Connect with us

ದಿನದ ಸುದ್ದಿ

ಪರವಾನಗಿ ಹೊಂದಿದ ಮಾರಾಟಗಾರರಿಂದ ಮಾತ್ರ ತಂಬಾಕು ಮಾರಾಟವಾಗಬೇಕು : ಎನ್ಎಲ್ಎಸ್ಐಯು ವರದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು: ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಎಲ್ಲ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳು ಪರವಾನಗಿ ಹೊಂದಿರಬೇಕು. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿರುವ ಎಲ್ಲ ಆವರಣಗಳಲ್ಲಿ ಪರವಾನಗಿಯನ್ನು ಎದ್ದು ಕಾಣುವಂತೆ ಪ್ರದರ್ಶಿಸಬೇಕು ಹಾಗು ಪ್ರತಿ ವರ್ಷ ಪರವಾನಗಿಯನ್ನು ನವೀಕರಿಸಬೇಕು ಎಂದು ಇತ್ತೀಚೆಗೆ ಬಿಡುಗಡೆಗೊಂಡ ‘ಭಾರತದಲ್ಲಿ ತಂಬಾಕು ಮಾರಾಟಗಾರರ ಪರವಾನಗಿ ಜಾರಿ ಚೌಕಟ್ಟು’ (Framework for Implementation of Tobacco Vendor Licensing in India) ವರದಿ ಶಿಫಾರಸು ಮಾಡಿದೆ.

ತಂಬಾಕು ಉತ್ಪನ್ನಗಳ ಲಭ್ಯತೆಯನ್ನು ನಿಯಂತ್ರಿಸಿ, ವ್ಯಸನಕಾರಿ ತಂಬಾಕು ಉತ್ಪನ್ನಗಳಿಂದ ಉಂಟಾಗುವ ಆಜೀವ ಯಾತನೆಯಿಂದ ಭಾರತೀಯರನ್ನು ರಕ್ಷಿಸಲು ತಂಬಾಕು ಮಾರಾಟಗಾರರ ಪರವಾನಗಿ ನಿರ್ಣಾಯಕವಾಗಿದೆ. ವರದಿಯ ಪ್ರಕಾರ, ಸಿಗರೇಟ್, ಬೀಡಿ ಮತ್ತು ಜಗಿಯುವ ತಂಬಾಕು ಉತ್ಪನ್ನ ಮಾರಾಟಕ್ಕೆ ಮಾರಾಟಗಾರರ ಪರವಾನಗಿಯನ್ನು ಅನುಷ್ಠಾನಗೊಳಿಸಿದರೆ, ತಂಬಾಕು ನಿಯಂತ್ರಣ ಕಾನೂನು ಮತ್ತು ನೀತಿಗಳ ಪರಿಣಾಮಕಾರಿ ಜಾರಿಗೂ ಸಹಕಾರಿಯಾಗುತ್ತದೆ.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್ಎಲ್ಎಸ್ಐಯು) ದಿ ಚೇರ್ ಆನ್ ಕನ್ಸ್ಯುಮರ್ ಲಾ ಅಂಡ್ ಪ್ರಾಕ್ಟೀಸ್ ಬಿಡುಗಡೆ ಮಾಡಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಫೆಬ್ರವರಿ 25ಕ್ಕೆ ಸಲ್ಲಿಸಲಾಗಿರುವ ಈ ವರದಿ, ಭಾರತದಲ್ಲಿ ತಂಬಾಕು ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸಲು ಮಾರಾಟಗಾರರ ಪರವಾನಗಿ ಪರಿಕಲ್ಪನೆಯನ್ನು ವಿಶ್ಲೇಷಿಸಿದೆ.

ಇದನ್ನೂ ಓದಿ | ದಾವಣಗೆರೆ ಜಿ.ಪಂ ಸಾಮಾನ್ಯ ಸಭೆ | ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸುವಂತೆ ಸದಸ್ಯರ ಒತ್ತಾಯ

ಅಲ್ಲದೆ, ಭಾರತದ ವಿವಿಧ ರಾಜ್ಯ ಮತ್ತು ನಗರಗಳು ಮಾರಾಟಗಾರರ ಪರವಾನಗಿ ಕುರಿತು ಅಳವಡಿಸಿಕೊಂಡಿರುವ ಪದ್ಧತಿ ಮತ್ತು ಪ್ರಕ್ರಿಯೆಯನ್ನು ಪರಿಶೀಲಿಸಿದೆ. ತಂಬಾಕು ಮಾರಾಟಗಾರರ ಪರವಾನಗಿಗಾಗಿ ಅಸ್ತಿತ್ವದಲ್ಲಿರುವ ಕಾನೂನುಗಳು, ಜಾಗತಿಕವಾಗಿ ಆಚರಣೆಯಲ್ಲಿರುವ ಅತ್ಯುತ್ತಮ ಅಭ್ಯಾಸಗಳು ಮತ್ತು ವಿಶ್ವ ಅರೋಗ್ಯ ಸಂಸ್ಥೆಯ ಫ್ರೇಮ್ ವರ್ಕ್ ಕನ್ವೆನ್ಷನ್ ಆನ್ ಟೊಬ್ಯಾಕೋ ಕಂಟ್ರೋಲ್ (WHO FCTC) ತಂಬಾಕು ನಿಯಂತ್ರಣದ ಕುರಿತಾದ ಜಾಗತಿಕ ಸಾರ್ವಜನಿಕ ಆರೋಗ್ಯ ಒಪ್ಪಂದದಡಿ ಸೂಚಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ವರದಿ ಮಾದರಿ ಚೌಕಟ್ಟನ್ನು ಪ್ರಸ್ತಾಪಿಸಿದೆ.

ನಿಯಂತ್ರಕ ವಿಧಾನವಾಗಿ ಪರಿಗಣಿಸುವುದಾದರೆ, ತಂಬಾಕು ಮಾರಾಟಗಾರರ ಪರವಾನಗಿ ರಾಜ್ಯ/ಪುರಸಭೆ ಮಟ್ಟದಲ್ಲಿ ಅತ್ಯಂತ ಪರಿಣಾಮಕಾರಿ ಅಸ್ತ್ರವಾಗಬಹುದು. ಚಿಲ್ಲರೆ ವ್ಯಾಪಾರದಲ್ಲಿ ತಂಬಾಕು ಉತ್ಪನ್ನಗಳ ಲಭ್ಯತೆ ಕುಗ್ಗಿಸುವ ಗುರಿ ಹೊಂದಿರುವ ವಿವಿಧ ನೀತಿಗಳನ್ನು ಕಾರ್ಯಗತಗೊಳಿಸಿ ಜಾರಿಗೊಳಿಸಲು ಮಾರಾಟಗಾರರ ಪರವಾನಗಿ ಮಾದರಿ ಚೌಕಟ್ಟನ್ನು ಬಳಸಬಹುದಾಗಿದ್ದು, ಇದು ಸ್ಥಳೀಯ ಸರ್ಕಾರಗಳಿಗೆ ಉತ್ತಮ ನಿಯಂತ್ರಕ ಸಾಧನದ ಅಡಿಗಲ್ಲಾಗಿದೆ.

ಭಾರತದಲ್ಲಿ ತಂಬಾಕು ನಿಯಂತ್ರಣವನ್ನು ಪ್ರಾಥಮಿಕವಾಗಿ ಕೋಟ್ಪಾ (COTPA) ನಿಯಂತ್ರಿಸುತ್ತಿದ್ದರೂ, ತಂಬಾಕು ಬಳಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಇತರ ಕಾನೂನುಗಳಿವೆ. ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿವಿಧ ಕಾನೂನುಗಳ ಪರಿಣಾಮಕಾರಿ ಮತ್ತು ಸಂಘಟಿತ ಜಾರಿಗೆ ರಾಜ್ಯ ಮತ್ತು ಪುರಸಭೆ ಸರ್ಕಾರಗಳಿಗೆ ತಂಬಾಕು ಮಾರಾಟಗಾರರ ಪರವಾನಗಿ ಒಂದು ವಿಶಿಷ್ಟ ಅವಕಾಶವನ್ನು ಒದಗಿಸುತ್ತದೆ.

“ತಂಬಾಕಿನ ಹಾನಿಕಾರಕ ಪರಿಣಾಮಗಳು ಜಗತಿನಾದ್ಯಂತ ಸಾಬೀತಾಗಿದ್ದು, ಅವುಗಳನ್ನು ಒಪ್ಪಿಕೊಳ್ಳಲಾಗಿದೆ. ಈ ವರದಿಯ ಮೂಲಕ, ಅಸ್ತಿತ್ವದಲ್ಲಿರುವ ಕಾನೂನು ಮತ್ತು ಜಾಗತಿಕ ಅತ್ಯುತ್ತಮ ಅಭ್ಯಾಸಗಳ ಆಧಾರದ ಮೇಲೆ ಪರವಾನಗಿ ಪಡೆದ ಮಾರಾಟಗಾರರ ಮೂಲಕ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಮಾದರಿ ಕಾನೂನು ಚೌಕಟ್ಟನ್ನು ಎನ್‌ಎಲ್‌ಎಸ್‌ಐಯು ಶಿಫಾರಸು ಮಾಡಿದೆ.

ಈ ಮಾರಕ ಉತ್ಪನ್ನಗಳಿಂದ ಭಾರತೀಯರನ್ನು, ವಿಶೇಷವಾಗಿ ಮಕ್ಕಳು ಮತ್ತು ಯುವಕರನ್ನು ರಕ್ಷಿಸಲು ರಾಜ್ಯ ಮತ್ತು ಪುರಸಭ ಸರ್ಕಾರಗಳು ಈ ಶಿಫಾರಸುಗಳನ್ನು ಪರಿಗಣಿಸುತ್ತವೆ ಎಂದು ನಾವು ಆಶಿಸುತ್ತೇವೆ,” ಎಂದು ಪ್ರೊ. (ಡಾ.) ಅಶೋಕ್ ಆರ್. ಪಾಟೀಲ್, ಕಾನೂನು ಪ್ರಾಧ್ಯಾಪಕರು ಮತ್ತು ಚೇರ್ ಪ್ರೊಫೆಸರ್, ದಿ ಚೇರ್ ಆನ್ ಕನ್ಸ್ಯುಮರ್ ಲಾ ಅಂಡ್ ಪ್ರಾಕ್ಟೀಸ್, ಎನ್‌ಎಲ್‌ಎಸ್‌ಐಯು, ಬೆಂಗಳೂರು, ಅವರು ತಿಳಿಸಿದರು.

ಎನ್‌ಎಲ್‌ಎಸ್‌ಐಯು ವರದಿಯ ತಂಬಾಕು ಮಾರಾಟಗಾರರ ಪರವಾನಗಿಯ ಮಾದರಿ ಕಾನೂನು ಚೌಕಟ್ಟಿನ ಪ್ರಕಾರ: ಎಲ್ಲ ತಂಬಾಕು ಮಾರಾಟಗಾರರು, ಚಿಲ್ಲರೆ ಅಥವಾ ಸಗಟು ವ್ಯಾಪಾರಿಗಳು, 12 ತಿಂಗಳ ಅವಧಿಯ ಮಾನ್ಯತೆಯುಳ್ಳ ಪರವಾನಗಿ ಹೊಂದಿರಬೇಕು, ಅದು ವರ್ಗಾಯಿಸಲಾಗದ ಪರವಾನಗಿಯಾಗಿರಬೇಕು ಮತ್ತು ಅದನ್ನು ಪ್ರತಿವರ್ಷ ನವೀಕರಿಸಬೇಕು; ಪರವಾನಗಿ ಪಡೆಯಲು ಉದ್ದೇಶಿಸುವ ಎಲ್ಲ ಅರ್ಜಿದಾರರು ತಂಬಾಕು ನಿಯಂತ್ರಣ ಕಾನೂನುಗಳನ್ನು ಅನುಸರಿಸಬೇಕು; ತಂಬಾಕು ಉತ್ಪನ್ನಗಳನ್ನು ಮಾತ್ರ ಮಾರುವ ಮಾಡುವ ಮಾರಾಟಗಾರರಿಗೆ ಪರವಾನಗಿ ನೀಡಬೇಕು ಮತ್ತು ತಂಬಾಕಿನೊಂದಿಗೆ ಚಾಕೊಲೇಟ್, ಮಿಠಾಯಿ, ಬಿಸ್ಕತ್ತು, ಚಿಪ್ಸ್ ಮುಂತಾದ ತಂಬಾಕೇತರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಬೇಕು; ತಂಬಾಕು ಉತ್ಪನ್ನಗಳ ಮಾರಾಟದ ಆವರಣದಲ್ಲಿ ತಂಬಾಕು ಪರವಾನಗಿ ಎದ್ದು ಕಾಣುವಂತೆ ಪ್ರದರ್ಶಿಸಬೇಕು; ನಿಬಂಧನೆಗಳು ಮತ್ತು ಷರತ್ತುಗಳ ಉಲ್ಲಂಘನೆಗೆ ಹಂತ ಹಂತವಾಗಿ ದಂಡ ವಿಧಿಸುವುದು, ಪರವಾನಗಿ ಅಮಾನತುಗೊಳಿಸುವುದು ಮತ್ತು ಅಂತಿಮವಾಗಿ ಪರವಾನಗಿ ರದ್ದುಗೊಳಿಸುವ ಮೂಲಕ ಕ್ರಮಕೈಗೊಳ್ಳಬೇಕು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಭಾಗವಾದ ರಾಜ್ಯ ತಂಬಾಕು ನಿಯಂತ್ರಣ ಕೋಶದ (ಎಸ್‌ಟಿಸಿಸಿ) ಉಪನಿರ್ದೇಶಕರಾದ ಡಾ. ಸೆಲ್ವರಾಜನ್, “ವರದಿಯಲ್ಲಿ ಮುಖ್ಯವಾಗಿ ಉಲ್ಲೇಖಿಸಿರುವಂತೆ, ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳು ಸುಲಭವಾಗಿ ಸಿಗುವುದನ್ನು ತಡೆಯಲು ಮತ್ತು ಮಾರಾಟವನ್ನು ನಿಯಂತ್ರಿಸಲು, ಮಾರಾಟಗಾರರ ಪರವಾನಗಿ ಅತ್ಯಗತ್ಯವಾಗಿದೆ. ಸಾರ್ವಜನಿಕರಿಂದಲೂ ಇದಕ್ಕೆ ವ್ಯಾಪಕ ಬೆಂಬಲವಿದ್ದು, ನೂರಾರು ಮಕ್ಕಳು, ಪೋಷಕರು ಮತ್ತು ಶಿಕ್ಷಕರು ಬೆಂಬಲ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ಪತ್ರಗಳನ್ನು ಬರೆದಿದ್ದಾರೆ” ಎಂದರು.

ಮೈಸೂರಿನ ತಂಬಾಕು ವಿರೋಧಿ ವೇದಿಕೆಯ ಸಂಚಾಲಕರಾದ ಶ್ರೀ ವಸಂತ್‌ಕುಮಾರ್ ಮೈಸೂರಮಠ್, “ಜೀವನವಿಡಿ ದುಃಖ ಮತ್ತು ಸಂಕಟದಿಂದ ಯುವಕರು/ಮಕ್ಕಳನ್ನು ರಕ್ಷಿಸಲು ತಂಬಾಕು ಉತ್ಪನ್ನಗಳು ಅವರಿಗೆ ಸಿಗದಂತೆ ಮಾಡುವುದು ಅನಿವಾರ್ಯವಾಗಿದೆ. ವಿಶೇಷವಾಗಿ, ಈ ಸವಾಲಿನ ಸಂದರ್ಭದಲ್ಲಿ, ಭಾರತದಲ್ಲಿ ತಂಬಾಕು ಎಂಬ ಪೀಡೆಯನ್ನು ತಡೆಯಲು ಈ ವ್ಯಸನಕಾರಿ ಉತ್ಪನ್ನಗಳ ಮಾರಾಟ, ಪ್ರಚಾರ ಮತ್ತು ಬಳಕೆಯನ್ನು ನಿಯಂತ್ರಿಸುವುದು ಅತ್ಯಂತ ನಿರ್ಣಾಯಕವಾಗಿದೆ.

ಅಧಿಕೃತವಾಗಿ ಪರವಾನಗಿ ಪಡೆದ ಅಂಗಡಿಗಳು/ಮಾರಾಟಗಾರರ ಮೂಲಕ ತಂಬಾಕು ಉತ್ಪನ್ನಗಳ ಮಾರಾಟದಿಂದ ಜನರ ಆರೋಗ್ಯ ಹದಗೆಡುವುದನ್ನುತಪ್ಪಿಸಿದಂತಾಗುತ್ತದೆ ಮತ್ತುಸರ್ಕಾರದ ಮೂಲ ಕರ್ತವ್ಯವಾದ ಸಾರ್ವಜನಿಕ ಆರೋಗ್ಯ ಸುಧಾರಣೆ, ಸ್ವಾಸ್ಥ್ಯ ಹಾಗು ಯೋಗಕ್ಷೇಮ ರಕ್ಷಣೆಯನ್ನೂ ಮಾಡಿದಂತಾಗುತ್ತದೆ,” ಎಂದು ಅಭಿಪ್ರಾಯಪಟ್ಟರು.

2017ರ ಸೆಪ್ಟೆಂಬರ್‌ನಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಕ್ಕಳು ತಂಬಾಕು ಉತ್ಪನ್ನಗಳಿಗೆ ಒಡ್ಡಿಕೊಳ್ಳುವುದರಿಂದ ರಕ್ಷಿಸುವಂತೆ ಪುರಸಭೆ/ಸ್ಥಳೀಯ ಪ್ರಾಧಿಕಾರಗಳಿಗೆ ಸೂಚಿಸಿತ್ತು. ಇದಕ್ಕಾಗಿ ವ್ಯವಸ್ಥೆಯೊಂದನ್ನು ಅಭಿವೃದ್ಧಿಪಡಿಸಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಚಿಲ್ಲರೆ ಅಂಗಡಿಗಳಿಗೆ ಅನುಮತಿ ನೀಡುವುದರೊಂದಿಗೆ ಅಲ್ಲಿ ಮಿಠಾಯಿ, ಚಿಪ್ಸ್, ಬಿಸ್ಕತ್ತು, ತಂಪು ಪಾನೀಯ, ಇತ್ಯಾದಿ ತಂಬಾಕೇತರ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಖಚಿತಪಡಿಸಿಕೊಳ್ಳಲು ಸೂಚಿಸಿತ್ತು.

ಇದರನ್ವಯ, ಅಯೋಧ್ಯೆ, ಲಕ್ನೋ, ಜೈಪುರ, ರಾಂಚಿ, ಪಾಟ್ನಾ, ಹೌರಾ, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಅಗತ್ಯ ಆದೇಶ ಹೊರಡಿಸಿ ನಶ್ಯ, ಸಿಗಾರ್, ಸಿಗರೇಟ್ ಮತ್ತು ಬೀಡಿ ಸೇರಿದಂತೆ ಎಲ್ಲ ರೀತಿಯ ತಂಬಾಕಿನ ಸಂಗ್ರಹ, ಪ್ಯಾಕಿಂಗ್, ಶುದ್ಧೀಕರಣ ಸೇರಿದಂತೆ ತಂಬಾಕಿನ ಉತ್ಪಾದನೆಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳಿಗೆ ಪರವಾನಗಿ ಕಡ್ಡಾಯಗೊಳಿಸಿವೆ.

ತಂಬಾಕು ಬಳಕೆದಾರರ ಪಟ್ಟಿಯಲ್ಲಿ ಜಾಗತಿಕವಾಗಿ ಭಾರತ ಎರಡನೇ ಸ್ಥಾನದಲ್ಲಿದೆ (268 ಮಿಲಿಯನ್ ಅಥವಾ ದೇಶದ ಶೇಕಡಾ 28.6 % ವಯಸ್ಕರು). ಇದರಲ್ಲಿ ಪ್ರತಿವರ್ಷ 12 ಲಕ್ಷ ಮಂದಿ ತಂಬಾಕು ಸಂಬಂಧಿತ ಖಾಯಿಲೆಗಳಿಂದ ಮೃತಪಡುತಿದ್ದಾರೆ. ಧೂಮಪಾನದಿಂದಾಗಿ 10 ಲಕ್ಷ ಜನ ಮರಣ ಹೊಂದುತ್ತಿದ್ದರೆ, ಎರಡು ಲಕ್ಷಕ್ಕೂ ಹೆಚ್ಚು ಮಂದಿ ಧೂಮಪಾನಕ್ಕೆ ಒಡ್ಡಿಕೊಂಡು (ಸೆಕೆಂಡ್ ಹ್ಯಾಂಡ್ ಸ್ಮೋಕಿಂಗ್) ಸಾವನ್ನಪ್ಪುತ್ತಿದ್ದಾರೆ.

ಅಲ್ಲದೆ, 35,000ಕ್ಕೂ ಹೆಚ್ಚು ಜನ ಹೊಗೆರಹಿತ ತಂಬಾಕು ಬಳಕೆಯಿಂದ ಅಸುನೀಗುತ್ತಿದ್ದಾರೆ. ತಂಬಾಕು ಬಳಕೆ ಭಾರತದಲ್ಲಿನ ಶೇಕಡಾ 27 % ಎಲ್ಲ ವಿಧದ ಕ್ಯಾನ್ಸರ್ ಗಳಿಗೆ ಕಾರಣ. ತಂಬಾಕು ಸಂಬಂದಿತ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಪ್ರತಿವರ್ಷ 1,82,000 ಕೋಟಿ ರೂಪಾಯಿಗಳು ವ್ಯಯವಾಗುತ್ತಿದ್ದು, ಇದು ಭಾರತದ ಜಿಡಿಪಿಯ ಶೇಕಡಾ 1.8% ರಷ್ಟಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.

ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending