ದಿನದ ಸುದ್ದಿ
ದಾವಣಗೆರೆ | ಮಹಿಳೆಯರು ಸಂಕೋಲೆಗಳನ್ನು ಬದಿಗೊತ್ತಿ ಸಾಧನೆ ಕಡೆ ಗಮನ ಕೊಡಬೇಕು : ನ್ಯಾ.ಗೀತಾ.ಕೆ.ಬಿ
ಸುದ್ದಿದಿನ,ದಾವಣಗೆರೆ : ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ವಿಶೇಷವಾದ ಸ್ಥಾನಮಾನಗಳಿಗೆ ಪಾತ್ರರಾಗಿದ್ದರೂ ಒದಗಿ ಬರುವ ಸಂಕೋಲೆಗಳನ್ನು ಬದಿಗೊತ್ತಿ ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಗೀತಾ.ಕೆ.ಬಿ ತಿಳಿಸಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ತಾಂತ್ರಿಕ ಮತ್ತು ಕಾಲೇಜು ಶಿಕ್ಷಣ ಇಲಾಖೆ, ಮಹಿಳಾ ದೌರ್ಜನ್ಯ ನಿವಾರಣೆ ಹಾಗು ಅಭಿವೃದ್ಧಿ ಕೋಶ ಮತ್ತು ಇತರೆ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ದಿನಾಚರಣೆಯನ್ನು ಕಳೆದ ಒಂದು ಶತಕದಿಂದಲೂ ಆಚರಿಸಲಾಗುತ್ತಿದ್ದು, 1911 ರಲ್ಲಿ ಡೆನ್ಮಾರ್ಕ್, ಆಸ್ಟ್ರಿಯ, ಜರ್ಮನ್, ಸ್ವಿಡ್ಜರ್ಲ್ಯಾಂಡ್ ದೇಶಗಳಲ್ಲಿ ದಶಲಕ್ಷಗಟ್ಟಲೇ ಜನರು ಒಂದೆಡೆ ಸೇರುವ ಮೂಲಕ ಮಹಿಳಾ ದಿನಾಚರಣೆಯನ್ನು ಆರಂಭಿಸಿದರು. ಅಂತರಾಷ್ಟ್ರೀಯ ಮಹಿಳೆಯರ ದಿನವನ್ನು ಮೊದಲ ಬಾರಿಗೆ ಕೂಲಿ ಚಳುವಳಿಯ ಮೂಲಕ ಉತ್ತರ ಅಮೆರಿಕ ಮತ್ತು ಯೂರೋಪ್ ದೇಶಗಳಲ್ಲಿ ಆಚರಿಸಲಾಯಿತು.
ಕೆಲವೇ ರಾಷ್ಟ್ರಗಳಿಗೆ ಸೀಮಿತವಾಗಿದ್ದ ಈ ದಿನಕ್ಕೆ ಸಂಯುಕ್ತ ರಾಷ್ಟ್ರಗಳು ಒಗ್ಗೂಡಿ 1977 ರಲ್ಲಿ ವಿಶ್ವಸಂಸ್ಥೆ ಮೂಲಕ ಅಧಿಕೃತ ಅನುಮೋದನೆ ನೀಡಿ ಮಾರ್ಚ್ 8 ಅನ್ನು ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸುವಂತೆ ಘೋಷಿಸಿತು.
ಇದನ್ನೂ ಓದಿ | ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ : ಯುವತಿ ಪತ್ತೆ..!?
ಅಂದಿನ ದಿನಗಳಲ್ಲಿ ಮಹಿಳೆಯರಿಂದ ಪುರುಷರಿಗಿಂತ ಹೆಚ್ಚಾಗಿ ದುಡಿಸಿಕೊಂಡು ಕಡಿಮೆ ವೇತನ ನೀಡಿ, ಕೀಳಾಗಿ ಕಾಣಲಾಗುತ್ತಿತ್ತು. ಶೋಷಣೆ ಮಾಡುತ್ತಿದ್ದರು. ಇದರಿಂದ ಬೇಸತ್ತ ಮಹಿಳೆಯರು ಪ್ರಪಂಚದಲ್ಲಿ ಮಹಿಳೆಯರ ಅಸ್ತಿತ್ವ ಉಳಿಯಬೇಕಾದರೆ ಸಂಘಟಿತರಾಗಬೇಕು. ಸ್ತ್ರೀ ಅಬಲೆ ಅಲ್ಲ ಸಬಲೆ. ಹೆಣ್ಣಿನ ಅಸ್ತಿತ್ವವನ್ನು ಮಹಿಳೆಯರೇ ಉಳಿಸಬೇಕು ಎಂದು ಮಹಿಳೆಯರ ಮತದಾನಕ್ಕೆ, ಸಮಾನ ಕೆಲಸಕ್ಕೆ, ಸಮಾನ ವೇತನಕ್ಕಾಗಿ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಸಿದರು.
ವೇದ ಕಾಲದಲ್ಲಿರದ ಲಿಂಗ ತಾರತಮ್ಯವು ನಂತರದ ಪುರುಷ ಪ್ರಧಾನ ಸಮಾಜದಲ್ಲಿ ತನ್ನ ಅಸ್ತಿತ್ವ ಪಡೆದು ಮಹಿಳೆಯರನ್ನು ಹತ್ತಿಕ್ಕಲು ಆರಂಭಿಸಿತು. ಪುರುಷ ಪ್ರಧಾನ ಸಮಾಜವು ಸ್ತ್ರೀ ಸಮಾನತೆಯನ್ನು ಕಸಿದುಕೊಂಡು ಅತೀ ಹೆಚ್ಚು ಶೋಷಣೆಗೆ ಒಳಪಡಿಸಿ, ದೌರ್ಜನ್ಯವೆಸಗಿತು. ಇಂತಹ ಧಾರುಣ ಸ್ಥಿತಿಯಲ್ಲಿ ಅಕ್ಕಮಹಾದೇವಿ ಸೇರಿದಂತೆ ಎಲ್ಲಾ ಶಿವಶರಣೆಯರು ಕ್ರಾಂತಿಕಾರಿ ಕಹಳೆಯನ್ನು ಊದಿ, ಆಧ್ಯಾತ್ಮದತ್ತ ಹೆಜ್ಜೆ ಹಾಕಿದರು.
ಕಳೆದ 20 ವರ್ಷಗಳಲ್ಲಿ ಅನೇಕ ಬದಲಾವಣೆಗಳು ಕಂಡುಬಂದಿದೆ. ಕಾನೂನುಗಳು ಸೇರಿದಂತೆ ಸರ್ಕಾರವು ಮಹಿಳೆಯರಿಗಾಗಿ ಎಲ್ಲಾ ಸ್ತರಗಳಲ್ಲೂ ಶೇ.33 ರಷ್ಟು ಮೀಸಲಾತಿ ಒದಗಿಸಿದ್ದು, ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ ಎಂದು ಸಾಬೀತುಪಡಿಸುತ್ತಿದ್ದಾಳೆ.
ಮಾನಸಿಕವಾಗಿ ಹಾಗೂ ದೈಹಿಕವಾಗಿ ಪುರುಷನೊಂದಿಗೆ ಪೈಪೋಟಿ ನಡೆಸುತ್ತಿದ್ದಾಳೆ. ಇಡೀ ಕುಟುಂಬದ ಜವಾಬ್ಧಾರಿಯನ್ನು ವಹಿಸಿಕೊಳ್ಳುತ್ತಿದ್ದಾಳೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ತೂ.ಕ.ಶಂಕರಯ್ಯ ಮಾತನಾಡಿ, ಸ್ವಾತಂತ್ರ್ಯೋತ್ತರ ಭಾರತದಲ್ಲಿ ಮಹಿಳೆಯರನ್ನು ಕುರಿತು ಸ್ತ್ರೀ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮøತಿಯು ವಿಧಿಸಿದ ಕಟ್ಟುಪಾಡು ವೈಜ್ಞಾನಿಕ ಯುಗದಲ್ಲೂ ಮುಂದುವರೆಯುತ್ತಿರುವುದು ದುರಂತ. ಆದರೆ ಈಗ ಕಾಲ ಬದಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತೀಯ ನಾರಿ ಈಗ ಪುರುಷನಿಗೆ ಸಮಾನಳು. ಹೆಣ್ಣು-ಗಂಡು ಸರಿಸಮಾನರೆಂದು ತಾತ್ವಿಕವಾಗಿ ಒಪ್ಪಿಕೊಂಡಿರುವ ಅಂಶವಾಗಿದೆ ಎಂದರು.
ಪುರುಷನ ಪ್ರತೀ ಸಾಧನೆಯ ಹಿಂದೆ ಹೆಣ್ಣಿರುತ್ತಾಳೆ. ಮಹಿಳೆಯಿಲ್ಲದೇ ಗಂಡು ಪರಿಪೂರ್ಣನಾಗಲಾರ. 12ನೇ ಶತಮಾನದಲ್ಲಿ ಆಯ್ದಕ್ಕಿ ಲಕ್ಕಮ್ಮ ತನ್ನೆಲ್ಲಾ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ತನ್ನ ಗಂಡನನ್ನು ತಿದ್ದುವ ಮೂಲಕ ಕಾಯಕ ನಿಷ್ಠೆಯನ್ನು ಬೆಳೆಸುತ್ತಾಳೆ. ಇಂದಿನ ಭ್ರಷ್ಟಾಚಾರ ಯುಗದಲ್ಲಿ ಆಯ್ದಕ್ಕಿ ಲಕ್ಕಮ್ಮ ಸಮಾಜಕ್ಕೆ ಮಾದರಿಯಾಗುತ್ತಾಳೆ. ತನ್ನ ಮನೆಯವರನ್ನು ತಿದ್ದುವ ಮೂಲಕ ಸಂಸಾರದ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತಿದ್ದಾಳೆ.
ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನುಗ್ಗುತ್ತಿದ್ದು, ಆಕೆಯನ್ನು ಕೇವಲ ಗೌರವಿಸುವುದಲ್ಲದೇ ಸರಿಸಮಾನವಾಗಿ ಕಾಣುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಮುಖ್ಯನ್ಯಾಯಿಕ ದಂಡಾಧಿಕಾರಿಗಳಾದ ಪ್ರೀತಿ ಎಸ್. ಜೋಶಿ ಮಾತನಾಡಿ, ಮಹಿಳೆಯರು ಕಾನೂನುಗಳನ್ನು ಅರ್ಥಮಾಡಿಕೊಳ್ಳುವ ಮೂಲಕ ಅವುಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು.
ಉದ್ಯೋಗಸ್ಥ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಅನೇಕ ಕಾಯ್ದೆ ಕಾನೂನುಗಳು ಜಾರಿಯಾಗಿದ್ದು ಮಹಿಳೆಯರು ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು. ನಾವು ಅನಪೇಕ್ಷಿತ ವ್ಯಕ್ತಿಗಳಿಂದ ತೊಂದರೆಯುಂಟಾದಾಗ ಮಾತ್ರ ಬಳಸಿಕೊಳ್ಳಬೇಕು. ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಬಾಲ್ಯವಿವಾಹ, ಮಹಿಳೆಯರ ಮೇಲೆ ಆಗುವ ದೌರ್ಜನ್ಯ, ಶೋಷಣೆಗಳಂತಹ ಸಂದರ್ಭದಲ್ಲಿ ಕಾನೂನಿನ ಸಹಾಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ಎಲ್.ಹೆಚ್. ಅರುಣ್ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರವೀಣ್ ನಾಯಕ್, ನ್ಯಾಯಾಧೀಶರಾದ ರಶ್ಮೀ ಎಂ.ಮರಡಿ, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ನಂದಿನಿ.ಎಂ.ಎನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎಸ್.ಸಿ. ಸಂಚಾಲಕ ಪ್ರೊ.ಟಿ.ವೀರೇಶ್, ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಎಂ.ಎಲ್.ತ್ರೀವೇಣಿ, ಪ್ರೋ.ಭೀಮಣ್ಣ ಸುಣಗಾರ್, ಡಾ.ಮಹೇಶ್.ಎನ್.ಪಾಟೀಲ್, ಡಾ.ದಾದಾಪೀರ್ ನವಿಲೇಹಾಳ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ5 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

