Connect with us

ದಿನದ ಸುದ್ದಿ

ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ : ಪಿಟಿಐ ಸುದ್ದಿ ಸಂಸ್ಥೆ ಪ್ರತಿನಿಧಿ ಎ. ಲಕ್ಷ್ಮೀದೇವಿ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಗುರುವಾರ ಏರ್ಪಡಿಸಿದ್ದ ಮಾಧ್ಯಮ ಮಂಥನ ಕಾರ್ಯಕ್ರಮದಲ್ಲಿ ಪಿಟಿಐ ಸುದ್ದಿಸಂಸ್ಥೆಯ ನವದೆಹಲಿಯ ವಿಶೇಷ ಪ್ರತಿನಿಧಿ ಎ. ಲಕ್ಷ್ಮೀದೇವಿ ಮಾತಾನಾಡಿದರು.

ಪತ್ರಿಕಾ ಮೌಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯ ಪತ್ರಕರ್ತರು ವೃತ್ತಿ ಗೌರವದ ಜೊತೆ ಪತ್ರಿಕಾ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ವೃತ್ತಿಪರವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಗುರುವಾರ ಏರ್ಪಡಿಸಿದ್ದ ಮಾಧ್ಯಮ ಮಂಥನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚು ಅವಕಾಶಗಳಿವೆ. ತಮ್ಮ ಸಮಸ್ಯೆಗಳನ್ನೇ ಸವಾಲು ಎಂದುಕೊಂಡು ವೃತ್ತಿಯಲ್ಲಿ ಬೆಳೆಯಬೇಕು.

ಲಭ್ಯವಿರುವ ಸಂಪನ್ಮೂಲಗಳೇ ವೃತ್ತಿಯಲ್ಲಿ ಬೆಳೆಯಲು ದಾರಿಯಾಗಬೇಕು ಎಂದು ನುಡಿದರು. ಪತ್ರಕರ್ತರಿಗೆ ಭಾಷೆ ಮುಖ್ಯ. ಯಾವ ಪದವನ್ನು ಹೇಗೆ ಬಳಸಿದರೆ ಯಾವ ಅರ್ಥ ಕೊಡುತ್ತದೆ ಎಂಬುದರ ಅರಿವು ಇರಬೇಕು. ಅಲ್ಲದೆ ಮೌಲ್ಯಯುತವಾದ ವೃತ್ತಿ ವ್ಯಕ್ತಿತ್ವಕ್ಕೆ ಗೌರವ ತಂದುಕೊಂಡುತ್ತದೆ ಎಂದು ತಿಳಿಸಿದರು.

ಪೈಪೋಟಿ ಮಾಧ್ಯಮ ಕ್ಷೇತ್ರಕ್ಕೂ ಹೊರತಾಗಿಲ್ಲ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಸ್ತಿತ್ವ ಕಂಡುಕೊಳ್ಳಲು ವೃತ್ತಿಪರ ಕೌಶಲ, ಅಗತ್ಯವಿರುವ ಜ್ಞಾನದ ಅರಿವು ಅತ್ಯವಶ್ಯ ಎಂದು ಪಿಟಿಐ ಸುದ್ದಿ ಸಂಸ್ಥೆಯ ನವದೆಹಲಿಯ ವಿಶೇಷ ವರದಿಗಾರ್ತಿ ಎ. ಲಕ್ಷ್ಮೀದೇವಿ ಅಭಿಪ್ರಾಯಪಟ್ಟರು.

ಸ್ಪರ್ಧಾತ್ಮಕ ಜಗತ್ತಿನ ಎಲ್ಲ ಕ್ಷೇತ್ರಗಳಲ್ಲೂ ಪೈಪೋಟಿ ಇದ್ದೇ ಇದೆ. ಅದರ ನಡುವೆ ನಮ್ಮನ್ನು ಕಾಪಾಡುವುದು ನಮ್ಮಲ್ಲಿರುವ ವೃತ್ತಿಪರತೆ, ತಾಂತ್ರಿಕ ಮತ್ತು ವೃತ್ತಿ ಕೌಶಲಗಳು. ಪತ್ರಕರ್ತರಿಗೆ ಓದುವ, ಬರೆಯುವ ಮತ್ತು ನಿರರ್ಗಳವಾಗಿ ಮಾತನಾಡುವ ಕೌಶಲ ಅನಿವಾರ್ಯ. ವಿಷಯದ ಆಳವಾದ ಅಧ್ಯಯನ, ಕಲಿಯುವ ಕುತೂಹಲ ಮತ್ತು ಬರೆಯುವ ಶೈಲಿಗಳು ಮುಖ್ಯವಾಗುತ್ತವೆ ಎಂದು ಹೇಳಿದರು.

ಇದನ್ನೂ ಓದಿ | ಜನರಿಗೆ ತಮ್ಮ ಕೆಲಸಗಳಾಗುವ ಭರವಸೆ
15 ದಿನಕ್ಕೊಮ್ಮೆ ಜನಸ್ಪಂದನ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ | ಜನಸ್ಪಂದನದ ಕಂಪ್ಲೀಟ್ ಡೀಟೆಲ್ಸ್ ; ಮಿಸ್ ಮಾಡ್ದೆ ಓದಿ

ಪತ್ರಕರ್ತರಿಗೆ ಪ್ರಸ್ತುತ ಸಂದರ್ಭದಲ್ಲಿ ವೃತ್ತಿಯಲ್ಲಿ ಹಲವಾರು ಸವಾಲುಗಳಿವೆ. ಅವುಗಳನ್ನು ಹಿಮ್ಮೆಟ್ಟಿಸಿ, ತಮ್ಮತನ ಗುರುತಿಸಿಕೊಳ್ಳಲೂ ಅವಕಾಶಗಳಿವೆ. ಪತ್ರಕರ್ತರಿಗೆ ಭವಿಷ್ಯದಲ್ಲಿ ಯಾವುದೇ ಮಾಧ್ಯಮ ಅನಿವಾರ್ಯವಲ್ಲ ಎಂಬುದನ್ನು ಅರ್ಥಮಾಡಿಕೊಂಡು ಪರ್ಯಾಯ ಮಾರ್ಗಗಳತ್ತ ಯೋಚನೆ ಮಾಡಬೇಕು. ಇಂಟರ್‍ನೆಟ್ ಇಲ್ಲದ ಸನ್ನಿವೇಶದಲ್ಲೂ ಕೆಲಸ ಮಾಡುವ, ನೆಲೆ ಕಂಡುಕೊಳ್ಳುವ ಮಾರ್ಗಗಳನ್ನು ಅರಿಯುವುದು ಅತ್ಯವಶ್ಯ ಎಂದರು.

ಪತ್ರಿಕಾ ವೃತ್ತಿಯಲ್ಲಿ ಮೌಲ್ಯಗಳಿಗೆ ಹೆಚ್ಚು ಮನ್ನಣೆ ಇದೆ. ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ಅರಿತು ಸುದ್ದಿ ಮಾಡುವ ವಿವೇಚನೆಯನ್ನು ಬೆಳೆಸಿಕೊಳ್ಳಬೇಕು. ಮನಸ್ಸಿಗೆ ತೋಚಿದ್ದನ್ನು ಬರೆಯುವ ಪ್ರವೃತ್ತಿಯಿಂದ ಪತ್ರಿಕೋದ್ಯಮಕ್ಕೆ ಕಳಂಕ ಬರುತ್ತಿದೆ. ಮುಂದಿನ ಪೀಳಿಗೆಗೆ ವೃತ್ತಿಯ ಒಳ್ಳೆಯ ಮೌಲ್ಯಗಳನ್ನು ತಿಳಿಸಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

‘ಪ್ರಸ್ತುತ ಜಾಗತಿಕ ವಿದ್ಯಮಾನಗಳನ್ನು ಗಮನಿಸಿದರೆ ಯಾವುದೇ ಮಾಧ್ಯಮವೂ ಜನಪರವಾಗಿಲ್ಲ. ಡಿಜಿಟಲ್ ಮಾಧ್ಯಮ ಸದ್ಯ ಹೆಚ್ಚು ಪ್ರಚಲಿತದಲ್ಲಿದೆ. ಅದರಿಂದ ಆಗುವ ಲಾಭದಷ್ಟೇ ಅಪಾಯವೂ ಇದೆ ಎಂಬುದನ್ನು ಅರಿಯಬೇಕು’ ಎಂದರು.
‘ತಂತ್ರಜ್ಞಾನದ ದೈತ್ಯ ಶಕ್ತಿಗಳು ವೈಯಕ್ತಿಕ ದಾಖಲೆಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದು, ಅವು ಯಾವ ರೀತಿಯ ಸವಾಲನ್ನು ಸೃಷ್ಟಿಸುತ್ತವೆ. ಅವೂ ಸಹ ಮತ್ತೊಂದು ರೀತಿಯ ಈಸ್ಟ್ ಇಂಡಿಯ ಕಂಪನಿ ರೀತಿಯಲ್ಲಿ ದೇಶವನ್ನು ಆಳಬಲ್ಲವು ಎಂಬುದನ್ನು ಆಲೋಚಿಸಬೇಕು. ಇಲ್ಲವಾದರೆ ಪ್ರತಿಯೊಬ್ಬರೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಕಲಿಕೆಗೆ ಆಸಕ್ತಿವಹಿಸಬೇಕು. ಉದ್ಯೋಗಕ್ಕೆ ಅಗತ್ಯವಿರುವ, ಭವಿಷ್ಯಕ್ಕೆ ದಾರಿಯಾಗುವ ಮಾರ್ಗವನ್ನು ಆಯ್ಕೆ ಮಾಡಿಕೊಂಡಾಗ ಅದಕ್ಕೆ ಪೂರಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಭಾಷಾ ಜ್ಞಾನ, ಬರವಣಿಗೆ ಜ್ಞಾನಕ್ಕೆ ಗಮನ ನೀಡಬೇಕು ಎಂದು ತಿಳಿಸಿದರು.

ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ, ಭಾಷೆ, ಅಧ್ಯಯನಶೀಲತೆ ಮತ್ತು ವೃತ್ತಿಪರತೆ ಯಾವುದೇ ಕೆಲಸಕ್ಕೂ ಮುಖ್ಯವಾಗಿ ಬೇಕು. ಇದಕ್ಕೆ ಪತ್ರಿಕೋದ್ಯಮ ಕ್ಷೇತ್ರ ಹೊರತಾಗಿಲ್ಲ. ಓದುವ, ಬರೆಯುವ ಹವ್ಯಾಸ ರೂಢಿಸಿಕೊಂಡು, ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ವೃತ್ತಿಯಲ್ಲಿ ಬೆಳೆಯಬೇಕು ಎಂದು ಸಲಹೆ ನೀಡಿದರು.

ಸಿಂಡಿಕೇಟ್ ಸದಸ್ಯೆ ವಿಜಯಲಕ್ಷ್ಮಿ ಹಿರೇಮಠ ಅವರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಹಿಂಜರಿಕೆಯ ಜಡತ್ವ ಸ್ವಭಾವವನ್ನು ಬಿಟ್ಟು ವೃತ್ತಿಯಲ್ಲಿ ಭದ್ರಗೊಳ್ಳಲು ಮುಂದಾಗಬೇಕು ಎಂದು ಹೇಳಿದರು. ಶಿಕ್ಷಣ ನಿಕಾಯದ ಡೀನ್ ಡಾ. ಕೆ.ವೆಂಕಟೇಶ್ ಮಾತನಾಡಿದರು. ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಶಿವಕುಮಾರ ಕಣಸೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಹಾಯಕ ಪ್ರಾಧ್ಯಾಪಕರಾದ ಎಂ. ವಿನಯ್, ಡಾ. ಚಂದ್ರಕಲಾ, ವೆಂಕಟೇಶ್, ಲಾವಣ್ಯ, ಗಂಗಾಧರ್ ಡಾ. ವೆಂಕಟೇಶ್, ಕುಲಪತಿ ಪ್ರೊ. ಶರಣಪ್ಪ ವಿ ಹಲಸೆ, ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ್, ಸಿಂಡಿಕೇಟ್ ಸದಸ್ಯೆ ವಿಜಯಲಕ್ಷ್ಮಿ ಹಿರೇಮಠ, ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಶಿವಕುಮಾರ ಕಣಸೋಗಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

Published

on

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಚತೆ ಇಲ್ಲದೆ, ಕಲುಷಿತ, ವಿಷಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳ ಉಪಯೋಗಿಸುತ್ತಿರುವಂತೆ ಘಟನೆಗಳು ಸಂಭವಿಸುತ್ತಿದ್ದು, ರಾಮೇಶ್ವರ ಕೆಫೆ, ಇಂದಿರಾನಗರ ಬೆಂಗಳೂರು ಹಾಗೂ ಇನ್ನಿತರೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಂಡದಲ್ಲಿ ವರದಿಯಾಗಿರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending