ದಿನದ ಸುದ್ದಿ
ದಾವಣಗೆರೆ ವಿವಿ ರಂಗ ವಿಮರ್ಶಾ ಕಮ್ಮಟ |ಮಾನವ ಜೀವನದಲ್ಲಿ ವಿಮರ್ಶೆಗಳು ಖಾಯಂ ಪ್ರಕ್ರಿಯೆಗಳು : ನಿರ್ದೇಶಕ ಬಿ.ಸುರೇಶ
ಸಹಜ ಆಸೆಗಳನ್ನು ಬದಿಗಿಟ್ಟು ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು: ಕುಲಪತಿ ಪ್ರೊ. ಎಸ್.ವಿ. ಹಲಸೆ
ಸುದ್ದಿದಿನ,ದಾವಣಗೆರೆ : ಮನುಷ್ಯನಿಗೆ ಆಸೆಗಳು ಸಹಜ. ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಸ್.ವಿ. ಹಲಸೆ ಹೇಳಿದರು.
ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರು ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ, ಶಿವಗಂಗೋತ್ರಿ ದಾವಣಗೆರೆ, ಜಿಲ್ಲಾ ವರದಿಗಾರರ ಕೂಟ, ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇವರ ಸಹಯೋಗದಲ್ಲಿ ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮತ್ತು ಆಸಕ್ತ ಬರಹಗಾರರಿಗಾಗಿ ಶನಿವಾರ ದಾವಣಗೆರೆ ವಿವಿ ಎಂಬಿಎ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಂಗ ವಿಮರ್ಶಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.
ಕಲಿಕೆಯು ದಿನನಿತ್ಯದ ಪಯಣ. ಎಲ್ಲರಲ್ಲೂ ಒಂದು ಸುಪ್ತವಾದ ವ್ಯಕ್ತಿತ್ವವಿದ್ದು ಅದನ್ನು ಹೊರತರಲು ಇಂತಹ ಕಮ್ಮಟಗಳು ಸಹಕಾರಿಯಾಗುತ್ತವೆ.ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ಸತತ ಪ್ರಯತ್ನ ಬಹುಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳ ಕಾಯಕ ಅಧ್ಯಯನ ಮಾಡುವುದಾದರೆ, ಸಮರ್ಪಕವಾಗಿ ಪಾಠ ಪ್ರವಚನ ಮಾಡುವುದು ಶಿಕ್ಷಕರ ಕಾಯಕ ಮತ್ತು ಜವಾಬ್ಧಾರಿಯಾಗಿದೆ.
ಯಾವುದೇ ಶಿಕ್ಷಕನಿಗೆ ನಾನು ಉತ್ತಮ ವಿದ್ಯಾರ್ಥಿಗಳನ್ನು ಹೊರ ತರುತ್ತೇನೆ ಎಂಬ ಆತ್ಮವಿಶ್ವಾಸವಿರಬೇಕು ಆಗ ಮಾತ್ರ ನಮ್ಮ ದೇಶ ರಾಮರಾಜ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳ ಬುದ್ದಿಮಟ್ಟ ಒಂದೇ ಆಗಿರುತ್ತದೆ ಆದರೆ ಅಭ್ಯಾಸದಲ್ಲಿ ತೊಡಗಿಕೊಳ್ಳುವಿಕೆಯ ಸಮಯ ಹೆಚ್ಚಾದಂತೆ ಅವರ ಜ್ಞಾನ ಹೆಚ್ಚಾಗುತ್ತಾ ಹೋಗುತ್ತದೆ. ಜೊತೆಗೆ ನಮ್ಮ ಮತ್ತು ವಿದ್ಯಾರ್ಥಿಗಳ ಸಂಬಂಧ ಉತ್ತಮವಾಗಿದ್ದಲ್ಲಿ ಮಾತ್ರ ಒಳ್ಳೆಯ ಶಿಕ್ಷಣ ನಿಡಲು ಸಾಧ್ಯವಾಗುತ್ತದೆ ಎಂದ ಅವರು ವಿದ್ಯಾರ್ಥಿಗಳನ್ನು ಭಾಷೆಯನ್ನು ಪರಿಶುದ್ದವಾಗಿ ಕಲಿಯಬೇಕು ಎಂದರು.
ಉದ್ಘಾಟನೆಗೂ ಮುನ್ನ ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯ ಹಾದಿ ವಿಷಯ ಕುರಿತಾದ ಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ರಂಗ ತಜ್ಞ ಹಾಗೂ ಸಿನಿಮಾ ನಿರ್ದೇಶಕರಾದ ಬಿ. ಸುರೇಶ್, ಮಾನವ ಜೀವನದಲ್ಲಿ ವಿಮರ್ಶೆಗಳು ಒಂದು ರೀತಿಯ ಖಾಯಂ ಪ್ರಕ್ರಿಯೆಗಳಿದ್ದಂತೆ. ಮನುಷ್ಯ ದಿನೇ ದಿನೇ ಪ್ರಶ್ನೆಗೊಳಪಡುತ್ತಾನೆ. ಒಬ್ಬ ಮತ್ತೊಬ್ಬನನ್ನು ಪ್ರಶ್ನಿಸುವುದು, ಅನುಕರಿಸುವುದು, ತೆಗಳುವುದು ಒಂದು ರೀತಿಯ ವಿಮರ್ಶೆಯೇ ಆಗಿದೆ. ವಿಮರ್ಶೆ ನಿರಂತರ ಚಟುವಟಿಕೆ ಎಂಬ ವ್ಯಾಖ್ಯಾನವೂ ಇದೆ. ಒಂದು ರೀತಿ ಮನುಷ್ಯನ ಎಲ್ಲಾ ಅಂಗಗಳು ವಿಮರ್ಶೆಗೊಳಪಡುತ್ತವೆ. ಮತ್ತೊಬ್ಬರನ್ನು ಟೀಕಿಸುವುದು ವಿಮರ್ಶೆಯಾಗಿರುತ್ತದೆ. ಆದ್ದರಿಂದ ಯಾವುದೂ ಅಂತಿಮವಲ್ಲ ಎಂದರು.
ರಂಗ ವಿಮರ್ಶೆ ಮಾಡಬೇಕಾದರೆ ರಂಗಭೂಮಿ ಬಗ್ಗೆ ಸಂಪೂರ್ಣ ಅಧ್ಯಯನ ಅವಶ್ಯ. ಪರಿಪೂರ್ಣ ಜ್ಞಾನದಿಂದ ಒಂದು ರಂಗದ ವಿಮರ್ಶೆ ಸಾಧ್ಯ ಹೂ ಅರಳುವುದು, ಹೂವು ದುಂಬಿ ಆಕರ್ಷಿಸುವ ಅಂಶಗಳು ಒಂದು ರೀತಿಯ ವಿಮರ್ಶೆಯ ಅಂಶವೇ. ಈ ಎಲ್ಲಾ ಅಂಶಗಳನ್ನು ಪತ್ರಿಕೋದ್ಯಮ ಹಾಗೂ ಸಾಹಿತ್ಯದ ವಿದ್ಯಾರ್ಥಿಗಳು ನಿರಂತರ ಓದಿನಿಂದ ಜ್ಞಾನ ಪಡೆದುಕೊಂಡು ತಮ್ಮದೇ ಶೈಲಿಯಲ್ಲಿ ನೀರೂಪಿಸುವುದು ವಿಮರ್ಶೆ ಎನಿಸುತ್ತದೆ.
ಒಮ್ಮೊಮ್ಮೆ ಭಿನ್ನಾಭಿಪ್ರಾಯ ಸೂಚಿಸುವುದು ಕೂಡ ವಿಮರ್ಶೆಯಾಗುತ್ತದೆ. ಅನುಕರಣಾ ಮನೋಭಾವವನ್ನು ವಿಮರ್ಶಾ ಪ್ರವೃತಿಯಿಂದ ದೂರವಿಡ ಬೇಕು. ಆಗ ಯಾವುದೇ ಒಂದು ರಂಗದ ವಿಮರ್ಶೆ ಯಶಸ್ವಿಯಾಗಲು ಸಾಧ್ಯ. ಇಂದು ವಿಮರ್ಶಾ ರಂಗದಲ್ಲಿ ವಿಫುಲ ಉದ್ಯೋಗಾವಕಶಗಳಿದ್ದು ವಿದ್ಯಾರ್ಥಿಗಳು ಉತ್ತಮ ಓದು ತಿಳುವಳಿಕೆ ಜ್ಞಾನ ಹೆಚ್ಚಿಸಿಕೊಳ್ಳುವುದರಿಂದ ಒಳ್ಳೆಯ ಸ್ಥಾನಮಾನ ಕಲ್ಪಿಸಿಕೊಳ್ಳಬಹುದು ಹಾಗೂ ವಿಮರ್ಶೆ ಕ್ಷೇತ್ರದಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಕೊಡಲಾಗುತ್ತಿದ್ದು, ತಾವುಗಳು ಕೂಡ ಈ ಪ್ರಶಸ್ತಿ ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು, ಪತ್ರಕರ್ತರಾದ ಬಿ.ಎನ್. ಮಲ್ಲೇಶ್ ಮಾತನಾಡಿ, ಪತ್ರಕರ್ತರಿಗೆ ಪ್ರತಿಯೊಂದು ವಿಷಯದ ಬಗ್ಗೆ ಜ್ಞಾನವಿರಬೇಕು. ಪತ್ರಕರ್ತ ಪ್ರತಿಯೊಂದು ವಿಷಯವನ್ನು ವಿಮರ್ಶಾ ದೃಷ್ಟಿಯಿಂದ ನೋಡಬೇಕು. ಇತ್ತೀಚಿನ ದಿನಗಳಲ್ಲಿ ವಿಮರ್ಶೆಯು ಟೀಕೆಯೆಂಬಂತೆ ಬಿಂಬಿತವಾಗುತ್ತಿದೆ.
ವಿಮರ್ಶೆ ಮಾಡಲು ವಿಷಯದ ಬಗ್ಗೆ ಸಾಮುಲಾಗ್ರವಾಗಿ ತಿಳಿದುಕೊಂಡಿರಬೇಕು. ವಾಸ್ತವವನ್ನು ತಿಳಿದುಕೊಂಡು ವಿಮರ್ಶೆ ಮಾಡಬೇಕು. ಇಲ್ಲವಾದಲ್ಲಿ ವಿಮರ್ಶೆ ಸೋಲುತ್ತದೆ. ವಿಮರ್ಶೆ ಮಾಡಲು ಭಾಷಾ ಪ್ರಬುದ್ದತೆ ಅಗತ್ಯವಾಗಿದ್ದು, ಭಾಷೆ ಮೇಲೆ ಹಿಡಿತವಿಲ್ಲದಿದ್ದರೆ ವಿಮರ್ಶಕರಾಗಲು ಸಾಧ್ಯವಿಲ್ಲ ಎಂದರು.
ವಿಜಯ ಕರ್ನಾಟಕ ಉಪ ಸಂಪಾದಕ ಯಳನಾಡು ಮಂಜುನಾಥ, ಯಳನಾಡು ಮಂಜುನಾಥ ಸಂಯುಕ್ತ ಕರ್ನಾಟಕ ದಾವಣಗೆರೆ ಬ್ಯೂರೋ ಮುಖ್ಯಸ್ಥರಾದ ಮಂಜುನಾಥ ಗೌರಕ್ಕಳವರ್, ವಾರ್ತಾಧಿಕಾರಿ ಅಶೋಕ್ಕುಮಾರ್.ಡಿ, ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮಿ ಹಿರೇಮಠ, ನಾಟಕ ಅಕಾಡೆಮಿ ಸದಸ್ಯರಾದ ರವೀಂದ್ರ ಅರಳಗುಪ್ಪಿ, ಸಾಹಿತಿಗಳಾದ ಬಾ.ಮ.ಬಸವರಾಜಯ್ಯ, ಪತ್ರಿಕೋದ್ಯಮ, ಕನ್ನಡ ಸಾಹಿತ್ಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ3 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

