Connect with us

ದಿನದ ಸುದ್ದಿ

ದಿವ್ಯ ಜ್ಯೋತಿ ಬಸವಣ್ಣ..!

Published

on

  • ನೇತ್ರಾವತಿ ಸಿ ಎಂ .ನೆಲ್ಲಿಕಟ್ಟೆ

ನಾ ಕಂಡಂತೆ ನನ್ನ ದೃಷ್ಠಿ ಕೋನದಲ್ಲಿ ಆಗಿನ 12 ನೇ ಶತಮಾನದಲ್ಲಿ ಆಲದ ಮರವಂತೆ ಆಳವಾಗಿ ಬೇರೂರಿದ್ದ ಜಾತಿಯನ್ನು ತೊಲಗಿಸಲು ಪ್ರಕಾಶಮಾನವಾಗಿ
ಬಂದವರು ಬಸವಣ್ಣ. ಅವರು ಮಾಡಿದ ಕಾಯಕಗಳು ಇಂದಿಗೂ ಜೀವಂತವಾಗಿವೆ.

ಬ – ಬಲವಾಗಿ
ಸ- ಸಮಾನತೆ
ವ- ವರ್ಣಾತೀತ
ಣ್ಣ- ನಾಯಕನಾಗಿ

ಹೆಸರಿನಲ್ಲಿ ಸೂಚಿಸಿದಂತೆ ನಿಜವಾದ ಜಾತಿ ನಿರ್ಮೂಲನ ನಾಯಕನಾಗಿ ಹೊರ ಹೊಮ್ಮಿದವರು ನಮ್ಮ ಬಸವಣ್ಣನವರು. ಜಾತಿ ಎನ್ನುವ ಪದ 12ನೇ ಶತಮಾನದಲ್ಲಿ ಮೈಗಂಟಿದ ಚರ್ಮದಂತಿತ್ತು,ಅಂತಹ ಕೆಟ್ಟ ಜಾತಿಯ ಚರ್ಮವನ್ನು ಹೊಡೆದೋಡಿಸಲು ಬಲವಾಗಿ ಎಲ್ಲಾರ ಸಮಾನತೆಗಾಗಿ, ವರ್ಣಾತೀತ ನಿರ್ಮೂಲನೆಗಾಗಿ ನಮ್ಮೆಲ್ಲರ ಗಟ್ಟಿ ನಾಯಕರಾಗಿ ಬಂದವರೆ ನಮ್ಮ ಬಸವಣ್ಣನವರು.

ಅಂದಿನ ಕಾಲದಲ್ಲಿ ಶಿಕ್ಷಣವು ಮೇಲು ವರ್ಗದವರಿಗೆ ಮಾತ್ರ ಮೀಸಲಾಗಿತ್ತು. ಅದಲ್ಲದೆ ಕೆಳ ಜಾತಿಯವರು ಕೇವಲ ಶಿಕ್ಷಣ ಮಾತ್ರವಲ್ಲದೆ ಆರ್ಥಿಕ, ಸಾಮಾಜಿಕ, ರಾಜಕೀಯ, ಸಮಾಜದ ಎಲ್ಲಾ ಸೌಲಭ್ಯಗಳಿಂದ ವಂಚಿತರಾದ ಸಮಾಜದ ಧ್ವನಿಯಾಗಿ
ಬಂದವರೆ ನಮ್ಮ ಬಸವಣ್ಣ.

” ಶರಣರ ಕೂಡ ಸರಸವ ಹಾಡುತ್ತ
ನಡೆದಾನೆ ಬಸವಣ್ಣ ,
ದಾಸೋಹ ಇಟ್ಟು ಊಟ ಮಾಡಿಸಿ
ಕೊಡುತ್ತಿದ್ದ ದಕ್ಷಿಣೆ ”

ಇಂತಹ ತತ್ವ ಪದಗಳ ಮೂಲಕ ದಲಿತರಿಗೆ.”ಕಾಯಕವೇ_ ಕೈಲಾಸ ” ಎಂಬ ತತ್ವದಡಿಯಲ್ಲಿ ಬೋಧಿಸಿ ಗುಡಿ ಗುಂಡಾರಗಳಿಗೆ ಹೋಗುವ ಬದಲು ತನ್ನ ಕಾಯಕದಲ್ಲಿ ನಿಷ್ಠೆಯ ಮೂಲಕ ಕೆಲಸ ಮಾಡಿದರೆ ಅದರಲ್ಲಿ ದೇವರ ಕಾಣಬೇಕು ಎಂದು ಬಸವಣ್ಣ ಹೇಳುವುದರ ಮೂಲಕ ನಿರಾಕಾರ ದೇವರುಗಳನ್ನು ಆರಾಧಿಸಿ ಆದರೆ ಅವನು ಸೃಷ್ಠಿಸಿದ ಸೃಷ್ಠಿಗಳನ್ನು ಆರಾಧಿಸಬೇಡಿ.

“ಎನ್ನ ಕಾಲೆ ಕಂಬ ಎನ್ನದೇಹವೇ ದೇಗುಲ
ಎನ್ನ ಶಿರವೇ ಹೊನ್ನ ಕಲಶವಯ್ಯ! ಕೂಡಲಸಂಗಮದೇವ.”

ಎಂಬ ವಚನಗಳ ಮೂಲಕ ಮೂರ್ತಿ ಪೂಜೆಯನ್ನು ಖಂಡಿಸುತ್ತಾರೆ.ತಾವು ಮಾಡುವ ಕೆಲಸದಲ್ಲಿ ದೇವನನ್ನು ಕಾಣಿರಿ ಎಂದು ಹೇಳುತ್ತ ಅಂತರ್ಜಾತೀಯ
ಮೇಲ್ಜಾತಿಯ ವಿವಾಹಕ್ಕೆ ಪ್ರೋತ್ಸಾಹಿಸುತ್ತಾ , ಅಂತಹ ಕಠಿಣ ಶಿಕ್ಷೆಗಳಿದ್ದರೂ ಎದೆಗುಂದದೆ ಧೈರ್ಯವಾಗಿ ಸಮರ್ಥವಾಗಿ ಜಾತಿಯನ್ನು ಖಂಡಿಸಿದ ಮಹಾನ್ ಚೇತನ ಭಕ್ತಿ ಭಂಡಾರಿ ಬಸವಣ್ಣವರು ಅನುಭವ ಮಂಟಪದ ಮೂಲಕ ಸರ್ವರಿಗೂ ತಮ್ಮ ವಚನಗಳ ಮೂಲಕ ಎಲ್ಲಾ ಶರಣರಲ್ಲಿಯು ಸಮಾನತೆ ಉರಿದುಂಬಿಸುವಂತೆ ತಮ್ಮ ವಚನಗಳ ಮೂಲಕ ಜಾತಿಯ ಕೊಳೆಯನ್ನು ತೊಲಗಿಸಲು ಶ್ರಮಿಸಿದರು.

ಇದನ್ನೂ ಓದಿ | ಕೊರೋನ ರೋಗವನ್ನೆದುರಿಸಲು ಆಹಾರ ನಿಯಂತ್ರಣ

ಮೇಲ್ಜಾತಿಯ ಮಹಿಳೆಯನ್ನು ಕೆಳ ಜಾತಿಯ ಪುರುಷನೊಂದಿಗೆ ವಿವಾಹ ಮಾಡುವುದರ ಮೂಲಕ ಜಾತಿ ಎಂಬ ವಿಷ ಬೀಜದ ಕಳಂಕಕ್ಕೆ ಅಂತರ್ಜಾತೀಯ ವಿವಾಹ ಮಾಡುವುದರ ಮೂಲಕ ನಾವೆಲ್ಲರೂ ಒಂದೇ ಸಮಾನತೆಯ ತತ್ವವನ್ನು ಎತ್ತಿ ಹಿಡಿದ ಮಹನೀಯ, ಎಳೆ ಎಳೆಯಾಗಿ ಬಸವಣ್ಣನವರ ಬಗ್ಗೆ ಕೂಲಂಕುಷವಾಗಿ ಅವಲೋಕಿಸಿದಾಗ ಬಸವಣ್ಣನವರ ವಚನಗಳಲ್ಲಿ ವಿಶ್ವ ಸಂಸ್ಥೆ ಘೋಷಿಸಿದ ಎಲ್ಲಾ ಮಾನವ ಹಕ್ಕುಗಳ ವಿಚಾರಗಳೆಲ್ಲವೂ ಸೇರಿದೆ.

ಬಸವಣ್ಣನವರು ಪ್ರಜಾಪ್ರಭುತ್ವ,ಮೌಲ್ಯವನ್ನು ಎತ್ತಿ ಹಿಡಿದುಕೊಳ್ಳುವ ಮೂಲಕ ಬದುಕಿನುದ್ದಕ್ಕೂ ಸಮಾನತೆಯನ್ನು ಕಾಪಾಡಿಕೊಂಡಿದ್ದಾರೆ. ಜಾತಿ ಎಂಬ ಸಂಕೋಲೆಗಳಿಂದ ಬಿಡಿಸಿಕೊಳ್ಳಲು ಹಲವಾರು ವಚನಗಳ ಮೂಲಕ ನಾವೆಲ್ಲರೂ ಸಮಾನರು ಎಂದು ಹೇಳುತ್ತ ಬಂದಿದ್ದಾರೆ. ಇದನ್ನು ಪ್ರಸ್ತುತ ನಾವೆಲ್ಲರೂ ಪ್ರತಿಯೊಬ್ಬರು ಬಸವಣ್ಣನವರ ನಿಯಮಗಳಿಗೆ ಬದ್ಧರಾಗಿ ಹೋಗುವ ಹೊಣೆಗಾರಿಕೆ ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending