Connect with us

ದಿನದ ಸುದ್ದಿ

ಭಾಗ-1 | ದೆಹಲಿ ಹೋರಾಟದ ಕೆಲವು ಅಸಲೀ ಸಂಗತಿಗಳು; ಕಿಸಾನ್ ಮೋರ್ಚಾ ಏನು ಹೇಳುತ್ತಿದೆ..?

Published

on

ದೆಹಲಿಯ ಸುತ್ತ ನಡೆಯುತ್ತಿರುವ ರೈತ ಹೋರಾಟದ ಎಲ್ಲಾ ವಿವರಗಳೂ, ಅದನ್ನು ಅಭಿಮಾನದಿಂದ ಬೆಂಬಲಿಸುವ ನಮ್ಮೆಲ್ಲರಿಗೆ ಗೊತ್ತಿರುವುದು ಸಾಧ್ಯವಿಲ್ಲ. ನಿಜ ಏನೆಂದರೆ, ಅಲ್ಲೇ ಹತ್ತಿರದಲ್ಲಿರುವವರಿಗೂ ಎಲ್ಲವೂ ಗೊತ್ತಾಗಿರುತ್ತದೆಂದು ಹೇಳುವುದು ಸಾಧ್ಯವಿಲ್ಲ. ಹೀಗಿರುವಾಗ ಮೊನ್ನೆ 26ರಂದು ನಡೆದ ಘಟನೆಯ ಕುರಿತೂ ಹಲವರಿಗೆ ಅನುಮಾನಗಳು, ಪ್ರಶ್ನೆಗಳು ಬರುವುದು ಸಹಜ.

ಹಾಗಾಗಿ ಕೆಲವು ಪ್ರಶ್ನೋತ್ತರಗಳ ಮುಖಾಂತರ ಸಂಪೂರ್ಣ ಮಾಹಿತಿಯನ್ನು ತಿಳಿಸಲು ಇಲ್ಲಿ ಪ್ರಯತ್ನಿಸಲಾಗಿದೆ. ಕಳೆದ ಒಂದು ತಿಂಗಳಿಂದ ದೆಹಲಿಯಲ್ಲಿರುವ ನಮ್ಮ ಮೂವರು ಮಾಧ್ಯಮ ಕಾರ್ಯಕರ್ತರು ನೀಡಿದ ಮಾಹಿತಿ, ಜನವರಿ 26ರಂದು ರೈತರ ಒಂದು ಗುಂಪು ಸಿಂಘು ಗಡಿಯಿಂದ ಪೂರ್ವನಿಗದಿತ ಸಮಯಕ್ಕಿಂತ ಮುಂಚೆಯೇ ಹೊರಟಾಗಿನಿಂದ ಕೆಂಪು ಕೋಟೆಯ ಬಳಿ ಧ್ವಜ ಹಾರಿಸುವತನಕವೂ ಅದನ್ನು ಫಾಲೋ ಮಾಡಿದ ಮೂವರು ಪತ್ರಕರ್ತರು ನೀಡಿದ ಮಾಹಿತಿ ಮತ್ತು ಈ ಹೋರಾಟದ ಮುಂಚೂಣಿಯಲ್ಲಿರುವ ದರ್ಶನ್ ಪಾಲ್, ಯೋಗೇಂದ್ರ ಯಾದವ್, ಜಗಮೋಹನ್ ಮುಂತಾದವರು ಹಾಗೂ ಅವರ ಸಂಗಾತಿಗಳಿಂದ ಪಡೆದ ಮಾಹಿತಿಯು ಇದಕ್ಕೆ ಆಧಾರವಾಗಿದೆ.

ಪ್ರಶ್ನೆ: ದೆಹಲಿಯಲ್ಲಿ ಬಂದು ಕುಳಿತ ಈ ರೈತ ಹೋರಾಟಕ್ಕೆ ಕರೆ ನೀಡಿದವರಾರು? ಇದರ ನೇತೃತ್ವ ಯಾರದ್ದು?

ಉತ್ತರ: 2018ರಿಂದಲೇ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಎಐಕೆಎಸ್ಸಿಸಿ-ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿ (ಆರಂಭವಾದಾಗಲೇ 170 ರೈತ ಸಂಘಟನೆಗಳು ಇದರ ಭಾಗವಾಗಿದ್ದವು, ಈಗ 300ಕ್ಕೂ ಹೆಚ್ಚಿವೆ) ನವೆಂಬರ್ 25 & 26ಕ್ಕೆ ದೆಹಲಿ ಚಲೋ ಎಂದು ಕರೆ ನೀಡಿತ್ತು. ಈ ಸಮನ್ವಯ ಸಮಿತಿಯ ಪ್ರಕ್ರಿಯೆಯನ್ನು ಆರಂಭಿಸಿದ್ದು ಯೋಗೇಂದ್ರ ಯಾದವ್ ಅವರಾದರೂ, ಇದರಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಎರಡೂ ಗುಂಪುಗಳು, ಹಲವು ಬಿಕೆಯುಗಳು (ಭಾರತೀಯ ಕಿಸಾನ್ ಯೂನಿಯನ್), ಎಡಪಕ್ಷಗಳ ರೈತಸಂಘಗಳು ಸೇರಿದಂತೆ ಹಲವಾರು ಸಂಘಟನೆಗಳು ಇವೆ.

ಎಐಕೆಎಸ್ಸಿಸಿ ಕರೆ ನೀಡುವ ಹೊತ್ತಿಗೆ ಪಂಜಾಬಿನಲ್ಲಿ ಜೂನ್ ತಿಂಗಳಿಂದ ಶುರುವಾಗಿ ತೀವ್ರಗೊಳ್ಳುತ್ತಿದ್ದ ರೈತ ಹೋರಾಟವು ಆ ರಾಜ್ಯದ ಮಟ್ಟಿಗೆ ತಾರ್ಕಿಕ ಅಂತ್ಯ ಕಂಡಿತ್ತು. ಏಕೆಂದರೆ ಅಲ್ಲಿನ ರಾಜ್ಯ ಸಕರ್ಾರವು ವಿಧಾನಸಭೆಯಲ್ಲಿ ಒಕ್ಕೂಟ ಸಕರ್ಾರದ ಕಾಯ್ದೆಗಳಿಗೆ ವಿರುದ್ಧವಾಗಿ ಸರ್ವಾನುಮತದಿಂದ ಬೇರೆ ಕಾಯ್ದೆಗಳನ್ನು ಅಂಗೀಕರಿಸಿಯಾಗಿತ್ತು. ಹಾಗಾಗಿ ಇನ್ನು ಒಕ್ಕೂಟ ಸಕರ್ಾರದ ಮೇಲೆ ಒತ್ತಡ ತಂದರೆ ಮಾತ್ರ ಪರಿಹಾರ ಎಂಬುದು ಅವರಿಗೆ ಖಚಿತವಾಗಿತ್ತು.

ಜೂನ್ ತಿಂಗಳಿಂದ ನಡೆದ ಹೋರಾಟದಲ್ಲಿ ಪಂಜಾಬಿನ ಬಹುತೇಕ (32) ರೈತ ಸಂಘಟನೆಗಳು ಸಮನ್ವಯಕ್ಕೆ ಬಂದಾಗಿತ್ತು. ಅವರೆಲ್ಲರೂ ಇದೇ ನವೆಂಬರ್ 25, 26ಕ್ಕೇ ದೆಹಲಿಗೆ ದೊಡ್ಡ ಸಂಖ್ಯೆಯಲ್ಲಿ ಹೋಗಬೇಕು ಮತ್ತು ದೆಹಲಿಯಲ್ಲೇ ಉಳಿಯಲು ಬೇಕಾದ ವ್ಯವಸ್ಥೆ ಮಾಡಿಕೊಂಡೇ ಹೋಗಬೇಕೆಂದು ತೀಮರ್ಾನ ಮಾಡಿದರು. ಪಂಜಾಬಿನ ಸಮನ್ವಯ ಹಾಗೂ ಅಖಿಲ ಭಾರತ ರೈತ ಹೋರಾಟಗಳ ಸಮನ್ವಯದ ಮಧ್ಯೆ (ಏನೇ ಕೊರತೆಗಳಿದ್ದರೂ) ಮಾತುಕತೆ, ಸಮನ್ವಯ ಸಮಿತಿಯೂ ಏರ್ಪಾಟಾಗಿತ್ತು.

ಆದರೆ ಏಐಕೆಎಸ್ಸಿಸಿಯ ಭಾಗವಾಗಿರದ ಹಲವು ಸಂಘಟನೆಗಳೂ ಪಂಜಾಬಿನಿಂದ ಬಂದಿದ್ದರಿಂದ, ಅಂತಿಮವಾಗಿ ಎಲ್ಲರನ್ನೂ ಪ್ರತಿನಿಧಿಸುವ ಸಂಯುಕ್ತ್ ಕಿಸಾನ್ ಮೋಚರ್ಾ ರೂಪಿತವಾಯಿತು. ಉತ್ತರ ಪ್ರದೇಶದ ಇನ್ನೊಂದು ದೊಡ್ಡ ಸಂಘಟನೆಯಾದ ಬಿಕೆಯು (ಟಿಕಾಯತ್) ಇದರಲ್ಲಿ ಇರಲಿಲ್ಲ. ಹಾಗೆಯೇ ಈಗ ಜನವರಿ 26ರಂದು ದೆಹಲಿಯ ಕೇಂದ್ರಭಾಗ ಮತ್ತು ಕೆಂಪುಕೋಟೆಯ ಬಳಿ ಹೋದ ಸಂಘಟನೆಯೂ ಸಂಯುಕ್ತ್ ಕಿಸಾನ್ ಮೋರ್ಚಾದ ಭಾಗ ಆಗಿರಲಿಲ್ಲ.

ಪ್ರಶ್ನೆ: ಹಾಗಾದರೆ ಈ ರೈತರು ದೆಹಲಿಗೆ ಬಂದಾಗ ಪೊಲೀಸರು ಸೂಚಿಸಿದ ಮೈದಾನಕ್ಕೆ ಹೋಗುವ ವಿಚಾರದಲ್ಲಿ ಗೊಂದಲವೇರ್ಪಟ್ಟಿದ್ದೇಕೆ?

ಉತ್ತರ: ಈ ಹೋರಾಟದ ನಾಯಕರು ಅತ್ಯಂತ ವಿನಮ್ರವಾಗಿ ಹೇಳುವುದೇನೆಂದರೆ ನಾಯಕತ್ವ ತಪ್ಪು ನಿರ್ಧಾರ ತೆಗೆದುಕೊಂಡಿತ್ತು, ಜನರು ದಾರಿ ತೋರಿಸಿದರು. ಹೌದು, ಪಂಜಾಬಿನಿಂದ ಹೊರಟ ರೈತರು ದಾರಿಯಲ್ಲಿ ಹಾಕಿದ್ದ ಬ್ಯಾರಿಕೇಡ್ಗಳನ್ನು ಪಕ್ಕಕ್ಕೆ ಸರಿಸಿ ಅಥವಾ ಕಂದಕಗಳನ್ನು ದಾಟಿ ಬಂದ ಚಿತ್ರ ನೀವು ನೋಡಿರುತ್ತೀರಿ. ಅದು ನಾಯಕತ್ವದ ತೀರ್ಮಾನವಾಗಿರಲಿಲ್ಲ. ಎಲ್ಲಿ ತಡೆಯುತ್ತಾರೋ ಅಲ್ಲೇ ಅನಿರ್ದಿಷ್ಟಾವಧಿ ಕೂರುವುದು ಮಾತ್ರ ಅವರ ತೀಮರ್ಾನವಾಗಿತ್ತು. ಆದರೆ ಪಂಜಾಬಿನ ರೈತರು ದೆಹಲಿಯ ಕಡೆಗೆ ಹೋಗಲೇಬೇಕೆಂದು ತೀರ್ಮಾನಿಸಿ ಅವನ್ನು ದಾಟಿದರು.

ಹಾಗೆಯೇ ಮೇಲೆ ಹೇಳಲಾದ ಸಮನ್ವಯ ಸಮಿತಿಯ ಸರ್ವಾ ನುಮತದ ತೀರ್ಮಾನವೇನೆಂದರೆ ದೆಹಲಿ ಪೊಲೀಸರು ಸೂಚಿಸಿದ ಮೈದಾನಕ್ಕೆ ಹೋಗುವುದು ಎಂದಾಗಿತ್ತು. ಟ್ರ್ಯಾಕ್ಟರ್ ಸಾಲಿನಲ್ಲಿ ಹಿಂದೆ ಉಳಿದಿದ್ದ ಪಂಜಾಬಿನ ರೈತ ನಾಯಕರ ಗಮನಕ್ಕೆ ಬಂದಂತೆ ದೆಹಲಿಯ ಗಡಿ ತಲುಪಿದ ರೈತರು ಮೈದಾನಕ್ಕೆ ಹೋಗಲು ನಿರಾಕರಿಸಿದರು. ಅವರು ದೆಹಲಿಯಲ್ಲಿದ್ದ ಯೋಗೇಂದ್ರ ಯಾದವ್ ಮತ್ತಿತರರನ್ನು ಗಡಿಗೆ ಹೋಗಿ ರೈತರ ಮನವೊಲಿಸಲು ಸೂಚಿಸಿದರು.

ಆದರೆ ಗಡಿಗೆ ಹೋದ ಅವರಿಗೆ ಗೊತ್ತಾದದ್ದೇನೆಂದರೆ ರೈತರನ್ನು ಮನವೊಲಿಸುವುದು ಸಾಧ್ಯವೇ ಇಲ್ಲ ಎಂದು. ಅಂತಿಮವಾಗಿ ರೈತರು ಹೇಳಿದ್ದೇ ಸರಿ ಎಂಬುದು ಈ ನಾಯಕರುಗಳ ಅಭಿಪ್ರಾಯ. ವಿವಿಧ ಗಡಿಗಳಲ್ಲಿ ಲಕ್ಷಗಟ್ಟಲೆ ರೈತರು ಕೂತರು. ಐತಿಹಾಸಿಕ ಹೋರಾಟವು ಆರಂಭವಾಯಿತು.

ಪ್ರಶ್ನೆ: ಬಹುತೇಕ ಪಂಜಾಬ್ ಮತ್ತು ಹರಿಯಾಣಗಳ ರೈತರೇ ಇಲ್ಲಿ ಹೆಚ್ಚಿದ್ದಾರೆ, ಆದರೆ ಇಡೀ ದೇಶದಲ್ಲಿ ಅಲ್ಲಲ್ಲಿ ಪೂರಕವಾದ ಪ್ರತಿಭಟನೆಗಳು ನಡೆಯುತ್ತಿವೆ ಎಂಬುದೇನೋ ಸರಿ. ಆದರೆ ಇಡೀ ದೇಶದ ಪರವಾಗಿ ಇದು ನಡೆಯುತ್ತಿದೆ ಎನ್ನುವುದಾದರೆ ಸರ್ಕಾರದ ಜೊತೆ ಮಾತುಕತೆಯಲ್ಲಿ ದೇಶದ ಉಳಿದ ಭಾಗಗಳ ಪ್ರತಿನಿಧಿಗಳು ಏಕಿಲ್ಲ?

ಉತ್ತರ: ಇದ್ದಾರೆ. ಈಗ ಬೆಂಗಳೂರಿನಲ್ಲಿ ವಾಸಿಸುವ, ಆಂಧ್ರದ ಆಶಾ ಕಿಸಾನ್ ಆಂದೋಲನದ ಕವಿತಾ ಕುರಗಂಟಿ ಹೆಚ್ಚಿನ ಮಾತುಕತೆಗಳ ಭಾಗವಾಗಿದ್ದಾರೆ. ಅಖಿಲ ಭಾರತ ಕಿಸಾನ್ ಸಭಾದ ಹನ್ನನ್ ಮೊಲ್ಲಾ (ಇವರು ಪಶ್ಚಿಮ ಬಂಗಾಳದವರು), ಹರಿಯಾಣಾ ಮೂಲದವರಾದ, ಆದರೆ ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿಯನ್ನು ಪ್ರತಿನಿಧಿಸುವ ಯೋಗೇಂದ್ರ ಯಾದವ್ ಈ ಹೋರಾಟದ 7 ಜನರ ಉನ್ನತ ಸಮಿತಿಯ ಭಾಗವಾಗಿದ್ದಾರೆ.

ಭಾಗ-2: ಮುಂದುವರಿದಿದೆ

ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿ

https://suddidina.com/part-2-some-of-the-legitimate-facts-of-the-delhi-fight-what-is-kisan-morcha-saying/

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending