ದಿನದ ಸುದ್ದಿ
ಇಸ್ರೇಲಿನ ಸಂಪಾದಕರು ಮತ್ತು ಭಾರತದ ಸಂಪಾದಕರ ನಡುವಿನ ಐತಿಹಾಸಿಕ ಸಂವಾದವಿದು..!
- ಪ್ರಧಾನಿಯೇ ಒಂದು ಸಮುದಾಯವನ್ನು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಜನ ಸಮುದಾಯದ ಜವಾಬ್ದಾರಿಗಳು ಏನು? ಮುಸ್ಲೀಮರ ಮೇಲಿನ ದ್ವೇಷಕ್ಕಾಗಿ ಐ ಸ್ಟ್ಯಾಂಡ್ ವಿತ್ ಇಸ್ರೇಲ್ ಎನ್ನುವವರು ಇಸ್ರೇಲ್ ನ ಅತೀ ಹೆಚ್ಚು ಪ್ರಸರಣಾ ಸಂಖ್ಯೆ ಹೊಂದಿರುವ HAARETZ (ಭೂಮಿ) ಪತ್ರಿಕೆಯ ಸಂಪಾಕೀಯವನ್ನು ಓದಬೇಕು.
- ಸಂಪಾದಕೀಯ : ಅಲುಫ್ ಬೆನ್, ಪ್ರಧಾನ ಸಂಪಾಕರು, HAARETZ, ಅನುವಾದ : ನವೀನ್ ಸೂರಿಂಜೆ
ಕಳೆದ ಹಲವು ದಿನಗಳಿಂದ ಇಸ್ರೇಲ್ನಲ್ಲಿ ಅರಬ್ಬರು ಮತ್ತು ಯಹೂದಿಗಳ ನಡುವಿನ ನೋವಿನ ಘರ್ಷಣೆಯ ಉತ್ತುಂಗಕ್ಕೆ ಏರಿದೆ. ಇವೆಲ್ಲವನ್ನೂ ಹೊರತುಡಿಸಿ ಸಮಾಜದ ಗಣ್ಯರೂ ಸೇರಿದಂತೆ ಸಾವಿರಾರು ಅರಬ್ ಮತ್ತು ಯಹೂದಿ ನಾಗರಿಕರು ಇಸ್ರೇಲಿ ನಗರಗಳಲ್ಲಿ, ಹಳ್ಳಿಗಳಲ್ಲಿ ನಡೆಸಿದ ಜಂಟಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅರಬರು, ಯಹೂದಿಗಳು ಎಂಬ ಯಾವ ವ್ಯತ್ಯಾಸವು ಇಸ್ರೇಲಿನ ಸಾಮಾನ್ಯ ಜನರ ಮಧ್ಯೆ ಇಲ್ಲ.
ಮುಸ್ಲೀಮರು ಮತ್ತು ಯಹೂದಿಗಳು ಜೊತೆಗೂಡಿ ನಡೆಸುತ್ತಿರುವ ಹತ್ತಾರು ಕಾರ್ಯಕ್ರಮಗಳ ವಿಶೇಷತೆಯೆಂದರೆ ಅವು “ಫಿರಂಗಿಗಳು ಘರ್ಜಿಸುತ್ತಿರುವಾಗಲೂ” ನಡೆಯುತ್ತಿವೆ ಎಂಬುದೇ ಆಗಿದೆ, ಗಲಭೆಗಳು ಮತ್ತು ಆಕ್ರಮಣಗಳು ಇಸ್ರೇಲ್ ದೇಶದ ಸಾಮಾನ್ಯಯಹೂದಿ-ಅರಬ್ ಸಮುದಾಯಗಳಲ್ಲಿ ಯಾವ ವ್ಯತ್ಯಾಸವನ್ನು ಮಾಡಕೂಡದು.
ಇದೊಂದೇ ನಮ್ಮ ಮುಂದಿರುವ ಅತೀ ದೊಡ್ಡ ಭರವಸೆಯಾಗಿದೆ. ಈ ಹಿಂದೆಯೂ ಇದೇ ರೀತಿ ಮುಸ್ಲಿಂ ಮತ್ತು ಯಹೂದಿಗಳ ಸೌಹಾರ್ಧ ಕಾರ್ಯಕ್ರಮಗಳು ನಡೆದಿತ್ತು. ಆ ಕಾರ್ಯಕ್ರಮಗಳು ಗಲಭೆಗಳ ನಂತರ ನಡೆದಿದ್ದರೆ ಈ ಬಾರಿ ಸಂಘರ್ಷಗಳು ಜಾರಿಯಲ್ಲಿರುವಂತೆಯೇ ಮುಸ್ಲಿಂ ಮತ್ತು ಯಹೂದಿ ಸೌಹಾರ್ಧ ಕಾರ್ಯಕ್ರಮಗಳೂ ಜಾರಿಯಲ್ಲಿದೆ.
ಹಾಗಾಗಿ, ಈ ಭಯಾನಕ ಘಟನಗಳು, ಸಾವು ನೋವುಗಳು, ಹತಾಶೆಯಿಂದ ಅಘಾತಕ್ಕೊಳಗಾಗಿರುವ ಇಸ್ರೇಲ್ನಲ್ಲಿ ಎಲ್ಲವೂ ಕಳೆದು ಹೋಗಿಲ್ಲ ಎಂಬ ಆಶಾಭಾವ ಮೂಡುತ್ತಿದೆ. ಸಂಘರ್ಷದ ಮಧ್ಯೆಯೇ ಹಲವು ಸಮಾಜಿಕ ಸಂಘಟನೆಗಳ ನೇತೃತ್ವದಲ್ಲಿ ಮುಸ್ಲಿಂ ಮತ್ತು ಯಹೂದಿಗಳ ಸಹ ಜೀವನ ನಡೆಸಲು ಬೇಕಾಗುವ ವಾತಾವರಣ ನಿರ್ಮಿಸುತ್ತಿರುವುದು ಸಮಾನತೆ ಮತ್ತು ಪರಸ್ಪರ ಗೌರವ ಹುಟ್ಟಿಸುವ ಮೊದಲ ಬೀಜಗಳೆಂದು ನಾವು ನೋಡಬಹುದು. ದೇಶದಲ್ಲಿ ಎಲ್ಲವೂ ಸರಿಯಿದ್ದಾಗ ಸೌಹಾರ್ದತೆಯಿಂದ ವಾಸಿಸುವುದು ದೊಡ್ಡ ವಿಚಾರವಲ್ಲ. ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದಾಗಲೇ ಜನರ ಸೌಹಾರ್ಧ ಮನಸ್ಥಿತಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.
ಈ ದೇಶದ ಅಭಿವೃದ್ದಿಗೆ ಎಲ್ಲಾ ಸಮುದಾಯಗಳ ಕೊಡುಗೆಯಿದೆ. ಅರಬರು/ಮುಸ್ಲಿಮರು/ಯಹೂದಿಗಳು ಸೇರಿದಂತೆ ಸಮುದಾಯಗಳ ಅಭಿವೃದ್ದಿಯ ಕೊಡುಗೆಯಿಂದ ಇಸ್ರೇಲ್ ಗಟ್ಟಿಗೊಂಡಿದೆ. ಕೆಲ ಮಾನವ ಹಕ್ಕು ನಾಗರಿಕ ಸಂಘಟನೆಗಳು ಸೌಹಾರ್ದತೆಗಾಗಿ ಕೆಲಸ ಮಾಡಿದೆ. ಸಮ ಸಮಾಜಕ್ಕಾಗಿ ಕೆಲಸ ಮಾಡುವ ಅಂತಹ ಸಂಘಟನೆಗಳ ಕೆಲಸ ಫಲಿತಾಂಶ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ.
ಇಷ್ಟೊಂದು ಸಂಘರ್ಷಗಳ ಮಧ್ಯೆಯೂ ನಮಗೂ ಅದಕ್ಕೂ ಯಾವ ಸಂಬಂಧವಿಲ್ಲ ಎಂಬಂತೆ ಸೌಹಾರ್ದಯುತವಾಗಿ ಬದುಕುವ ಇಸ್ರೇಲಿನ ಹಲವು ಪ್ರದೇಶಗಳು ಇದಕ್ಕೆ ನಿದರ್ಶನವಾಗಿದೆ. ಯಾರು ಏನೇ ಪ್ರಯತ್ನಪಟ್ಟರೂ ನಾವುಗಳು ಹಂಚಿಕೊಂಡು ಬದುಕುವುದನ್ನು ತಪ್ಪಿಸಲಾಗದು.
ಕೆಲವೇ ಕೆಲವು ತಿಂಗಳುಗಳ ಹಿಂದೆ ಹೊರಳಿ ನೋಡಿ, ದೇಶಾದ್ಯಂತದ ಅರಬ್-ಯಹೂದಿ ವೈದ್ಯಕೀಯ ತಂಡಗಳು ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಒಟ್ಟಾಗಿ ಹೋರಾಡಿದ್ದವು. ವೈರಸ್ ವಿರುದ್ಧ ಜನಸಮುದಾಯದ ಮಧ್ಯೆ ಸೌಹಾರ್ದಯುತವಾಗಿ ಕೆಲಸ ಮಾಡಿದ್ದನ್ನು ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಈಗ ಅದೇ ತಂಡಗಳು ಹಿಂಸಾಚಾರದ ವಿರುದ್ಧ ಮತ್ತು ಪರಸ್ಪರ ಸೌಹಾರ್ಧಕ್ಕಾಗಿ ಕರೆ ನೀಡುತ್ತಿದ್ದಾರೆ.
ಕೆಲವು ರಾಜಕಾರಣಿಗಳು, ಸಮುದಾಯದ ಮುಖಂಡರು ಮತ್ತು ಮಾಧ್ಯಮಗಳು ಜನರನ್ನು ಪ್ರಚೋದಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಇಂತಹ ಕಂದಕಗಳನ್ನು ಸೃಷ್ಟಿಸುವವರ ಮಧ್ಯೆ ಮಾನವ ಹಕ್ಕುಗಳ ಪರವಾಗಿನ ಕೆಲ ಅರಬ್ ಮತ್ತು ಯಹೂದಿ ರಾಜಕೀಯ ಮುಖಂಡರು ಸಮುದಾಯಗಳ ಮಧ್ಯೆ ಸಂವಾದವನ್ನು ನಡೆಸುತ್ತಿದ್ದಾರೆ. ಇದು ಮನುಷ್ಯರ ಮಧ್ಯೆ ಇರುವ ಜ್ವಾಲೆಗಳನ್ನು ತಣಿಸುತ್ತಿದೆ.
ಇಸ್ರೇಲಿನಲ್ಲಿ ಸಮುದಾಯಗಳ ಮಧ್ಯೆ ಇರುವ ಆಳವಾದ ಭಿನ್ನಾಭಿಪ್ರಾಯಗಳನ್ನು ಅಲ್ಲಗಳೆಯುವಂತಿಲ್ಲ. ಜೆರುಸಲೆಮ್, ಗಾಜಾ ಪಟ್ಟಿ ಮತ್ತು ಪಶ್ಚಿಮ ದಂಡೆಯಲ್ಲಿನ ಘಟನೆಗಳು ಅರಬ್ ಮತ್ತು ಯಹೂದಿ ಸಮುದಾಯಗಳ ಮಧ್ಯೆ ಇರುವ ಸಂಘರ್ಷವನ್ನೇ ಸೂಚಿಸುತ್ತದೆ. ಇದ್ಯಾವುದಕ್ಕೂ ಯುದ್ದ, ಗಲಭೆಗಳು ಪರಿಹಾರವಲ್ಲ. ಪರಸ್ಪರ ಮಾತುಕತೆಗಳೇ ಈ ಸಂಘರ್ಷಕ್ಕೆ ಇರುವ ಪರಿಹಾರ. ಪರಸ್ಪರ ಸೌಹಾರ್ಧ ಸಂಬಂಧಗಳೇ ಈಗಿರುವ ಇಸ್ರೇಲಿನ ದುಗುಡಯುಕ್ತ ವಾತಾವರಣಕ್ಕೆ ಏಕೈಕ ಪರಿಹಾರವಾಗಿದೆ.
ಇಸ್ರೇಲಿನಲ್ಲಿ ಅರಬ್ಬರು ಮತ್ತು ಯಹೂದಿಗಳು ಒಂದೇ ನಗರಗಳಲ್ಲಿ ಅಕ್ಕಪಕ್ಕದಲ್ಲೇ ವಾಸಿಸುತ್ತಾರೆ. ವಿಶೇಷವಾಗಿ ಅಪಾರ್ಟ್ಮೆಂಟ್ ಕಟ್ಟಡಗಳು ಮತ್ತು ಸೈಟುಗಳನ್ನು ಹಂಚಿಕೊಳ್ಳುವುದರಲ್ಲಿ ಈವರೆಗೂ ತಾರತಮ್ಯ ಮಾಡಿಲ್ಲ. ಆದರೆ ಕಳೆದ ಕೆಲ ದಿನಗಳು ಎರಡೂ ಜನಸಮುದಾಯಗಳು ಭಯ ಮತ್ತು ಅಪನಂಬಿಕೆಯ ವಾತಾವರಣದಲ್ಲಿ ಬದುಕುತ್ತಿದೆ.
ಇದು ಎಷ್ಟು ಅಪಾಯಕಾರಿ ಮತ್ತು ಜನರನ್ನು ಮಾನಸಿಕತೆಯ ಮೇಲೆ ಹೊಡೆತ ಬೀರುತ್ತೆ ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕು. ಅದಕ್ಕಾಗಿಯೇ ನೆರೆಹೊರೆಯವರನ್ನು, ಬೇರೆ ಬೇರೆ ಸಮುದಾಯಗಳನ್ನು ಒಂದುಗೂಡಿಸುವ ಕಾರ್ಯಚಟುವಟಿಕೆಗಳು ಇಸ್ರೇಲಿನ ಸಧ್ಯದ ಅವಶ್ಯಕತೆಯಾಗಿದೆ.
ಸೌಹಾರ್ದತೆಯನ್ನು ಹುಟ್ಟಿಸುವ ಮತ್ತು ಹರಡುವ ಈ ಮೌಲ್ಯಯುತ ಕೆಲಸವನ್ನು ಜನರೇ ಖುದ್ದಾಗಿ ಮಾಡಬೇಕಿದೆ. ಏಕೆಂದರೆ ದೇಶದ ಪ್ರಧಾನಿಯೇ ಒಂದು ಸಮುದಾಯವನ್ನು ಅಪರಾಧ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಈ ನೆಲ ಮೂಲವೇ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ.
