Connect with us

ದಿನದ ಸುದ್ದಿ

ದಾವಣಗೆರೆ | ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆ

Published

on

ಸುದ್ದಿದಿನ,ದಾವಣಗೆರೆ : 72 ನೇ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಜ.19 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾಧಿಕಾರಿಗಳು ಮಾತನಾಡಿ, ರಾಷ್ಟ್ರ ಹಬ್ಬವಾದ ಗಣರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿರಲಿ. ದೇಶದ ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ನೆನೆಯುವ ದಿನ ಇದಾಗಿದ್ದು, ಅವರ ಶ್ರಮ, ತ್ಯಾಗ, ಬಲಿದಾನಗಳಿಗೆ ನಾವು ಗೌರವ ಸಮರ್ಪಿಸೋಣ ಎಂದರು.

ಜನವರಿ 26 ರ ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಲಿದೆ. ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರೆವೇರಿಸಿ ಬೆಳಿಗ್ಗೆ 09 ಗಂಟೆಯೊಳಗಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಅಂದು ಯಾವುದೇ ಕಾರಣಕ್ಕೂ ಸರ್ಕಾರಿ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ರಜೆ ಎಂದು ಭಾವಿಸದೇ ತಪ್ಪದೇ ಹಾಜರಿರಬೇಕು.

ಕೋವಿಡ್ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಗಣರಾಜೋತ್ಸವ ಆಯೋಜಿಸಲಾಗಿದ್ದು ಕೋವಿಡ್ ನಿಯಮಗಳನ್ನು ಪಾಲಿಸಬೇಕು, ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ, ಹಾಗೂ ಗಣರಾಜ್ಯೋತ್ಸವ ಆಚರಣೆ ಸಂಭಂಧ ಸರ್ಕಾರ ನೀಡುವ ಮಾರ್ಗಸೂಚಿಗಳಿಗನುಗುಣವಾಗಿ ಕಾರ್ಯಕ್ರಮ ಆಚರಿಸಲಾಗುವುದು ಎಂದರು

ಪ್ಲಾಸ್ಟಿಕ್ ಧ್ವಜ ಮತ್ತು ಪ್ಲಾಸ್ಟಿಕ್ ಹೂಗುಚ್ಚಗಳನ್ನು ಮತ್ತು ಪ್ಲಾಸ್ಟಿಕ್ ನೀರಿನ ಬಾಟಲ್‍ಗಳನ್ನು ಯಾವುದೇ ಕಾರಣಕ್ಕೂ ತರುವಂತಿಲ್ಲ. ಇಡೀ ಕಾರ್ಯಕ್ರಮದ ಮೇಲುಸ್ತುವಾರಿಯನ್ನು ಅಪರ ಜಿಲ್ಲಾಧಿಕಾರಿ, ಉಪ ವಿಭಾಗಧಿಕಾರಿ, ತಹಶೀಲ್ದಾರರು, ಪೊಲೀಸ್ ಉಪ ಅಧೀಕ್ಷಕರು, ಮಹಾನಗರಪಾಲಿಕೆ ಆಯುಕ್ತರು ಇವರುಗಳು ನೋಡಿಕೊಂಡು ಕಾರ್ಯಕ್ರಮ ಅರ್ಥಪೂರ್ಣಗೊಳಿಸಲು ಸಹಕರಿಸಬೇಕು.

ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಧ್ವಜ ಸಂಹಿತಿಯನ್ನು ಕಾಪಾಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯವರು ಎಲ್ಲಾ ಶಾಲೆಗಳಲ್ಲಿ 7.30 ಕ್ಕೆ ಧ್ವಜಾರೋಹಣ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ನಗರದ ಪ್ರಮುಖ ವೃತ್ತಗಳಿಗೆ ಸಂಭಂಧಿಸಿದ ಇಲಾಖೆಗಳು ದೀಪಾಲಂಕಾರ ಮಾಡಿಸಬೇಕು, ಪಥ ಸಂಚಲನೆಯಲ್ಲಿ ಭಾಗವಹಿಸುವ ತಂಡಗಳಿಗೆ ಕೇಸರಿ, ಬಿಳಿ,ಹಸಿರು ಮಾಸ್ಕ್ಗಳನ್ನು ಖಾದಿ ಗ್ರಾಮೋದ್ಯೋಗ ಇಲಾಖೆಯವರು ವ್ಯವಸ್ಥೆ ಮಾಡಬೇಕೆಂದರು ಎಂದರು.

ಈ ಹಿಂದೆ ಮಳೆಗಾಲದ ಸಮಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನೀರು ನಿಂತು ಕಾರ್ಯಕ್ರಮಕ್ಕೆ ಅಡಚಣೆಯಾದ ಸಂಧರ್ಭಗಳಿದ್ದು ಕ್ರೀಡಾಂಗಣದಲ್ಲಿ ಜಲ್ಲಿ ಮತ್ತು ಮರಳನ್ನು ಹಾಕಿಸಿ ನೆಲವನ್ನು ಸಜ್ಜುಗೊಳಿಸಬೇಕು ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗಾಮ ಪಂಚಾಯತಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಶಾಲೆಗಳಲ್ಲಿ ಧ್ವಜಾರೋಹಣದ ನಂತರ ಧ್ವಜವನ್ನು ಸಾಯಂಕಾಲದವರೆಗೆ ವ್ಯವಸ್ಥಿತವಾಗಿ ನೋಡಿಕೊಳ್ಳುವಂತೆ ಎಲ್ಲಾ ಗ್ರಾಮ ಪಂಚಾಯತಿಯ ಕಾರ್ಯದಶಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿ, ಪ್ರತೀ ವರ್ಷದಂತೆ ಈ ವರ್ಷವೂ ಕಾರ್ಯಕ್ರಮವನ್ನು ನಿಗದಿಪಡಿಸಿದ ಇಲಾಖೆಯವರು ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ಪ್ರಮುಖ ಖಾಸಗಿ ಕಚೇರಿಗಳ ಮೇಲೆ ಜ.25 ಮತ್ತು 26 ರಂದು ವಿದ್ಯುತ್ ದೀಪಾಲಂಕಾರ ಮಾಡಿಸಬೇಕು ಎಂದರು.

ಕಾರ್ಯಕ್ರಮಕ್ಕೆ ಪೂರಕವಾಗಿ ಮಹಾನಗರಪಾಲಿಕೆಯವರು ವೇದಿಕೆ ನಿರ್ಮಾಣ, ಕುರ್ಚಿ, ಶಾಮಿಯಾನ, ಧ್ವನಿ ವರ್ಧಕ, ಕಾರ್ಪೆಟ್, ಹೂವಿನ ಹಾರ ವ್ಯವಸ್ಥೆಯನ್ನು ಮಾಡಬೇಕು. ತೋಟಗಾರಿಕೆ ಇಲಾಖೆಯವರು ವೇದಿಕೆ ಮುಂಭಾಗ ಹೂ ಅಲಂಕಾರ ಮತ್ತು ಹೂವಿನ ಕುಂಡಗಳನ್ನು ಇರಿಸಬೇಕು.

ಉಪ ವಿಭಾಗಧಿಕಾರಿಗಳು ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಪರಿಶೀಲಿಸಿ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಬೇಕು. ತಾ.ಪಂ ಕಾರ್ಯನಿರ್ವಾಹಣಾಧಿಕಾರಿಗಳು ಮುದ್ರಿಸಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆಯವರು ಭದ್ರತೆ ಮತ್ತು ಸುರಕ್ಷತೆಯನ್ನು ಒದಗಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಭೂ-ವಿಜ್ಞಾನ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರುಗಳು ಉಪಹಾರದ ವ್ಯವಸ್ಥೆ ಮಾಡಬೇಕು.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿ/ನೌಕರರಿಗೆ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕೆಂದ ಅವರು ಎಲ್ಲ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಶಿಸ್ತಿನಿಂದ ನಿರ್ವಹಿಸುವ ಮೂಲಕ ಗಣರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕೆಂದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಸಮಾಜ ಕಲ್ಯಾಣಾಧಿಕಾರಿ ರೇಷ್ಮಾ ಕೌಸರ್,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ.ಜಿ, ಡಿಡಿಪಿಐ ಪರಮೇಶ್ವರಪ್ಪ, ಆಹಾರ ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.

ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.

ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.

ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

Published

on

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.

ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ

ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.

ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?

ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.

ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.

ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ನಿಮ್ಮದು ದರೋಡೆಕೋರ ಸರಕಾರವಲ್ಲವೇ?

ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..

ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending