Connect with us

ದಿನದ ಸುದ್ದಿ

ರಾಜ್ಯ ಬಜೆಟ್-2021 ವಿಶ್ಲೇಷಣೆ | ಯಡ್ಡಿ ಬಜೆಟ್ – ಉತ್ಪ್ರೇಕ್ಷೆ, ತಾರತಮ್ಯ ಮತ್ತು ಸುಳ್ಳು ಅಂಕಿಅಂಶಗಳ ಕಣ್ಕಟ್ಟು..!

Published

on

ಫೋಟೋ ಕೃಪೆ : ಡಿಡಿ ಚಂದನ ಸ್ಕ್ರೀನ್ ಶಾಟ್
  • ಶಿವಸುಂದರ್

ಆತ್ಮೀಯರೇ ,
ಬಜೆಟ್ಟಿನ ಬಗ್ಗೆ ಈಗಾಗಲೇ ಸಾಕಷ್ಟು ಅಭಿಪ್ರಾಯಗಳು ಬಂದಾಗಿವೆ. ಇತರ ಎಲ್ಲಾ ಕ್ಷೇತ್ರಗಳಿಗೂ ತೋರಿಕೆಯಲ್ಲಾದರೂ ಬಜೆಟ್ ಹೆಚ್ಚಳ ಮಾಡಿರುವ ಯಡ್ಡಿ ಸರ್ಕಾರ SCSP-STP ಯೋಜನೆಗಳಿಗೆ ಮಾತ್ರ ಕೋವಿಡ್ ಕಾರಣ ತೋರಿಸಿ ಈ ಬಾರಿ ಹೆಚ್ಚಳ ಮಾಡಲಾಗುವುದಿಲ್ಲವೆಂದು ಸ್ಪಷ್ಟವಾಗಿ ಘೋಷಿಸಿದೆ.

ಆದರೆ ಅದೇ ಸಮಯದಲ್ಲಿ ದಲಿತ-ಹಿಂದುಳಿದ ಸಮುದಾಯಗಳ ಎಲ್ಲಾ ಅಭಿವೃದ್ಧಿ ಮಂಡಳಿಗಳಿಗೆ ಒಟ್ಟಾರೆಯಾಗಿ 500 ಕೋಟಿಗಳನ್ನು ಮಾತ್ರ ನೀಡಿದ್ದರೆ, ಲಿಂಗಾಯತ ಹಾಗು ಒಕ್ಕಲಿಗ ಮಂಡಳಿಗಳಿಗೆ ತಲಾ 500 ಕೋಟಿ ಘೋಷಿಸಲಾಗಿದೆ.ಮಾತ್ರವಲ್ಲದೆ ಬಸವಕಲ್ಯಾಣದಲ್ಲಿಯೇ ಆಧುನಿಕ ಅನುಭವ ಮಂಟಪಕ್ಕೆ 500ಕೋಟಿ ನೀಡಲಾಗಿದೆ.

ಈ ಸರ್ಕಾರ ಯಾರದ್ದು ಎಂಬುದನ್ನು ಅರ್ಥಮಾಡಿಕೊಳ್ಳಲು ಬಜೆಟ್ ವೆಚ್ಚದಲ್ಲಿರುವ ಈ ಆದ್ಯತೆಗಳು ಮತ್ತು ತಾರತಮ್ಯಗಳು ಸಾಕು. ಆದರೆ ನಾನು ಈಗ ಹೇಳಲು ಹೊರಟಿರುವುದು ಅದಲ್ಲ. ಇಡೀ ಬಜೆಟ್ಟಿನಲ್ಲಿ ಘೋಷಿಸಲಾಗಿರುವ ಆದಾಯ ಮತ್ತು ಹಾಗು ಅದನ್ನು ಆಧರಿಸಿದ ವೆಚ್ಚಗಳ ಬುನಾದಿಯಲ್ಲೆ ಉತ್ಪ್ರೇಕ್ಷೆ ಮತ್ತು ಕಣ್ಣುಕಟ್ಟಿದೆ. ಇದೆ ಸುಳ್ಳಾದರೆ ಉಳಿದವು ಸುಳ್ಳೇ ಆಗಿರುತ್ತಲ್ಲವೇ?

ಉದಾಹರಣೆಗೆ: ರಾಜ್ಯದ 2021-22 ಸಾಲಿನ ವೆಚ್ಚವನ್ನು ರೂ. 2,46,207 ಕೋಟಿಯೆಂದು ನಿಗದಿ ಪಡಿಸಲಾಗಿದೆ. ಹಾಗು ರಾಜ್ಯದ ಸ್ವಂತ ಆದಾಯ 1,72,271 ಕೋಟಿ ಗಳಾಗಲಿದೆಎಂದು ಅಂದಾಜಿಸಲಾಗಿದೆ.

ಈ ಅಂದಾಜುಗಳನ್ನು ರಾಜ್ಯದ ಒಟ್ಟಾರೆ ರಾಜ್ಯ ಉತ್ಪನ್ನದ ಅಭಿವೃದ್ಧಿ ದರದ ಅಂದಾಜನ್ನು (Gross State Domestic Produce- GSDP) ಆಧರಿಸಿ ಮಾಡಲಾಗುತ್ತದೆ. GSDP ಯ ಅಂದಾಜು ಶೇ. 7ರಷ್ಟು ತೆರಿಗೆ ಸಂಗ್ರಹವಾಗಲಿದೆ ಎಂದು ಅಂದಾಜು ಮಾಡಲಾಗುತ್ತದೆ. ಕೇಂದ್ರದಲ್ಲಿ ಅದು 12-14% ಇರುತ್ತದೆ.

ಇದನ್ನೂ ಓದಿ |ರಾಜ್ಯ ಬಜೆಟ್ | 60 ಸಾವಿರ ಮಹಿಳೆಯರಿಗೆ ಉದ್ಯೋಗ : ಸಿಎಂ ಯಡಿಯೂರಪ್ಪ

ಸರ್ಕಾರದ ಪ್ರಕಾರ ರಾಜ್ಯದ GSDP ಯು 2019-20 ಕ್ಕೆ ಹೋಲಿಸಿದಲ್ಲಿ 2020-21ನೇ ಸಾಲಿನಲ್ಲಿ ಕೋವಿಡ್ ಕಾರಣಕ್ಕೆ ಶೇ. 2.6ರಷ್ಟು ಕುಸಿತವನ್ನು ಕಂಡಿದೆ. 2019-20 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ GSDP ಯು 16,98,685 ಕೋಟಿ ರೂಪಾಯಿಗಳು. ಇದು ಕೋವಿಡ್ ಕಾರಣಕ್ಕೆ 2020-21ನೇ ಸಾಲಿನಲ್ಲಿ ಶೇ. 2.6 ರಷ್ಟು ಕಡಿಮೆಯಾಗಿದೆ ಎಂದರೆ 16,65,320 ಕೋಟಿ ರೂಪಾಯಿಗಳಾಗಬೇಕು. ಹೀಗಾಗಿ ಎಲ್ಲಾ ತೆರಿಗೆ ಸಂಗ್ರಹ ಅಂದಾಜುಗಳನ್ನು ಇದರ ಆಧಾರದಲ್ಲಿ ಮಾಡಬೇಕು.

ಆದರೆ ಬಜೆಟ್ ದಸ್ತಾವೇಜಿನ ಜೊತೆ ಕಡ್ಡಾಯವಾಗಿ ಒದಗಿಸಬೇಕಿರುವ Mid Term Fiscal Plan-MTFP ದಸ್ತಾವೇಜಿನಲ್ಲಿ ಸರ್ಕಾರವು :

Government of India had communicated a figure of Rs.18,03,609 Crore as State’s GSDP for FY 2020-21 and it has also directed that the same amount be used for evaluation of states fiscal parameters”

ಅಂದರೆ ” ಭಾರತ ಸರ್ಕಾರವು ಕರ್ನಾಟಕದ 2020-21 ನೆ ಸಾಲಿಗೆ ರಾಜ್ಯದ GSDP ಯು 18,03,609 ಕೋಟಿ ಎಂದು ತಿಳಿಸಿದ್ದು ಎಲ್ಲಾ ವಿತ್ತೀಯ ಲೆಕ್ಕಾಚಾರಗಳಿಗೂ ಅದೇ ಅಂಕಿಅಂಶವನ್ನೇ ಬಳಸಬೇಕೆಂದು ಎಂದು ನಿರ್ದೇಶಿಸಿದೆ ” ಎಂದು ಹೇಳಿಕೊಂಡಿದೆ.

ಆದರೆ ಅವೆರಡರ ನಡುವಿನ ವ್ಯತ್ಯಾಸವನ್ನೇನು ಕೇಂದ್ರ ಸರ್ಕಾರ ಭರಿಸುತ್ತಿಲ್ಲ. ಅಷ್ಟೇ ಅಲ್ಲ. ಕೇಂದ್ರದಿಂದ ಸಿಗುವ GST ಪರಿಹಾರ, ಅನುದಾನ ಮತ್ತು ತೆರಿಗೆ ಪಾಲು ಎಲ್ಲವನ್ನು ಕರ್ನಾಟಕಕ್ಕೇ ಕಡಿಮೆ ಮಾಡಲಾಗಿದೆ. ಆದರೂ ಲೆಕ್ಕಾಚಾರವನ್ನು ಮಾತ್ರ ಇರುವುದಕ್ಕಿಂತ ಒಂದು ಲಕ್ಷ ಕೋಟಿ ಹೆಚ್ಚಿಗೆಸೇರಿಸಿ ಮಾಡಬೇಕೆಂದು ಆದೇಶಿಸಿದೆ!! ಹೀಗಾಗಿ ಬಜೆಟ್ಟಿನಲ್ಲಿ ಹೇಳಲಾಗಿರುವ ಪರಿಷ್ಕೃತ ಅಂದಾಜುಗಳಲ್ಲೇ ದೋಷವಿದೆ. ದೊಡ್ಡ ಸುಳ್ಳಿದೆ.

ಎರಡನೆಯದಾಗಿ, ಬಜೆಟ್ಟಿನ ಜೊತೆಗೆ ಒದಗಿಸಲಾಗಿರುವ MTFP – Mid Term Fiscal Plan -ಪ್ರಕಾರ ಹಾಗು 15ನೇ ಹಣಕಾಸು ಆಯೋಗದ ಅಂದಾಜಿನ ಪ್ರಕಾರ ೨೦೨೧-೨೨ ರ ಸಾಲಿನಲ್ಲಿ ಕರ್ನಾಟದ GSDP ಯು 17,02,227 ಕೋಟಿ ರೂ. ಗಳಿಗೆ ಇಳಿಯಲಿದೆ.

ಅಂದರೆ 2020-21 ನೇ ಸಾಲಿಗಿಂತ ಒಂದು ಲಕ್ಷ ಕೋಟಿ ಕಡಿಮೆಯಾಗಲಿದೆ. ಹಾಗಿದ್ದಲ್ಲಿ ಅದೇ ಪ್ರಮಾಣದಲ್ಲಿ ರಾಜ್ಯದ ಸ್ವಂತ ತೆರಿಗೆ ಸಂಗ್ರಹ ಮತ್ತು ಆದಾಯಗಳು ಕಡಿಮೆಯಾಗಬೇಕಲ್ಲವೇ? ಆದರೆ ಬಜೆಟ್ಟಿನ ಲೆಕ್ಕಾಚಾರದ ಪ್ರಕಾರ 2021-22 ನೇ ಸಾಲಿನಲ್ಲಿ ಸ್ವಂತ ತೆರಿಗೆ ರಾಜಸ್ವವು 1,24,202 ಕೋಟಿ ರು.ಗಳಾಗಲಿದೆಯಂತೆ!

ಆದರೆ ಹೆಚ್ಚು ಕಡಿಮೆ ಇಷ್ಟೇ GSDP ಇದ್ದ 2019-20ನೇ ಸಾಲಿನಲ್ಲಿ ಸ್ವಂತ ರಾಜಸ್ವವು 1,16, 860 ಕೋಟಿ ರೂಪಾಯಿಗಳು ಮಾತ್ರ…ಆದರೆ 2021-22ನೇ ಸಾಲಿನಲ್ಲಿ, ಇನ್ನು ಕೋವಿಡ್ ದಾಳಿಯಿಂದಾಗಿ ಭಾರತವು 2019ರ ಅಭಿವೃದ್ಧಿ ದರವನ್ನು ಸಾಧಿಸಲಾಗದು ಎಂಬುದು ಸ್ಪಷವಾಗಿರುವಾಗಲೂ, ಯಡ್ಡಿ ಸರ್ಕಾರ ಮಾತ್ರ ಅಂದಾಜು 8000 ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ಸಂಗ್ರಹಿಸಲಿದೆಯೆಂದು ಅಂದಾಜಿಸಲಾಗಿದೆ!

ಇದಲ್ಲದೆ, 15ನೇ ಹಣಕಾಸು ಆಯೋಗದ ವರದಿ 2021-22ರಿಂದ ಜಾರಿಗೆ ಬರಲಿದ್ದು ಕರ್ನಾಟಕದ ಪಾಲು 30,000 ಕೋಟಿ ಕಡಿಮೆಯಾಗಲಿದೆ. ಅದನ್ನು ಈ ಬಜೆಟ್ ಲೆಕ್ಕಾಚಾರಗಳಲ್ಲಿ ಸಂಪೂರ್ಣವಾಗಿ ಲೆಕ್ಕಕ್ಕೆ ತೆಗೆದುಕೊಂಡಿಲ್ಲ.

ಜೊತೆಗೆ 2018 ರಿಂದಾಚೆಗೆ ಒಂದು ವರ್ಷವೂ ಕರ್ನಾಟಕಕ್ಕೇ ಸಂಪೂರ್ಣ GST ಪರಿಹಾರ ದೊರೆತಿಲ್ಲ. ಕಳೆದ ವರ್ಷವಂತೂ ಕೇವಲ ಶೇ. 53 ರಷ್ಟು ಪಾಲು ಮಾತ್ರ ಕರ್ನಾಟಕಕ್ಕೇ ಸಂದಿದೆ. ಈ ಎಲ್ಲಾ ಲೆಕ್ಕಾಚಾರಗಳ ಹಿನ್ನೆಲೆಯಲ್ಲಿ ನೋಡಿದಾಗ ಬಜೆಟ್ಟಿನಲ್ಲಿ ಸರ್ಕಾರ ಘೋಷಿರುವ ಸ್ವೀಕೃತಿಗಿಂತ ವಾಸ್ತವದಲ್ಲಿ ಶೇ. 20ರಷ್ಟು ಅಂದರೆ 40-50 ಸಾವಿರ ಕೋಟಿ ಹಣ ಕೊರತೆ ಬೀಳಲಿದೆ.

ಇದು ಬಜೆಟ್ಟಿನಲ್ಲಿ ತೋರಿಸಿರುವ ಕೊರತೆಯ ಜೊತೆ ಹೆಚ್ಚುವರಿಯಾಗಿ ಆಗಲಿರುವ ಕೊರತೆಯಾಗಿದೆ. ಹೀಗಾಗಿ ವೆಚ್ಚದಲ್ಲೂ ಅದೇ ಪ್ರಮಾಣದಲ್ಲೂ ಕೊರತೆ ಬೀಳಲಿದೆ. ಆಗ ಸರ್ಕಾರದ ಆದ್ಯತೆಗಳೇನಾಗಲಿದೆ ಎಂಬುದನ್ನು ಯಡ್ಡಿ ಸರ್ಕಾರ ಈಗಾಗಲೇ ಬಜೆಟ್ ಭಾಷಣದಲ್ಲಿ ಘೋಷಿಸಲಾದ ತಾರತಮ್ಯ ಮತ್ತು ಆದ್ಯತೆಗಳಲ್ಲಿ ಸ್ಪಷ್ಟಪಡಿಸಿದೆ. ಅಲ್ಲವೇ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್

Published

on

bengaluru-clubs-food-safety-raid-cockroaches-expired-food-found
ಬೆಂಗಳೂರು ಕ್ಲಬ್‌ಗಳಲ್ಲಿ ಆಹಾರ ಸುರಕ್ಷತೆ ಶಾಕ್: ಜಿರಳೆ, ಹುಳು, ಅವಧಿ ಮೀರಿದ ಆಹಾರ ಪತ್ತೆ!

ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್‌ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್‌ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

http://Visit : www.suddidina.com

ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ

ಬೌರಿಂಗ್ ಕ್ಲಬ್‌ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್‌ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಕೆಎಸ್‌ಸಿಎ ಕ್ಲಬ್‌ನಲ್ಲೂ ಹಲವು ಲೋಪ

ಕೆಎಸ್‌ಸಿಎ ಕ್ಲಬ್‌ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.

ಅವಧಿ ಮೀರಿದ ಅಣಬೆ ಪತ್ತೆ

ಕ್ಯಾಥೋಲಿಕ್ ಕ್ಲಬ್‌ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್‌ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್‌ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.

ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.

ಹೋಟೆಲ್‌ಗಳಿಗೂ ಕಟ್ಟುನಿಟ್ಟಿನ ಸೂಚನೆ

ಕ್ಲಬ್‌ಗಳ ಜೊತೆಗೆ ಹೋಟೆಲ್‌ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು

Published

on

ಹುಟ್ಟುಹಬ್ಬದ ಸಂಭ್ರಮಕ್ಕೆ ಬ್ರೇಕ್: ಅಭಿಮಾನಿಗಳಿಗೆ ಕಿಚ್ಚ ಸುದೀಪ್‌ ಭಾವುಕ ಮನವಿ, ಸಮಾಜಮುಖಿ ಕಾರ್ಯಕ್ಕೆ ಕರೆ!

ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್‌ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್‌ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ ಕೆಲವು ಕಾರಣಗಳಿಂದ ಈ ವರ್ಷದ ಜನ್ಮದಿನದ ಸಂಭ್ರಮದಿಂದ ದೂರ ಉಳಿಯುತ್ತಿರುವುದಾಗಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಪತ್ರದ ಮೂಲಕ ತಿಳಿಸಿದ್ದಾರೆ.

ಹುಟ್ಟುಹಬ್ಬದಂದು ಮನೆಯ ಬಳಿ ಅಭಿಮಾನಿಗಳನ್ನು ಭೇಟಿಯಾಗಲು ತಾವು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಿಚ್ಚ, ಯಾವುದೇ ರೀತಿಯ ಗದ್ದಲ ಅಥವಾ ಸತ್ಕಾರಕ್ಕೆ ಮುಂದಾಗದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮನೆ ಮುಂದೆ ಸೇರುವ ಸಂದರ್ಭದಲ್ಲೇ, ಈ ಬಾರಿ ಸುದೀಪ್‌ ಅವರ ಮನವಿ ವಿಶೇಷ ಗಮನ ಸೆಳೆದಿದೆ.

ಉಡುಗೊರೆ ಬೇಡ, ಸಮಾಜಕ್ಕೆ ಸಹಾಯ ಮಾಡಿ

ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನೀಡಲು ಉದ್ದೇಶಿಸಿರುವ ಉಡುಗೊರೆಗಳ ಬದಲಾಗಿ ಆ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವಂತೆ ಸುದೀಪ್‌ ಕರೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ನಡೆಯುವ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕೆಲಸವೇ ತಮಗೆ ನಿಜವಾದ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ಅಭಿಮಾನಿಗಳು ತಮ್ಮ ತಮ್ಮ ಊರು, ಪ್ರದೇಶಗಳಲ್ಲಿ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುವುದೇ ತಮಗೆ ದೊರೆಯುವ ಅತ್ಯುತ್ತಮ ಆಶೀರ್ವಾದ ಎಂದು ಕಿಚ್ಚ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಹೊಸ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ.

30 ವರ್ಷಗಳ ಸಿನಿ ಪಯಣದ ನೆನಪು

ಕನ್ನಡ ಚಿತ್ರರಂಗಕ್ಕೆ ಸುದೀಪ್‌ ಬರೋಬ್ಬರಿ ಮೂರು ದಶಕಗಳನ್ನು ಅರ್ಪಿಸಿದ್ದಾರೆ. ಸಿನಿಮಾ ತಮ್ಮ ಪರಮ ಕಾಯಕವಾಗಿದ್ದು, ಕೆಲವೊಮ್ಮೆ ಸಿನಿಮಾಗಳು ತಡವಾಗಬಹುದು; ಅದಕ್ಕೂ ಕಾರಣಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಈ ಮಾತುಗಳ ಮೂಲಕ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

“ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ” ಎಂಬ ಖಡಕ್‌ ಡೈಲಾಗ್‌ ಮೂಲಕ ಮುಂದಿನ ಸಿನಿಮಾ ಅಥವಾ ಹೊಸ ಯೋಜನೆಗೆ ಸುದೀಪ್‌ ಸುಳಿವು ನೀಡಿದ್ದಾರೆ. ಹೀಗಾಗಿ ಅವರ ಪತ್ರ ಕೇವಲ ಹುಟ್ಟುಹಬ್ಬದ ಮನವಿಯಾಗದೆ, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.

https://x.com/KicchaSudeep/status/2092857077706506638

“ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ”

ತಮ್ಮ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನೂ ಸುದೀಪ್‌ ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಎಲ್ಲೇ ಹೋದರೂ ಕನ್ನಡಿಗರನ್ನು ರಂಜಿಸುವ ವಿಷಯದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ 30 ವರ್ಷಗಳಿಂದ ಅಭಿಮಾನಿಗಳಿಂದ ದೊರೆತ ಪ್ರೀತಿ, ಹಾರೈಕೆ, ಚಪ್ಪಾಳೆ ಮತ್ತು ಶಿಳ್ಳೆಗಳೇ ತಮ್ಮ ದೊಡ್ಡ ಬಲ ಎಂದು ಸ್ಮರಿಸಿದ್ದಾರೆ.

“ನಮ್ಮನ್ನು ಮತ್ತು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಅಭಿಮಾನಿಗಳೊಂದಿಗಿನ ತಮ್ಮ ಭಾವನಾತ್ಮಕ ಬಂಧವನ್ನು ತೆರೆದಿಟ್ಟಿದ್ದಾರೆ. ಕೊನೆಯಲ್ಲಿ “Luv u all always…” ಎಂದು ಹೇಳುವ ಮೂಲಕ ಕಿಚ್ಚ ತಮ್ಮ ಅಭಿಮಾನಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾರಿದ್ದಾರೆ.

 

Continue Reading

ದಿನದ ಸುದ್ದಿ

ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್‌ಗಳ ಸದ್ದು

Published

on

toxic-movie-geethu-mohandas-old-statement-viral-yash-fans-troll
‘ಟಾಕ್ಸಿಕ್’ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆಯ ವಿಡಿಯೋ ವೈರಲ್: ಸ್ಕ್ರಿಪ್ಟ್‌ ಬಗ್ಗೆ ಹೇಳಿಕೆಗೆ ಯಶ್ ಅಭಿಮಾನಿಗಳ ಆಕ್ರೋಶ!

ಸುದ್ದಿದಿನ,ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ನಿರ್ದೇಶಕಿಯ ಸಿನಿಮಾ ಮಾಡುವ ವಿಧಾನಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ.

ವೈರಲ್ ವಿಡಿಯೋದಲ್ಲಿ ಗೀತು ಮೋಹನ್‌ದಾಸ್ ಅವರು, ತಾವು ಬರೆಯುವುದು, ಚಿತ್ರೀಕರಿಸುವುದು ಹಾಗೂ ಎಡಿಟ್ ಮಾಡುವ ಪ್ರಕ್ರಿಯೆಯಲ್ಲಿ ಸಿನಿಮಾ ನಿಧಾನವಾಗಿ ರೂಪುಗೊಳ್ಳುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ತಾವು ಸ್ಕ್ರಿಪ್ಟ್‌ಗೆ ಕಟ್ಟುನಿಟ್ಟಾಗಿ ಅಂಟಿಕೊಂಡು ಕೆಲಸ ಮಾಡುವುದಿಲ್ಲ ಎಂಬ ಅವರ ಹೇಳಿಕೆಯೇ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

http://Visit : www.suddidina.com

‘ಸ್ಕ್ರಿಪ್ಟ್‌ನಂತೆ ಸಿನಿಮಾ ಸಿಗುವುದಿಲ್ಲ’ ಎಂದಿದ್ದ ನಿರ್ದೇಶಕಿ

ನಿರ್ಮಾಪಕರನ್ನು ಭೇಟಿಯಾಗುವಾಗಲೇ ತಮ್ಮ ಕೆಲಸದ ಶೈಲಿಯನ್ನು ಸ್ಪಷ್ಟಪಡಿಸುವುದಾಗಿ ಗೀತು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಸ್ಕ್ರಿಪ್ಟ್‌ನಲ್ಲಿ ಓದುವ ಕಥೆಯಂತೆಯೇ ಅಂತಿಮ ಸಿನಿಮಾ ಇರಬೇಕೆಂದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದರು.

ಸಾಮಾನ್ಯವಾಗಿ ದೊಡ್ಡ ಬಜೆಟ್‌ನ ಸಿನಿಮಾಗಳಲ್ಲಿ ಕಥೆ, ಚಿತ್ರಕಥೆ ಮತ್ತು ಚಿತ್ರೀಕರಣದ ಯೋಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ಗೀತು ಅವರ ಈ ಹಳೆಯ ಹೇಳಿಕೆಯನ್ನು ಕೆಲವರು ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ ನಿರ್ದೇಶಕರ ಸೃಜನಶೀಲ ಪ್ರಕ್ರಿಯೆ ಒಂದೇ ರೀತಿಯಾಗಿರಬೇಕೆಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

https://x.com/alpasankhyata/status/2092620787698094334

‘ಟಾಕ್ಸಿಕ್’ ಮೇಲೆ ಪರಿಣಾಮ ಬೀರಿದ ಹಳೆಯ ಹೇಳಿಕೆ?

‘ಟಾಕ್ಸಿಕ್’ ಬಿಡುಗಡೆ ಬಳಿಕ ಸಿನಿಮಾದ ಕಥೆ, ನಿರೂಪಣೆ, ಆಕ್ಷನ್ ಹಾಗೂ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಇದೇ ಸಮಯದಲ್ಲಿ ಹಳೆಯ ವಿಡಿಯೋ ವೈರಲ್ ಆಗಿರುವುದರಿಂದ, ಸಿನಿಮಾದಲ್ಲಿನ ಕೆಲವು ಅಂಶಗಳನ್ನು ಈ ಹೇಳಿಕೆಯೊಂದಿಗೆ ಹೋಲಿಸಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ಚಿತ್ರವು ಸ್ವಾತಂತ್ರ್ಯಪೂರ್ವದ ಗೋವಾ ಹಿನ್ನೆಲೆಯಲ್ಲಿನ ಅಪರಾಧ ಜಗತ್ತು ಮತ್ತು ಅಂಡರ್‌ವರ್ಲ್ಡ್‌ ಕಥೆಯನ್ನು ಒಳಗೊಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವಿದೆ.

ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭ

ಭಾರೀ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ‘ಟಾಕ್ಸಿಕ್’ ಮೊದಲ ದಿನವೇ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಆರಂಭ ಪಡೆದಿರುವುದನ್ನು ಸೂಚಿಸುತ್ತವೆ. ಆದರೆ ಪ್ರೇಕ್ಷಕರ ಪ್ರತಿಕ್ರಿಯೆ ಮಾತ್ರ ಮಿಶ್ರವಾಗಿದೆ.

ಸದ್ಯ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆ ಮತ್ತು ‘ಟಾಕ್ಸಿಕ್’ ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದಿದೆ. ವೈರಲ್ ವಿಡಿಯೋ ಚಿತ್ರದ ಸೃಜನಶೀಲ ವಿಧಾನಕ್ಕೆ ಸಂಬಂಧಿಸಿದ ಹಳೆಯ ಅಭಿಪ್ರಾಯವಾಗಿದ್ದು, ಅದನ್ನು ಇಂದಿನ ಚಿತ್ರದ ಫಲಿತಾಂಶದೊಂದಿಗೆ ಹೇಗೆ ಸಂಪರ್ಕಿಸಬೇಕು ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

 

 

Continue Reading

Trending