- ಅಲುಫ್ ಬೆನ್ ಇಸ್ರೇಲ್ ನ ಖ್ಯಾತ ಪತ್ರಕರ್ತರು. ದೇಶದ ನಂಬರ್ 1 ಪತ್ರಿಕೆಯ ಪ್ರಧಾನ ಸಂಪಾದಕರಾಗಿರುವ ಅಲುಫ್ ಬೆನ್ ಚಿಕ್ಕಪ್ಪ ಗಾಜಾ ಪಟ್ಟಿಯಲ್ಲಿ ನಡೆದ ದಾಳಿಯ ವೇಳೆ ಮೃತರಾಗಿದ್ದಾರೆ. ಹಲವು ಪ್ರತಿಷ್ಟಿತ ಪತ್ರಿಕೆಯಲ್ಲಿ ಪ್ರಧಾನ ಸಂಪಾದಕರಾಗಿ ಕೆಲಸ ಮಾಡಿರುವ ಅಲುಫ್ ಬೆನ್ ಇಸ್ರೇಲ್ ನ ಎಲ್ಲಾ ಗಲಭೆ, ಯುದ್ದಗಳನ್ನು ಖುದ್ದು ವರದಿ ಮಾಡಿದ್ದಾರೆ. ಮಾನವ ಹಕ್ಕುಗಳು, ಸಮಾನತೆಯ ಪ್ರತಿಪಾದಕರಾಗಿರುವ ಅಲುಫ್ ಬೆನ್ ಬರಹಗಳ ಜಗತ್ತಿನ ಎಲ್ಲಾ ಕಡೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾರೆ. ಅವರ ಸಂಪಾದಕೀಯವನ್ನು ಅವರ ಆಶಯಕ್ಕೆ ಕುಂದು ಬಾರದ ರೀತಿಯಲ್ಲಿ ಅನುವಾದ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ
- ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ
ಜಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.
ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.
ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.
ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.
ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.
ದುಶ್ಚಟಗಳ ಆರಂಭಕ್ಕೆ ಕಾರಣಗಳು
• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.
ದುಶ್ಚಟಗಳಿಂದಾಗುವ ಪರಿಣಾಮಗಳು
• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.
ಪರಿಹಾರ ಕ್ರಮಗಳು
• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.
ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.
ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.
ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.
ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಿರುದ್ಯೋಗಿಗಳಿಗೆ ಸಿಹಿ ಸುದ್ದಿ
ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ
ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿಇಟಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಲೋಪ ದೋಷಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಪಾವಿತ್ರ್ಯತೆ ಗೆ ಯಾವುದೇ ಧಕ್ಕೆಯಾಗದಂತೆ ನಡೆಸಲು ಕೇಂದ್ರದ ಅಧೀಕ್ಷಕರು ಗಳಿಗೆ ಸೂಚನೆ ನೀಡಿ ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಿದರು.
ಜೂನ್ 30 ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 11 ಕೇಂದ್ರಗಳಲ್ಲಿ 3805 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ವರೆಗೆ 19 ಕೇಂದ್ರಗಳಲ್ಲಿ 6150 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.
144 ಸೆಕ್ಷನ್ ಜಾರಿ. ಪರೀಕ್ಷಾ ಅವ್ಯವಹಾರ ಹಾಗೂ ಸುಗಮ ಪರೀಕ್ಷೆಗಾಗಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಇರುತ್ತದೆ. ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಸೆಂಟರ್ ಮುಚ್ಚಲು ಆದೇಶಿಸಲಾಗುತ್ತದೆ. ಮತ್ತು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ. ಕೇಂದ್ರದ ಪ್ರವೇಶಕ್ಕೂ ಮೊದಲು ತಪಾಸಣೆ ಮಾಡಿ ಪ್ರವೇಶ ನೀಡಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ಕ್ರೀಡೆ6 days ago
ಈ ಕ್ಷಣದ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ7 days ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
-
ದಿನದ ಸುದ್ದಿ6 days ago
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸಿಎಂಗೆ ಅಧಿಕಾರ
-
ದಿನದ ಸುದ್ದಿ7 days ago
ನಿನ್ನೆ ನಡೆದ NET ಪರೀಕ್ಷೆ ರದ್ದು..!
-
ದಿನದ ಸುದ್ದಿ5 days ago
JOB NEWS | ಜಲ ಜೀವನ್ ಮಿಷನ್ ; ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆಯಲ್ಲಿ ಹೊಸ ಕೆರೆಗಳ ನಿರ್ಮಾಣ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ
-
ದಿನದ ಸುದ್ದಿ5 days ago
ವಿದ್ಯುತ್ ಮೋಟಾರ್ ರಿವೈಂಡಿಂಗ್ ತರಬೇತಿ ; ಸಂಪರ್ಕಿಸಿ