ದಿನದ ಸುದ್ದಿ
ಕಲ್ಲು ಕ್ವಾರಿ ವಿರುದ್ದ ಎಫ್ಐಆರ್ ದಾಖಲು | ಕಲ್ಲುಗಣಿ ಮತ್ತು ಕ್ರಷರ್ ಘಟಕಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸದಿದ್ದರೆ ಕ್ರಮ : ಡಿಸಿ ಮಹಾಂತೇಶ ಬೀಳಗಿ ಎಚ್ಚರಿಕೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/05/mahanthesh_biligi_Suddidina-31.jpg&description=ಕಲ್ಲು ಕ್ವಾರಿ ವಿರುದ್ದ ಎಫ್ಐಆರ್ ದಾಖಲು | ಕಲ್ಲುಗಣಿ ಮತ್ತು ಕ್ರಷರ್ ಘಟಕಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸದಿದ್ದರೆ ಕ್ರಮ : ಡಿಸಿ ಮಹಾಂತೇಶ ಬೀಳಗಿ ಎಚ್ಚರಿಕೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/05/mahanthesh_biligi_Suddidina-31.jpg&description=ಕಲ್ಲು ಕ್ವಾರಿ ವಿರುದ್ದ ಎಫ್ಐಆರ್ ದಾಖಲು | ಕಲ್ಲುಗಣಿ ಮತ್ತು ಕ್ರಷರ್ ಘಟಕಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸದಿದ್ದರೆ ಕ್ರಮ : ಡಿಸಿ ಮಹಾಂತೇಶ ಬೀಳಗಿ ಎಚ್ಚರಿಕೆ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ಕಲ್ಲು ಗಣಿ ಮತ್ತು ಕ್ರಷರ್ ಘಟಕಗಳು 15 ದಿನಗಳ ಒಳಗಾಗಿ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕು. ಇಲ್ಲದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಖನಿಜ ಪ್ರತಿಷ್ಟಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು, ಕಂಟ್ರಾಕ್ಟರ್ಗಳು ಒಂದೂವರೆ ತಿಂಗಳು ಸ್ಟೋರೇಜ್ ಇರುವ ಸಿಸಿ ಕ್ಯಾಮೆರಾ ಅಳವಡಿಸಿ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ವರದಿ ನೀಡಬೇಕು. ಪೊಲೀಸರು ಟಾಸ್ಕ್ಪೋರ್ಸ್ ಸಮಿತಿಗೆ ಈ ಕುರಿತು ವರದಿ ಮಾಡಬೇಕೆಂದರು.
ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ನರಸಿಂಹ ವಿ.ತಾಮ್ರಧ್ವಜ ಮಾತನಾಡಿ, ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು, ಕಂಟ್ರಾಕ್ಟರ್ ಸಿಸಿ ಟಿವಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನೆಟ್ವರ್ಕ್ ವಿಡಿಯೋ ರೆಕಾರ್ಡಿಂಗ್(ಎನ್ವಿಆರ್)ವ್ಯವಸ್ಥೆ ಮೂಲಕ ಕೂತಿರುವಲ್ಲೇ ಸ್ಥಳದ ಘಟನಾವಳಿಯನ್ನು ವೀಕ್ಷಿಸಬಹುದಾಗಿದೆ ಎಂದರು.
ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿ, ಚಿಕ್ಕಬಿದರಿ, ಅಚ್ಯುತಪುರ, ಹಿರೇಬಾಸೂರು, ರಾಂಪುರ, ಕುರುಡಿಹಳ್ಳಿ ಇತರೆಡೆ ಹಾಗೂ ಹರಿಹರ ತಾಲ್ಲೂಕಿನ ಸಾರತಿ, ರಾಜನಹಳ್ಳಿ, ಬಿಳಸನೂರು ಸೇರಿದಂತೆ ಅಧಿಕೃತ ಮರಳು ಬ್ಲಾಕ್ಗಳು ಇರುವೆಡೆ ಟಾಸ್ಕ್ಫೋರ್ಸ್ ಸಮಿತಿಯ ಅಧಿಕಾರಿಗಳು ರಾತ್ರಿ ವೇಳೆ ಓಡಾಡಿ, ಪರಿಶೀಲನೆ ನಡೆಸಬೇಕು. ಅನಧಿಕೃತ ಚಟುವಟಿಕೆ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ | ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ : ಪಿಟಿಐ ಸುದ್ದಿ ಸಂಸ್ಥೆ ಪ್ರತಿನಿಧಿ ಎ. ಲಕ್ಷ್ಮೀದೇವಿ
ಪರ್ಮಿಟ್ ಇಲ್ಲದೇ ಮರಳು ಸಾಗಿಸುವುದು, ಸಂಗ್ರಹಿಸುವುದರ ವಿರುದ್ದ ದಂಡ ಹಾಕಬೇಕು. ಬಂಡಿಗಳಲ್ಲಿ ಮನೆ ಉದ್ದೇಶಕ್ಕೆ ಮರಳು ಉಪಯೋಗಿಸಬಹುದು. ಆದರೆ ವ್ಯವಹಾರಕ್ಕೆ ಬಳಸಿಕೊಳ್ಳಬಾರದು. ಚಕ್ಕಡಿ ಸೇರಿದಂತೆ ಇತರೆ ದೊಡ್ಡ ವಾಹನಗಳು ಒಂದು ಪರ್ಮಿಟ್ ಪಡೆದು ಅನಧಿಕೃತವಾಗಿ ಬಹಳಷ್ಟು ಮರಳು ಹೊಡೆದು ಸರ್ಕಾರಕ್ಕೆ ರಾಜಧನ ನೀಡದೇ ಹಾನಿ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು ಇಂತಹವರ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು. ಅನಧಿಕೃತ ಚಟುವಟಿಕೆಯನ್ನು ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಹಾಗೂ ನಿಯಮಾನುಸಾರ ದಂಡ ಸಂಗ್ರಹ ಮಾಡುವಂತೆ ಸೂಚನೆ ನೀಡಿದರು.
ಅಕ್ರಮ ಮರಳು ಬಳಕೆ ತಡೆಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸ್ಕ್ವಾಡ್ ತಂಡಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಎಸಿಯವರು ಈ ಬಗ್ಗೆ ಸಭೆ ಕರೆದು ಸೂಚನೆಗಳನ್ನು ನೀಡಬೇಕೆಂದರು.
ಆರ್ಟಿಓ ಶ್ರೀಧರ್ ಮಲ್ಲಾಡ್ ಮಾತನಾಡಿ, ರಸ್ತೆಯಲ್ಲಿ ಸ್ಪೀಡ್ ಕಂಟ್ರೋಲರ್ ಮತ್ತು ಜಲ್ಲಿ ಮತ್ತು ಮರಳು ಗಾಡಿಗಳಿಂದ ಹಿಂದಿನ ಗಾಡಿಗಳಿಗೆ ಜಲ್ಲಿ ಮರಳು ಸಿಡಿದು ಹಾನಿಯಾಗುವುದನ್ನು ತಪ್ಪಿಸಲು ಟಾರ್ಪಲಿನ್ ಕವರ್ ಮಾಡಿಕೊಂಡು ಹೋಗುವ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕೆಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಲೋಡ್ ಆದ ವಾಹನಗಳು ಸೇರಿದಂತೆ ಇತರೆ ವಾಹನಗಳಿಗೂ ಸ್ಪೀಡ್ ಕಂಟ್ರೋಲರ್ ಅಳವಡಿಸಲು ಆರ್ಟಿಓ ಕ್ರಮ ವಹಿಸುವಂತೆ ಹಾಗೂ ಟಾರ್ಪಲಿನ್ ಕವರ್ ಮಾಡದಿದ್ದರೆ ದಂಡ ಹಾಕುವಂತೆ ಜೊತೆಗೆ ಟಾರ್ಪಲಿನ್ ಕವರ್ ಮಾಡುವ ಮೂಲಕ ಇತರೆ ವಾಹನಗಳಿಗೆ ಹಾನಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಕಲ್ಲು ಕ್ವಾರೆ ನಿರ್ವಹಣೆ ಬಗ್ಗೆ ಸೂಚನೆ
ನಿಯಮ ಮೀರಿ ಯಾವುದೇ ರೀತಿಯ ಕಾನೂನು ಬಾಹಿರ ಕಲ್ಲುಕ್ವಾರೆ ಮಾಡುವಂತಿಲ್ಲ. ಲೈಸನ್ಸ್ನಲ್ಲಿ ಇರುವ ಷರತ್ತು ಮತ್ತು ನಿಯಮಗಳಿಗೆ ಅನುಗುಣವಾಗಿ ಕಲ್ಲು ಕ್ವಾರೆ ನಡೆಸಬೇಕು. ಸ್ಪೋಟಕವಾಗುವ ಸ್ಥಳದ 15 ಮೀಟರ್ ಒಳಗೆ ಧೂಮಪಾನ ನಿಷೇಧ. 24 ಗಂಟೆ ಭದ್ರತಾ ಸಿಬ್ಬಂದಿ ನೇಮಕ, ಸ್ಪೋಟಕ ವ್ಯಾನ್ ಹೆಚ್ಚಿನ ಸಮಯದವರೆಗೆ ಸಾರಿಗೆ ರಸ್ತೆಯಲ್ಲಿ ನಿಲ್ಲಿಸಬಾರದು.
ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೆ ಸ್ಪೋಟಕಗಳನ್ನು ಸಾಗಿಸಬಾರದು. ಸಿಸಿ ಕ್ಯಾಮೆರಾ ನಿರಂತರ ನಿರ್ವಹಿಸುವಂತೆ ಕ್ರಮ ಸೇರಿದಂತೆ ಇನ್ನಿತರೆ ಮುಖ್ಯವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು.
ಎಫ್ಐಆರ್ ದಾಖಲು
ಗ್ರಾಮಾಂತರ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಮಾತನಾಡಿ, ಕಲ್ಲುಕ್ವಾರಿಯಲ್ಲಿ ಅನಧಿಕೃತ ಎಲೆಕ್ಟ್ರಿಕ್ ಡಿಟೋನೇಷನ್ ಇರುವ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿರುವ ಬಗ್ಗೆ ಮಾತನಾಡಿ, ಈ ಸಂಬಂಧ ಎಫ್ಐಆರ್ ದಾಖಲು ಮಾಡಲಾಗಿದೆ. ಎಕ್ಸ್ಪ್ಲೊಸಿವ್ ಸಬ್ಸ್ಟೆನ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನೆಗಳೂರಿನ ಲಿಂಗನಗೌಡ ಎಂಬುವವರು ಆಲೂರುಹಟ್ಟಿ ಗ್ರಾಮದ ಕುಮಾರನಾಯ್ಕ ಎಂಬುವವರ ಕಲ್ಲು ಕ್ವಾರಿಯ ಬಗ್ಗೆ ನೀಡಲಾದ ದೂರಿನನ್ವಯ ಪೋಲೀಸ್ ಉಪಾಧೀಕ್ಷಕರು, ಪಿಎಸ್ಐ, ಭೂವಿಜ್ಞಾನಿಗಳು, ಬ್ಲಾಸ್ಟಿಂಗ್ ತಜ್ಞರು ಸ್ಥಳ ಪರಿಶೀಲನೆ ನಡೆಸಿದಾಗ ಕಲ್ಲು ಕ್ವಾರಿಯನ್ನು ನಡೆಸುತ್ತಿರುವ ಆಲೂರು ಗ್ರಾಮದ ಸರ್ವೇ ನಂ.68/9 ರಲ್ಲಿ ಒಂದು ಜೀವಂತ ಎಲೆಕ್ಟ್ರಿಕ್ ಡಿಟೋನೇಟರ್ ಪತ್ತೆಯಾಗಿದ್ದು ಪಂಚನಾಮೆಯನ್ನು ಜರುಗಿಸಿ ಡಿಟೋನೇಟರ್ನ್ನು ಅಮಾನತ್ತುಪಡಿಸಿಕೊಂಡು ಅದನ್ನು ಸುರಕ್ಷತೆ ದೃಷ್ಟಿಯಿಂದ ಕಾಡಜ್ಜಿ ಗ್ರಾಮದಲ್ಲಿರುವ ಮ್ಯಾಗ್ಜಿನ್ನಲ್ಲಿ ಇಡಲು ಕ್ರಮ ವಹಿಸಲಾಗಿದೆ. ಹಾಗೂ ಈ ದೂರಿನನ್ವಯ ಸೂಕ್ತ ಕ್ರಮ ಕೈಗೊಳ್ಳಲು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.
ಡಿಸಿ ಯವರು ಮಾತನಾಡಿ, ತಾಲ್ಲೂಕು ಮಟ್ಟದಲ್ಲಿ ಇಓ, ಟಿಹೆಚ್ಓ ಮತ್ತು ತಹಶೀಲ್ದಾರರು ನಿಯಮಿತವಾಗಿ ಕೋವಿಡ್ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಬೇಕು. ಕೋವಿಡ್ ಎರಡನೇ ಅಲೆ ಬಾರದಿರಲಿ. ಸ್ವಯಂ ನಿಯಂತ್ರಣ ಹೇರಿಕೊಳ್ಳುವುದು ಅತಿ ಮುಖ್ಯ ಎಂದು ಸೂಚಿಸಿದರು.
ಶಿಷ್ಟಾಚಾರ ಪಾಲಿಸುವಂತೆ ಸೂಚನೆ
ಸರ್ಕಾರದ ಕಾರ್ಯದರ್ಶಿಗಳು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರಿ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಕಡ್ಡಾಯವಾಗಿ ಶಿಷ್ಚಾಚಾರ ಪಾಲಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಒಳಗೊಂಡಂತೆ ಸರ್ಕಾರದ ಆ ಇಲಾಖೆಯ ಅಧಿಕೃತ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಯ ಸಚಿವರ ಸಮಾಲೋಚನೆಯೊಂದಿಗೆ ನಿಗದಿಪಡಿಸಿ ಕಾರ್ಯಕ್ರಮವನ್ನು ಏರ್ಪಡಿಸತಕ್ಕದ್ದು. ಸರ್ಕಾರಿ ಕಾರ್ಯಕ್ರಮ ನಡೆಸಲು ಕನಿಷ್ಟ ಪಕ್ಷ 7 ದಿನಗಳ ಸಮಯಾವಕಾಶವನ್ನು ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೋರಬೇಕು ಎಂದು ತಿಳಿಸಿರುತ್ತಾರೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಹಿರಿಯ ಭೂವಿಜ್ಞಾನಿ ಕೋದಂಡರಾಮ, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಡಿಹೆಚ್ಓ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಡಿಡಿ ವಿಜಯಕುಮಾರ್, ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ20 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

