Connect with us

ದಿನದ ಸುದ್ದಿ

ಅಪೌಷ್ಟಿಕ ಮಕ್ಕಳನ್ನು ಎನ್‍ಆರ್‍ಸಿಗೆ ದಾಖಲಿಸದಿದ್ದರೆ ಶಿಸ್ತಿನ ಕ್ರಮ : ಡಿಸಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಎನ್‍ಆರ್‍ಸಿ ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಸಿಡಿಪಿಓ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.

ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಾದ ಪೋಷಣ್ ಅಭಿಯಾನ ಯೋಜನೆ, ಕಿರುಸಾಲ ಯೋಜನೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ಜಿಲ್ಲಾ ಮಟ್ಟದ ಸಮನ್ವಯ ಸಭೆ, ಬಾಲ್ಯ ವಿವಾಹ ನಿಷೇಧ ಯೋಜನೆ, ಸ್ವಾಧಾರ ಯೋಜನೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ತೀವ್ರ ಮತ್ತು ಸಾಧಾರಣ ಸೇರಿದಂತೆ ಒಟ್ಟು 225 ಅಪೌಷ್ಟಿಕ ಮಕ್ಕಳನ್ನು ಗುರುತಿಸಲಾಗಿದೆ. ಯಾವುದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದೆಂದು ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ ಎನ್‍ಆರ್‍ಸಿ(ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ತೆರೆದಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಇದೊಂದು ವರದಾನವಾಗಿದ್ದು, ಮಕ್ಕಳನ್ನು ಎನ್‍ಆರ್‍ಸಿಗೆ ದಾಖಲಿಸಬೇಕು. ತಾಲ್ಲೂಕುಗಳಲ್ಲಿ ಸಿಡಿಪಿಓ ಗಳು, ಅಧೀಕ್ಷಕರು, ವಿಷಯ ನಿರ್ವಾಹಕರು ಈ ಬಗ್ಗೆ ಗಮನ ಹರಿಸಿ, ಪೋಷಕರ ಮನವೊಲಿಸಿ ಈ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಬೇಕು ಎಂದರು.

ತಾಲ್ಲೂಕುಗಳ ಸಿಡಿಪಿಓ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರತಿಕ್ರಿಯಿಸಿ ಪೋಷಕರು ತಮ್ಮ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಲು ಒಪ್ಪುತ್ತಿಲ್ಲ. ಏನಾದರೊಂದು ಕಾರಣ ಹೇಳುತ್ತಾರೆಂದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಸರ್ಕಾರ ಎಷ್ಟೆಲ್ಲಾ ಹಣ ಖರ್ಚು ಮಾಡಿ ಸಿಆರ್‍ಸಿ ತೆರೆದಿದೆ. ಇದೊಂದು ಮುಖ್ಯವಾದ ಯೋಜನೆಯಾಗಿದ್ದು, ಹೇಗಾದರೂ ಪೋಷಕರ ಮನವೊಲಿಸಿ ಮಕ್ಕಳನ್ನು ಎನ್‍ಆರ್‍ಸಿ ದಾಖಲಿಸಿ, ಮಕ್ಕಳನ್ನು ಅಪೌಷ್ಟಿಕತೆಯಿಂದ ಹೊರತರಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಪೋಷಣ್ ಅಭಿವಯಾನ ಯೋಜನೆಯಡಿ 0 ಯಿಂದ 6 ವರ್ಷಗಳವರೆಗಿನ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕತಾ ಮಟ್ಟವನ್ನು ಸುಧಾರಿಸಲು ಸಮುದಾಯ ಆಧಾರಿತ ಚಟುವಟಿಕೆಗಳ ಮೂಲಕ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಪೋಷಣ್ ಅಭಿಯಾನ್ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮುಖಾಮುಖಿ ಸಂವಾದ ಮಾಡಲು ಇ-ಐಎಲ್‍ಎ(ಇನ್ಕ್ರಿಮೆಂಟಲ್ ಲರ್ನಿಂಗ್ ಅಪ್ರೋಚ್) ಮಾಡ್ಯೂಲ್‍ಗಳನ್ನು ಅಭಿವೃದ್ದಿ ಪಡಿಸಿ ತರಬೇತಿ ನೀಡಲಾಗಿದೆ. ಜೊತೆಗೆ ಈ ಯೋಜನೆಯಡಿ ಸುಪೋಷಣಾ ದಿವಸ್, ಅನ್ನಪ್ರಾಶನ ದಿವಸ್, ತೀವ್ರ ಮತ್ತು ಸಾಧಾರಣ ಅಪೌಷ್ಟಕ ಮಕ್ಕಳು ಗುರುತಿಸುವಿಕೆ, ರಕ್ತಹೀನತೆ ಜಾಗೃತಿ ಸಭೆ, ಎದೆಹಾಲಿನ ಮಹತ್ವ, ಜಂತುಹುಳು ನಿವಾರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ವಿವರಣೆ ನೀಡಿದರು.

ಮಾದರಿ ಪೌಷ್ಟಿಕ ಕೈತೋಟ ನಿರ್ಮಿಸಲು ಸೂಚನೆ

ಅಂಗನವಾಡಿ ಕೇಂದ್ರದಲ್ಲಿ ‘ಪೌಷ್ಟಿಕ ಕೈತೋಟ’ ಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ತಾಲ್ಲೂಕಿನಲ್ಲಿ 5 ರಿಂದ 10 ಉತ್ತಮವಾದ ಪೌಷ್ಟಿಕ ಕೈತೋಟಗಳನ್ನು ನಿರ್ಮಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಹಾಗೂ ಪೋಷಣ್ ಅಭಿಯಾನದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ, ಪಂಚಾಯತ್‍ರಾಜ್, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ಆಹಾರ ಇಲಾಖೆಗಳು ತಮ್ಮ ಪಾತ್ರವನ್ನು ಸಕ್ರಿಯವಾಗಿ ನಿರ್ವಹಿಸುವ ಮೂಲಕ ಯೋಜನೆಯ ಯಶಸ್ಸಿಗೆ ಸಹಕರಿಸಬೇಕೆಂದರು.

ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಅಂಗನವಾಡಿ ಕೇಂದ್ರಗಳ ಆವರಣದಲ್ಲಿ ಪೌಷ್ಟಿಕ ಕೈತೋಟ ನಿರ್ಮಿಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ವಿಜಯಕುಮಾರ್ ಮಾತನಾಡಿ, 2020-21 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 62 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದ್ದು, ಈ ಪೈಕಿ 61 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಒಂದು ಬಾಲ್ಯ ವಿವಾಹ ನಡೆದಿದ್ದು ಎಫ್‍ಐಆರ್ ದಾಖಲಿಸಲಾಗಿದೆ ಎಂದರು.

ಬಾಲ್ಯ ವಿವಾಹ ತಡೆ ತಂಡ ಸಕ್ರಿಯವಾಗಿ ಕೆಲಸ ಮಾಡಬೇಕು

ಡಿಸಿ ಮಾತನಾಡಿ, ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಬಾಲ್ಯ ವಿವಾಹ ಸಂಖ್ಯೆ ಹೆಚ್ಚಿದೆ. ಕೋವಿಡ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಆರಂಭವಾಗಿಲ್ಲವೆಂದು ಎಷ್ಟೋ ಪೋಷಕರು ತಮ್ಮ ಮಕ್ಕಳನ್ನು ಮದುವೆ ಮಾಡುತ್ತಿದ್ದಾರೆ. ಆದ ಕಾರಣ ಬಾಲ್ಯ ವಿವಾಹ ತಡೆ ತಂಡ ಆದಷ್ಟು ಸಕ್ರಿಯವಾಗಿ ಕೆಲಸ ಮಾಡಬೇಕು. ಮುಖ್ಯವಾಗಿ ಪಿಡಿಓಗಳು, ಶಾಲಾ ಮುಖ್ಯಸ್ಥರು ಬಾಲ್ಯ ವಿವಾಹ ತಡೆಗೆ ಸಹಕರಿಸಬೇಕು. ಸಿಡಿಪಿಓ ಗ್ರಾಮ ಲೆಕ್ಕಿಗರು, ಆರ್‍ಐ, ಪೊಲೀಸ್ ಇಲಾಖೆಯವರು, ಎನ್‍ಜಿಓ ಸೇರಿದಂತೆ ತಂಡದ ಎಲ್ಲ ಸದಸ್ಯರು ಬಾಲ್ಯ ವಿವಾಹ ತಡೆಗೆ ಶ್ರಮಿಸಬೆಕೆಂದರು.

ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, 2020-21 ನೇ ಸಾಲಿನಲ್ಲಿ ಜಗಳೂರಿನಲ್ಲಿ 6, ದಾವಣಗೆರೆಯಲ್ಲಿ 18, ಹೊನ್ನಾಳಿಯಲ್ಲಿ 15, ಚನ್ನಗಿರಿಯಲ್ಲಿ 14 ಮತ್ತು ಹರಿಹರದಲ್ಲಿ 9 ಪ್ರಕರಣ ದಾಖಲಾಗಿದೆ. ಮುಂದುವರೆದ ತಾಲ್ಲೂಕುಗಳಲ್ಲೇ ಹೆಚ್ಚಾಗಿ ಪ್ರಕರಣ ದಾಖಲಾಗಿದ್ದು, ಬಾಲ್ಯ ವಿವಾಹ ತಡೆಗೆ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ತಂಡ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.

ಬಾಲ್ಯ ವಿವಾಹ ತಡೆಗೆ ಜನನ ದಿನಾಂಕ ನೀಡುವಲ್ಲಿ ಪಾಮೇನಳ್ಳಿ ಶಾಲಾ ಮುಖ್ಯೋಪಾಧ್ಯಾಯರು ಸಹಕರಿಸಲಿಲ್ಲವೆಂದು ಮಕ್ಕಳ ಸಹಾಯವಾಣಿಯವರು ತಿಳಿಸಿದ್ದು, ಇನ್ನು ಮುಂದೆ ಹಾಗೆ ಅಸಹಕರಾರ ತೋರಿದವರ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬಾಡಿಗೆ ಕಟ್ಟಡ ಬೇಡ

ಜಿಲ್ಲೆಯಲ್ಲಿ ಒಟ್ಟು 1721 ಅಂಗನವಾಡಿ ಕಟ್ಟಡಗಳಿದ್ದು ನಗರದಲ್ಲೇ 375 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಖಾಸಗಿ ಕಟ್ಟಡದಲ್ಲಿ ಅಂಗನವಾಡಿ ನಡೆಸುವುದು ಬೇಡ. ಸರ್ಕಾರಿ ಜಮೀನು ನೀಡಲಾಗುವುದು. ಎಸ್‍ಸಿಪಿ/ಟಿಎಸ್‍ಪಿ ಮತ್ತು ಇತರೆ ಯೋಜನೆಗಳಡಿ ಕಟ್ಟಡಗಳನ್ನು ನಿರ್ಮಿಸಬೇಕು.

ಹಾಗೂ ಶಾಲೆಗಳ ಹೆಚ್ಚುವರಿ ಕಟ್ಟಡವನ್ನು ಅಂಗನವಾಡಿ ಕಟ್ಟಡವಾಗಿ ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಇನ್ನು ಮುಂದೆ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಬಾರದು. ಆದಷ್ಟು ಶೀಘ್ರದಲ್ಲೇ ಜಾಗ ಗುರಿತಿಸಿ ಸ್ವಂತ ಕಟ್ಟಡಗಳನ್ನು ಹೊಂದಬೇಕೆಂದು ಸೂಚನೆ ನೀಡಿದ ಅವರು ತಾವು, ಸಿಇಓ ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡುವುದಾಗಿ ತಿಳಿಸಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ರಡಿ 2020-21 ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ 7, ಜಗಳೂರು 8, ಹರಿಹರ 5, ಹೊನ್ನಾಳಿ 4 ಮತ್ತು ಚನ್ನಗಿರಿ 3 ಸೇರಿದಂತೆ ಒಟ್ಟು 27 ಪ್ರಕರಣ ದಾಖಲಾಗಿದ್ದು, 02 ಪ್ರಕರಣಗಳ ಕೌಟುಂಬಿಕ್ ಘಟನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.ಸಂರಕ್ಷಣಾಧಿಕಾರಿಗಳು 15 ಪ್ರಕರಣಗಳನ್ನು ಆಪ್ತಸಮಾಲೋಚನೆ ಮೂಲಕ ಇತ್ಯರ್ಥಪಡಿಸಿದ್ದು, 10 ಪ್ರಕರಣಗಳು ಆಪ್ತಸಮಾಲೋಚನೆ ಹಂತದಲ್ಲಿದೆ ಎಂದರು.

ಸ್ವಾಧಾರ ಯೋಜನೆಯಡಿ ನಗರದಲ್ಲಿ ಜಾಗೃತಿ ಮಹಿಳಾ ಸಂಘ ಮತ್ತು ಶುಭೋದಯ ಸ್ವಯಂ ಸೇವಾ ಸಂಸ್ಥೆಗಳು ಸ್ವಾಧಾರ ಗೃಹ ನಡೆಸುತ್ತಿದ್ದು, ಶೋಷಣೆಗೆ, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮಕ್ಕಳು 6 ರಿಂದ 1 ವರ್ಷದವರೆಗೆ ತಾತ್ಕಾಲಿಕ ಆಶ್ರಯ ಜೊತೆಗೆ ಪುನರ್ವಸತಿಗಾಗಿ ಕೌಶಲ್ಯ ತರಬೇತಿ ಪಡೆಯುತ್ತಿದ್ದಾರೆ.

ಜಾಗೃತಿ ಮಹಿಳಾ ಸಂಘದಲ್ಲಿ ಪ್ರಸಕ್ತ ಸಾಲಿನ ಡಿಸೆಂಬರ್ ಅಂತ್ಯದವರೆಗೆ 46 ಮಹಿಳೆಯರು ಮಹಿಳೆಯರು 9ಮಕ್ಕಳು ದಾಖಲಾಗಿದ್ದು, ಈ ಪೈಕಿ 17 ಜನರನ್ನು ಪತಿ ಮತ್ತು ಪೋಷಕರ ವಶಕ್ಕೆ ನೀಡಿದ್ದು, 8 ಜನರು ಸ್ವಾವಲಂಬಿಗಳಾಗಿ ಹಾಗೂ ಒಬ್ಬರು ಮದುವೆಯಾಗಿ ಹಾಗೂ 08 ಮಕ್ಕಳು ಪೋಷಕರ ವಶಕ್ಕೆ ವಹಿಸಿ ಸಂಸ್ಥೆಯಿಂದ ಬಿಡುಗಡೆ ಹೊಂದಿರುತ್ತಾರೆ, ಶುಭೋದಯ ಸ್ವಯಂ ಸೇವಾ ಸಂಸ್ಥೆಯಲ್ಲಿ ಒಟ್ಟು 49 ಮಹಿಳೆಯರು ಮತ್ತು 9 ಮಕ್ಕಳು ದಾಖಲಾಗಿದ್ದು ಈ ಪೈಕಿ 23 ಮಹಿಳೆಯರು ಪತಿ ಮತ್ತು ಪೋಷಕರ ವಶಕ್ಕೆ 07 ಜನ ಸ್ವಾವಲಂಬಿಗಳಾಗಿ ಹಾಗೂ 03 ಮಕ್ಕಳ ತಾಯಿತಯ ವಶಕ್ಕೆ ವಹಿಸಿ ಬಿಡುಗಡೆ ಹೊಂದಿರುತ್ತಾರೆ. ಪುನರ್ವಸತಿಗಾಗಿ ಟೈಲರಿಂಗ್, ಬ್ಯುಟೀಷಿಯನ್, ಬ್ಯಾಗ್ ತಯಾರಿಕೆ, ಎಂಬ್ರಾಯಡರಿ, ಇತರೆ ತರಬೇತಿ ನೀಡಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಎಸ್‍ಪಿಯರೊಂದಿಗೆ ಸ್ವಾಧಾರ ಗೃಹಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.

ಇದೇ ವೇಳೆ ಬಾಲ್ಯ ವಿವಾಹ ತಡೆಗೆ ಸಂಬಂಧಿಸಿದ ಕೈಪಿಡಿಯನ್ನು ಜಿಲ್ಲಾಧಿಕಾರಿ, ಜಿ.ಪಂ ಸಿಇಓ ಸೇರಿದಂತೆ ಅಧಿಕಾರಿಗಳು ಬಿಡುಗಡೆ ಮಾಡಿದರು.

ಸಭೆಯಲ್ಲಿ ಡಿವೈಎಸ್‍ಪಿ ಬಿ.ಎಸ್.ಬಸವರಾಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ಸಿ.ಬಸವರಾಜಯ್ಯ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಲೋಕೇಶ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುಶೃತ ಡಿ.ಶಾಸ್ತ್ರಿ, ಶಿಕ್ಷಣ ಇಲಾಖೆ ಇಓ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂರಕ್ಷಣಾಧಿಕಾರಿಗಳಾದ ಪೂರ್ಣಿಮಾ, ಸುಶೀಲಮ್ಮ, ಮಕ್ಕಳ ಸಹಾಯವಾಣಿಯ ಕೊಟ್ರೇಶ್, ವಿವಿಧ ಎನ್‍ಜಿಓ ಗಳ ಪದಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending