Connect with us

ಬಹಿರಂಗ

ಸಂವಿಧಾನ ದಿನಾಚರಣೆ ಹೇಗೆ ಗಣರಾಜ್ಯೋತ್ಸವವಾಯಿತು..?

Published

on

  • ಪರಶುರಾಮ್. ಎ

ಭಾರತದ ಪ್ರಜೆಗಳಾದ ನಮಗೆ ಜನವರಿ 26 ಹರ್ಷೋದ್ಘಾರದ ದಿನವೆಂದು ನೆನೆಯಲು ಖುಷಿ ಮತ್ತು ಸಂಕಟಗಳೆರಡನ್ನು ಹೊತ್ತು ಈ ಲೇಖನದಲ್ಲಿ ವಿಚಾರಗಳನ್ನು ಮಂಡಿಸುತ್ತೇನೆ. ಈ ಅವಕಾಶವನ್ನು ದೇಶ ಸೇವೆಗಾಗಿ ಎಂದೆ ನಾನು ಭಾವಿಸಿದ್ದೇನೆ. ಇತಿಹಾಸದಲ್ಲಿ ಮರೆಮಾಚಲ್ಪಟ್ಟ ಘಟನೆಯೊ ದುರಂತವೋ ಇಂದು ನಿಮಗೆ ಹಂಚಕೊಳ್ಳಲಿದ್ದೇನೆ.

ಜನವರಿ 26 ರಂದು ಎಲ್ಲೆಡೆಯು ಕೇಳಿ ಬರುತ್ತೀರುವುದೇನೆಂದೆರೆ ‘ಗಣರಾಜ್ಯ’ ಗಣರಾಜ್ಯ ದಿನವೆಂದು ಹಾಗೆಂದರೇನು ಎಂದು ಸ್ವಲ್ಪ ಗಮನ ಹರಿಸಿದರೆ ಆಗಸ್ಟ್ 15,1947 ರಂದು ಸ್ವಾತಂತ್ರ್ಯ ಬಂದಿದ್ದರಿಂದ ಸ್ವಾತಂತ್ರ್ಯ ದಿನಾಚರಣೆ, ನವೆಂಬರ್ 01.1956 ರಂದು ಯಾವ ದಿನ? ‘ಕನ್ನಡ ರಾಜ್ಯೋತ್ಸವ ದಿನ’. ಅಕ್ಟೋಬರ್ 02ಗಾಂಧೀ ಜಯಂತಿ ಹೀಗೆ ಜನವರಿ26 ರಂದು ಯಾವ ದಿನ? ಗಣರಾಜ್ಯ ದಿನವೇ? ಇದು ಮಾತ್ರ ಹೇಗೆ ಗಣರಾಜ್ಯ ದಿನವಾಯಿತು? ಸ್ವಲ್ಪ ಇವುಗಳ ಅರ್ಥದತ್ತ ಗಮನ ಹರಿಸೋಣಾ.

ಗಣ ಎಂದರೆ ‘ಪ್ರಜೆಗಳು’ ಎಂದು, ರಾಜ್ಯ ಎಂದರೆ ‘ಪ್ರಭುತ್ವ’. ಎಂಬರ್ಥವಲ್ಲವೇ ಅಂದರೆ ಈ ದಿನವನ್ನು ‘ಪ್ರಜಾಪ್ರಭುತ್ವ ದಿನ’ ಎಂದಾಯ್ತಲ್ಲವೇ?. ಇದರರ್ಥ ಇಂಗ್ಲೀಷ್‌ನಲ್ಲಿ ಏನಿದೆ ಎಂದರೆ ರಿಪಬ್ಲಿಕ್ ಅಂದರೆ ‘ಡೆಮೊಕ್ರಸಿ’ ಎಂದು. ಡೆಮೊ ಎಂದರೆ “ಪೀಪಲ್” ಹಾಗೂ ಕ್ರಸಿ ಯು “ರೂಲ್” ಎಂಬ ಅರ್ಥವನ್ನು ನೀಡುತ್ತದೆ. ಮತ್ತೊಂದು ಅರ್ಥ ಹೀಗಿದೆ “ಯಾವ ದೇಶವು ಸ್ವತಂತ್ರವಾಗಿದ್ದು, ಲಿಖಿತ ಸಂವಿಧಾನವನ್ನು ಹೊಂದಿದ್ದು ಅದರಂತೆ ರಾಜ್ಯದ ಆಡಳಿತವನ್ನು ನಡೆಸುತ್ತದೋ ಅಂತಃ ದೇಶವನ್ನು ಗಣರಾಜ್ಯವೆಂದು ಕರೆಯಲಾಗುತ್ತದೆ” ಅಂದರೆ ಜನಗಳ ಆಳ್ವಿಕೆ ಎಂದರ್ಥ.

ಹೀಗೇ ಕನ್ನಡದಲ್ಲಿ ‘ಪ್ರಜಾಪ್ರಭುತ್ವ ದಿನ’ ಇಂಗ್ಲೀಷ್‌ನಲ್ಲಿಯೂ ಜನರ ಆಳ್ವಿಕೆಯೆಂಬ ಅರ್ಥವಿರುವಾಗ ಒಟ್ಟಾರೆಯಾಗಿ “ಪ್ರಜಾಪ್ರಭುತ್ವ ಜಾರಿಗೆ ತಂದ ದಿನ” ಎನ್ನುವ ಅರ್ಥ ಬರುತ್ತದೆ. ಹಾಗಾದರೆ ಈ ದೇಶಕ್ಕೆ ಪ್ರಜಾಪ್ರಭುತ್ವ ಜಾರಿಗೆ ಬಂದಿದ್ದು ಅದು 26.ಜನವರಿ.1950 ಅಲ್ಲವೇ ಯಾವುದರ ಮೂಲಕ ಪ್ರಜಾಪ್ರಭುತ್ವ ಜಾರಿಗೆ ಬಂತು? “ಸಂವಿಧಾನ” ಜಾರಿಯಾಗುವ ಮೂಲಕ ಹೌದಲ್ಲವೇ? ಹಾಗಾದರೆ ನೇರವಾಗಿ ಈ ದಿನವನ್ನು “ಸಂವಿಧಾನ ದಿನಾಚರಣೆ” ಎಂದು ಕರೆಯಲು ಅಡ್ಡಿಯಾಗುವ ಅಂಶಗಳೇನು? ಈ ಬಗ್ಗೆ ವಿಚಾರಿಸಿದಾಗ ಅಂದಿನ ದಿನವನ್ನು ನೇರವಾಗಿ ಸಂವಿಧಾನ ದಿನಾಚರಣೆ ಎಂದು ಕರೆದರೆ ಆ ದಿನ ಇಡೀ ಭಾರತದ121 ಕೋಟಿ ಜನರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‌ರವರ ತ್ಯಾಗ.

ಸೇವೆಗಳ ಬಗ್ಗೆ ಚಿಂತನೆ ಮಾಡಿ ಬಿಡುತ್ತಾರಲ್ಲ ಎಂಬ ಹುನ್ನಾರದಿಂದ ಇರಬಹುದೇ ಎಂಬ ಪ್ರಶ್ನೆ ಮೂಡುವುದು. ಈ ದಿನದ ಕ್ರೆಡಿಟ್ ಡಾ.ಬಿ.ಆರ್.ಅಂಬೇಡ್ಕರ್‌ರವರಿಗೆ ತಪ್ಪಿಸಬಹುದಲ್ಲ ಎನ್ನುವ ಏಕೈಕ ಉದ್ದೇಶದಿಂದ ಪರೋಕ್ಷ ಅರ್ಥದಲ್ಲಿ ‘ಗಣರಾಜ್ಯದಿನ’ ಎಂದು ನಮಗೆ ಇತಿಹಾಸಕಾರರು. ಪಂಡಿತರೆನಿಸಿಕೊಂಡುವವರು ಪರಿಚಯಿಸುತ್ತ ಬಂದಿದ್ದಾರೆ.
ಇಂದಿನ ಸಾಕಷ್ಟು ಮಂದಿ “ಗಣರಾಜ್ಯ ವೆಂದರೆ ಭಾಷಾವಾರು ಪ್ರಾಂತ್ಯಗಳನ್ನು ವಿಂಗಡಿಸಿ ಎಲ್ಲಾ ರಾಜ್ಯಗಳನ್ನು ಒಕ್ಕೂಟದ ವ್ಯವಸ್ಥೆ ಒಳಗಡೆ ತಂದ ದಿನ ಎಂದು ಬಹುತೇಕರು ಭಾಷಣ ಮಾಡುತ್ತಾರೆ. ಹಾಗೇ ನಂಬಿಸಿದ್ದಾರೆ ಕೂಡಾ..!

ಅಷ್ಟಕ್ಕೂ ಭಾಷಾವಾರು ಪ್ರಾಂತ್ಯಗಳ ವಿಂಗಡಣೆ ನಡೆದದ್ದು ಜನವರಿ 26.1950ರಲ್ಲಿಯೇ? ಇಲ್ಲ ನವೆಂಬರ್ 1.1956 ರಲ್ಲಿ ಇದರಿಂದ ಮೊದಲ ರಾಜ್ಯವಾಗಿ ಆಂಧ್ರಪ್ರದೇಶ ಉದಯವಾಯಿತು. ಇಲ್ಲಿಂದ ಕರ್ನಾಟಕದ ರಾಜ್ಯ ಸ್ಥಾಪನೆಗೆ ನಾಂದಿಯಾಯಿತು. ನೋಡಿ ಇತಿಹಾಸದಲ್ಲಿ ಎಂತಹ ಗೊಂದಲವನ್ನು ತುರುಕಿಸಿದ್ದಾರೆ!. ನಮಗೆ ಅಂದರೆ ಭಾರತದ ಪ್ರಜೆಗಳಿಗೆ ಅನ್ಯಾಯ ಮಾಡಿದ್ದಾರೆ. ಇದೊಂದು ವ್ಯವಸ್ಥಿತ ಪಿತೂರಿಯೊ ಎಂದು ನಮಗೇಕೆ ಅನಿಸುತ್ತಿಲ್ಲ?

1950ರಿಂದಲೂ ಇಂತಹ ಅನ್ಯಾಯವನ್ನು ಮಾಡುತ್ತಿರುವ ಈ ದಿನದ ಮಹತ್ವವನ್ನು ಮರೆಮಾಚಿ ದೂರವಿಟ್ಟು ಜನಸಮೂಹದಿಂದ ಡಾ.ಬಿ.ಆರ್.ಅಂಬೇಡ್ಕರರ ಕೊಡುಗೆಗಳನ್ನು ದೂರವಿಟ್ಟು ರಾಜ್ಯಭಾರ ನಡೆಸಿರುವ ರಾಜಕಿಯ ಪಕ್ಷಗಳಿಗೆ ಈ ಪ್ರಶ್ನೆ ಎಲ್ಲರೂ ಕೇಳಲೇ ಬೇಕು. ಅಂಬೇಡ್ಕರರ ಕೊಡುಗೆ ಸಂವಿಧಾನಕ್ಕೆ ಏನೆಂದು ಗಮನಿಸಿದ ಸಂವಿಧಾನ ಸಭೆಯ ಉಪಾಧ್ಯಕ್ಷರೂ, ಕರಡು ರಚನಾ ಸಮಿತಿಯ ಸದಸ್ಯರು ಆಗಿದ್ದ ಶ್ರೀ ಟಿ.ಟಿ.ಕೃಷ್ಣಮಾಚಾರಿ ಹೇಳುತ್ತಾರೆ “ಸಂವಿಧಾನ ಕರಡು ಸಮಿತಿಗೆ 7 ಜನ ಸದಸ್ಯರಲ್ಲಿ ಒಬ್ಬರು ಮಧ್ಯದಲ್ಲಿ ರಾಜೀನಾಮೆ ನೀಡಿದರು ಮತ್ತು ಆ ಜಾಗವನ್ನು ತುಂಬಲಾಯಿತು ಎಂಬುದು ಈ ಸಭೆಗೆ ತಿಳಿದಿರಬಹುದು. ಆದರೆ ಒಬ್ಬರು ಮರಣವನ್ನು ಹೊಂದಿದರು ಮತ್ತೆ ಆ ಜಾಗಕ್ಕೆ ಯಾರನ್ನೂ ತುಂಬಲಿಲ್ಲ.

ಮತ್ತೊಬ್ಬರು ಅಮೇರಿಕಾದಲ್ಲಿ ಇದ್ದರು. ಅವರ ಜಾಗವನ್ನು ಬೇರೆಯವರಿಂದ ತುಂಬಲಿಲ್ಲ. ಮತ್ತೊಬ್ಬರು ರಾಜ್ಯದ ಆಡಳಿತ ಕಾರ್ಯಗಳಲಿ ನಿರತರಾಗಿದ್ದರು. ಮತ್ತೆ ಬೇರೆ ಒಬ್ಬರು ದೂರದ ದೆಹಲಿಯಲ್ಲಿ ಉಳಿದರು: ಈ ಕಾರಣ ಅವರ ಆರೋಗ್ಯ ಅವರನ್ನು ಅನುಮತಿಸಲಿಲ್ಲ. ನಂತರ ಸಂವಿಧಾನದ ಕರಡನ್ನು ರಚಿಸುವ ಭಾರ ಡಾ.ಬಿ.ಆರ್. ಅಂಬೇಡ್ಕರರವರ ಮೇಲೆ ಬಿತ್ತು ಅವರು ಆ ಕಾರ್ಯವನ್ನು ಒಂಟಿಯಾಗಿ ನಿಭಾಯಿಸಿದ ರೀತಿ ಶ್ಲಾಘನೀಯ ಮತ್ತು ನಾವೆಲ್ಲ ಯಾವುದೇ ಅನುಮಾಮಗಳಿಲ್ಲದೆ ಅವರಿಗೆ ಋಣಿಯಾಗಿರಬೇಕು”.

ಸಂವಿಧಾನ ಸಭೆಯ ಸದಸ್ಯರಾಗಿದ್ದ, ಸಂವಿಧಾನ ರಚನೆಗೆ ೧೫ ಜನ ಮಹಿಳೆಯರು ಸಹ ಕೊಡುಗೆಗಳನ್ನು ನೀಡಿರುವುದು ಒಂದು ಶ್ಲಾಘನೀಯ. ಹೀಗೆ ಸಂವಿಧಾನ ಕರಡು ರಚನೆ ಸಮಿತಿಯ ಅಧ್ಯಕ್ಷರಾದ ಡಾ. ಬಿ.ಆರ್ ಅಂಬೇಡ್ಕರರವರು ಸಂವಿಧಾನ ಸಭೆಯ ಅಧ್ಯಕ್ಷರಾದ ಡಾ.ರಾಜೇಂದ್ರ ಪ್ರಸಾದ್‌ರವರಿಗೆ1949 ನವೆಂಬರ್ 25ರಂದು ಸಲ್ಲಿಸಿದರು. ಸಂವಿಧಾನ ಸಭೆಯ 284 ಸದಸ್ಯರು ಸಹಿ ಮಾಡಿ ನವೆಂಬರ್ 26.1949 ರಂದು ಅಂಗೀಕರಿಸಲಾಯಿತು. ಇದನ್ನು ನಮ್ಮ ಭಾರತ ಸಂವಿಧಾನದ ಪ್ರಸ್ತಾವನೆಯಲ್ಲಿಯೇ ಕಾಣಬಹುದು.

1947 ಆಗಸ್ಟ್ 15ರಂದು ಬ್ರಿಟಿಷರಿಂದ ಸ್ವತಂತ್ರವಾದ ಭಾರತವು, 1950ರ ಜನವರಿ 26ರಂದು ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವನು ಜಾರಿಗೆ ತರುವುದರ ಮೂಲಕ ಗಣರಾಜ್ಯವಾಯಿತು. ಹಿಂದೆ1930 ರ ಜನವರಿ 26 ರಂದು ‘ಪೂರ್ಣ ಸ್ವರಾಜ್ಯ’ ಬೇಕೆಂಬ ಹೋರಾಟದ ಪ್ರಾರಂಭವಾದ ಕಾರಣ ಇದರ ನೆನಪಿಗಾಗಿ 1950.ಜನವರಿ 26ರಂದು ನಮ್ಮ ಸಂವಿಧಾನ ಜಾರಿಗೆ ತರಲಾಯಿತು.

ಭಾರತದ ಸಂವಿಧಾನ ರಚನೆಯಲ್ಲಿ ವಿವಿಧ ದೇಶಗಳಿಂದ ಹಲವಾರು ಅಂಶಗಳನ್ನು ಎರವಲು ಪಡೆದು ಒಟ್ಟು 2ವರ್ಷ. 11ತಿಂಗಳು. 18ದಿನಗಳು ಸಂವಿಧಾನ ರಚನೆಗೆ ಕಾಲಾವಕಾಶ ತಲುಪಿತು. ನಂತರ ಇತ್ತೀಚಿನ ನಾಲ್ಕು ವರ್ಷಗಳಲ್ಲಿ ನವೆಂಬರ್ 26ರಂದು ಸಂವಿಧಾನ ದಿನವನ್ನಾಗಿ ಆಚರಿಸಿಲಾಗುತ್ತಿದೆ. ಹಾಗಾದರೆ ನವೆಂಬರ್26ಕ್ಕೂ. ಜನವರಿ 26ರ ಆಚರಣೆಗು ವ್ಯತ್ಯಾಸಗಳೇನು ಎಂಬ ಷಡ್ಯಂತ್ರ ಅರಿಯಬೇಕಾದ್ದು ನಮ್ಮಗಳ ಕರ್ತವ್ಯ. ಸಂವಿಧಾನದ ಪ್ರಸ್ತಾವನೆಯಲ್ಲಿ ನವೆಂಬರ್‌ನಲ್ಲಿ ಸಂವಿಧಾನವನ್ನು ನಮಗೆ ನಾವೆ ಅಂಗೀಕರಿಸಿಕೊಂಡಿರುವಾಗ ಇನ್ನೊಂದು ದಿನವನ್ನು ಬೇರೆ ಹೆಸರಿನಿಂದ ಈ ದಿನದ ಮಹತ್ವ ಮತ್ತು ಅಂಬೇಡ್ಕರರ ಕೊಡುಗೆ ಮರೆ ಮಾಚಿರುವ ಕಾರಣ ಅರಿಯಬೇಕು.

ಹೀಗೆ ಇತಿಹಾಸದಲ್ಲಿ ಅದೆಷ್ಟೋ ಮುಚ್ಚಿಡಲ್ಪಟ್ಟ ವಿಷಯಗಳಿವೆ, ಈಗ ನಮ್ಮ ಕರ್ತವ್ಯ ಏನೆಂದರೆ ಸಂವಿಧಾನವೇ ಅವಕಾಶ ಮಾಡಿಕೊಟ್ಟಿರುವಾಗ ವೈಜ್ಞಾನಿಕ ಮನೋಭಾವನೆ ಹೊಂದಿ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರದಡಿಯಲ್ಲಿ ಸಂಶೋಧನೆಯ ಮೂಲಕ ಹೊರ ತಂದು ಜಗತ್ತಿಗೆ ತಿಳಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಆದ್ದರಿಂದ ಓದುಗರಿಗೆ ಹಾಗೂ ವಿದ್ಯಾರ್ಥಿ ಮತ್ತು ಯುವ ಸಮುದಾಯಕ್ಕೆ ನನ್ನ ಮನವಿಯೇನೆಂದರೆ ಸರಿಯಾದ ಓದು ಇಂದಿನ ದಿನಗಳಲ್ಲಿ ಅವಶ್ಯಕವಾಗಿದೆ. ಅದರಲ್ಲೂ ಸಂವಿಧಾನ. ಮೀಸಲಾತಿ. ರಾಷ್ಟ್ರಭಕ್ತಿ ಹೀಗೆ ಇನ್ನೂ ಹಲವು ವಿಚಾರಗಳ್ಲಿ ನಮಗೆ ಗೊಂದಲವನ್ನು ಸೃಷ್ಠಿಸಿದ್ದಾರೆ.

ಆದ್ದರಿಂದ ವಿದ್ಯಾರ್ಥಿ ಮತ್ತು ಯುವ ಸಮುದಾಯಕ್ಕೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್‌ರವರ “ಸಂವಿಧಾನ ಓದು” ಎಂಬ ಪುಸ್ತಕ ಮತ್ತು ‘ಭಾರತದ ಸಂವಿಧಾನ’ ಓದಿ ಅರ್ಥೈಸಿಕೊಳ್ಳಬೇಕು ಎಂದು ಹೇಳುತ್ತೇನೆ. ಏಕೆಂದರೆ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್‌ದಾಸ್‌ರವರು ಹೇಳುವಂತೆ “ನಾವೆಲ್ಲರೂ ನಮ್ಮ ಸಂವಿಧಾನ ಓದಬೇಕು, ಅರ್ಥೈಸಬೇಕು.

ಸಂವಿಧಾನದ ಮೂಲತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಅದರಂತೆ ನಡೆದುಕೊಳ್ಳಬೇಕು. ಸಂವಿಧಾನದ ಆಶಯಗಳನ್ನು ಬದುಕಿನ ವಿಧಾನವಾಗಿಸಿಕೊಳ್ಳಬೇಕು. ಸಂವಿಧಾನದ ಪ್ರತಿಯೊಂದು ಆಶಯವನ್ನು ಅನುಷ್ಠಾನಗೊಳಿಸಲಿಕ್ಕೆ ಪ್ರಯತ್ನಿಸಬೇಕು. ಸಂವಿಧಾನ ಎದುರಿಸುತ್ತಿರುವ ಸವಾಲುಗಳನ್ನು ಹಿಮ್ಮೆಟ್ಟಿಸಬೇಕು”.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading

ದಿನದ ಸುದ್ದಿ

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

Published

on

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ‘ಬುಲ್ಡೋಜರ್’ ಆ್ಯಕ್ಷನ್: ₹25 ಕೋಟಿ ಮೌಲ್ಯದ ಆಸ್ತಿ ವಶ!

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ

  • 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
    ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!

http://Visit : www.suddidina.com

ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:

ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.

https://x.com/BDAOfficialGok/status/2092121239175512436?s=20

ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:

ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್‌ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ

ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.

ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

Continue Reading

Trending