಟದ ಶರೀರ ಪ್ರಮಾಣದ ಕಣ್ಣಳತೆಯ ಮೇಲೆ ಕೊಳ್ಳಲಾಗುತ್ತದೆ. ಮಧ್ಯವರ್ತಿಗಳ ಹಿಡಿತದಿಂದ ಕುರಿ ಮತ್ತು ಆಡುಗಳ ಉತ್ಪಾದಕನನ್ನು ಮುಕ್ತಗೊಳಿಸಿ ಅವರಿಗೆ ನ್ಯಾಯವಾದ ಬೆಲೆ ದಕ್ಕುವಂತೆ ಮಾಡಬೇಕಾದರೆ ಸುವ್ಯವಸ್ಥಿತ ಮಾರುಕಟ್ಟೆಯನ್ನು ಕುರಿ ಉತ್ಪಾದಕರ ಸಂಘಗಳ ಮೂಲಕ ಏರ್ಪಾಡು ಮಾಡಬೇಕಾದ ಅಗತ್ಯವಿದೆ.
ಕುರಿ ಸಾಕಾಣಿಕೆ ಗ್ರಾಮೀಣ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಸಹಕಾರಿ
ಕುರಿ ಮತ್ತು ಕುರಿ ಉತ್ಪನ್ನಗಳು ರಾಜ್ಯದ ಆರ್ಥಿಕ ವಹಿವಾಟಿನಲ್ಲಿ ಬಹುಮುಖ್ಯ ಸ್ಥಾನವನ್ನು ಪಡೆದಿದ್ದು, ರಾಜ್ಯದ ವರಮಾನಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡುತ್ತಿದೆ. ಕುರಿಗಳ ಮಾಂಸವು ಉತ್ತಮ ಗುಣಮಟ್ಟದಾಗಿದ್ದು, ದೇಶದ ಬಹು ದೊಡ್ಡ ಮಾಂಸಹಾರಿ ವರ್ಗದ ಆಹಾರದ ಮುಖ್ಯ ಅಂಶವಾಗಿದ್ದು, ಅಪೌಷ್ಟಿಕತೆಯನ್ನು ನಿವಾರಿಸುವಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸಿದೆ. ಈ ಉಣ್ಣೆಯನ್ನು ಕಂಬಳಿ, ರತ್ನಗಂಬಳಿ, ಉಣ್ಣೆ ಶಾಲು, ಡ್ರಗೇಟ್ ಟೋಪಿ ಮುಂತಾದ ಉಣ್ಣೆ ವಸ್ತುಗಳನ್ನು ತಯಾರಿಸಲು ಬಳಸಲಾಗುತ್ತದೆ.
ಕುರಿಗಳನ್ನು ಚಲಿಸುವ ಬ್ಯಾಂಕುಗಳೆಂದು ಅಥವಾ ನಿಧಿಯೆಂದು ಕರೆಯಲಾಗುತ್ತದೆ. ಏಕೆಂದರೆ, ರೈತ ಬೇಕೆಂದಾಗ ಕುರಿಗಳನ್ನು ಮಾರಿ ತಕ್ಷಣ ಹಣ ಪಡೆಯಬಹುದು. ಆದರೆ ವ್ಯವಸಾಯದಿಂದಾಗಲಿ ಅಥವಾ ತೋಟಗಾರಿಕೆಯಿಂದಾಗಲಿ ಈ ರೇತಿ ದಿಢೀರನೆ ಹಣ ಗಳಿಸಲಾಗುವುದಿಲ್ಲ.
