ಕ್ರೀಡೆ
ಫೆ. 5 ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ : ಕೋವಿಡ್ ಮಾರ್ಗಸೂಚಿ ಅನುಸರಿಸಿ ಸ್ಪರ್ಧೆಗಳ ಆಯೋಜನೆ : ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೌಕರರ ಸಂಘದ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಫೆ. 5 ರಿಂದ ಮೂರು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ಬಾರಿ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆ. 5, 6 ಮತ್ತು 7 ರಂದು ಮೂರು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಅನುಸರಿಸಿ, ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಗಿದೆ.
ಕ್ರೀಡಾಕೂಟ ಆಯೋಜನೆ ಸ್ಥಳಗಳಲ್ಲಿ ಕಡ್ಡಾಯವಾಗಿ ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು. ಅಧಿಕಾರಿಗಳು ಹಾಗೂ ನೌಕರರ ಸಂಘದವರು ಸರ್ಕಾರದ ಶಿಷ್ಠಾಚಾರದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳನ್ನು ಸಮಾರಂಭಕ್ಕೆ ಆಹ್ವಾನಿಸಬೇಕು.
ನೌಕರರ ಸಂಘದ ತಾಲ್ಲೂಕು ಘಟಕಗಳು ಆಯಾ ತಾಲ್ಲೂಕಿನಲ್ಲಿ ಸಭೆ ನಡೆಸಿ, ಕ್ರೀಡಾಕೂಟ ಆಯೋಜನೆ ಬಗ್ಗೆ ಮಾಹಿತಿ ದೊರೆಯುವಂತೆ ಮಾಡಿ, ಎಲ್ಲ ನೌಕರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಬೇಕು. ಕ್ರೀಡಾಕೂಟದ ಯಶಸ್ವಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅಗತ್ಯ ಸಹಕಾರ, ನೆರವು ನೀಡಲಿದೆ. ಒಟ್ಟಾರೆ ಕ್ರೀಡಾಕೂಟದಲ್ಲಿ ನೌಕರರು ಸಂತಸ, ಸಂಭ್ರಮದಿಂದ ಪಾಲ್ಗೊಳ್ಳುವಂತಾಗಬೇಕು.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ವ್ಯವಸ್ಥಿತ ರೀತಿಯಲ್ಲಿ ಊಟೋಪಹಾರ, ಟೀಶರ್ಟ್ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ತಾವೂ ಸಹ ಷಟಲ್ ಬ್ಯಾಡ್ಮಿಂಟನ್ ಆಟಗಾರನಾಗಿದ್ದು, ಖುದ್ದು ಸ್ಪರ್ಧೆಯಲ್ಲಿ ಪಾಲ್ಗೊಂಡು ನೌಕರರಿಗೆ ಪ್ರೋತ್ಸಾಹಿಸುತ್ತೇನೆ ಎಂದು ಹೇಳಿದರು.
ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮಾತನಾಡಿ, ಕ್ರೀಡಾಕೂಟ ಆಯೋಜನೆಗೆ ಸರ್ಕಾರದಿಂದ 1.5 ಲಕ್ಷ ರೂ. ಹಾಗೂ ಜಿಲ್ಲಾ ಪಂಚಾಯತ್ನಿಂದ 3 ಲಕ್ಷ ಸೇರಿದಂತೆ 4.5 ಲಕ್ಷ ರೂ. ಅನುದಾನದ ಲಭ್ಯತೆಯಾಗಲಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಯಸುವ ನೌಕರರು ತಮ್ಮ ಹೆಸರು ಹಾಗೂ ವಿವರದೊಂದಿಗೆ ನೊಂದಣಿ ಮಾಡಿಸಲು ಜ. 28 ಕೊನೆಯ ದಿನವಾಗಿದೆ. ನಿಗದಿತ ಅವಧಿಯೊಳಗೆ ನೊಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಕೊನೆಯ ಹಂತದಲ್ಲಿ ಸ್ಪರ್ಧೆಗಳಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶವಿಲ್ಲ ಎಂದರು.
ಈ ಬಾರಿಯ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆ ಅಂಗವಾಗಿ, ನೌಕರರ ಸಮುದಾಯ ಭವನದಲ್ಲಿ ಸ್ಪರ್ಧೆಗಳ ಆಯೋಜನೆ ಬಳಿಕ ಸಂಜೆ ವೇಳೆ ಖ್ಯಾತ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಏಪ್ರಿಲ್ 21 ರ ದಿನವನ್ನು ರಾಜ್ಯ ಸರ್ಕಾರಿ ನೌಕರರ ದಿನವನ್ನಾಗಿ ಆಚರಿಸಲು ಸರ್ಕಾರ ಆದೇಶಿಸಿದ್ದು, ಅದರಂತೆ ಅತ್ಯುತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಗಣರಾಜ್ಯೋತ್ಸವ ಸಮಾರಂಭದ ಬದಲಿಗೆ ಏ. 21 ರಂದು ಜರುಗುವ ನೌಕರರ ದಿನಾಚರಣೆಯಂದು ಪ್ರದಾನ ಮಾಡುವಂತೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮನವಿ ಮಾಡಿದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಅವರು ಮಾತನಾಡಿ, ನೌಕರರ ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆಗಳು ವಯೋಮಿತಿ ಆಧಾರದಲ್ಲಿ ಜರುಗಲಿವೆ. ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್, ಫುಟ್ಬಾಲ್, ಹಾಕಿ, ಕ್ರಿಕೆಟ್, ಬ್ಯಾಸ್ಕೇಟ್ಬಾಲ್ ಮತ್ತಿತರೆ ಕ್ರೀಡೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿ, ಕುಸ್ತಿ- ಆಂಜನೇಯ ಬಡಾವಣೆಯ ಕುಸ್ತಿ ಒಳಾಂಗಣ ಕ್ರೀಡಾಂಗಣ, ಚೆಸ್, ಕೇರಂ, ಷಟಲ್ ಬ್ಯಾಡ್ಮಿಂಟನ್- ಎಸ್ಎಸ್ ಬಡಾವಣೆಯ ನೇತಾಜಿ ಸುಭಾಷ್ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅಲ್ಲದೆ ಸಾಂಸ್ಕøತಿಕ ಸ್ಪರ್ಧೆಗಳನ್ನು ರಿಂಗ್ ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸಿದ್ದಲಿಂಗಸ್ವಾಮಿ, ಖಜಾಂಚಿ ಕಲ್ಲೇಶ್ವರಪ್ಪ, ಸಂಘಟನಾ ಕಾರ್ಯದರ್ಶಿ ಮಂಜಮ್ಮ, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಜಗಳೂರು- ಎನ್.ಸಿ. ಅಜ್ಜಯ್ಯ, ಹೊನ್ನಾಳಿ-ಚಂದ್ರಶೇಖರ್, ಹರಿಹರ-ರೇವಣಸಿದ್ದಪ್ಪ, ನ್ಯಾಮತಿ-ನಾಗರಾಜ್ ಹಾಗೂ ಚನ್ನಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ ಮುಂತಾದವರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ
ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.
ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.
ಅಸಾಧಾರಣ ಬೌಲಿಂಗ್ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ
17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.
ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ10 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ2 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

