ದಿನದ ಸುದ್ದಿ
ಜಿ ಎಸ್ ಟಿ ವಿರೋಧಿಸಿ ಸಿಎಐಟಿ ಫೆ. 26ರಂದು ಭಾರತ್ ಬಂದ್ ಗೆ ಕರೆ : ಎಐಟಿಡಬ್ಲ್ಯುಎ ಬೆಂಬಲ
ಸುದ್ದಿದಿನ, ಬೆಂಗಳೂರು : ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿರುದ್ಧ ಕಾನ್ಫಿಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ಈ ತಿಂಗಳ 26ರಂದು ಕರೆ ನೀಡಿರುವ ಭಾರತ ಬಂದ್ಗೆ ಭಾರತದ ರಸ್ತೆ ಸಾರಿಗೆ ವಲಯದ ಅತ್ಯುನ್ನತ ಸಂಸ್ಥೆಗಳಲ್ಲೊಂದಾದ ಆಲ್ ಇಂಡಿಯಾ ಟ್ರಾನ್ಸ್ಪೋರ್ಟರ್ಸ್ ವೆಲ್ಫೇರ್ ಅಸೋಸಿಯೇಶನ್ (ಎಐಟಿಡಬ್ಲ್ಯುಎ) ಬೆಂಬಲ ಫೋಷಿಸಿದೆ. ಅದೇ ದಿನ ಛಕ್ಕಾ ಜಾಮ್ ಅಥವಾ ರಸ್ತೆ ತಡೆ ನಡೆಸಲು ನಿರ್ಧರಿಸಲಾಗಿದೆ.
“ಇಂಧನ ದರ ಏರಿಕೆ ಮತ್ತು ಭಾರತ ಸರ್ಕಾರ ಜಾರಿಗೆ ತಂದಿರುವ ಹೊಸ ಇ-ವೇ ಬಿಲ್ ಕಾನೂನುಗಳ ವಿರುದ್ಧ ಎಐಟಿಡಬ್ಲ್ಯುಎ ಕರೆ ನೀಡಿರುವ ಒಂದು ದಿನದ ಸಾರಿಗೆ ಅಸಹಕಾರಕ್ಕೆ ಎಲ್ಲ ರಾಜ್ಯಮಟ್ಟದ ಸಾರಿಗೆ ಸಂಘಗಳು ಬೆಂಬಲ ದೃಢಪಡಿಸಿವೆ. ಪ್ರತಿಭಟನೆಯ ಸ್ವರೂಪ ಎಲ್ಲ ಬುಕ್ಕಿಂಗ್ ತಿರಸ್ಕರಿಸುವುದು ಮತ್ತು ಇ-ಬಿಲ್ ಕೇಂದ್ರಿತ ಸರಕುಗಳ ಸಾಗಾಣಿಕೆಯನ್ನು ಒಂದು ದಿನ ತಿರಸ್ಕರಿಸುವುದ್ದಾಗಿರುತ್ತದೆ.
ಎಲ್ಲ ಸಾರಿಗೆ ಕಂಪನಿಗಳು ಸಾಂಕೇತಿಕ ಪ್ರತಿಭಟನಾರ್ಥವಾಗಿ ಬೆಳಿಗ್ಗೆ 6ರಿಂದ ರಾತ್ರಿ 8ರವರೆಗೆ ಟ್ರಕ್ಗಳನ್ನು ನಿಲ್ಲಿಸಲು ಕೋರಲಾಗಿದೆ. ಎಲ್ಲ ಸಾರಿಗೆ ಗೋದಾಮುಗಳು ಪ್ರತಿಭಟನೆ ಬ್ಯಾನರ್ಗಳನ್ನು ಪ್ರದರ್ಶಿಸಲಿವೆ. 2021ರ ಫೆಬ್ರುವರಿ 26ರಂದು ಯಾವುದೇ ಸರಕು ಸಾಗಾಣಿಕೆ ಬುಕ್ಕಿಂಗ್ ಮಾಡದಂತೆ ಅಥವಾ ಲೋಡ್ ಮಾಡದಂತೆ ಎಲ್ಲ ಗ್ರಾಹಕರಿಗೆ ಸಾರಿಗೆ ಕಂಪನಿಗಳು ಮನವಿ ಮಾಡಿಕೊಳ್ಳಲಿವೆ” ಎಂದು ಎಐಟಿಡಬ್ಲ್ಯುಎ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ಆರ್ಯ ಪ್ರಕಟಣೆಯಲ್ಲಿ ಹೇಳಿದ್ದಾರೆ.
ದೇಶಾದ್ಯಂತ ಸರಕು ಸಾಗಾಣಿಕೆದಾರರು ಇತ್ತೀಚೆಗೆ ತಿದ್ದುಪಡಿ ತಂದಿರುವ ಜಿಎಸ್ಟಿ ಕಾನೂನುಗಳನ್ನು ಬಳಸುತ್ತಾ ಬಂದಿದ್ದರೆ. ಇದು ಅಂತರ ರಾಜ್ಯ ಮತ್ತು ರಾಜ್ಯದೊಳಗೆ ಸರಕು ಸಾಗಾಣಿಕೆಗೆ ಇರುವ ಇ-ವೇ ಬಿಲ್ಗಳ ಮಾನ್ಯತೆಯನ್ನು ದಿನಕ್ಕೆ 200 ಕಿಲೋಮೀಟರ್ಗಳಿಂದ 100 ಕಿಲೋಮೀಟರ್ಗೆ ಅರ್ಧ ಮಾಡಿದೆ. ಸಿಜಿಎಸ್ಟಿ ಕಾಯ್ದೆ-2017ರ ಸೆಕ್ಷನ್ 129ರ ಅನ್ವಯ ಅವಧಿ ಮೀರಿದ ಇ-ವೇ ಬಿಲ್ಗಳನ್ನು ಹೊಂದಿ, ಸರಕು ಸಾಗಾಣಿಕೆ ಮಾಡುವ ಟ್ರಕ್ಗಳಿಗೆ ವಿಧಿಸುವ ದಂಡ ಅಥವಾ ದೋಷಪೂರಿತ ಇ-ವೇ ಬಿಲ್ ಮೊತ್ತವಿರುವ ಪ್ರಕರಣಗಳಲ್ಲಿ ವಿಧಿಸುವ ದಂಡವನ್ನು ತೆರಿಗೆ ಮೊತ್ತದ ಪ್ರತಿಶತ 200 ಅಥವಾ ಇನ್ವೈಸ್ ಮೌಲ್ಯದ ಶೇಕಡ 100ರಷ್ಟು ಆಗಿರುತ್ತದೆ.
ಸಣ್ಣ ಹಾಗೂ ಮಧ್ಯಮ ಪ್ರಮಾಣದ ಸಾರಿಗೆದಾರರು ಅದರಲ್ಲೂ ಮುಖ್ಯವಾಗಿ ಸರಕುಗಳ ಭಾಗಶಃ ಲೋಡ್ ಸಾಗಾಣಿಕೆ ಮಾಡುವ ಸಾಗಾಣಿಕೆದಾರರು ಅಥವಾ ಚಿಲ್ಲರೆ ಸಾಗಾಣಿಕೆದಾರರು ಹೊಸ ನಿಯಮಾವಳಿಗೆ ಬದ್ಧರಾದಲ್ಲಿ, ಅವರ ಮೇಲಿನ ಬದ್ಧತೆಯ ಹೊರೆ ಅಧಿಕ ಹಾಗೂ ದುಬಾರಿಯಾಗಲಿದೆ. ಪರಿಸ್ಥಿತಿಗೆ ಅನುಗುಣವಾದ ವಿಳಂಬಕ್ಕೆ ಲಕ್ಷಾಂತರ ರೂಪಾಯಿ ದಂಡ ಪಾವತಿಸಬೇಕಾಗುತ್ತದೆ. ಇದು ಇಡೀ ವಹಿವಾಟು ಮುಚ್ಚಲು ಕಾರಣವಾಗಲಿದೆ.
ಸಾರಿಗೆ ಉದ್ಯಮದ ವಿವಿಧ ಸಮಸ್ಯೆಗಳ ವಿಚಾರದಲ್ಲಿ ಎಐಟಿಡಬ್ಲ್ಯುಎ ಭಾರತ ಸರ್ಕಾರಕ್ಕೆ ಪತ್ರಗಳನ್ನು ಬರೆದಿದೆ. ಮುಖ್ಯವಾಗಿ ಜಿಎಸ್ಟಿಯಡಿಯಲ್ಲಿ ಕಾರ್ಯಸಾಧುವಲ್ಲದ ಇ-ವೇ ಬಿಲ್ ಮತ್ತು ಡೀಸೆಲ್ ಬೆಲೆ ನೀತಿಯ ವಿರುದ್ಧ ಧ್ವನಿ ಎತ್ತಿದೆ. “ಜಿಎಸ್ಟಿಯಡಿ ಇ-ವೇ ಬಿಇಲ್ ನಿಯಮವಳಿಯನ್ನು ರದ್ದುಪಡಿಸುವಂತೆ ಎಐಟಿಡಬ್ಲ್ಯುಎ ಆಗ್ರಹಿಸುತ್ತದೆ.
ಏಕೆಂದರೆ ಹೊಸದಾಗಿ ಜಾರಿಗೆ ತಂದಿರುವ ಇ-ಇನ್ವೈಸ್, ತೆರಿಗೆ ಕಳ್ಳತನವನ್ನು ತಪ್ಪಿಸಲು ಸಕಾಗುತ್ತದೆ. ಫಾಸ್ಟ್ಯಾಗ್ ಸಂಪರ್ಕವನ್ನು ಇ-ಇನ್ವೈಸ್ ಜತೆಗೆ ಜೋಡಿಸುವ ಮೂಲಕ ಸರ್ಕಾರ ವಾಹನಗಳ ಚಲನೆಯ ಮೇಲೆ ನಿಗಾ ಇಡಬಹುದು. ಆವುದೇ ಸಮಯ ಆಧರಿತ ಬದ್ಧತೆ ಗುರಿಗಳ ವಿಚಾರದಲ್ಲಿ ಸರ್ಕಾರದ ದಂಡಗಳಿಗೆ ಸಾಗಾಣಿಕೆದಾರರು ಗುರಿಯಾಗಬಾರದು.
ಡೀಸೆಲ್ ಬೆಲೆಗಳನ್ನು ಉಳಿಸಬೇಕು ಹಾಗೂ ಇದಕ್ಕೆ ಅಗತ್ಯವಾದ ಕಾರ್ಯವಿಧಾನವನ್ನು ಚರ್ಚಿಸಬೇಕು. ಭವಿಷ್ಯದ ನಿಯಂತ್ರಣಕ್ಕಾಗಿ ಸಾರಿಗೆ ಉದ್ಯಮದ ಜತೆ ಚರ್ಚಿಸಿ ನೀತಿ ರೂಪಿಸಬೇಕು. ದೇಶದ ಉದ್ದಗಲಕ್ಕೂ ಏಕರೂಪದ ಡೀಸೆಲ್ ಬೆಲೆ ನಿಗದಿಪಡಿಸಬೇಕು” ಎಂದು ಎಐಟಿಡಬ್ಲ್ಯುಎ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ಆರ್ಯ ಒತ್ತಾಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

