Connect with us

ದಿನದ ಸುದ್ದಿ

ಜನಸಾಮಾನ್ಯರ ಬಳಕೆಗೆ ‘ದಾವಣಗೆರೆ ಆನ್ ಮ್ಯಾಪ್’ ಮೊಬೈಲ್ ಆ್ಯಪ್ ಲೋಕಾರ್ಪಣೆ

Published

on

ಸುದ್ದಿದಿನ,ದಾವಣಗೆರೆ : ಜನಸಾಮಾನ್ಯರಿಗೆ ಸರ್ಕಾರಿ ಕಚೇರಿಗಳ, ಆಸ್ಪತ್ರೆಗಳ, ಯಾತ್ರಾಸ್ಥಳ, ಜನೌಷದಿ ಇತ್ಯಾದಿ ಸ್ಥಳ, ವಿಳಾಸ ಮತ್ತು ಇತರ ಮಾಹಿತಿಯನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ‘ದಾವಣಗೆರೆ ಆನ್ ಮ್ಯಾಪ್’ ಮೊಬೈಲ್ ಆ್ಯಪ್‍ನ್ನು ಜಿಲ್ಲೆಯ ಎನ್‍ಐಸಿ ಅಧಿಕಾರಿಗಳು ಅಭಿವೃದ್ದಿಪಡಿಸಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ನ್ಯಾಷನಲ್ ಇನ್‍ಫರ್ಮಾಟಿಕ್ಸ್ ಸೆಂಟರ್(ಎನ್‍ಐಸಿ) ಅಧಿಕಾರಿಗಳು ಅಭಿವೃದ್ದಿಪಡಿಸಿರುವ ‘ದಾವಣಗೆರೆ ಆನ್ ಮ್ಯಾಪ್’ ಮೊಬೈಲ್ ಆ್ಯಪ್‍ಗೆ ಜಿಲ್ಲಾಡಳಿತ ಕಚೇರಿಯಲ್ಲಿ ಗುರುವಾರ ಅಧಿಕೃತವಾಗಿ ಚಾಲನೆ ನೀಡಿ, ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಲು ಆಯೋಜಿಸದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲೇ ಈ ಆ್ಯಪ್‍ನ್ನು ಲೋಕಾರ್ಪಣೆಗೊಳಿಸಿದ ಮೊದಲ ಜಿಲ್ಲೆ ನಮ್ಮದು ಎಂದರು.

ಕೇಂದ್ರ ಸರ್ಕಾರದಿಂದ ಎಲ್ಲ ರಾಜ್ಯಗಳಿಗೆ ಮಾ.29 ರೊಳಗೆ ಈ ರೀತಿ ಆಪ್ ಪ್ರಕಟಿಸಲು ಸಮಯ ನಿಗದಿಗೊಳಿಸಲಾಗಿದ್ದು, ರಾಜ್ಯದಲ್ಲೇ ಮೊದಲನೆಯದಾಗಿ ನಮ್ಮ ಜಿಲ್ಲೆಯಲ್ಲಿ ಈ ಆಪ್‍ನ್ನು ಅಭಿವೃದ್ದಿಪಡಿಸಿ ಇಂದು ಲೋಕಾರ್ಪಣೆ ಮಾಡಲಾಗಿದೆ ಎಂದರು.

‘ದಾವಣಗೆರೆ ಆನ್ ಮ್ಯಾಪ್’ ಒಂದು ವಿಶಿಷ್ಟವಾದ ಮೊಬೈಲ್ ಆ್ಯಪ್ ಆಗಿದೆ. ಡಿಸ್ಟ್ರಿಕ್ಟ್ ಗವರ್ನೆನ್ಸ್ ಮೊಬೈಲ್ ಚಾಲೆಂಜ್ ಅಡಿಯಲ್ಲಿ ದೇಶದ ಎಲ್ಲಾ ಜಿಲ್ಲೆಗಳ ಎನ್‍ಐಸಿ ಅಧಿಕಾರಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಇದರ ಅಂಗವಾಗಿ ‘ದಾವಣಗೆರೆ ಆನ್ ಮ್ಯಾಪ್ ಮೊಬೈಲ್ ಆಪ್‍ನ್ನು ಕೇವಲ 15 ರಿಂದ 20 ದಿನಗಳಲ್ಲಿ ನಮ್ಮ ಅಧಿಕಾರಿಗಳು ಅಭಿವೃದ್ದಿಪಡಿಸಿದ್ದಾರೆ ಎಂದರು.

ಆರು ಸೇವೆ ಮಾಹಿತಿ ಅಳವಡಿಕೆ

ಇದು ಮುಖ್ಯವಾಗಿ ಜನಸಾಮಾನ್ಯರಿಗೆ ಒಂದು ಯುಟಿಲಿಟಿ ಆಗಿ ಹೆಚ್ಚು ಉಪಯೋಗ ಆಗಲಿದ್ದು, ಇದರಲ್ಲಿ ದಾವಣಗೆರೆ ಜಿಲ್ಲೆಯ ಆರು ಪ್ರಮುಖ ಮಾಹಿತಿಗಳನ್ನು ಅಳವಡಿಸಲಾಗಿದೆ. ಅವುಗಳೆಂದರೆ ಆಸ್ಪತ್ರೆಗಳು, ಜನೌಷಧ ಕೇಂದ್ರಗಳು, ಪೊಲೀಸ್ ಸ್ಟೇಷನ್‍ಗಳು, ಪೆಟ್ರೋಲ್ ಬಂಕ್‍ಗಳು, ಗ್ರಾಮ ಒನ್ ಕೇಂದ್ರಗಳು ಮತ್ತು ಯಾತ್ರಾ ಸ್ಥಳಗಳು.

ಉದಾಹರಣೆಗೆ ಆಸ್ಪತ್ರೆಗಳು ಆಯ್ಕೆ ಮಾಡಿದಾಗ ಇವುಗಳಿಗೆ ಸಂಬಂಧಪಟ್ಟ ಮಾಹಿತಿಗಳನ್ನು ಗೂಗಲ್ ಮ್ಯಾಪ್ ನಲ್ಲಿ ನೋಡಿಕೊಳ್ಳಬಹುದು. ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 400ಕ್ಕಿಂತ ಹೆಚ್ಚು ಸರ್ಕಾರಿ ಆಸ್ಪತ್ರೆಗಳಿವೆ. ಅದರಲ್ಲಿ ಬೇರೆ ಬೇರೆ ವರ್ಗದ ಆಸ್ಪತ್ರೆಗಳನ್ನು ಆಯ್ಕೆ ಮಾಡುವ ಅವಕಾಶವನ್ನು ಸಹ ನೀಡಲಾಗಿದೆ. ಯಾವುದೇ ವರ್ಗವನ್ನು ಆಯ್ಕೆ ಮಾಡಿದ ನಂತರ ಅದಕ್ಕೆ ಸಂಬಂಧಪಟ್ಟ ಆಸ್ಪತ್ರೆಗಳೆಲ್ಲವೂ ಗೂಗಲ್ ಮ್ಯಾಪ್ ಮೇಲೆ ಕಾಣಿಸುತ್ತದೆ.

ಇವುಗಳಲ್ಲಿ ಯಾವುದನ್ನಾದರೂ ಕ್ಲಿಕ್ ಮಾಡಿದಾಗ ಈ ಆಸ್ಪತ್ರೆಯ ಮಾಹಿತಿ ವಿಂಡೋ ಕಾಣಿಸುತ್ತದೆ. ಮಾಹಿತಿ ವಿಂಡೋ ಮೇಲೆ ಮತ್ತೊಮ್ಮೆ ಕ್ಲಿಕ್ ಮಾಡಿದಾಗ ಅದರಲ್ಲಿರುವ ದೂರವಾಣಿ ಸಂಖ್ಯೆಗೆ ನೇರವಾಗಿ ಫೋನ್ ಕಾಲ್ ಹೋಗುತ್ತದೆ. ಇನ್ನೂ ಹೆಚ್ಚುವರಿಯಾಗಿ ನಾವು ಇರುವ ಸ್ಥಳದಿಂದ ಆಸ್ಪತ್ರೆಗೆ ರಸ್ತೆ ಮಾರ್ಗ, ದೂರ ಮತ್ತು ಅಲ್ಲಿಗೆ ತಲುಪುವ ಸಮಯ ಸಹ ಕಾಣಿಸುತ್ತದೆ. ಇದೇ ರೀತಿ ಮೇಲ್ಕಂಡ ಉಳಿದ ಇಲಾಖೆಗಳ ಮಾಹಿತಿಯನ್ನು ಪಡೆಯಬಹುದು.

ಹೆಚ್ಚುವರಿಯಾಗಿ ದಾವಣಗೆರೆ ಜಿಲ್ಲೆಯ ವೆಬ್‍ಸೈಟ್ ಸಹ ಇದರಲ್ಲಿಯೇ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಇತರೆ ಇಲಾಖೆಗಳ ಮಾಹಿತಿಗಳನ್ನು ಆ್ಯಪ್‍ನಲ್ಲಿ ಅಳವಡಿಸಲಾಗುವುದು. ಅದರಲ್ಲಿ ಮುಖ್ಯವಾಗಿ ಶಾಲೆಗಳು, ರೈತ ಸಂಪರ್ಕ ಕೇಂದ್ರಗಳು, ವೆರ್ಟನರಿ ಹಾಸ್ಪಿಟಲ್‍ಗಳು ಮತ್ತು ಗ್ರಾಮ ಪಂಚಾಯಿತಿಗಳನ್ನು ಮುಂದಿನ ದಿನಗಳಲ್ಲಿ ಅಳವಡಿಸಲು ಉದ್ದೇಶಿಸಲಾಗಿದೆ.

ಈ ಮೊಬೈಲ್ ಆಪ್ ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿದೆ. ಯಾರು ಬೇಕಾದರೂ ಇದನ್ನು ಡೌನ್‍ಲೋಡ್ ಮಾಡಿಕೊಂಡು ಉಪಯೋಗಿಸಬಹುದು. ಪ್ಲೇಸ್ಟೋರ್ ಲಿಂಕ್ ಈ ರೀತಿ ಇದೆ.
https://play.google.com/store/apps/details?id=davanagere.kar.nic.in.testmap1

ಮತ್ತು ಇದರ ಲಿಂಕ್ ಅನ್ನು davanagre.nic.in
ವೆಬ್‍ಸೈಟ್ ಮುಖಾಂತರ ಸಹ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಹಾಗೂ ಮುಂದಿನ ದಿನಗಳಲ್ಲಿ ಸಾರ್ವಜನಿಕರು ವೆಬ್‍ಪೋರ್ಟಲ್‍ನಲ್ಲಿ ಜಿಲ್ಲೆಯ ವಿವರವಾದ ಮಾಹಿತಿಯನ್ನು ಸಹ ಪಡೆಯುವಂತೆ ಆ್ಯಪ್‍ನ್ನು ಅಭಿವೃದ್ದಿಪಡಿಸಲಾಗುತ್ತಿದೆ. ಇದೊಂದು ಜನರಿಗೆ ಉಪಯುಕ್ತವಾದ ಸೇವೆಯಾಗಿದೆ ಎಂದು ಎನ್‍ಐಸಿ ಅಧಿಕಾರಿಗಳಾದ ಉದಯಕುಮಾರ್ ಮತ್ತು ರಮೇಶ್ ತಿಳಿಸಿದರು.

ಖಾಸಗಿಯವರನ್ನು ನಂಬಿ ಮೋಸ ಹೋಗದಿರುವಂತೆ ಡಿಸಿ ಎಚ್ಚರಿಕೆ

ಪಳನಿಸ್ವಾಮಿ ಎಂಬುವವರು ಆಶ್ರಯ ಮನೆಗಳನ್ನು ಕೊಡಿಸುವುದಾಗಿ ಜನರಿಂದ ಹಣಕಾಸು ವ್ಯವಹಾರ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಜನರು ಯಾವುದೇ ಖಾಸಗಿ ವ್ಯಕ್ತಿಗಳನ್ನು ನಂಬಿ ಹಣ ನೀಡಿ ಮೋಸ ಹೋಗಬಾರದು.

ಜಿಲ್ಲಾಡಳಿತ ಆಗಲೀ ಅಥವಾ ಯಾವುದೇ ಸಕ್ಷಮ ಪ್ರಾಧಿಕಾರ ಅವರಿಗೆ ಯಾವುದೇ ಅಧಿಕಾರ ನೀಡಿಲ್ಲ ಎಂದು ಸ್ಪಷ್ಪಪಡಿಸಿದ ಅವರು ಆಶ್ರಯ ನಿವೇಶನಗಳಿಗಾಗಿ ರಾಜೀವಗಾಂಧಿ ವಸತಿ ನಿಗಮಕ್ಕೆ ನಮ್ಮಿಂದ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ನಿವೇಶನ ಮಂಜೂರಾದ ನಂತರ ಜೇಷ್ಟತೆಯ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡಲಾಗುವುದು. ಅಲ್ಲಿಯವರೆಗೆ ಜನರು ಯಾವುದೇ ಖಾಸಗಿ ವ್ಯಕ್ತಿಗಳನ್ನು ನಂಬಿ ಮೋಸ ಹೋಗಬಾರದು ಎಂದು ಎಚ್ಚರಿಕೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending