ದಿನದ ಸುದ್ದಿ
ಚನ್ನಗಿರಿ | ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಸಚಿವ ಭೈರತಿ ಬಸವರಾಜ್
ಸುದ್ದಿದಿನ,ದಾವಣಗೆರೆ : ಚನ್ನಗಿರಿ ಪಟ್ಟಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿ ಇಲಾಖೆಯಿಂದ ರೂ.5.47 ಕೋಟಿ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು.
ಚನ್ನಗಿರಿ ತಾಲ್ಲೂಕಿನ ತಣಿಗೆರೆ ಗ್ರಾಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಂತೆಬೆನ್ನೂರು ಹೋಬಳಿ ಮಟ್ಟದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಕಳೆದ 3 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸರ್ಕಾರದಿಂದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಯೋಜನೆಯಡಿ ಪ್ರತಿಯೊಂದು ಗ್ರಾಮದಲ್ಲೂ ಜನರ ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುವುದು ತಪ್ಪಲಿದೆ ಎಂದರು.
ಸೋಮವಾರ ಈ ಭಾಗದಲ್ಲಿ ರೂ.28.79 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳು ನೆರವೇರಿದ್ದು, ಶಾಸಕರ ಕಾಳಜಿಯಿಂದಾಗಿ ತಾಲ್ಲೂಕು ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ ಎಂದ ಅವರು ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನಾಯಕತ್ವದ ನಮ್ಮ ಸರ್ಕಾರ ರಾಜ್ಯದ ಸಮಗ್ರ ಅಭಿವೃದ್ದಿ ದೃಷ್ಟಿಯಲ್ಲಿಟ್ಟುಕೊಂಡು ಕರೋನಾ ಸಂದರ್ಭದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಕಾರ್ಯಕ್ರಮಗಳನ್ನು ನೀಡಿದೆ ಎಂದರು.
ಇದನ್ನೂ ಓದಿ | ಚಿತ್ರದುರ್ಗ | ನೀರಾವರಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಿಲ್ಲ : ಸಮಿತಿ ಸಂಚಾಲಕರ ಅಭಿಮತ
ಈ ಜನಸ್ಪಂದನ ಕಾರ್ಯಕ್ರಮದ ಮುಖ್ಯ ಉದ್ದೇಶ ಗ್ರಾಮಗಳ ಅಭಿವೃದ್ಧಿಯಾಗಿದೆ. ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ದೇವಸ್ಥಾನಗಳ ಜೀರ್ಣೋದ್ದಾರ, ಸಮುದಾಯ ಭವನಗಳ ನಿರ್ಮಾಣ, ಶಾಲೆಗಳ ನವೀಕರಣಕ್ಕಾಗಿ ಸರ್ಕಾರದಿಂದ ರೂ28.79 ಲಕ್ಷವನ್ನು ಮಂಜೂರು ಮಾಡಲಾಗಿದೆ ಎಂದರು.
ರೈತರು, ಬಡವರು, ಮತ್ತು ದೀನದಲಿತರಿಗಾಗಿ ಕೃಷಿಯಂತ್ರೋಪಕರಣಗಳನ್ನು, ಹಾಗೂ ಕೈಗಾಡಿಗಳನ್ನು ಫಲಾನುಭವಿಗಳಿಗೆ ವಿತರಿಸಿದ ಅವರು, ಗ್ರಾಮದ ಜನರಿಗೆ ಆರ್ಥಿಕವಾಗಿ ಸಬಲರಾಗಬೇಕಾದರೆ ಸರ್ಕಾರದಿಂದ ಬರುವ ಅನುದಾನದ ಸೌಲಭ್ಯ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಪಡೆದು ವ್ಯವಸಾಯಕ್ಕೆ ರೈತರು ಬಳಸಿಕೊಳ್ಳಬಹುದು.
ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ಕೇಂದ್ರದಿಂದ ರೂ.6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ ರೂ.4 ಸಾವಿರ ಹಣ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ. ಹಾಗೂ ಕೃಷಿ ಇಲಾಖೆಯಿಂದ ಕೃಷಿ ಯಂತ್ರೋಪಕರಣಗಳನ್ನು ನಿಗದಿತ ಬಾಡಿಗೆ ರೂಪದಲ್ಲಿ ಪಡೆದು ವ್ಯವಸಾಯಕ್ಕೆ ಅನುಕೂಲ ಪಡೆಯಬಹುದು.
ಹಾಗೆಯೇ ಈ ಬಾರಿಯ ಬಜೆಟ್ನಲ್ಲಿ ನಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು ದಾವಣಗೆರೆ ಜಿಲ್ಲೆಯ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜು ಆರಂಭ ಮಾಡಲು ಚರ್ಚಿಸಲಾಗಿದೆ. ಹಾಗೂ ನಮ್ಮ ಜಿಲ್ಲೆಯಲ್ಲಿ ಕೃಷಿ ವಿಜ್ಞಾನ ಕಾಲೇಜು ಸ್ಥಾಪನೆಯಾಗಬೇಕು ಎಂದು ಅವರಲ್ಲಿ ಮನವಿ ಮಾಡಿದ್ದೇವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಎಸ್.ಡಿ.ಎಲ್. ನ ಅಧ್ಯಕ್ಷರು ಹಾಗೂ ಚನ್ನಗಿರಿ ಕ್ಷೇತ್ರದ ಶಾಸಕ ಕೆ.ಮಾಡಾಳ್ ವಿರುಪಾಕ್ಷಪ್ಪ, ಜನರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಹುಡುಕುವ ಬದಲಾಗಿ ಅವರೇ ಜನರ ಬಳಿ ಬಂದಾಗ ಸಮಸ್ಯೆಗಳು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ತಿಳಿಯುತ್ತದೆ ಇದರಿಂದ ನಾವು ಮಾಡಬೇಕಾಗಿರುವ ಕೆಲಸದ ಅರಿವು ನಮಗಾಗುತ್ತದೆ ಎಂದರು.
ಅಧಿಕಾರಿಗಳ ಭೇಟಿಗೆ ಸಾಮಾನ್ಯ ಜನ ತೆರಳಿದರೆ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿಯಿದೆ. ಬದಲಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ನಡುವೆ ಇದ್ದಲ್ಲಿ ಜನರ ಕಷ್ಟ-ಸುಖಗಳನ್ನು ಮಕ್ತವಾಗಿ ಗ್ರಹಿಸುವ ಮತ್ತು ಅವರ ಬೇಡಿಕೆಗಳನ್ನು ಈಡೇರಿಸಲು ಈ ಕಾರ್ಯಕ್ರಮದಿಂದ ಸಾಧ್ಯವಾಗಲಿದೆ.
ಸಂಧ್ಯಾ ಸುರಕ್ಷಾ, ವೃದ್ಧಾಪ್ಯ, ನಿರ್ಗತಿಕ ವಿಧವಾ ವೇತನ, ಅಂಗವಿಕಲರ ವೇತನ, ಮನಸ್ವಿನಿ ವೇತನ, ಅಕ್ರಮ ಸಕ್ರಮ ಯೋಜನೆ ನಿವೇಶನ ಹಕ್ಕು ಪತ್ರಗಳಿಗಾಗಿ ವಿ.ಎ, ಆರ್.ಐ ಬಳಿ ತಿಂಗಳಗಟ್ಟಲೇ ಅಲೆದಾಡುವ ಸಮಸ್ಯೆ ಇತ್ತು. ಇಂದು ಸರ್ಕಾರ ಮತ್ತು ಅಧಿಕಾರಿಗಳು ನಿಮ್ಮ ಬಳಿಗೆ ಬಂದು ಸುಮಾರು ರೂ. 37.70 ಲಕ್ಷಗಳ ವಿವಿಧ ಪ್ರಯೋಜನಗಳನ್ನು ವಿತರಿಸಲಾಗಿದೆ. ಹಾಗೂ 60 ವರ್ಷ ಮೇಲ್ಪಟ್ಟಂತಹ ಜನರನ್ನು ಅಧಿಕಾರಿಗಳೇ ಗುರುತು ಮಾಡಿ ಅವರಿಗೆ ಮುಂದಿನ ತಿಂಗಳಿಂದಲೇ ಮಾಶಾಸನ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.
ಇಂದು ಬಹಳ ಜನ ರೈತರು ಬಗರ್ ಹುಕುಂ ಸಾಗುವಳಿ ಮಾಡಿದ್ದು ಅಂತಹವರಿಗೆ ಸರ್ಕಾರದ ಜಮೀನನ್ನು ಕೊಡಲು ಅವಕಾಶವಿದ್ದರೆ ಹಾಗೂ ಅರಣ್ಯ ಇಲಾಖೆಯ ಆಕ್ಷೇಪಣೆ ಇಲ್ಲದಿದ್ದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಮರಡಿ ಗ್ರಾಮದಲ್ಲಿ 1965-66 ನೇ ಸಾಲಿನಲ್ಲಿ ನೀಲಕಂಠಪ್ಪ ಎಂಬುವರು ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಸುಮಾರು 40 ರಿಂದ 50 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಂಡಿದ್ದು ಇದುವರೆಗೂ ಯಾವುದೇ ಕೈಗಾರಿಕೆ ಸ್ಥಾಪನೆಯಾಗಿಲ್ಲ.
ಇಂದಿಗೂ ಆ ಪ್ರದೇಶ ಕೈಗಾರಿಕೆ ಪ್ರದೇಶವಾಗಿಯೇ ಉಳಿದಿದೆ. ಆ ಪ್ರದೇಶವನ್ನು ಬಗರ್ ಹುಕುಂ ಸಾಗುವಳಿದಾರರಿಗೆ ವಿತರಿಸಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಬಹಳಷ್ಟು ಬಡ ಜನರು ಮರಣ ಹೊಂದಿದಲ್ಲಿ ಹೂಳಲು ಜಾಗವಿಲ್ಲದೆ ಪರದಾಡುವ ಸ್ಥಿತಿಯಿದೆ ಹಾಗಾಗಿ ಸರ್ಕಾರಿ ಜಮೀನು ಲಭ್ಯವಿರುವೆಡೆ ಗ್ರಾಮಕ್ಕೊಂದು ರುದ್ರಭೂಮಿ ನಿರ್ಮಾಣ ಮಾಡಲು ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಲಾಗಿದೆ. ಮಾದರಿಯಾಗಿ ಮಂಗೇನಹಳ್ಳಿ ಗ್ರಾಮದಲ್ಲಿ ಸುಮಾರು ರೂ.50 ಲಕ್ಷ ವೆಚ್ಚದಲ್ಲಿ ರುದ್ರಭೂಮಿ ನಿರ್ಮಾಣ ಮಾಡಲಾಗಿದೆ.
ಪ್ರತಿ ಗ್ರಾಮದಲ್ಲಿ ತಲಾ ರೂ.20 ಲಕ್ಷ ವೆಚ್ಚದಲ್ಲಿ ಎಸ್ ಟಿ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ. ತಾಲ್ಲೂಕಿನಲ್ಲಿ ಕೆ.ಇ.ಬಿ ಯಿಂದ ತಂತಿಗಳು ಮತ್ತು ಹಳೆ ಕಂಬಗಳನ್ನು ಬದಲಾಯಿಸಿ ಹೊಸ ಟಿ.ಸಿ ಗಳನ್ನು ಸ್ಥಾಪಿಸಲು ಸುಮಾರು ರೂ.120 ಕೋಟಿ ಹಣ ಮಂಜೂರಾತಿ ಮಾಡಿಸಲಾಗಿದೆ ಎಂದರು.
ಸಂಸದರಾದ ಜಿ.ಎಂ. ಸಿದ್ದೇಶ್ವರ ಮಾತನಾಡಿ ಈ ಕಾರ್ಯಕ್ರಮದ ಮೂಲಕ ಜನರು ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳ ಬಳಿ ಹಾಗೂ ವಿವಿಧ ಇಲಾಖೆಗಳಿಗೆ ಅಲೆದಾಡುವುದನ್ನು ತಪ್ಪಿಸಿ ಇಲಾಖೆಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ವಿವಿಧ ಸರ್ಕಾರದ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯದಂತಹ ಕಾರ್ಯಕ್ರಮವನ್ನು ಆಯೋಜಿಸಿ ಅಲ್ಲಿನ ಗ್ರಾಮಗಳ ಜನರ ಸಮಸ್ಯೆಗಳನ್ನು ಪರಿಶೀಲಿಸಿದರೆ ಪರಿಹಾರ ನೀಡಲು ನೆರವಾಗುತ್ತದೆ.
ಸರ್ಕಾರದ ಮತ್ತೊಂದು ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಇಂತಹ ಕಾರ್ಯಕ್ರಮಗಳ ಮೂಲಕ ಸರ್ಕಾರ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ಫಲಾನುಭವಿಗಳಿಗೆ ಸೌಲಭ್ಯ ನೀಡುತ್ತಿದೆ. ಜನರಿಗೆ ವೃದ್ಧಾಪ್ಯವೇತನ, ವಿಧವಾವೇತನ, ಅಂಗವಿಕಲರ ವೇತನ, ಮುಂತಾದ ಸೌಲಭ್ಯಗಳನ್ನು ಕಾಲವಿಳಂಬವಿಲ್ಲದೇ ಮಾಡಲು ಅನುಕೂಲವಾಗಿದೆ. ಸರ್ಕಾರವು ರೈತರಿಗಾಗಿ, ಬಡವರಿಗಾಗಿ ದೀನ-ದಲಿತರಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಉಜ್ವಲ ಯೋಜನೆಯಡಿ ದೇಶದಲ್ಲಿ ಸುಮಾರು ರೂ.12 ಕೋಟಿ ಫಲಾನುಭವಿಗಳಿಗೆ ಉಚಿತ ಒಲೆ ಮತ್ತು ಗ್ಯಾಸ್ ಸೌಲಭ್ಯ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯೆಕ್ಷೆ ಕೆ.ವಿ.ಶಾಂತಕುಮಾರಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ಚನ್ನಗಿರಿ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಕವಿತಾ ಕಲ್ಲೇಶ್, ತಾಲ್ಲೂಕು ಪಂಚಾಯಿತಿ ಉಪಾಧ್ಯೆಕ್ಷೆ ಚಂದ್ರಮ್ಮ ರುದ್ರಪ್ಪ, ತಣಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಾಣಿ ಪ್ರಕಾಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮುಖ್ಯ ಕಾರ್ಯನಿರ್ವಹಕಾಧಿಕಾರಿ ವಿಜಯ ಮಹಾಂತೇಶ ಬಿ ದಾನಮ್ಮನವರ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ, ಪ್ರಭಾರ ಪೊಲೀಸ್ ಉಪಾಧೀಕ್ಷಕ ಬಸವರಾಜ್ ಬಿ ಎಸ್, ಚನ್ನಗಿರಿ ತಹಶೀಲ್ದಾರ್ ಡಾ. ಪಟ್ಟರಾಜ ಗೌಡ ಮುಂತಾದವರು ಉಪಸ್ಥತಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ18 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ4 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ4 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ2 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ5 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ3 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

