Connect with us

ದಿನದ ಸುದ್ದಿ

ದಾವಣಗೆರೆ | ಮೊದಲನೇ ಹಂತದ ಕೋವಿಡ್ ಲಸಿಕಾಕರಣಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ ಚಾಲನೆ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಆವರಣದಲ್ಲಿ ಶನಿವಾರದಂದು ಸಂಭ್ರಮದ ವಾತಾವರಣ ಏರ್ಪಟ್ಟಿತ್ತು. ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೋವಿಡ್ ಲಸಿಕೆ ನೀಡಲು ಎಲ್ಲ ರೀತಿಯ ಪೂರಕ ಸಿದ್ದತೆಯೊಂದಿಗೆ ವೈದ್ಯರು, ಶುಶ್ರೂಷಕರು ಸಜ್ಜಾಗಿದ್ದರು.

ಬೆಳಿಗ್ಗೆ ರಾಷ್ಟ್ರದ ಪ್ರಧಾನಮಂತ್ರಿಯವರಾದ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಲಸಿಕಾಕರಣದ ಕುರಿತು ಭಾಷಣ ಮುಗಿಸಿ, ಲಸಿಕಾಕರಣಕ್ಕೆ ಸಾಂಕೇತಿಕ ಚಾಲನೆ ನೀಡಿದ ನಂತರ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಸಂಸದರು, ಶಾಸಕರು ಮತ್ತು ಅಧಿಕಾರಿಗಳು ಕೋವಿಡ್ ಲಸಿಕಾಕರಣ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.

ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಡೀ ದೇಶವನ್ನು ಉದ್ದೇಶಿಸಿ ಮಾತನಾಡಿ, ಕೊರೊನಾ ಸಮರದ ವಿರುದ್ದ ಹೋರಾಟ ಮಾಡಿದ ಸಂಕಷ್ಟದ ಸಮಯ, ಅದರ ವಿರುದ್ದ ಹೋರಾಡಿದ ಸೇನಾನಿಗಳ ಕಾರ್ಯವನ್ನು, ದೇಶವಾಸಿಗಳ ಸಹಕಾರವನ್ನು ಸ್ಮರಿಸಿದ ಅವರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಲಸಿಕಾಕರಣ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ದೇಶ ಕೊರೊನಾ ಮುಕ್ತವಾಗಲಿದೆ ಎಂದು ಆಶಾಭಾವನೆಯನ್ನು ವ್ಯಕ್ತಿಪಡಿಸಿ, ಕಾರ್ಯಕ್ರಮದ ಯಶಸ್ಸಿಗೆ ಹಾರೈಸಿದರು.

ಪ್ರಧಾನಮಂತ್ರಿಗಳ ಭಾಷಣ ಮುಗಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಗೂ ಮೊದಲನೇ ಸೆಷನ್‍ನಲ್ಲಿ ಲಸಿಕೆ ಪಡೆಯಲು ಪಾಲ್ಗೊಂಡಿದ್ದ ವೈದ್ಯರು, ಶುಶ್ರೂಷಕರು, ಲ್ಯಾಬ್ ಟೆಕ್ನೀಷಿನ್, ಡಿ ಗ್ರೂಪ್ ನೌಕರರಿಗೆ ಧೈರ್ಯ ಹೇಳಿ ಹುರಿದುಂಬಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದರಾದ ಜಿ.ಎಂ ಸಿದ್ದೇಶ್ವರ ಮಾತನಾಡಿ, ಇಂದು ನಮ್ಮ ರಾಷ್ಟ್ರದ ಪ್ರಧಾನ ಮಂತ್ರಿಯವರು ಇಡೀ ದೇಶವನ್ನುದ್ದೇಶಿಸಿ ಮಾತನಾಡಿ ಕೊರೊನಾ ಲಸಿಕಾಕರಣಕ್ಕೆ ಚಾಲನೆ ನೀಡಿದ್ದಾರೆ. ಇದೀಗ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಭಾಷಣ ಕೇಳಿದ ನಂತರ ನಮ್ಮ ಜಿಲ್ಲೆಯಲ್ಲಿಯೂ ಇಂದು ಸಾಂಕೇತಿಕವಾಗಿ ಲಸಿಕಾಕರಣಕ್ಕೆ ಚಾಲನೆ ನೀಡಲಾಗಿದೆ.

ಜಿಲ್ಲೆಯ ಏಳು ಕೇಂದ್ರಗಳಲ್ಲಿ ಇಂದು ಲಸಿಕಾಕರಣ ನಡೆಯುತ್ತಲಿದೆ. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಾಗುತ್ತಿದೆ. ಯಾವುದೇ ಭಯಕ್ಕೆ ಒಳಗಾಗದೇ ಲಸಿಕೆಯನ್ನು ಪಡೆಯಬಹುದಾಗಿದ್ದು ಕೇಂದ್ರ ಸರ್ಕಾರದ ಈ ಲಸಿಕಾ ಕಾರ್ಯಕ್ರಮ ಸಂಪೂರ್ಣ ಯಶಸ್ಸು ಕಾಣಲಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮಂತ್ರಿಗಳು ಕೊರೊನಾ ಲಸಿಕಾಕರಣ ಕುರಿತು ಭಾಷಣ ಮಾಡಿ, ಲಸಿಕಾ ಕರಣಕ್ಕೆ ಚಾಲನೆ ನೀಡಿದ ತಕ್ಷಣ ಜಿಲ್ಲಾ ಕೇಂದ್ರದಲ್ಲಿ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ ಜಿಲ್ಲೆಯ ಏಳು ಕೇಂದ್ರಗಳಲ್ಲಿ ಲಸಿಕಾಕರಣಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

18 ವರ್ಷ ಮೇಲ್ಪಟ್ಟ, ಯಾವುದೇ ಇತರೆ ಕಾಯಿಲೆಗಳ ಗಂಭೀರತೆ ಇಲ್ಲದ ತಲಾ ನೂರು ಆರೋಗ್ಯ ಕಾರ್ಯಕರ್ತ ಫಲಾನುಭವಿಗಳ ಪಟ್ಟಿ ಈಗಾಗಲೇ ತಯಾರಿಸಿದ ಪ್ರಕಾರ ಇಂದು ಲಸಿಕಾರಕರಣ ಮಾಡಲಾಗುತ್ತಿದೆ. ಮೊದಲನೇ ಹಂತದಲ್ಲಿ 6876 ಸರ್ಕಾರಿ, 12194 ಖಾಸಗಿ ಸೇರಿದಂತೆ ಒಟ್ಟು 19070 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಪಟ್ಟಿ ತಯಾರಿಸಿಡಲಾಗಿದೆ.

ಯಾವುದೇ ರೀತಿಯ ಭಯವಿಲ್ಲದೇ, ನಿರಾತಂಕವಾಗಿ ಲಸಿಕೆ ಪಡೆಯಬಹುದಾಗಿದ್ದು, ಕೋವ್ಯಾಕ್ಸಿನ್‍ಗೆ ಸಂಬಂಧಿಸಿದಂತೆ ಯಾರೂ ಕೂಡ ಸುಳ್ಳು ಸುದ್ದಿ, ವದಂತಿಗಳಿಗೆ ಕಿವಿಗೊಡಕೂಡದು. ಯಾರಾದರೂ ಒಂದು ಪಕ್ಷ ಯಾರಾದರೂ ಸುಳ್ಳುಸುದ್ದಿ, ವದಂತಿಗಳನ್ನು ಹಬ್ಬಿಸಿದರೆ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಇಂದು ಜಿಲ್ಲಾ ಚಿಗಟೇರಿ ಆಸ್ಪತ್ರೆ, ಬಾಪೂಜಿ/ಜೆಜೆಎಂಸಿ ಕಾಲೇಜು, ದಾವಣಗೆರೆ, ಹರಿಹರ, ಹೊನ್ನಾಳಿ, ಚನ್ನಗಿರಿ ಮತ್ತು ಜಗಳೂರು ತಾಲ್ಲೂಕು ಆಸ್ಪತ್ರೆಗಳು ಹಾಗೂ ಜಗಳೂತು ತಾಲ್ಲೂಕಿನ ಬಿಳಿಚೋಡು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂದು ಕೋವಿಡ್ ಲಸಿಕೆಯಾದ ಕೋವಿಶೀಲ್ಡ್ ನೀಡಿಕೆಗೆ ಚಾಲನೆ ನೀಡಿಲಾಗಿದೆ ಮೊದಲನೇ ಸೆಷನ್‍ನಲ್ಲಿ ಪ್ರತಿ ಕೇಂದ್ರಗಳಲ್ಲಿ ತಲಾ ನೂರು ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಲಸಿಕಾಕರಣ ಕಾರ್ಯಕ್ರಮ ಶಾಂತ ರೀತಿಯಲ್ಲಿ ನಡೆಯಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಯಾರೂ ಕೂಡ ಲಸಿಕಾಕರಣ ಕುರಿತು ಅನಗತ್ಯ ಗೊಂದಲ ಸೃಷ್ಟಿಸಬಾರದು. ಸುಳ್ಳು ಸುದ್ದಿ, ವದಂತಿಗೆ ಎಡೆ ಮಾಡಿದರೆ ಅವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಮುಂದಿನ ದಿನಗಳಲ್ಲಿ ಕೋವಿಡ್‍ನಿಂದ ಆಗಬಹುದಾದ ಸಾವು ನೋವು ಮತ್ತು ಸಮುದಾಯ ಹರಡುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಕೋವಿಡ್ ಲಸಿಕಾಕರಣ ಕಾರ್ಯಕ್ರಮ ಜಾರಿಗೆ ತಂದಿದೆ. ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು ಜಿಲ್ಲೆಯಲ್ಲಿ ಒಟ್ಟು 36 ಕೇಂದ್ರಗಳಲ್ಲಿ 19070 ಜನರಿಗೆ ಲಸಿಕೆ ನೀಡಲಾಗುವುದು. ಒಟ್ಟು 108 ನುರಿತ ಲಸಿಕಾಕಾರರು ಲಸಿಕೆ ನೀಡುವರು ಎಂದರು.

ಆರ್‍ಸಿಹೆಚ್‍ಓ ಡಾ.ಮೀನಾಕ್ಷಿ ಮಾತನಾಡಿ, ಏಳು ಕೇಂದ್ರಗಳಲ್ಲಿ ಒಟ್ಟು 30 ನುರಿತ ಲಸಿಕಾರರು ಲಸಿಕೆ ನೀಡುವರು. ಆನ್‍ಲೈನ್‍ನಲ್ಲಿ ಲಸಿಕೆ ಪಡೆಯುವವರ ಒಪ್ಪಿಗೆ ಪತ್ರವನ್ನು ಅಪ್‍ಲೋಡ್ ಮಾಡಿದ ನಂತರ ಲಸಿಕೆ ನೀಡಲಾಗುವುದು. ಲಸಿಕೆಗೆ ಮುನ್ನ ಅವರೊಂದಿಗೆ ಆಪ್ತಸಮಾಲೋಚನೆ ನಡೆಸಿ, ಲಸಿಕೆ ನೀಡಿದ ನಂತರ ವಿಶ್ರಾಂತಿ ಕೊಠಡಿಯಲ್ಲಿ ಅವರನ್ನು ಅರ್ಧ ಗಂಟೆ ಅಬ್ಸವರ್ಷೇನ್‍ಲ್ಲಿಟ್ಟು ಕಳುಹಿಸಿಕೊಡಲಾಗುವುದು. ಎಲ್ಲ ಲಸಿಕಾ ಕೇಂದ್ರಗಳಲ್ಲಿ ಅಡ್ಡ ಪರಿಣಾಮಗಳೇನಾದರೂ ಸಂಭವಿಸಿದರೆ ಅಗತ್ಯವಾಗಿ ಬೇಕಾದ ಔಷಧೋಪಚಾರದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಡಾ.ಶಶಿಧರ್ ಕೋವಿಶೀಲ್ಡ್ ಲಸಿಕೆ ಪಡೆದ ನಂತರ ಮಾತನಾಡಿ, ಲಸಿಕೆ ಪಡೆದ ನಂತರ ಯಾವುದೇ ಭಯವಾಗಲೀ, ಅಡ್ಡ ಪರಿಣಾಮವಾಗಲೀ ನನಗೆ ಆಗಿಲ್ಲ. ನಿರಾತಂಕವಾಗಿ ಎಲ್ಲರೂ ಲಸಿಕೆ ಪಡೆಯಬಹುದು. ಮೊದಲಿಗೆ ನನಗೆ ಕೌನ್ಸಲಿಂಗ್ ರೂಂನಲ್ಲಿ ಕೌನ್ಸಲಿಂಗ್ ಮಾಡಿ ನಂತರ ನನ್ನ ಒಪ್ಪಿಗೆ ಪತ್ರ ವೆಬ್‍ಪೋರ್ಟಲ್‍ನಲ್ಲಿ ಅಪ್‍ಲೋಡಿದ ನಂತರ ಲಸಿಕೆ ನೀಡಲಾಯಿತು. ನಂತರ ವಿಶ್ರಾಂತಿ ಕೊಠಡಿಯಲ್ಲಿ ಅರ್ಧ ಗಂಟೆ ಅಬ್ಸರ್ವೇಷನ್ ಮಾಡಿದ ನಂತರ ಹೊರಗೆ ಬಂದಿದ್ದೇನೆ. ಆರಾಮಾಗಿದ್ದೇನೆ ಎಂದರು.

ಲಸಿಕೆ ಪಡೆದ ಆಸ್ಪತ್ರೆಯ ಡಿ ಗ್ರೂಪ್ ನೌಕರ ರಾಜಾಭಕ್ಷ ಮಾತನಾಡಿ, ನಾನು ಮೊದಲನೇ ಹಂತದಲ್ಲಿ ಮೊದಲನೇ ದಿನವೇ ಲಸಿಕೆ ಪಡೆಯುತ್ತಿರುವುದು ಖುಷಿಯಾಗಿದೆ. ಲಸಿಕಾ ಪ್ರಕ್ರಿಯೆಯಲ್ಲಿ ಯಾವುದೇ ಭಯ ಆಗಲಿಲ್ಲ. ಲಸಿಕೆ ಪಡೆದು ಅರ್ಧ ಗಂಟೆ ನಂತರವೂ ಆರಾಮಾಗಿದ್ದೇನೆ. ಯಾರೂ ಯಾವುದೇ ರೀತಿಯ ಆತಂಕ್ಕೆ ಒಳಗಾಗದೇ ಧೈರ್ಯವಾಗಿ ಲಸಿಕೆ ಪಡೆಯಬಹುದೆಂದರು.

ಚಿಗಟೇರಿ ಆಸ್ಪತ್ರೆಯಲ್ಲಿ ಲಸಿಕಾಕರಣ ಚಾಲನೆ ವೇಳೆ ಡಾ. ಶಶಿಧರ್, ಡಾ.ಸಂಜಯ್, ಡಾ.ಯತೀಶ್, ಶುಶ್ರೂಷಕರಾದ ಗುಣೇಶ್ವರಿ, ಅಂಬುಜಾಕ್ಷಿ, ಶಿವಲೀಲಮ್ಮ.ಜಿ.ಎಸ್, ಶಾಂತಿ, ಆಶಾ ಕಾಂಬ್ಳಿ, ಲ್ಯಾಬ್ ಟೆಕ್ನೀಷಿಯನ್ ಕರಿಬಸಪ್ಪ, ಡಿ ಗ್ರೂಪ್ ನೌಕರರಾದ ರಾಜಾಭಕ್ಷ, ರವಿರಾಜ್ ಇತರರು ಲಸಿಕೆ ಹಾಕಿಸಿಕೊಂಡರು. ಮೊದಲ ಲಸಿಕೆ ಪಡೆದ ಡಾ.ಶಶಿಧರ್ ಮತ್ತು ಎರಡನೇ ಲಸಿಕೆ ಪಡೆದ ಡಿ ಗ್ರೂಪ್ ನೌಕರ ರಾಜಭಕ್ಷ ಇವರನ್ನು ಗೌರವಿಸಲಾಯಿತು.

ಈ ವೇಳೆ ದಾವಣಗೆರೆ ತಹಶೀಲ್ದಾರ್ ಗಿರೀಶ್, ಡಿಹೆಚ್‍ಓ ಡಾ.ನಾಗರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಯಪ್ರಕಾಶ್, ತಾಲ್ಲೂಕು ವೈದ್ಯಾಧಿಕಾರಿ, ಇತರೆ ವೈದ್ಯರು, ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending