Connect with us

ದಿನದ ಸುದ್ದಿ

ದಾವಣಗೆರೆ | ಇದ್ದೊಬ್ಬ ಮಗನ ಎರಡೂ ಕಿಡ್ನಿ ಫೇಲ್ ; ಧನ ಸಹಾಯಕ್ಕಾಗಿ ಕಣ್ಣೀರಿಟ್ಟ ತಾಯಿ : ದಯವಿಟ್ಟು ಸಹಕರಿಸಿ

Published

on

ಸುದ್ದಿದಿನ, ದಾವಣಗೆರೆ : ಅವರದ್ದು ಕಡು ಬಡತನದ ಕುಟುಂಬ, ಇಬ್ಬರು ಮಕ್ಕಳಲ್ಲಿ ಒಬ್ಬನನ್ನು ಕಳೆದುಕೊಂಡಿದ್ದ ಆ ತಂದೆ ತಾಯಿ ಇನ್ನೊಬ್ಬ ಮಗನಾದ್ರು ಚೆನ್ನಾಗಿ ಓದಿ ಒಳ್ಳೆಯ ಕೆಲಸ ತಗೋಬೇಕು ಅಂತಾ ಕೂಲಿ ನಾಲಿ ಮಾಡಿ ಅವನನ್ನು ಎಂಎ, ಬಿಎಡ್ ಓದಿಸಿದ್ರು.

ಅವನು ಸಹ ಅತೀ ಹೆಚ್ಚು ಅಂಕ ಪಡೆದು ಸಿಇಟಿಗೆ ಓದುತ್ತಿದ್ದ ಜೊತೆಗೆ ಮನೆಲಿ ಕೂರುವುದು ಬೇಡ, ತಂದೆ ತಾಯಿಗೆ ಆಸರೆಯಾಗೋಣ ಅಂತ ಆತ ಕಾಂಪಿಟೇಟಿವ್ ಪರೀಕ್ಷೆಗೆ ಓದುತ್ತಲೇ ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ, ಆದರೆ ದುರಾದೃಷ್ಟ ಆತನ ಎರಡು ಕಿಡ್ನಿ ಫೇಲ್ ಆಗಿದ್ದು, ಇತ್ತ ಇದ್ದ ಒಬ್ಬ ಮಗನನ್ನು ಉಳಿಸಿಕೊಳ್ಳಲು ಆ ತಂದೆ ತಾಯಿ ಕಣ್ಣಿರು ಇಡುತ್ತಿದ್ದಾರೆ.

ಇದನ್ನೂ ಓದಿ | ಸಿಡಿ ಪ್ರಕರಣ | ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ‌ : ಸಿದ್ದರಾಮಯ್ಯ

ಊಟ ನೀರು ಸೇರದೇ ಹಾಸಿಗೆ ಹಿಡಿದಿರುವ ಯುವಕ, ಮಗನ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವ ತಂದೆ ತಾಯಿ.. ಈ ಮನಕುಲ ದೃಶ್ಯ ಕಂಡು ಬಂದಿದ್ದು, ದಾವಣಗೆರೆ ತಾಲ್ಲೂಕಿನ ಮಾಳಗೊಂಡನಹಳ್ಳಿಯಲ್ಲಿ, ಹೌದು.. ಮಾಳಗೊಂಡನಹಳ್ಳಿಯ ಪರಶುರಾಮಪ್ಪ ಹಾಗೂ ಅನುಸೂಯಮ್ಮ ದಂಪತಿಯ ಪುತ್ರ 26 ವರ್ಷದ ಕಲ್ಲೇಶ್, ಓದಿನಲ್ಲಿ ತುಸು ಮುಂದು ಈಗಾಗಿಯೇ ಕಲ್ಲೇಶನನ್ನು ಹೇಗಾದರು ಮಾಡಿ ಓದಿಸಬೇಕು ಎಂದು ಕೂಲಿ ಮಾಡಿ ಹಣ ಕೂಡಿಟ್ಟು ಬಿಎಡ್, ಎಂಎ ಓದಿಸಿದ್ರು.

ಕಲ್ಲೇಶ್ ಓದಿನಲ್ಲಿ‌ಮುಂದೆ ಇದ್ದ ಕಾರಣ ಉತ್ತಮ ಅಂಕ ಪಡೆದಿದ್ದ, ಬಳಿಕ ಮನೆಯ ಪರಿಸ್ಥಿತಿ ಸರಿ ಇಲ್ಲದ ಹಿನ್ನಲೆ ಕಲ್ಲೇಶ್ ಸಿಇಟಿ, ಕಾಂಪಿಟೇಟಿವ್ ಪರೀಕ್ಷೆಗೆ ಓದುತ್ತಲೇ ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಾ ಮನೆಗೆ ಆಸರೆಯಾಗಿದ್ದ, ಆದರೆ ಅದೊಂದು ದಿನ ಹೊಟ್ಟೆ ತಳ ಭಾಗ ನೋವ್ವ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ತೋರಿಸಿದಾಗ ಕುಟುಂಬಕ್ಕೆ ಬರಸಿಡಿಲು ಸುದ್ದಿ ಬಡಿದಿತ್ತು, ಅದುವೇ ಕಲ್ಲೇಶನಿಗೆ ಎರಡು ಕಿಡ್ನಿ ಫೇಲ್ ಎಂದು ವೈದ್ಯರು ಶಾಕಿಂಗ್ ನ್ಯೂಸ್ ಕೊಟ್ಟಿದ್ರು.

ಇನ್ನು ಕಲ್ಲೇಶ್, ಯಾವೂದೇ ಕುಡಿತ, ಗುಟ್ಕ ಮುಟ್ಟಿದವನಲ್ಲ, ಚಿಕ್ಕವನಿದಾಗ ಕಿಡ್ನಿಯಲ್ಲಿ ಕಲ್ಲು ಇತ್ತಂತೆ ಇದನ್ನ ಟ್ರಿಟ್ ಮೆಂಟ್ ಮೂಲಕವೇ ಕರಗಿಸುತ್ತೇವೆ ಎಂದು ವೈದ್ಯರು ಚಿಕಿತ್ಸೆ ನೀಡಿದ್ದರಂತೆ, ಅದಾದ ಬಳಿಕ ಹುಷಾರಾಯಿತು ಅಂತ ಸುಮ್ಮನಿದ್ದ ಕಲ್ಲೇಶ್ ಗೆ ಹಲವು ವರ್ಷಗಳ ಬಳಿಕ ಈಗ ಕಿಡ್ನಿ ಫೇಲ್ ಆಗಿರುವ ಸಂಗತಿ ತಿಳಿದಿದೆ, ಇನ್ನೂ ಇಬ್ಬರು ಮಕ್ಕಳಲ್ಲಿ ಒಬ್ಬ ಜಾಂಡಿಸ್ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾನೆ.

ಈಗ ಇರುವುದು ಇವನೊಬ್ಬ, ಇವನಿಗೂ ಇದೇ ಪರಿಸ್ಥಿತಿ ಬಂದಿದೆ.. ನನ್ನ ಕಿಡ್ನಿ ಇವನಿಗೆ ಹೊಂದುತ್ತಂತೆ, ಆದರೆ ಬದಲಾಯಿಸಲು ೧೫ ರಿಂದ ೨೦ ಲಕ್ಷ ರೂಪಾಯಿ ಖರ್ಚಾಗುತ್ತೆ ಅಂತಾ ಡಾಕ್ಟರ್ ತಿಳಿಸಿದ್ದಾರೆ, ಇದ್ದ ಬದ್ದ ಹಣವನ್ನೆಲ್ಲ ಡಯಾಲಿಸಿಸ್ ಮಾಡಿಸಲು ಆಸ್ಪತ್ರೆಗೆ ಖರ್ಚಾಗಿದೆ, ಯಾರಾದ್ರು ಸಹಾಯ ಮಾಡಿ ಮಗನ ಉಳಿಸಿಕೊಡಿ ಅಂತಾ ತಾಯಿ ಅನುಸೂಯಮ್ಮ ಕಣ್ಣೀರಿಟ್ಟಿದ್ದಾರೆ.

ಒಟ್ಟಾರೆ ಇದ್ದ ಒಬ್ಬ ಮಗನನ್ನು ಉಳಿಸಿಕೊಳ್ಳಲು ಬಡ ದಂಪತಿಗಳು ಹರಸಾಹಸ ಪಡ್ತಾ ಇದ್ದಾರೆ, ಕಿಡ್ನಿ ಕೊಡಲು ರೆಡಿ ಇದ್ದರು ಬದಲಾಯಿಸಲು ಹಣವಿಲ್ಲ,,ಹೀಗಾಗಿ ಇವರಿಗೆ ಸಹಾಯ ಮಾಡುವವರು ಅಕೌಂಟ್ ನಂಬರ್ ಕೆಳಗಿನಂತೆ

NAME- KALLLESH. P
ACOUNT NOMBR-34869949662
IFSC- SBIN0005624
BRANCH CODE- 5624
G pay-phone pay
Mob: 9845601182 ಗೂ ಧನ ಸಹಾಯ ಮಾಡಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending