ದಿನದ ಸುದ್ದಿ
ಕೋರೆಗಾಂವ್ ಗಾಯಗಳನ್ನೂ, ಹರಿದ ಸಂಬಂಧಗಳನ್ನೂ ಹೊಲಿದುಕೊಳ್ಳೋಣ
- ಡಾ. ವಡ್ಡಗೆರೆ ನಾಗರಾಜಯ್ಯ
ಭಾರತ ಹುಣ್ಣಿಮೆಯ ದಿನ ಹೊಸ ಗಡಿಗೆಯ ತಣ್ಣೀರಿನಿಂದ ಹರಿದ ಗಾಯಗಳನ್ನು ತೊಳೆದು, ಹೊಸ ಸೂಜಿ – ಹೊಸ ದಾರಗಳಿಂದ ನೆತ್ತರು ಸೋರುವ ಗಾಯಗಳನ್ನು ಹೊಲಿದುಕೊಂಡ ಗೋಸಂಗಿ ಯುದ್ಧ ವೀರರ ನೆನಪು ನಮ್ಮ ತಾಯಂದಿರ ನಾಲಗೆ ಮೇಲೆ ಇನ್ನೂ ಮಾಸಿಲ್ಲ.
ಗೊಲ್ಲರ ರಾಜ ಕಾಟಮರಾಜನ ತಮ್ಮನಾದ ಚೆನ್ನಯ್ಯಬಾಲುಡು ಸಾರಿದ್ದ ಯುದ್ಧದಲ್ಲಿ ನೆರವಾಗಿ, ವೈರಿಗಳ ವಿರುದ್ಧ ಕಾದಾಡಿ ಚೆನ್ನಯ್ಯಬಾಲುಡುವಿಗೆ ಜಯ ತಂದುಕೊಡಲೆಂದು ಕಾರಂಪೂಡಿಯ ಯುದ್ಧಕ್ಕೆ ಹೋಗಿದ್ದ ಮಾದಿಗರ ಗೋಸಂಗಿ ಯುದ್ಧವೀರರು, ರಣರಂಗದಲ್ಲಿ ವೈರಿಗಳ ವಿರುದ್ಧ ಕಾದಾಡಿ ಕತ್ತಿಗಳಿಂದ ಗಾಯಗೊಂಡು ಇದೇ ಭಾರತ ಹುಣ್ಣಿಮೆಯ ಸಂಜೆ ಊರಿಗೆ ಮರಳಿ ಬರುತ್ತಾರೆ.
ಅಂದು ಸಂಜೆ ಊರಿನ ಹೊರಗೆ ಹೊಸ ಗಡಿಗೆಯ ತಣ್ಣೀರಿನಿಂದ ಹರಿದ ಗಾಯಗಳನ್ನು ತೊಳೆದು, ಹೊಸ ಸೂಜಿ – ಹೊಸ ದಾರಗಳಿಂದ ನೆತ್ತರು ಸೋರುವ ಗಾಯಗಳನ್ನು ಹೊಲಿದುಕೊಳ್ಳುತ್ತಾರೆ. ಚೆನ್ನಯ್ಯಬಾಲುಡುವಿಗೆ ಜಯವನ್ನು ತಂದುಕೊಟ್ಟ ಅವರು, ಆ ಗೊಲ್ಲರ ದೊರೆಯಿಂದ ಅನೇಕ ಬಿರುದುಗಳನ್ನೂ ಇನಾಮುಗಳನ್ನೂ ಪಡೆಯುತ್ತಾರೆ.
ಈ ಯುದ್ಧದ ನೆನಪನ್ನು ಮರೆಯಲಾರದ ಮಾದಿಗ ಜನಪದ ತಾಯಂದಿರು ಕಾವ್ಯವನ್ನು ಕಟ್ಟಿ ಹಾಡತೊಡಗಿ, ತಮ್ಮ ಸಮುದಾಯದ ಯುದ್ಧವೀರರ ಕಥನವನ್ನು ಮೌಖಿಕ ಧಾರೆಯಲ್ಲಿ ತಲೆಮಾರುಗಳಿಂದ ಸಾಗಿಸಿಕೊಂಡು ಬಂದಿದ್ದಾರೆ. ಗೋಸಂಗಿ ಯುದ್ಧ ವೀರರ ಈ ಕಥನವು ಗಾರುಡಿ ಗಂಗಭಾರತ ಕಾವ್ಯವಾಗಿ ನರದ ರಕ್ತದಂತೆ ಹರಿಯುತ್ತಿದೆ.
ಅಂತೆಯೇ ಭೀಮಾ ಕೋರೆಗಾಂವ್ ಮಹಾರ್ ವೀರ ಯೋಧರ ನೆನಪೂ ನಮ್ಮಿಂದ ಎಂದಿಗೂ ಮಾಸುವುದಿಲ್ಲ. ಬ್ರಿಟೀಷರಿಗೆ ಜಯ ತಂದುಕೊಡಲು ಪೇಶ್ವೆಗಳ ವಿರುದ್ಧ ಕಾದಾಡಿದ ಕೋರೆಗಾಂವ್ ವೀರಗಾಥೆ (1818 ಜನವರಿ 1) ದಲಿತರ ಪಾಲಿನ ಸ್ವಾಭಿಮಾನದ ಕಥನ. ಮಹಾರ್ ರೆಜಿಮೆಂಟಿನ ಸ್ಥಾಪನೆಯ ಘನತೆಗೂ ಹೊಸ ಪ್ರಸ್ತಾನ ಬರೆದ ಈ ದಲಿತ ದಿಗ್ವಿಜಯವನ್ನು ನಾವು ಪ್ರತಿ ವರ್ಷ ಆಚರಿಸುತ್ತಾ ಬಂದಿದ್ದೇವೆ.
ಸಂವಿಧಾನ ಕತೃ ಡಾ.ಬಿ.ಆರ್.ಅಂಬೇಡ್ಕರ್ ಅವರು, ಪ್ರತಿವರ್ಷ ಜನವರಿ 01 ರಂದು ಕೊರೆಗಾಂವ್ ಹತಾತ್ಮ ಯುದ್ಧವೀರರ ರಣಭೂಮಿಗೆ ಸಕುಟುಂಬ ಸಮೇತರಾಗಿ ಹೋಗಿ ಮಹಾರ್ ಸೈನಿಕರ ವಿಜಯ ಸ್ಥೂಪಕ್ಕೆ ವಂದನೆ ಸಲ್ಲಿಸಿ ಬರುತ್ತಿದ್ದರು. ಪ್ರತಿವರ್ಷ ಜನವರಿ 01 ನೇ ದಿನವನ್ನು ಕೊರೆಗಾಂವ್ ಯುದ್ಧವೀರರ ವಿಜಯ ದಿವಸವನ್ನಾಗಿ ಆಚರಿಸುವುದನ್ನು ಅಂಬೇಡ್ಕರ್ ರೂಢಿಗೆ ತಂದರು.
ಕೋಮುವಾದಿ ಮರಾಠ ಪೇಶ್ವೆಗಳ ವಿರುಧ್ಧ ಹೋರಾಡಿ ಮಡಿದು ಹುತಾತ್ಮರಾದ ಕೊರೆಗಾಂವ್ ವೀರರ ವಿಜಯ ದಿವಸವನ್ನಾಗಿ ನಾವು ಜನವರಿ-02 ರ ದಿನವನ್ನು ಆಚರಿಸುತ್ತಿದ್ದೇವೆ.
2018 ನೇ ಜನವರಿ 02 ರ ಭಾರತ ಹುಣ್ಣಿಮೆಯ ದಿನ ದಲಿತರ ಪಾಲಿಗೊಂದು ಕರಾಳ ನೆನಪನ್ನು ಬೆಸೆದುಬಿಟ್ಟಿದೆ. ಕರುಣಾಮೈತ್ರಿಗಳ ಸಂಕೇತವಾದ ನೀಲಿ ಮತ್ತು ಪಂಚಶೀಲ ಧ್ವಜಗಳನ್ನು ಹಿಡಿದು ಮಹಾರಾಷ್ಟ್ರದ ಕೊರೆಗಾಂವ್ ವೀರಭೂಮಿಗೆ ಕೋರೆಗಾಂವ್ ವಿಜಯ ದಿವಸದ 200 ನೇ ವರ್ಷಾಚರಣೆಯನ್ನು ಆಚರಿಸಲು ಹೋಗಿದ್ದ ನಮ್ಮ ಬಂಧುಗಳ ವಿರುದ್ಧ, ಮತೀಯ ಧ್ವೇಷ ಮತ್ತು ರಕ್ತಪಾತದ ಸಂಕೇತವಾದ ಭಗವಾಧ್ವಜವನ್ನು ಹಿಡಿದುಕೊಂಡು ಬಂದ ಸಂಘಪರಿವಾರದ ಗೂಂಡಾಗಳು ಗುಂಪು ಘರ್ಷಣೆ ನಡೆಸಿ ನಮ್ಮ ಅನೇಕ ಬಂಧುಗಳು ಗಾಯಗೊಂಡರು.
ಸಾರ್ವಜನಿಕ ಆಸ್ತಿ-ಪಾಸ್ತಿಗಳೂ ನಾಶವಾಗಿ ಸಾಮಾನ್ಯ ಜನಜೀವನ ಕದಡಿ ಹೋಯಿತು. ದಲಿತರ ಜೀವಹಾನಿಯೂ ಆಗಿಹೋದ ಅಂತಹ ಹೊತ್ತಿನಲ್ಲಿ ಸಹಜವಾಗಿ ವ್ಯಗ್ರಗೊಳ್ಳಬೇಕಿದ್ದ ದಲಿತರು ತಮ್ಮ ಕೋಪವನ್ನು ಸಾರ್ವಜನಿಕರ ಮೇಲಾಗಲೀ ಸಾರ್ವಜನಿಕ ಆಸ್ತಿ-ಪಾಸ್ತಿಗಳ ಮೇಲಾಗಲೀ ಹರಿಯಬಿಡದೆ ಶಾಂತಿಯನ್ನು ಕಾಪಾಡಿಕೊಂಡರು.
ಗೋಸಂಗಿ ಯುದ್ಧವೀರರ ಮತ್ತು ಕೋರೆಗಾಂವ್ ಯುದ್ಧ ವೀರರ ಅಮರ ಕಾವ್ಯಗಳನ್ನು ಕಟ್ಟಿ ಹಾಡುವ ಮೂಲಕ ದಲಿತರು ತಮಗಾದ ನೋವನ್ನು ಹೊರ ಹಾಕಿದರು. ಹರಿದ ಗಾಯಗಳನ್ನು ಹೊಲೆಯುವಂತೆ ಸಂಬಂಧಗಳನ್ನೂ ಹೊಲೆದುಕೊಳ್ಳುವುದನ್ನು ನಮ್ಮ ಜನಪದರು ಧ್ಯಾನಿಸಿದ್ದರು. ಇಂದು ಕೊರೆಗಾಂವ್ ವಿಜಯ ದಿವಸದ 203 ನೇ ವರ್ಷಾಚರಣೆಯ ಹೊತ್ತಿನಲ್ಲಿ ಇಲ್ಲಿಯತನಕ ಮತೀಯವಾದಿಗಳಿಂದ ನಮಗಾಗಿರುವ ಗಾಯಗಳನ್ನೂ, ಹರಿದ ಸಂಬಂಧಗಳನ್ನೂ ಹೊಲಿದುಕೊಳ್ಳೋಣ.
ಕರುಣಾಮೈತ್ರಿಗಳ ಸಂಕೇತವಾದ ನೀಲಿ ಮತ್ತು ಪಂಚಶೀಲ ಧ್ವಜಗಳನ್ನು ಎಲ್ಲೆಡೆ ಎತ್ತಿ ಹಿಡಿಯೋಣ.
(ಡಾ. ವಡ್ಡಗೆರೆ ನಾಗರಾಜಯ್ಯ
8722724174)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ8 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