ನಿರುದ್ಯೋಗ ನಿವಾರಣೆ ಹಾಗೂ ರೈತರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮ ಪಡಿಸಲು ಕೈಗೊಂಡ ಕಾರ್ಯಕ್ರಮಗಳಲ್ಲಿ ಕುರಿ ಘಟಕ ಸ್ಥಾಪನೆಯೂ ಸಹ ಒಂದು ಇದಕ್ಕೆ ಮುಖ್ಯ ಕಾರಣವೆಂದರೆ ಕಡಿಮೆ ಬಂಡವಾಳವನ್ನು ಬಳಸಿಕೊಂಡು ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸಲು ಮತ್ತು ಲಾಭವನ್ನು ಪಡೆಯಲು ಸಹಾಯವಾಗುವುದು.
ಇದರಿಂದಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಜನಾಂಗಗಳಲ್ಲೂ ಲಾಭದಾಯಕ ಕುರಿ ಸಾಕಾಣಿಕೆಯ ಮುಖಾಂತರ ಅವರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು 20 ಕುರಿ ಮತ್ತು ಒಂದು ಟಗರಿನ ಘಟಕ ಹಮ್ಮಿಕೊಳ್ಳಲು ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳ ಮುಖಾಂತರ ಸಾಲದ ವ್ಯವಸ್ಥೆಯನ್ನು ಸಹ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಮತ್ತು ಕ್ಷೇತ್ರಾಭಿವೃದ್ಧಿ ಅಧಿಕಾರಿಗಳ ಮೂಲಕ ಮಾಡಲಾಗಿದೆ.
ರಾಜ್ಯ ಸರ್ಕಾರವು ಕುರಿ ಅಭಿವೃದ್ಧಿಗಾಗಿ ಕರ್ನಾಟಕ ಕುರಿ ಮತ್ತು ಕುರಿ ಉತ್ಪನ್ನಗಳ ಅಭಿವೃದ್ಧಿ ಮಂಡಳಿ ಹಮ್ಮಿಕೊಂಡಿರುವ ಆರು ಅಂಶಗಳ ಕಾರ್ಯಕ್ರಮಗಳಲ್ಲಿ ಒಂದಾದ ಕುರಿ ಸಾಕಾಣಿಕೆದಾರರ ಸಹಕಾರ ಸಂಘಗಳ ಸ್ಥಾಪನೆ ಯೋಜನೆಗೆ ಮಂಜೂರಾತಿ ನೀಡಿದೆ ಅದರಂತೆ ಸದರಿ ಕುರಿ ಸಾಕಾಣಿಕೆದಾರರ ಸಹಕಾರ ಸಂಘಗಳನ್ನು ಸ್ಥಾಪಿಸಲು ಸೂಕ್ತ ಕ್ರಮಗಳನ್ನು ಕೈಗೊಳಲು ಆಯಾ ಜಿಲ್ಲೆಗಳ ಸಹಕಾರ ಸಂಘಗಳ ಇಲಾಖೆಯ ಉಪ ನಿಬಂಧಕರಿಗೆ ಹಾಗೂ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರುಗಳನ್ನು ಕೋರಲಾಗಿದೆ.
ಈ ಸಂಘಗಳ ಮುಖ್ಯ ಉದ್ದೇಶ ಕುರಿ ಉಣ್ಣೆಯ ಮಾರುಕಟ್ಟೆಯನ್ನು ವ್ಯವಸ್ಥಿತಗೊಳಿಸುವುದು, ಕುರಿಗಾರರಿಗೆ ತಾಂತ್ರಿಕತೆ ಹಾಗೂ ಆರ್ಥಿಕ ಸವಲತ್ತುಗಳನ್ನು ಒದಗಿಸುವುದು, ಯಾಂತ್ರೀಕೃತ ಉಣ್ಣೆ ಕಟಾವು ಸೌಲಭ್ಯಗಳನ್ನು ಕಲ್ಪಿಸುವುದು.
ರೈತ ನಷ್ಟ ಅನುಭವಿಸಿದಾಗ ಕೈ ಹಿಡಿಯುವುದು ಕುರಿ ಸಾಕಾಣಿಕೆ ಆದರಿಂದ ಸರಕಾರ ಕುರಿ ಸಾಕಾಣಿಕೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ7 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

